ಅನಿಲ್ ಇಂಗಳಗಿ ಕೊಲೆ ಮನುಕುಲವೇ ತಲೆತಗ್ಗಿಸುವ ಘಟನೆ

ದೊಡ್ಡಬಳ್ಳಾಪುರ: ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಬೂದಿಹಾಳ ಗ್ರಾಮದ ಅನಿಲ್ ಇಂಗಳಗಿ ಎಂಬ ದಲಿತ ಯುವಕನ ಕೊಲೆ ಘಟನೆ ಖಂಡಿಸಿ ಪ್ರಜಾ ವಿಮೋಚನ ಚಳವಳಿ ಹಾಗೂ ತಾಲ್ಲೂಕಿನ ವಿವಿಧ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಸೋಮವಾರ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಯಿತು. 

ಈ ಸಂದರ್ಭದಲ್ಲಿ ಮಾತನಾಡಿದ ಪಿವಿಸಿ ರಾಜ್ಯ ಅಧ್ಯಕ್ಷ ಮುನಿ ಆಂಜಿನಪ್ಪ, ಪ್ರಗತಿಪರ ಒಕ್ಕೂಟದ ಮುಖಂಡರಾದ ಆರ್.ಚಂದ್ರತೇಜಸ್ವಿ,ಡಿ.ಪಿ.ಆಂಜನೇಯ, ರಾಜುಸಣ್ಣಕ್ಕಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರು ಸಮಾನರು ಎನ್ನುವ ಹಕ್ಕನ್ನು ಸಂವಿಧಾನ ನೀಡಿದೆ. ಆದರೆ ಕೆಲ ಪಾಳೇಗಾರಿಕೆ ಮನಸ್ಸಿನ ಜನ ಇಂದಿಗೂ ಸಾರ್ವಾಧಿಕಾರಿಗಳಂತೆ ವರ್ತಿಸುತ್ತಿದ್ದಾರೆ. ಕಾನೂನಿನ ಮುಂದೆ ಎಲ್ಲರು ಸಮಾನರು.ಪುಂಡಾಟಿಕೆ ವರ್ತನೆಯನ್ನು ತೋರಿ ಅನಿಲ್ ಕೊಲೆಗೆ ಕಾರಣರಾಗಿರ ಆರೋಪಿಗಳ ವಿರುದ್ದ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. 

ದೇಶಕ್ಕೆ ಸ್ವಾತಂತ್ರ್ಯ ಬಂದು ಏಳು ದಶಕಗಳು ಕಳೆದಿರುವ ಈ ಸಂದರ್ಭದಲ್ಲೂ ಸಹ ಸಮಾನಾಂತರವಾಗಿ ಕುಳಿತುಕೊಳ್ಳುವ ಹಕ್ಕು ಇಲ್ಲದಂತೆ ದಲಿತ ಸಮುದಾಯ ಬದುಕುವ ಸ್ಥಿತಿ ಶೋಚನೀಯ. ಈ ಪ್ರಕರಣ ಇಡೀ ಮನುಕುಲವೇ ತಲೆತಗ್ಗಿಸುವಂತಹದ್ದಾಗಿದೆ. ಅನಿಲ್ ಕೊಲೆಯಿಂದಾಗಿ ನಾವು 21ನೇ ಶತಮಾನದಲ್ಲಿ ಬದುಕುತ್ತಿದ್ದೇವ ಎನ್ನುವ ಪ್ರಶ್ನೆ ಕೇಳಿಕೊಳ್ಳುವಂತಾಗಿದೆ. ಅನಿಲ್ ಪ್ರಕರಣದಲ್ಲಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳದಿದ್ದರೆ ಜಾತಿ ವ್ಯವಸ್ಥೆಯನ್ನು ಪೋಷಿಸಿದಂತೆ ಆಗಲಿದೆ. ದಲಿತರ ಮೇಲಿನ ದೌರ್ಜನ್ಯಗಳು ಮತ್ತಷ್ಟು ಹೆಚ್ಚಾಗುವ ಅಪಾಯಗಳಿವೆ. ಅನಿಲ್ ಕೊಲೆ ಪ್ರಕರಣದಲ್ಲಿ ನೇರವಾಗಿ ಹಾಗೂ ಪರೋಕ್ಷವಾಗಿ ಶಾಮೀಲಾಗಿರುವ ಎಲ್ಲರ ವಿರುದ್ದವು  ದೌರ್ಜನ್ಯ ಕಾಯ್ದೆಯಡಿಯಲ್ಲಿ ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳು ರಾಜ್ಯದಲ್ಲಿ ಮರುಕಳಿಸಂದಂತೆ ಎಚ್ಚರವಹಿಸಬೇಕಿದೆ. ಅನಿಲ್ ಇಂಗಳಗಿ ಕೊಲೆ ಪ್ರಕರಣದ ವಿಚಾರಣೆಯನ್ನು ತ್ವರಿತಗತಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಪೊಲೀಸ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ತುರ್ತಾಗಿ ತನಿಖೆಯನ್ನು ನಡೆಸಿ ನ್ಯಾಯಾಲಯಕ್ಕೆ ವರದಿ ನೀಡುವ ಮೂಲಕ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಲು ಸಹಕಾರಿಯಾಗಬೇಕು ಎಂದು ಮನವಿ ಮಾಡಿದರು. 

ಪ್ರತಿಭಟನೆಯಲ್ಲಿ ಪಿವಿಸಿ ತಾಲ್ಲೂಕು ಘಟಕದ ಅಧ್ಯಕ್ಷ ತಳಗವಾರ ಪುನೀತ್, ಜಿಲ್ಲಾ ಅಧ್ಯಕ್ಷ ಗೂಳ್ಯ ಹನುಮಣ್ಣ,ಉಪಾಧ್ಯಕ್ಷ ಕೊನಘಟ್ಟ ಬೈರಪ್ಪ,ಸಂಘಟನ ಕಾರ್ಯದರ್ಶಿ ಕಾಕೋಳು ಚನ್ನಮರಿಯಪ್ಪ, ಮಹಿಳಾ ಘಟಕದ ಅಧ್ಯಕ್ಷೆ ರತ್ನಮ್ಮ, ತಾಲ್ಲೂಕು ಸಂಘಟನ ಕಾರ್ಯದರ್ಶಿ ನೆಲ್ಲುಕುಂಟೆ ಮೂರ್ತಿ,ಉಪಾಧ್ಯಕ್ಷ ರಾಜಶೇಖರ ವಡ್ಡನಹಳ್ಳಿ, ಮುಖಂಡರಾದ ಮಂಜುನಾಥ್, ಮುನಿಕೃಷ್ಣ ಇದ್ದರು.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!