ಹೂಡಿಕೆದಾರರ ಸಮಾವೇಶ ಮತ್ತು ರೋಡ್ -ಶೋ ಹೂಡಿಕೆದಾರರ ಸಮಾವೇಶ ಮತ್ತು ರೋಡ್ -ಶೋ: ಸಚಿವ ಜಗದೀಶ ಶೆಟ್ಟರ್

ಕಲಬುರಗಿ : ರಸ್ತೆ, ರೈಲು, ವಾಯು ಸಂಪರ್ಕ ಸೇರಿದಂತೆ ಉತ್ತಮ ಮೂಲಸೌಕರ್ಯ ಹೊಂದಿರುವ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಹೂಡಿಕೆಗೆ ಕೈಗಾರಿಕೋದ್ಯಮಿಗಳನ್ನು ಆಕರ್ಷಿಸಲು ಮುಂದಿನ ದಿನದಲ್ಲಿ ಕಲಬುರಗಿಯಲ್ಲಿ ಹೂಡಿಕೆದಾರರ ಸಮಾವೇಶ ಆಯೋಜನೆ ಮತ್ತು ರೋಡ್-ಶೋ ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಘೋಷಿಸಿದರು.

ಸೋಮವಾರ ಇಲ್ಲಿನ ಹೆಚ್.ಕೆ.ಸಿ.ಸಿ.ಐ. ಸಭಾಂಗಣದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ಕೈಗಾರಿಕೆ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಹೆಚ್.ಕೆ.ಸಿ.ಸಿ.ಐ ಇವರ ಸಂಯುಕ್ತಾಶ್ರಯದಲ್ಲಿ “ವಾಣಿಜ್ಯೋದ್ಯಮಿಗಳೊಂದಿಗೆ ಸಚಿವರ ಸಂವಾದ”ದಲ್ಲಿ ಉದ್ಯಮಿ ಸಂತೋಷ ಲಂಗರ ಅವರ ಮನವಿಗೆ ಸಚಿವರು ಪ್ರತಿಕ್ರಿಯೆಸಿ ಮಾತನಾಡಿದರು.

ಸ್ಥಳೀಯ ಉದ್ಯಮಿಗಳ ಜೊತೆ ಇತರೆ ಭಾಗದ ಉದ್ಯಮಿಗಳನ್ನು ಸರ್ಕಾರ ಒದಗಿಸುತ್ತಿರುವ ಮೂಲಸೌಕರ್ಯ ಸೇವೆಗಳ ಬಗ್ಗೆ ಮನವೊಲಿಸಲು  ಇಂತಹ ಸಮಾವೇಶ ಮತ್ತು ರೋಡ್ ಶೋ ಸಹಕಾರಿಯಾಗಲಿದೆ. ಹುಬ್ಬಳ್ಳಿ ಸಮಾವೇಶದ ಫಲವಾಗಿಯೇ ಯಾದಗಿರಿ ಕಡೇಚೂರನಲ್ಲಿ ಸುಮಾರು 15 ಫಾರ್ಮ ಉದ್ಯಮಗಳ ಸ್ಥಾಪನೆಗೆ ಮಂಜೂರಾತಿ ನೀಡಲಾಗಿದೆ ಎಂದರು.

ರಾಜ್ಯದ ಇತರೆ ಎಸ್ಕಾಂ ಸಂಸ್ಥೆಗಳು ವಿದ್ಯುತ್ ಕಂಬಗಳನ್ನು ಸ್ಥಳೀಯ ಉದ್ಯಮಿಗಳಿಂದ ಮಾತ್ರ ಖರೀದಿಸುತ್ತಿದೆ. ಆದರೆ ಇಲ್ಲಿನ ಜೆಸ್ಕಾಂ ಸಂಸ್ಥೆ ರಾಜ್ಯದ ಎಲ್ಲಾ ವಿದ್ಯುತ್ ಉತ್ಪಾದನಾ ಗುತ್ತೆಗಾದಾರರಿಂದ ವಿದ್ಯುತ್ ಕಂಬ ಖರೀದಿಸುತ್ತಿದೆ. ಇದರಿಂದ ಸ್ಥಳೀಯ ಉದ್ಯಮಿದಾರರಾದ ನಮಗೆ ಅನ್ಯಾಯವಾಗುತ್ತಿದ್ದು, ಈ ಬಗ್ಗೆ ಗಮನಹರಿಸಬೇಕು ಎಂದರು. ಸಚಿವ ಜಗದೀಶ ಶೆಟ್ಟರ್ ಮಾತನಾಡಿ ಈ ಸಂಬಂಧ ಇಂಧನ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

ಉದ್ಯಮಿ ಸುರೇಶ ಜಿ. ನಂದ್ಯಾಳ ಮಾತನಾಡಿ ಹೊಸದಾಗಿ ಘೋಸಿರುವ ಕೈಗಾರಿಕಾ ನೀತಿ ದೇಶದಲ್ಲಿಯೇ ಉತ್ತಮ ನೀತಿಯಾಗಿದೆ. ಆದರೆ ಇದನ್ನು ಮುಂದಿನ 5 ವರ್ಷದ ವರೆಗೆ ಚಾಲ್ತಿಯಲ್ಲಿಟ್ಟು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಬೇಕು ಎಂದರು.

ಮಹಿಳಾ ಉದ್ಯಮಿ ವಿಜಯಲಕ್ಷ್ಮಿ ಮಾತನಾಡಿ ನಂದೂರ-ಕೆಸರಟಗಿ ಕೈಗಾರಿಕಾ ಪ್ರದೇಶದ ಮಹಿಳಾ ಪಾರ್ಕ್‍ನಲ್ಲಿ ಉದ್ಯಮ ಸ್ಥಾಪನೆಗೆ ಮಹಿಳಾ ಉದ್ಯಮಿಗಳು ಮುಂದೆ ಬಂದಿದ್ದಾರೆ. ಸೂಕ್ತ ಮೂಲಸೌಕರ್ಯ ಮತ್ತು ಮಹಿಳಾ ಉದ್ಯಮಿಗಳಿಗೆ ಹೆಚ್ಚಿನ ಅನುಕೂಲ ಮಾಡಿಕೊಡಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು. ಸಂವಾದದಲ್ಲಿ ಅನೇಕ ಯುವ ಮತ್ತು ಹಿರಿಯ ಉದ್ಯಮಿಗಳು ತಮ್ಮ ಸಮಸ್ಯೆಗಳನ್ನು ಸಚಿವರ ಮುಂದೆ ಹೇಳಿಕೊಂಡರು.

ಸಂವಾದದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಶಾಸಕರಾದ ರಾಜಕುಮಾರ ಪಾಟೀಲ ತೇಲ್ಕೂರ, ಬಸವರಾಜ ಮತ್ತಿಮೂಡ, ಸುಭಾಷ ಗುತ್ತೇದಾರ, ವಿಧಾನ ಪರಿಷತ್ತಿನ ಶಾಸಕರಾದ ಬಿ.ಜಿ.ಪಾಟೀಲ, ಸುನೀಲ ವಲ್ಯಾಪುರೆ, ಮಾಜಿ ಎಂ.ಎಲ್.ಸಿ. ಶಶೀಲ್ ಜಿ. ನಮೋಶಿ, ಕಾಸಿಯಾ ಅಧ್ಯಕ್ಷ ಕೆ.ಬಿ.ಅರಸಪ್ಪ,  ಹೆಚ್.ಕೆ.ಸಿ.ಸಿ.ಐ. ಅಧ್ಯಕ್ಷ ಅಮರನಾಥ ಸಿ. ಪಾಟೀಲ, ಕೆ.ಐ.ಎ.ಡಿ.ಬಿ. ಸಿ.ಇ.ಓ ಡಾ.ಎನ್.ಶಿವಶಂಕರ, ಜಿಲ್ಲಾಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಮಾಣಿಕ ವಿ. ರಘೋಜಿ ಇದ್ದರು.

ರಾಜಕೀಯ

ಉಚಿತ ಆರೋಗ್ಯ 10ನೇ ಗ್ಯಾರಂಟಿ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಉಚಿತ ಆರೋಗ್ಯ 10ನೇ ಗ್ಯಾರಂಟಿ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

"ಪಂಚ ಗ್ಯಾರಂಟಿ ಜೊತೆಗೆ ಭೂಮಿ ಆರನೇ ಗ್ಯಾರಂಟಿ, ನೀರು 7ನೇ ಗ್ಯಾರಂಟಿ, ಮನೆಗಳನ್ನು ನೀಡುವುದು 8ನೇ ಗ್ಯಾರಂಟಿ, ಇ ಖಾತಾ ನೀಡುವುದು 9ನೇ ಗ್ಯಾರಂಟಿ, 10ನೇ ಗ್ಯಾರಂಟಿಯಾಗಿ ಉಚಿತವಾಗಿ ಆರೋಗ್ಯ ನೀಡುವುದು ನಮ್ಮ ಸರ್ಕಾರದ

[ccc_my_favorite_select_button post_id="119663"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರ ಮೇಲೆ ಗುಂಡು ಹಾರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="119595"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!