ಜಿಲ್ಲಾ ಕೇಂದ್ರದ ಹೆಸರು ಬದಲಿಸಲು ಪಟ್ಟುಹಿಡಿದಲ್ಲಿ ನಿಸರ್ಗ ನಾರಾಯಣಸ್ವಾಮಿಗೆ ಘೇರಾವ್: ರಾಜಘಟ್ಟರವಿ

ದೊಡ್ಡಬಳ್ಳಾಪುರ: ತನ್ನ ಸ್ವಾರ್ಥ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಜಿಲ್ಲಾ ಕೇಂದ್ರದ ಹೆಸರನ್ನು ದೇವನಹಳ್ಳಿಯನ್ನಾಗಿ ಬದಲಿಸುವ ಹುನ್ನಾರ ನಡೆಸುತ್ತಿರುವ ನಿಸರ್ಗ ನಾರಾಯಣಸ್ವಾಮಿ ತಮ್ಮ‌ ನಿಲುವು ಬದಲಿಸಿಕೊಳ್ಳದಿದ್ದರೆ ದೊಡ್ಡಬಳ್ಳಾಪುರ ತಾಲ್ಲೂಕಿಗೆ ಬರದಂತೆ  ಘೇರಾವ್ ಹಾಕಲಾಗುವುದೆಂದು ಕರವೆ ಪ್ರವೀಣ್ ಶೆಟ್ಟಿ ಬಣದ ರಾಜ್ಯ ಕಾರ್ಯದರ್ಶಿ ರಾಜಘಟ್ಟರವಿ ಎಚ್ಚರಿಕೆ ನೀಡಿದರು.

ನಗರದ ತಾಲೂಕು ಕಚೇರಿ ಆವರಣದಲ್ಲಿ ಕರವೆ ಪ್ರವೀಣ್ ಶೆಟ್ಟಿ ಬಣದ ತಾಲೂಕು ಘಟದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು,

ಜಿಲ್ಲಾ ಕೇಂದ್ರಕ್ಕೆ ಹೊಂದಿರಬೇಕಾದ ನಗರಸಭೆ, ಬೌಗೋಳಿಕ ವಿಸ್ತೀರ್ಣ, ಸರ್ಕಾರಕ್ಕೆ ವರಮಾನ, ಉಪವಿಭಾಗಾಧಿಕಾರಿ ಕಚೇರಿ ಸೇರಿದಂತೆ ಎಲ್ಲಾ ಅರ್ಹತೆ ಇದ್ದರು ಜಿಲ್ಲಾ ಕೇಂದ್ರ ದೊಡ್ಡಬಳ್ಳಾಪುರಕ್ಕೆ ಬರುವುದು ತಾಲೂಕಿನ ಜನ ಪ್ರತಿನಿಧಿಗಳ ವೈಪಲ್ಯ ಕಾರಣವೆಂದು ಕೈತಪ್ಪಿತು.

ಆ ವೇಳೆ ತೀವ್ರ ಹೋರಾಟ,ನ್ಯಾಯಾಲಯದ ಮೆಟ್ಟಿಲೇರುವ ಕ್ರಮಕ್ಕೆ ಮುಂದಾದರು ಸಹ ಜಿಲ್ಲೆಯ ಎಲ್ಲಾ ತಾಲೂಕಿಗೆ ಅನುಕೂಲವಾಗಲೆಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಜನತೆ ಹೃದಯ ವೈಶಾಲ್ಯ ಪ್ರದರ್ಶಿಸಿ ಸರ್ಕಾರದ ತೀರ್ಮಾನಕ್ಕೆ ಒಪ್ಪಿದ್ದರು. ಆದರೆ ಇಡೀ ಪ್ರಕ್ರಿಯೆಯಲ್ಲಿ ಎಲ್ಲೂ ಇರದ ಜಿಲ್ಲಾ ಕೇಂದ್ರ ಹೆಸರು ಬದಲಾವಣೆ ಪ್ರಸ್ತಾಪವನ್ನು ಆ ವೇಳೆ ಎಲ್ಲೋ ಇದ್ದ ನಿಸರ್ಗ ನಾರಾಯಣಸ್ವಾಮಿ ಶಾಸಕರೆಂಬ ಕಾರಣಕ್ಕೆ ತನ್ನ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಈಗ ಜಿಲ್ಲಾ ಕೇಂದ್ರದ ಹೆಸರನ್ನು ಒಂದು ತಾಲೂಕಿಗೆ ಸೀಮಿತಗೊಳಿಸುವ ಮೂಲಕ ಜಿಲ್ಲೆಯ ಇತರ ತಾಲೂಕಿನ ಜನರ ಭಾವನೆಗಳಿಗೆ ಕೊಳ್ಳಿಇಡುತ್ತಿದ್ದಾರೆ. ಕೂಡಲೇ ಈ ಶಡ್ಯಂತ್ರವನ್ನು ನಿಸರ್ಗ ನಾರಾಯಣಸ್ವಾಮಿ ಬಿಡಬೇಕಿದೆ ಇಲ್ಲವಾದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿಗೆ ಕಾಲಿಡಲು ಸಹ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ದೊಡ್ಡಬಳ್ಳಾಪುರ ಶಾಸಕ ಟಿ.ವೆಂಕಟರಮಣಯ್ಯ ನಿಲುವಿಗೆ ಒತ್ತಾಯ 

ಗೌರವ ಅಧ್ಯಕ್ಷ ಪು.ಮಹೇಶ್, ನಗರ ಅಧ್ಯಕ್ಷ ಶ್ರೀ ನಗರ ಬಶೀರ್ ಮಾತನಾಡಿ, ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ ಜನರ ಬಲಹೀನರೆಂದು ತಿಳಿದ್ದಿದ್ದರೆ ಅದೂ ತಪ್ಪು,

ಜಿಲ್ಲೆಯ ಹೆಸರು ಬದಲಿಸಲು ಮುಂದಾಗುವ ಮೂಲಕ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ  ತಾಲೂಕಿನ ಸಹೋದರತ್ವಕ್ಕೆ ಕೊಳ್ಳಿ ಇಡುತ್ತಿದ್ದಾರೆ.ಇದನ್ನು ಈ ಕೂಡಲೆ ಬಿಡಬೇಕಿದೆ ಇಲ್ಲವಾದಲ್ಲಿ ಇಡೀ ತಾಲೂಕಿನ ಜನತೆ ಹೋರಾಟಕ್ಕೆ ಇಳಿಯಲಿದ್ದಾರೆ‌.ತಾಲೂಕಿನ ಶಾಸಕ ಟಿ.ವೆಂಕಟರಮಣಯ್ಯ ಕೂಡಲೇ ಮಧ್ಯಪ್ರವೇಶ ಮಾಡಬೇಕಿದ್ದು ತಾಲೂಕಿಗೆ ಉಂಟಾಗುತ್ತಿರುವ ಅನ್ಯಾಯದ ವಿರುದ್ದ ತಮ್ಮ ನಿಲುವು ತಿಳಿಸಬೇಕೆಂದು ಒತ್ತಾಯಿಸಿದರು.

ಕಾನೂನು ಸಲಹೆಗಾರರ ಆನಂದ್ ಕುಮಾರ್ ಮಾತನಾಡಿ,ಶಾಸಕರಾಗಿ ನಿಸರ್ಗ ನಾರಾಯಣಸ್ವಾಮಿ ಬೇಜವಬ್ದಾರಿ ಹೇಳಿಕೆ ನೀಡುವುದನ್ನು ಬಿಡಬೇಕಿದೆ.ಬೆಂ.ಗ್ರಾ.ಜಿಲ್ಲೆ ನಾಲ್ಕು ತಾಲೂಕಿಗೆ ಸೇರಿ ಜಿಲ್ಲೆಯಾಗಿದ್ದು ಎಲ್ಲಾ ತಾಲೂಕಿನ ಜನರ ಭಾವನೆಗೆ ಮನ್ನಣೆಕೊಡುವುದನ್ನ ಶಾಸಕರಾದವರು ತಿಳಿಯಬೇಕಿದೆ,ನಾಲ್ಕು ತಾಲೂಕಿಗೂ ತಮ್ಮದೆ ಆದ ಅಸ್ಥಿತ್ವ,ಸ್ಥಾನ ಮಾನ ಹೊಂದಿವೆ ಎಂಬುದನ್ನ ಅರಿತು ವರ್ತಿಸಬೇಕೆಂದರು.

ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರು ಬದಲಾವಣೆಯ ಯಾವುದೇ ಪ್ರಯತ್ನ ನಡೆಸಬಾರದೆಂದು ತಹಶಿಲ್ದಾರ್ ಟಿ.ಎಸ್.ಶಿವರಾಜ್ ಮೂಲಕ ‌ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ಹಮಾಮ್ ವೆಂಕಟೇಶ್, ಕಾರ್ಯದರ್ಶಿ ಜೋಗಹಳ್ಳಿ ಅಮ್ಮು, ನಗರ ಪ್ರಧಾನ ಕಾರ್ಯದರ್ಶಿ ಸುಬ್ರಮಣಿ, ವಿದ್ಯಾರ್ಥಿ ಘಟಕದ ಅಧ್ಯಕ್ಷ ಹೆಮಂತ್, ಸದಸ್ಯರಾದ ಸೂರಿ,ಮುರುಳಿ,ಶ್ರೀನಿವಾಸ್,ಅಂಬರೀಶ್ ಮತ್ತಿತರರಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ JDS ಅಧ್ಯಕ್ಷರಾಗಿ ಹರೀಶ್ ಗೌಡ ನೇಮಕ

ದೊಡ್ಡಬಳ್ಳಾಪುರ JDS ಅಧ್ಯಕ್ಷರಾಗಿ ಹರೀಶ್ ಗೌಡ ನೇಮಕ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜಾತ್ಯಾತೀತ ಜನತಾದಳ (JDS) ಪಕ್ಷದ ಅಧ್ಯಕ್ಷರಾಗಿ ಹರೀಶ್ ಗೌಡ (Harish Gowda) ಅವರನ್ನು ನೇಮಕ ಮಾಡಲಾಗಿದೆ.

[ccc_my_favorite_select_button post_id="121336"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]