ಜಿಲ್ಲಾ ಕೇಂದ್ರದ ಹೆಸರು ಬದಲಿಸಲು ಪಟ್ಟುಹಿಡಿದಲ್ಲಿ ನಿಸರ್ಗ ನಾರಾಯಣಸ್ವಾಮಿಗೆ ಘೇರಾವ್: ರಾಜಘಟ್ಟರವಿ

ದೊಡ್ಡಬಳ್ಳಾಪುರ: ತನ್ನ ಸ್ವಾರ್ಥ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಜಿಲ್ಲಾ ಕೇಂದ್ರದ ಹೆಸರನ್ನು ದೇವನಹಳ್ಳಿಯನ್ನಾಗಿ ಬದಲಿಸುವ ಹುನ್ನಾರ ನಡೆಸುತ್ತಿರುವ ನಿಸರ್ಗ ನಾರಾಯಣಸ್ವಾಮಿ ತಮ್ಮ‌ ನಿಲುವು ಬದಲಿಸಿಕೊಳ್ಳದಿದ್ದರೆ ದೊಡ್ಡಬಳ್ಳಾಪುರ ತಾಲ್ಲೂಕಿಗೆ ಬರದಂತೆ  ಘೇರಾವ್ ಹಾಕಲಾಗುವುದೆಂದು ಕರವೆ ಪ್ರವೀಣ್ ಶೆಟ್ಟಿ ಬಣದ ರಾಜ್ಯ ಕಾರ್ಯದರ್ಶಿ ರಾಜಘಟ್ಟರವಿ ಎಚ್ಚರಿಕೆ ನೀಡಿದರು.

ನಗರದ ತಾಲೂಕು ಕಚೇರಿ ಆವರಣದಲ್ಲಿ ಕರವೆ ಪ್ರವೀಣ್ ಶೆಟ್ಟಿ ಬಣದ ತಾಲೂಕು ಘಟದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು,

ಜಿಲ್ಲಾ ಕೇಂದ್ರಕ್ಕೆ ಹೊಂದಿರಬೇಕಾದ ನಗರಸಭೆ, ಬೌಗೋಳಿಕ ವಿಸ್ತೀರ್ಣ, ಸರ್ಕಾರಕ್ಕೆ ವರಮಾನ, ಉಪವಿಭಾಗಾಧಿಕಾರಿ ಕಚೇರಿ ಸೇರಿದಂತೆ ಎಲ್ಲಾ ಅರ್ಹತೆ ಇದ್ದರು ಜಿಲ್ಲಾ ಕೇಂದ್ರ ದೊಡ್ಡಬಳ್ಳಾಪುರಕ್ಕೆ ಬರುವುದು ತಾಲೂಕಿನ ಜನ ಪ್ರತಿನಿಧಿಗಳ ವೈಪಲ್ಯ ಕಾರಣವೆಂದು ಕೈತಪ್ಪಿತು.

ಆ ವೇಳೆ ತೀವ್ರ ಹೋರಾಟ,ನ್ಯಾಯಾಲಯದ ಮೆಟ್ಟಿಲೇರುವ ಕ್ರಮಕ್ಕೆ ಮುಂದಾದರು ಸಹ ಜಿಲ್ಲೆಯ ಎಲ್ಲಾ ತಾಲೂಕಿಗೆ ಅನುಕೂಲವಾಗಲೆಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಜನತೆ ಹೃದಯ ವೈಶಾಲ್ಯ ಪ್ರದರ್ಶಿಸಿ ಸರ್ಕಾರದ ತೀರ್ಮಾನಕ್ಕೆ ಒಪ್ಪಿದ್ದರು. ಆದರೆ ಇಡೀ ಪ್ರಕ್ರಿಯೆಯಲ್ಲಿ ಎಲ್ಲೂ ಇರದ ಜಿಲ್ಲಾ ಕೇಂದ್ರ ಹೆಸರು ಬದಲಾವಣೆ ಪ್ರಸ್ತಾಪವನ್ನು ಆ ವೇಳೆ ಎಲ್ಲೋ ಇದ್ದ ನಿಸರ್ಗ ನಾರಾಯಣಸ್ವಾಮಿ ಶಾಸಕರೆಂಬ ಕಾರಣಕ್ಕೆ ತನ್ನ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಈಗ ಜಿಲ್ಲಾ ಕೇಂದ್ರದ ಹೆಸರನ್ನು ಒಂದು ತಾಲೂಕಿಗೆ ಸೀಮಿತಗೊಳಿಸುವ ಮೂಲಕ ಜಿಲ್ಲೆಯ ಇತರ ತಾಲೂಕಿನ ಜನರ ಭಾವನೆಗಳಿಗೆ ಕೊಳ್ಳಿಇಡುತ್ತಿದ್ದಾರೆ. ಕೂಡಲೇ ಈ ಶಡ್ಯಂತ್ರವನ್ನು ನಿಸರ್ಗ ನಾರಾಯಣಸ್ವಾಮಿ ಬಿಡಬೇಕಿದೆ ಇಲ್ಲವಾದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿಗೆ ಕಾಲಿಡಲು ಸಹ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ದೊಡ್ಡಬಳ್ಳಾಪುರ ಶಾಸಕ ಟಿ.ವೆಂಕಟರಮಣಯ್ಯ ನಿಲುವಿಗೆ ಒತ್ತಾಯ 

ಗೌರವ ಅಧ್ಯಕ್ಷ ಪು.ಮಹೇಶ್, ನಗರ ಅಧ್ಯಕ್ಷ ಶ್ರೀ ನಗರ ಬಶೀರ್ ಮಾತನಾಡಿ, ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ ಜನರ ಬಲಹೀನರೆಂದು ತಿಳಿದ್ದಿದ್ದರೆ ಅದೂ ತಪ್ಪು,

ಜಿಲ್ಲೆಯ ಹೆಸರು ಬದಲಿಸಲು ಮುಂದಾಗುವ ಮೂಲಕ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ  ತಾಲೂಕಿನ ಸಹೋದರತ್ವಕ್ಕೆ ಕೊಳ್ಳಿ ಇಡುತ್ತಿದ್ದಾರೆ.ಇದನ್ನು ಈ ಕೂಡಲೆ ಬಿಡಬೇಕಿದೆ ಇಲ್ಲವಾದಲ್ಲಿ ಇಡೀ ತಾಲೂಕಿನ ಜನತೆ ಹೋರಾಟಕ್ಕೆ ಇಳಿಯಲಿದ್ದಾರೆ‌.ತಾಲೂಕಿನ ಶಾಸಕ ಟಿ.ವೆಂಕಟರಮಣಯ್ಯ ಕೂಡಲೇ ಮಧ್ಯಪ್ರವೇಶ ಮಾಡಬೇಕಿದ್ದು ತಾಲೂಕಿಗೆ ಉಂಟಾಗುತ್ತಿರುವ ಅನ್ಯಾಯದ ವಿರುದ್ದ ತಮ್ಮ ನಿಲುವು ತಿಳಿಸಬೇಕೆಂದು ಒತ್ತಾಯಿಸಿದರು.

ಕಾನೂನು ಸಲಹೆಗಾರರ ಆನಂದ್ ಕುಮಾರ್ ಮಾತನಾಡಿ,ಶಾಸಕರಾಗಿ ನಿಸರ್ಗ ನಾರಾಯಣಸ್ವಾಮಿ ಬೇಜವಬ್ದಾರಿ ಹೇಳಿಕೆ ನೀಡುವುದನ್ನು ಬಿಡಬೇಕಿದೆ.ಬೆಂ.ಗ್ರಾ.ಜಿಲ್ಲೆ ನಾಲ್ಕು ತಾಲೂಕಿಗೆ ಸೇರಿ ಜಿಲ್ಲೆಯಾಗಿದ್ದು ಎಲ್ಲಾ ತಾಲೂಕಿನ ಜನರ ಭಾವನೆಗೆ ಮನ್ನಣೆಕೊಡುವುದನ್ನ ಶಾಸಕರಾದವರು ತಿಳಿಯಬೇಕಿದೆ,ನಾಲ್ಕು ತಾಲೂಕಿಗೂ ತಮ್ಮದೆ ಆದ ಅಸ್ಥಿತ್ವ,ಸ್ಥಾನ ಮಾನ ಹೊಂದಿವೆ ಎಂಬುದನ್ನ ಅರಿತು ವರ್ತಿಸಬೇಕೆಂದರು.

ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರು ಬದಲಾವಣೆಯ ಯಾವುದೇ ಪ್ರಯತ್ನ ನಡೆಸಬಾರದೆಂದು ತಹಶಿಲ್ದಾರ್ ಟಿ.ಎಸ್.ಶಿವರಾಜ್ ಮೂಲಕ ‌ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ಹಮಾಮ್ ವೆಂಕಟೇಶ್, ಕಾರ್ಯದರ್ಶಿ ಜೋಗಹಳ್ಳಿ ಅಮ್ಮು, ನಗರ ಪ್ರಧಾನ ಕಾರ್ಯದರ್ಶಿ ಸುಬ್ರಮಣಿ, ವಿದ್ಯಾರ್ಥಿ ಘಟಕದ ಅಧ್ಯಕ್ಷ ಹೆಮಂತ್, ಸದಸ್ಯರಾದ ಸೂರಿ,ಮುರುಳಿ,ಶ್ರೀನಿವಾಸ್,ಅಂಬರೀಶ್ ಮತ್ತಿತರರಿದ್ದರು.

ರಾಜಕೀಯ

ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ

ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ

ಓಟ್ ಚೋರಿ ಹೆಸರಿನಲ್ಲಿ ಕಾಂಗ್ರೆಸ್ ನವರು ಸುಳ್ಳನ್ನು ಸತ್ಯ ಮಾಡಲು ಹೊರಟಿದ್ದಾರೆ‌. ಅದರಿಂದ ಏನೂ ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraja Bommai) ಹೇಳಿದರು.

[ccc_my_favorite_select_button post_id="117357"]
ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ರಾಜ್ಯ ಕಾಂಗ್ರೆಸ್ ನ ದಾವಣಗೆರೆ ಮೂಲದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ವಿಧಿವಶರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="117359"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ಫೇಸ್‌ಬುಕ್‌ ಪರಿಚಯ: ಮಹಿಳೆಗೆ ಹಣ ನೀಡಿ ಪೆಟ್ಟು ತಿಂದ ಯುವಕ

ಫೇಸ್‌ಬುಕ್‌ ಪರಿಚಯ: ಮಹಿಳೆಗೆ ಹಣ ನೀಡಿ ಪೆಟ್ಟು ತಿಂದ ಯುವಕ

ಫೇಸ್‌ಬುಕ್‌ನಲ್ಲಿ (Facebook) ಪರಿಚಯವಾದ ಮಹಿಳೆ ನೋಡಲು ಬೆಂಗಳೂರಿನಿಂದ ಮಡಿಕೇರಿಗೆ ಬಂದಿದ್ದ ಯುವಕನ ಮೇಲೆ ಮೂವರು ಯುವಕರು ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ನಡೆದಿದೆ.

[ccc_my_favorite_select_button post_id="117343"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]