ಬೆಂ.ಗ್ರಾ.ಜಿಲ್ಲೆ: ನೀರು ಸಂಗ್ರಹಣಾ ಘಟಕ ನಿರ್ಮಿಸಲು ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ: ತೋಟಗಾರಿಕೆ ಇಲಾಖೆ ವತಿಯಿಂದ 2020-21ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ನೀರು ಸಂಗ್ರಹಣಾ ಘಟಕ ಕಾರ್ಯಕ್ರಮವನ್ನು ಅನುಷ್ಠಾಗೊಳಿಸಲಾಗುತ್ತಿದ್ದು, ವೈಯಕ್ತಿಕ/ಸಮುದಾಯ ನೀರು ಸಂಗ್ರಹಣಾ ಘಟಕಗಳನ್ನು ನಿರ್ಮಿಸಿಕೊಳ್ಳುವ ಫಲಾನುಭವಿಗಳಿಗೆ ಸಹಾಯಧನ ನೀಡಲು ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಜಿಲ್ಲೆಯಲ್ಲಿ ಬರಗಾಲದ ಸಮಯದಲ್ಲಿ ಹಾಗೂ ಬೇಸಿಗೆಯಲ್ಲಿ, ಆಧಾರಿತ ನೀರಾವರಿ ಅಗತ್ಯತೆಯನ್ನು ಒದಗಿಸುವುದು ಹಾಗೂ ತೋಟಗಾರಿಕೆ ಬೆಳೆಗಳು ಒಣಗುವ ಸಮಯದಲ್ಲಿ ನಿರ್ಣಾಯಕ ಹಂತದ ನೀರುಣಿಸುವಿಕೆಯಿಂದ ಬೆಳೆಯನ್ನು ರಕ್ಷಿಸುವ ಅವಶ್ಯಕತೆ ಇರುವುದರಿಂದ, ನೀರು ಸಂಗ್ರಹಣಾ ಘಟಕಗಳನ್ನು ರಚಿಸಿಕೊಂಡು, ಮಳೆಗಾಲದಲ್ಲಿ ಮಳೆನೀರು, ನಾಲೆ ನೀರು, ಹರಿಯುವ ಇತ್ಯಾದಿ ಮೂಲಗಳಿಂದ ಹರಿಯುವ ನೀರನ್ನು ಸದುಪಯೋಗ ಪಡಿಸಿಕೊಂಡು ಸಂಗ್ರಹಿಸುವುದು ಅತ್ಯವಶ್ಯಕವಾಗಿರುವುದರಿಂದ ನೆಲಮಟ್ಟಕ್ಕಿಂತ ಕೆಳಗೆ ರಚಿಸುವ ನೀರು ಸಂಗ್ರಹಣಾ ಘಟಕಗಳ ಮತ್ತು ನೆಲಮಟ್ಟಕ್ಕಿಂತ ಮೇಲೆ ರಚಿಸುವ ನೀರು ಸಂಗ್ರಹಣಾ ಘಟಕಗಳ ವಿನ್ಯಾಸಗಳಿಗನುಗುಣವಾಗಿ ಸಹಾಯಧನ ನೀಡಲಾಗುವುದು.

ನೆಲಮಟ್ಟಕ್ಕಿಂತ ಕೆಳಗಿನ ಘಟಕದಲ್ಲಿ 4000 ಕ್ಯುಬಿಕ್ ಮೀಟರ್ (ಉದಾ: ಅಳತೆ:37ಮೀ X  37ಮೀ X  3ಮೀ) ಗಾತ್ರದ ಘಟಕಕ್ಕೆ 06 ಲಕ್ಷ ಘಟಕ ನಿರ್ಮಾಣ ವೆಚ್ಚಕ್ಕೆ 03 ಲಕ್ಷ ಸಹಾಯಧನ, 6000 ಕ್ಯುಬಿಕ್ ಮೀಟರ್ (ಉದಾ: ಅಳತೆ:45ಮೀ X  45ಮೀ X  3ಮೀ) ಗಾತ್ರದ ಘಟಕಕ್ಕೆ 08 ಲಕ್ಷ ಘಟಕ ನಿರ್ಮಾಣ ವೆಚ್ಚಕ್ಕೆ 04 ಲಕ್ಷ ಸಹಾಯಧನ, 8000 ಕ್ಯುಬಿಕ್ ಮೀಟರ್ (ಉದಾ: ಅಳತೆ:52ಮೀ X  52ಮೀ X  3ಮೀ) ಗಾತ್ರದ ಘಟಕಕ್ಕೆ 10 ಲಕ್ಷ ಘಟಕ ನಿರ್ಮಾಣ ವೆಚ್ಚಕ್ಕೆ 05 ಲಕ್ಷ ಸಹಾಯಧನ, ನೆಲಮಟ್ಟಕ್ಕಿಂತ ಮೇಲಿನ ಘಟಕದಲ್ಲಿ (Modular Steel Tank) 100000 ಲೀ. ಸಾಮರ್ಥ್ಯ (6.4 ಮೀ Diameter X 3.05 ಮೀ) ಗಾತ್ರದ ಘಟಕಕ್ಕೆ 6.50 ಲಕ್ಷ ಘಟಕ ನಿರ್ಮಾಣ ವೆಚ್ಚಕ್ಕೆ 3.25 ಲಕ್ಷ ಸಹಾಯಧನ, 200000 ಲೀ.ಸಾಮರ್ಥ್ಯ (9.0 ಮೀ Diameter X 3.05 ಮೀ) ಗಾತ್ರದ ಘಟಕಕ್ಕೆ 10 ಲಕ್ಷ ಘಟಕ ನಿರ್ಮಾಣ ವೆಚ್ಚಕ್ಕೆ 05 ಲಕ್ಷ ಸಹಾಯಧನ, 500000 ಲೀ.ಸಾಮರ್ಥ್ಯ (14.63 ಮೀ Diameter X 3.05 ಮೀ) ಗಾತ್ರದ ಘಟಕಕ್ಕೆ 15 ಲಕ್ಷ ಘಟಕ ನಿರ್ಮಾಣ ವೆಚ್ಚಕ್ಕೆ 7.50 ಲಕ್ಷ ಸಹಾಯಧನವನ್ನು  ನೀಡಲಾಗುವುದು.

  ಹೆಚ್ಚಿನ ಮಾಹಿತಿಗಾಗಿ, ದೇವನಹಳ್ಳಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಗಂಗಪ್ಪ.ಎಸ್.ಹೊಂಬಾಳ ಮೊ.ಸಂ.: 9845643312, ತಾಂತ್ರಿಕ ಸಹಾಯಕ ಆದರ್ಶ.ಆರ್.ಕೆ ಮೊ.ಸಂ.: 8892367827, ಕಚೇರಿ ದೂ.ಸಂ.: 080-27681204, ದೊಡ್ಡಬಳ್ಳಾಪುರ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಎಂ.ಶ್ರೀನಿವಾಸ್ ಮೊ.ಸಂ.: 9632410677, ತಾಂತ್ರಿಕ ಸಹಾಯಕ ಮಾರುತಿ ಮೊ.ಸಂ.: 9741895988, ಕಚೇರಿ ದೂ.ಸಂ.: 080-27623770, ಹೊಸಕೋಟೆ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಆರ್.ಪ್ರಶಾಂತ್ ಮೊ.ಸಂ.: 9538953949, ತಾಂತ್ರಿಕ ಸಹಾಯಕ ಸೋಮಶೇಖರ್ ಮೊ.ಸಂ.: 8453966868, ಕಚೇರಿ ದೂ.ಸಂ.: 080-29716626, ನೆಲಮಂಗಲ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ, ಸುಬ್ರಮಣ್ಯ.ಜೆ.ವಿ. ಮೊ.ಸಂ.: 9901754339, ತಾಂತ್ರಿಕ ಸಹಾಯಕ ವಿಜಯಕುಮಾರ್ ಮೊ.ಸಂ.: 9902581832 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರು(ಜಿಪಂ) ಮಾಹಾಂತೇಶ ಮುರಗೋಡ(ಮೊ.ಸಂ.: 9448999214) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ಕಳೆದ ಕೆಲ ದಿನಗಳ ಹಿಂದೆ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ (News channel) ಧರ್ಮಸ್ಥಳ ಪ್ರಕರಣ ಸಂಬಂಧಿಸಿ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಆರೋಪದ ಮೇಲೆ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ ಕಿರಿಕ್ ಕೀರ್ತಿ ವಿರುದ್ಧ ಬೆಂಗಳೂರಿನ

[ccc_my_favorite_select_button post_id="119114"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!