ಬೆಂ.ಗ್ರಾ.ಜಿಲ್ಲೆ: ನೀರು ಸಂಗ್ರಹಣಾ ಘಟಕ ನಿರ್ಮಿಸಲು ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ: ತೋಟಗಾರಿಕೆ ಇಲಾಖೆ ವತಿಯಿಂದ 2020-21ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ನೀರು ಸಂಗ್ರಹಣಾ ಘಟಕ ಕಾರ್ಯಕ್ರಮವನ್ನು ಅನುಷ್ಠಾಗೊಳಿಸಲಾಗುತ್ತಿದ್ದು, ವೈಯಕ್ತಿಕ/ಸಮುದಾಯ ನೀರು ಸಂಗ್ರಹಣಾ ಘಟಕಗಳನ್ನು ನಿರ್ಮಿಸಿಕೊಳ್ಳುವ ಫಲಾನುಭವಿಗಳಿಗೆ ಸಹಾಯಧನ ನೀಡಲು ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಜಿಲ್ಲೆಯಲ್ಲಿ ಬರಗಾಲದ ಸಮಯದಲ್ಲಿ ಹಾಗೂ ಬೇಸಿಗೆಯಲ್ಲಿ, ಆಧಾರಿತ ನೀರಾವರಿ ಅಗತ್ಯತೆಯನ್ನು ಒದಗಿಸುವುದು ಹಾಗೂ ತೋಟಗಾರಿಕೆ ಬೆಳೆಗಳು ಒಣಗುವ ಸಮಯದಲ್ಲಿ ನಿರ್ಣಾಯಕ ಹಂತದ ನೀರುಣಿಸುವಿಕೆಯಿಂದ ಬೆಳೆಯನ್ನು ರಕ್ಷಿಸುವ ಅವಶ್ಯಕತೆ ಇರುವುದರಿಂದ, ನೀರು ಸಂಗ್ರಹಣಾ ಘಟಕಗಳನ್ನು ರಚಿಸಿಕೊಂಡು, ಮಳೆಗಾಲದಲ್ಲಿ ಮಳೆನೀರು, ನಾಲೆ ನೀರು, ಹರಿಯುವ ಇತ್ಯಾದಿ ಮೂಲಗಳಿಂದ ಹರಿಯುವ ನೀರನ್ನು ಸದುಪಯೋಗ ಪಡಿಸಿಕೊಂಡು ಸಂಗ್ರಹಿಸುವುದು ಅತ್ಯವಶ್ಯಕವಾಗಿರುವುದರಿಂದ ನೆಲಮಟ್ಟಕ್ಕಿಂತ ಕೆಳಗೆ ರಚಿಸುವ ನೀರು ಸಂಗ್ರಹಣಾ ಘಟಕಗಳ ಮತ್ತು ನೆಲಮಟ್ಟಕ್ಕಿಂತ ಮೇಲೆ ರಚಿಸುವ ನೀರು ಸಂಗ್ರಹಣಾ ಘಟಕಗಳ ವಿನ್ಯಾಸಗಳಿಗನುಗುಣವಾಗಿ ಸಹಾಯಧನ ನೀಡಲಾಗುವುದು.

ನೆಲಮಟ್ಟಕ್ಕಿಂತ ಕೆಳಗಿನ ಘಟಕದಲ್ಲಿ 4000 ಕ್ಯುಬಿಕ್ ಮೀಟರ್ (ಉದಾ: ಅಳತೆ:37ಮೀ X  37ಮೀ X  3ಮೀ) ಗಾತ್ರದ ಘಟಕಕ್ಕೆ 06 ಲಕ್ಷ ಘಟಕ ನಿರ್ಮಾಣ ವೆಚ್ಚಕ್ಕೆ 03 ಲಕ್ಷ ಸಹಾಯಧನ, 6000 ಕ್ಯುಬಿಕ್ ಮೀಟರ್ (ಉದಾ: ಅಳತೆ:45ಮೀ X  45ಮೀ X  3ಮೀ) ಗಾತ್ರದ ಘಟಕಕ್ಕೆ 08 ಲಕ್ಷ ಘಟಕ ನಿರ್ಮಾಣ ವೆಚ್ಚಕ್ಕೆ 04 ಲಕ್ಷ ಸಹಾಯಧನ, 8000 ಕ್ಯುಬಿಕ್ ಮೀಟರ್ (ಉದಾ: ಅಳತೆ:52ಮೀ X  52ಮೀ X  3ಮೀ) ಗಾತ್ರದ ಘಟಕಕ್ಕೆ 10 ಲಕ್ಷ ಘಟಕ ನಿರ್ಮಾಣ ವೆಚ್ಚಕ್ಕೆ 05 ಲಕ್ಷ ಸಹಾಯಧನ, ನೆಲಮಟ್ಟಕ್ಕಿಂತ ಮೇಲಿನ ಘಟಕದಲ್ಲಿ (Modular Steel Tank) 100000 ಲೀ. ಸಾಮರ್ಥ್ಯ (6.4 ಮೀ Diameter X 3.05 ಮೀ) ಗಾತ್ರದ ಘಟಕಕ್ಕೆ 6.50 ಲಕ್ಷ ಘಟಕ ನಿರ್ಮಾಣ ವೆಚ್ಚಕ್ಕೆ 3.25 ಲಕ್ಷ ಸಹಾಯಧನ, 200000 ಲೀ.ಸಾಮರ್ಥ್ಯ (9.0 ಮೀ Diameter X 3.05 ಮೀ) ಗಾತ್ರದ ಘಟಕಕ್ಕೆ 10 ಲಕ್ಷ ಘಟಕ ನಿರ್ಮಾಣ ವೆಚ್ಚಕ್ಕೆ 05 ಲಕ್ಷ ಸಹಾಯಧನ, 500000 ಲೀ.ಸಾಮರ್ಥ್ಯ (14.63 ಮೀ Diameter X 3.05 ಮೀ) ಗಾತ್ರದ ಘಟಕಕ್ಕೆ 15 ಲಕ್ಷ ಘಟಕ ನಿರ್ಮಾಣ ವೆಚ್ಚಕ್ಕೆ 7.50 ಲಕ್ಷ ಸಹಾಯಧನವನ್ನು  ನೀಡಲಾಗುವುದು.

  ಹೆಚ್ಚಿನ ಮಾಹಿತಿಗಾಗಿ, ದೇವನಹಳ್ಳಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಗಂಗಪ್ಪ.ಎಸ್.ಹೊಂಬಾಳ ಮೊ.ಸಂ.: 9845643312, ತಾಂತ್ರಿಕ ಸಹಾಯಕ ಆದರ್ಶ.ಆರ್.ಕೆ ಮೊ.ಸಂ.: 8892367827, ಕಚೇರಿ ದೂ.ಸಂ.: 080-27681204, ದೊಡ್ಡಬಳ್ಳಾಪುರ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಎಂ.ಶ್ರೀನಿವಾಸ್ ಮೊ.ಸಂ.: 9632410677, ತಾಂತ್ರಿಕ ಸಹಾಯಕ ಮಾರುತಿ ಮೊ.ಸಂ.: 9741895988, ಕಚೇರಿ ದೂ.ಸಂ.: 080-27623770, ಹೊಸಕೋಟೆ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಆರ್.ಪ್ರಶಾಂತ್ ಮೊ.ಸಂ.: 9538953949, ತಾಂತ್ರಿಕ ಸಹಾಯಕ ಸೋಮಶೇಖರ್ ಮೊ.ಸಂ.: 8453966868, ಕಚೇರಿ ದೂ.ಸಂ.: 080-29716626, ನೆಲಮಂಗಲ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ, ಸುಬ್ರಮಣ್ಯ.ಜೆ.ವಿ. ಮೊ.ಸಂ.: 9901754339, ತಾಂತ್ರಿಕ ಸಹಾಯಕ ವಿಜಯಕುಮಾರ್ ಮೊ.ಸಂ.: 9902581832 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರು(ಜಿಪಂ) ಮಾಹಾಂತೇಶ ಮುರಗೋಡ(ಮೊ.ಸಂ.: 9448999214) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ

ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಇಂದು (ಏ.15) ರಾಜ್ಯಕ್ಕೆ ಆಗಮಿಸಲಿದ್ದು, ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ನಿರ್ಮಾಣ ವಾಗಿರುವ ಮಂದಿರದ ಭೈರವೈಕ್ಯ ಉದ್ಘಾಟನೆ ಮಾಡಲಿದ್ದಾರೆ.

[ccc_my_favorite_select_button post_id="120962"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]