ದೇಶದ ಉತ್ತಮ ನಾಗರಿಕರನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು: ಕನ್ಯಾಕುಮಾರಿ ಶ್ರೀನಿವಾಸ್

ದೊಡ್ಡಬಳ್ಳಾಪುರ: ದೇಶದ ಉತ್ತಮ ನಾಗರಿಕರನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ ಎಂದು ಜಿಲ್ಲಾಪಂಚಾಯಿತಿ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆದ “ಡಾ: ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆ” ಅಂಗವಾಗಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ಮಕ್ಕಳ ಮನಸ್ಸನ್ನು ಅರಿತು, ಅವರನ್ನು ಪ್ರಗತಿಯತ್ತ ಕೊಂಡೊಯ್ಯುವ ನೇತಾರ ಶಿಕ್ಷಕರು ಮಾತ್ರ. ತಾಯಿ ಹೇಗೆ ತನ್ನ ಮಗುವಿಗೆ ಜನ್ಮ ನೀಡುತ್ತಾಳೋ ಹಾಗೆಯೇ ಶಿಕ್ಷಕರು ವಿದ್ಯಾರ್ಥಿಗಳ ಜೀವನದಲ್ಲಿ ದಾರಿ ದೀಪವಾಗಿರುತ್ತಾರೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಮಾತನಾಡಿ ಅಜ್ಞಾನದಿಂದ  ಜ್ಞಾನದ ಕಡೆಗೆ, ಕತ್ತಲೆಯಿಂದ ಬೆಳಕಿನೆಡೆಗೆ, ಕೊಂಡೊಯ್ಯವ ಗುರುಗಳನ್ನು ಇಂದು ನೆನಯಲು ಮಹಾದಿನವಾಗಿದೆ. ಡಾ: ಸರ್ವಪಲ್ಲಿ ರಾಧಾಕೃಷ್ಣ ನ್ ರವರ ಮಹಾನ್ ಚಿಂತನೆ ಅವರ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನವಾಗಿದೆ ಎಂದು ತಿಳಿಸಿದರು.

ಒಂದು ದೇಶದ ಅಭಿವದ್ಧಿಯನ್ನು ಅಳೆಯಲು ಅಲ್ಲಿನ ಜನಸಂಖ್ಯೆ ಹಾಗೂ ಶಿಕ್ಷಣ ಹೊಂದಿರುವ  ಸಂಖ್ಯೆಗೆ ಅನುಗುಣವಾಗಿ ಅಲ್ಲಿನ ಅಭಿವೃದ್ಧಿ ಹಾಗೂ ಪ್ರಗತಿಯನ್ನು ಅಂದಾಜು ಮಾಡಲಾಗುತ್ತದೆ. ಹೀಗೆ ಶಿಕ್ಷಣ ಎಂಬುದು ಪ್ರತಿಯೊಂದು ಹಂತದಲ್ಲೂ ತುಂಬಾ ಅವಶ್ಯಕ ವಾದದ್ದು ಎಂದರು.ಜಿಲ್ಲೆಯು ಉತ್ತಮ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಫಲಿತಾಂಶದ ಜೊತೆಗೆ ಗುಣಾತ್ಮಕ ಹಾಗೂ ಪರಿಣಮಾತ್ಮಕ ಶಿಕ್ಷಣದಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಗಳಿಸಿರುವುದು ಹರ್ಷದಾಯಕ ವಾದ್ದದ್ದು. ಈ ಉತ್ತಮ ಫಲಿತಾಂಶದ ಹಿಂದೆ ಅನೇಕ ಅಧಿಕಾರಿಗಳು ಮತ್ತು ಶಿಕ್ಷಕರ ಶ್ರಮವಿದೆ ಎಂದು ಎಲ್ಲರಿಗೂ ಅಭಿನಂದನೆ ತಿಳಿಸಿದರು. 

ಯುವ ಸಮುದಾಯದಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದದ್ದು.ವಿದ್ಯಾರ್ಥಿಗಳಲ್ಲಿ ಕೇವಲ ಅಂಕಗಳಿಸುವ ಕೌಶಲ್ಯವನ್ನು  ಮಾತ್ರವಲ್ಲದೆ ಆತ್ಮಸ್ಥೈರ್ಯ ದೊಂದಿಗೆ ಜೀವನ ನಡೆಸುವ    ಉತ್ತಮವಾದ ಸಮಾಜ ರೂಪಿಸುವಂತೆ ತಿಳಿಸಿದರು.

ಇದೇ ವೇಳೆ, ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಕೆಲವು ಶಿಕ್ಷಕರಿಗೆ ಪ್ರದಾನ ಮಾಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜಯಮ್ಮ,ಜಿಲ್ಲಾ ಪಂಚಾಯತಿ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ, ಅಪರ ಜಿಲ್ಲಾಧಿಕಾರಿ ಡಾ: ಜಗದೀಶ್.ಕೆ.ನಾಯಕ್ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಗಂಗಮಾರೇಗೌಡ ಸೇರಿದಂತೆ ಶಿಕ್ಷಕರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಸಂಸತ್‌ನಲ್ಲಿ ಆಪರೇಷನ್ ಸಿಂಧೂರ ಕದನವಿರಾಮದ ಕಾವೇರಿದ ಚರ್ಚೆ: ರಾಹುಲ್ ಗಾಂಧಿ ಸವಾಲು, ಮೋದಿ ಸ್ಪಷ್ಟನೆ

ಸಂಸತ್‌ನಲ್ಲಿ ಆಪರೇಷನ್ ಸಿಂಧೂರ ಕದನವಿರಾಮದ ಕಾವೇರಿದ ಚರ್ಚೆ: ರಾಹುಲ್ ಗಾಂಧಿ ಸವಾಲು, ಮೋದಿ

ಚಳಿಗಾಲದ ಅಧಿವೇಶನದಲ್ಲಿ ಆಪರೇಷನ್ ಸಿಂಧೂರ (Operation Sindoor), ಏಕಾಏಕಿ ಕದನ ವಿರಾಮ (ceasefire) ಘೋಷಣೆ ಕುರಿತು ತೀವ್ರ ಚರ್ಚೆಗೆ ಕಾರಣವಾಗಿತ್ತು.

[ccc_my_favorite_select_button post_id="111876"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಮತ್ತೊಂದು ಬಲಿ.!

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಮತ್ತೊಂದು ಬಲಿ.!

ಸರ್ಕಾರಗಳು ಮುಂಜಾಗ್ರತೆ ಕ್ರಮ ಕೈಗೊಳ್ಳಿ ಎಂದು ಎಷ್ಟೇ ಸೂಚನೆ ನೀಡಿದರು, ಕೃಷಿ ಹೊಂಡದಲ್ಲಿ (Agricultural pit) ಆಕಸ್ಮಿಕವಾಗಿ ಬಿದ್ದು ಸಾವನಪ್ಪುತ್ತಿರುವ ಪ್ರಕರಣಗಳು ಮಾತ್ರ ನಿಲ್ಲುತ್ತಿಲ್ಲ.

[ccc_my_favorite_select_button post_id="111873"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!