ಗ್ರಾಮಪಂಚಾಯಿತಿ ಚುನಾವಣೆ ದಿನಾಂಕ ಘೋಷಣೆ ಶೀಘ್ರ / ರಾಜ್ಯ ಚುನಾವಣಾ ಆಯೋಗದಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಯ ಕುರಿತು,ರಾಜ್ಯ ಚುನಾವಣಾ ಆಯೋಗ ಮಾರ್ಗಸೂಚಿ ಪ್ರಕಟಿಸಿದ್ದು ಯಾವುದೇ ಸಂದರ್ಭದಲ್ಲಿ ಚುನಾವಣೆ ನಡೆಯುವ ಸಾಧ್ಯತೆಗಳಿವೆ.

ಕೋವಿಡ್ -19 ಸೋಂಕಿತರಿಗೂ ಸ್ಪರ್ಧೆಗೆ ಅವಕಾಶ, ಪ್ರಚಾರದ ವೇಳೆ ಅಭ್ಯರ್ಥಿ ಜತೆ 5 ಮಂದಿಗೆ ಮಾತ್ರ, ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯ, ಗೆದ್ದ ಮೇಲೆ ವಿಜಯೋತ್ಸವ ಆಚರಣೆ ಇಲ್ಲ -ಇವು ಗ್ರಾಮ ಪಂಚಾಯತ್‌ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ರಾಜ್ಯ ಚುನಾವಣ ಆಯೋಗ ಬಿಡುಗಡೆ ಮಾಡಿರುವ ಪ್ರಮಾಣಿತ ಕಾರ್ಯನಿರ್ವಹಣ ವಿಧಾನ (ಎಸ್‌ಒಪಿ)ಯ ಕರಡು ಮಾರ್ಗಸೂಚಿಗಳಾಗಿದೆ‌.

ಮಾರ್ಗ ಸೂಚಿ ಅನ್ವಯ ಚುನಾವಣಾ ಕರ್ತವ್ಯದಲ್ಲಿರುವ ಪ್ರತಿಯೊಬ್ಬ ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಚುನಾವಣೆ ಕೊಠಡಿ ಪ್ರವೇಶಿಸುವ ಮುನ್ನ ಸ್ಯಾನಿಟೈಸ್ ಮಾಡಿಕೊಳ್ಳಬೇಕು. ಜೊತೆಗೆ ದೈಹಿಕ ಉಷ್ಣಾಂಶ ಪರೀಕ್ಷೆ ಮಾಡಿಸಿಕೊಳ್ಳುವ‌ ಜೊತೆಗೆ ಸಾಧ್ಯವಾದಷ್ಟು ವಿಶಾಲವಾದ ಕೊಠಡಿಯಲ್ಲಿ ಚುನಾವಣಾ ಕೆಲಸ ನಡೆಯಬೇಕು ಎಂದು ಹೇಳಿದೆ.

ಚುನಾವಣೆಗೆ ಸಂಬಂಧಿಸಿದ ಕಡತಗಳು ದಸ್ತಾವೇಜುಗಳು ಸಂಪೂರ್ಣವಾಗಿ ಸೋಂಕು ನಿವಾರಕ ಕೊಠಡಿಯಲ್ಲಿ ಬಿಡಬೇಕು ಜೊತೆಗೆ ಅದರ ಕರ್ತವ್ಯಕ್ಕೆ ಸಿಬ್ಬಂದಿಯನ್ನು ನಿಯೋಜಿಸಬೇಕು ಅವರ ಮಾತ್ರ ಒಳಗೆ ಹೋಗಲು ಅವಕಾಶ ಕಲ್ಪಿಸಿ ಹೊಸ‌‌ಕರಡು ಮಾರ್ಗಸೂಚಿಯಲ್ಲಿ ಪ್ರಕಟಿಸಲಾಗಿದೆ.

ಚುನಾವಣಾಧಿಕಾರಿಗಳು ನಾಮಪತ್ರ ಸ್ವೀಕರಿಸುವ ವೇಳೆ ಫೇಸ್ ಮಾಸ್ಕ್ ಧರಿಸಬೇಕು. ಕೈಗಳಿಗೆ ಗ್ಲೌಸ್ ಕಡ್ಡಾಯವಾಗಿ ಧರಿಸಬೇಕು.ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ಅಭ್ಯರ್ಥಿ ಮತ್ತು ಒಬ್ಬ ಸೂಚಕನಿಗೆ ಮಾತ್ರ ಚುನಾವಣಾಧಿಕಾರಿ ಕೊಠಡಿ ಪ್ರವೇಶಿಸಲು ಅವಕಾಶವಿರುತ್ತದೆ. ಕೊರೋನಾ ಪಾಸಿಟಿವ್ ವ್ಯಕ್ತಿ ನಾಮಪತ್ರ ಸಲ್ಲಿಸಲು ಇಚ್ಛಿಸಿದರೇ ಸೂಚಕರ ಮೂಲಕ ನಾಮಪತ್ರ ಸಲ್ಲಿಸಬಹುದು ಎಂದು ತಿಳಿಸಿದೆ.

ನಾಮಪತ್ರ ಪರಿಶೀಲನೆ ವೇಳೆ ಕ್ಷೇತ್ರವಾರು ಹಾಜರಿರುವ ಅಭ್ಯರ್ಥಿಗಳ ಸಮ್ಮುಖದಲ್ಲಿ ಮಾಡಬೇಕು.ಚುನಾವಣಾ ಪ್ರಚಾರದ ವೇಳೆ ಸಾಮಾಜಿಕ ಅಂತರ ಕಾಯ್ದುಕೊಂಡು ಐದು ಮಂದಿಗೆ ಮಾತ್ರ ಪ್ರಚಾರ ಮಾಡಲು ಅವಕಾಶವಿರುತ್ತದೆ. ಪ್ರಚಾರದ ವೇಳೆ ಫೇಸ್ ಮಾಸ್ಕ್ ಧರಿಸಬೇಕು. ಅಭ್ಯರ್ಥಿಗಳು ಪ್ರಚಾರಕ್ಕಾಗಿ ನಿಯಮಾನುಸಾರ ಮುದ್ರಿಸಿದ ಕರಪತ್ರಗಳನ್ನ ಹಂಚುವಾಗ ಕಡ್ಡಾಯವಾಗಿ ಫೇಸ್ ಮಾಸ್ಕ್ ಧರಿಸಬೇಕು ಎನ್ನುವ ನಿರ್ಬಂಧ ವಿದಿಸಲಾಗಿದೆ.

ಮತದಾನದ ದಿನ ಮತಗಟ್ಟೆ ಅಧಿಕಾರಿಗಳು ಫೇಸ್ ಮಾಸ್ಕ್ ಹ್ಯಾಂಡ್ ಗ್ಲೌಸ್ ಧರಿಸಬೇಕು. ಮತದಾರರು ಫೇಸ್ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಮತದಾನ ಮಾಡಬೇಕು. ಮತದಾನ ಕೊಠಡಿ ಪ್ರವೇಶಿಸುವ ವೇಳೆ ಕೋವಿಡ್ ಥರ್ಮಲ್ ಜ್ವರ ತಪಾಸಣೆ ಕಡ್ಡಾಯ ಮಾಡಬೇಕು ಎಂದು ರಾಜ್ಯ ಚುನಾವಣಾ ಆಯೋಗ ತನ್ನ ‌ ಹತ್ತು ಪುಟಗಳ

ಸುದೀರ್ಘ ಮಾರ್ಗಸೂಚಿಯನ್ನು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯ ಚುನಾವಣಾ ಆಯೋಗ ದಿನಾಂಕ ಪ್ರಕಟಿಸುತ್ತಿದ್ದಂತೆ ತಾವು ಚುನಾವಣೆಯನ್ನು ನಡೆಸಲು ಸಿದ್ಧವಿರುವುದಾಗಿ ಈಗಾಗಲೇ ಸರ್ಕಾರ ಪ್ರಕಟಿಸಿದ ಗ್ರಾಮಪಂಚಾಯತಿಗಳ ಚುನಾವಣೆ ನಡೆಯುವ ಸಾಧ್ಯತೆಗಳು ಇವೆ.

ಕೇಂದ್ರ ಗೃಹ ಸಚಿವಾಲಯ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಕೋವಿಡ್ ನಿಯಂತ್ರಣಕ್ಕೆ ಕಾಲಕಾಲಕ್ಕೆ ಮಾರ್ಗಸೂಚಿಗಳನ್ನು ಹೊರಡಿಸುತ್ತದೆ. ಅದರಂತೆ ಗ್ರಾ.ಪಂ. ಸಾರ್ವತ್ರಿಕ ಚುನಾವಣೆ ನಡೆಸುವ ನಿಟ್ಟಿನಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ತಾಂತ್ರಿಕ ತಜ್ಞರೊಂದಿಗೆ ಆ.18ರಂದು ಚರ್ಚಿಸಿದ್ದು,ಅವರ ಸಲಹೆಗಳನ್ನು ಆಧರಿಸಿ ಎಸ್‌ಒಪಿ ರಚಿಸಲಾಗಿದೆ ಎಂದು ಆಯೋಗ ತಿಳಿಸಿದೆ.

ರಾಜಕೀಯ

ದೆಹಲಿಗೆ ಪ್ರಯಾಣ: ಕಾರಣ ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿಗೆ ಪ್ರಯಾಣ: ಕಾರಣ ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ನೀವು ಮತ್ತು ಸಿದ್ದರಾಮಯ್ಯ ಅವರು ದುಬಾರಿ ವಾಚ್ ಧರಿಸಿದ್ದರ ಬಗ್ಗೆ ಬಿಜೆಪಿ ಟೀಕೆ ಮಾಡುತ್ತಿದೆ ಎಂದು ಕೇಳಿದಾಗ, “ಈ ನನ್ನ ವಾಚ್ ಏಳು ವರ್ಷಗಳ ಹಿಂದೆ ಆಸ್ಟ್ರೇಲಿಯಾದಲ್ಲಿ ಖರೀದಿ ಮಾಡಿದೆ. ನಾನು ಇದನ್ನು ನನ್ನ

[ccc_my_favorite_select_button post_id="116998"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!