ದೊಡ್ಡಬಳ್ಳಾಪುರ: ರಸ್ತೆ ವಿಸ್ತರಣೆ ಸಂಚಾರಕ್ಕಿಂತಲು ವಾಹನಗಳ ನಿಲುಗಡೆಗೆ ಹೆಚ್ಚು ಬಳಕೆ

ದೊಡ್ಡಬಳ್ಳಾಪುರ: ಹೆಸರಿಗೆ ಮಾತ್ರ ನಾಲ್ಕು ಪಥದ ರಸ್ತೆ. ಆದರೆ ವಾಹನಗಳ ಓಡಾಟಕ್ಕೆ ಲಭ್ಯ ಇರುವುದು ಮಾತ್ರ ಎರಡು ಪಥದ ರಸ್ತೆಗಿಂತಲು ಕಡಿಮೆ. ರಸ್ತೆ ವಿಸ್ತರಣೆಯಾಗಿರುವುದು  ವಾಹನಗಳ ಓಡಾಟಕ್ಕಿಂತಲು ವಾಹನಗಳ ನಿಲುಗಡೆಗೆ ಹೆಚ್ಚು ಬಳಕೆಯಾಗುತ್ತಿದೆ. 

ದೊಡ್ಡಬಳ್ಳಾಪುರದ ಮೂಲಕ ಹಾದು ಹೋಗಿರುವ ಹಿಂದೂಪುರ-ಬೆಂಗಳೂರು ರಾಜ್ಯ ಹೆದ್ದಾರಿಯನ್ನು ನಾಲ್ಕು ಪಥಗಳ ರಸ್ತೆಯಾಗಿ ಅಭಿವೃದ್ಧಿಪಡಿಸಲಾಗಿದೆ. ಹಾಗೆಯೇ ಇದು ಟೋಲ್ ಪಾವತಿ ರಸ್ತೆಯು ಸಹ ಆಗಿದೆ. ಆದರೆ ಟೋಲ್ನವರು ಶುಲ್ಕ ವಸೂಲಿ ಮಾಡಿಕೊಂಡು ತಮ್ಮ ಪಾಡಿಗೆ ತಾವಿದ್ದಾರೆ ವಿನಹ ರಸ್ತೆಯಲ್ಲಿ ವಾಹನಗಳ ಓಡಾಟಕ್ಕೆ ಏನಾದರು ಅಡೆತಡೆ ಇದೆಯ ಎನ್ನುವ ಬಗ್ಗೆ ಮಾತ್ರ ಒಂದಿಷ್ಟು ತಲೆಕೆಡಿಸಿಕೊಳ್ಳುತ್ತಲೇ ಇಲ್ಲ. 

ಹೆದ್ದಾರಿಯಲ್ಲಿನ ಬಾಶೆಟ್ಟಿಹಳ್ಳಿ ಯಿಂದ ಆರಂಭವಾಗಿ ದೊಡ್ಡಬಳ್ಳಾಪುರ ನಗರ ವ್ಯಾಪ್ತಿ ಮುಕ್ತಾಯವಾಗುವ ಪಾಲನಜೋಗಳ್ಳಿವರೆಗೂ ರಸ್ತೆಯ ಎರಡೂ ಬದಿಯಲ್ಲೂ ರಾತ್ರಿ ವೇಳೆ ಸರಕು ಸಾಗಾಣಿಕೆ ಲಾರಿಗಳು, ಹಗಲಿನ ವೇಳೆಯಲ್ಲಿ ಕಾರು, ಬೈಕ್ಗಳನ್ನು ನಿಲುಗಡೆ ಮಾಡಲಾಗುತ್ತದೆ. ಅದರಲ್ಲೂ ನಗರಸಭೆ ವ್ಯಾಪ್ತಿಯ ರೈಲ್ವೆ ನಿಲ್ದಾಣ ವೃತ್ತ, ಡಿ.ಕ್ರಾಸ್, ಪ್ರವಾಸಿ ಮಂದಿರ ವೃತ್ತ, ಎಪಿಎಂಸಿ ಮಾರುಕಟ್ಟೆ ಸಮೀಪದ ರಸ್ತೆಯ ಎರಡೂ ಬದಿಯಲ್ಲೂ ವಾಹನಗಳು ಸಾಲುಗಟ್ಟಿ ನಿಂತಿರುತ್ತವೆ. ಹೀಗಾಗಿ ಈ ಪ್ರದೇಶಗಳಲ್ಲಿ ನಾಲ್ಕು ಪಥದ ರಸ್ತೆ ಇರಲಿ ಎರಡೂ ಪಥಕ್ಕೂ ಕಡಿಮೆಯಾಗಿದೆ ಎನ್ನುವುದು ಸಾರ್ವಜನಿಕರ ದೂರು. 

ವಾನಗಳವರು ರಸ್ತೆ ಬಳಕೆಗೆ ಟೋಲ್ ನೀಡಿಯು ರಸ್ತೆಯಲ್ಲಿ ಸುಗಮವಾಗಿ ಸಂಚರಿಸಲು ಸಾಧ್ಯವಿಲ್ಲದಂತಾಗಿದೆ. ಲಾಕ್ಡೌನ್ ಜಾರಿಗೆ ಬಂದಾಗಿನಿಂದ ಇಲ್ಲಿಯವರೆಗೂ ಟ್ರಾಫಿಕ್ ನಿಯಂತ್ರಣ ಇರಲಿ, ಕನಿಷ್ಟ ರಸ್ತೆ ಬದಿಯಲ್ಲಿ ಬೇಕಾಬಿಟ್ಟಿಯಾಗಿ ಪಾರ್ಕಿಂಗ್ ಮಾಡಿರುವ ವಾಹನಗಳ ತೆರವಿನ ಕಡೆಗೂ ಸಹ ಪೊಲೀಸರು ನಿಗಾವಹಿಸುವುದನ್ನೇ ಬಿಟ್ಟಿದ್ದಾರೆ ಎಂದು ಹಿರಿಯ ಕನ್ನಡಪರ ಹೋರಾಟಗಾರ ಜಿ.ಸತ್ಯನಾರಾಯಣ್ ದೂರಿದ್ದಾರೆ.  

ನನಗರದ ಬಸವ ಭವನದಿಂದ ತಾಲ್ಲೂಕು ಕಚೇರಿ ಮೂಲಕ ನೆಲಮಂಗಲ ರಸ್ತೆಯ ಕನಕದಾಸ ವೃತ್ತದವರೆಗೂ ರಸ್ತೆಯನ್ನು ವಿಸ್ತರಣೆ ಮಾಡಿ ರಸ್ತೆ ಮಧ್ಯದಲ್ಲಿ ವಿಭಜಕವನ್ನು ಹಾಕಲಾಗಿದೆ. ಆದರೆ ಗ್ರಾಮಾಂತರ ಪೊಲೀಸ್ ಠಾಣೆ ಮುಂಭಾಗವು ಸೇರಿದಂತೆ ತಾಲ್ಲೂಕು ಕಚೇರಿ ವೃತ್ತ, ಇಸ್ಲಾಂಪುರದಲ್ಲಿನ ರಸ್ತೆಯ ಎರಡೂ ಬದಿಯಲ್ಲೂ ಬೈಕ್, ಕಾರು, ಸರಕು ಸಾಗಾಣಿಕೆ ವಾಹನಹಗಳನ್ನು ಇಡೀ ದಿನ ನಿಲ್ಲಿಸಿಯೇ ಇರುತ್ತಾರೆ. ಹೀಗಾಗಿ ರಸ್ತೆ ವಿಸ್ತರಣೆ ಮಾಡಿ ಡಾಂಬರು ಹಾಕಿರುವುದು ವಾಹನಗಳ ನಿಲುಗಡೆಗೆ ಸೂಕ್ತ ಸ್ಥಳ ಕಲ್ಪಿಸಿದಂತಾಗಿದೆಯೆ ವಿನಹ ಸಂಚಾರಕ್ಕೆ ಮಾತ್ರ ಬಳಕೆಯಾಗುತ್ತಿಲ್ಲ ಎಂದು ಜೆಡಿಎಸ್ ಹಿರಿಯ ಮುಖಂಡ ಲಕ್ಷ್ಮೀನಾರಾಯಣ್ ತಿಳಿಸಿದ್ದಾರೆ.

ರಾಜಕೀಯ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಮುಖ ಸಂಸತ್ತಿನ ಕಲಾಪಗಳು ಮತ್ತು ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗೈರುಹಾಜರಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಅವರು ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ

[ccc_my_favorite_select_button post_id="120446"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

ಐಪಿಎಲ್‌ (IPL) ಅತ್ಯಂತ ಜನಪ್ರಿಯ ಫ್ರಾಂಚೈಸಿ ಆರ್‌ಸಿಬಿಯನ್ನು (RCB) ಆದಿತ್ಯ ಬಿರ್ಲಾ ಗ್ರೂಪ್ ಮತ್ತು ಟೈಮ್ಸ್ ಆಫ್ ಇಂಡಿಯಾ ನೇತೃತ್ವದ ಒಕ್ಕೂಟವು ಖರೀದಿಸಿದೆ.

[ccc_my_favorite_select_button post_id="120461"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: 30 ತಿಂಗಳು ಕಳೆದರು ಮುಗಿಯದ ರಸ್ತೆ ಕಾಮಗಾರಿ.. ಪದೇ ಪದೇ ಅಪಘಾತ..!

ದೊಡ್ಡಬಳ್ಳಾಪುರ: 30 ತಿಂಗಳು ಕಳೆದರು ಮುಗಿಯದ ರಸ್ತೆ ಕಾಮಗಾರಿ.. ಪದೇ ಪದೇ ಅಪಘಾತ..!

ಶಂಕುಸ್ಥಾಪನೆ ಕಂಡು 2 ವರ್ಷ 10 ತಿಂಗಳು ಕಳೆದರು ಪೂರ್ಣಗೊಳ್ಳದ ರಸ್ತೆ ಕಾಮಗಾರಿಯಿಂದಾಗಿ ವಾಹನ ಸವಾರರು ಪದೇ ಪದೇ ಅಪಘಾತಕ್ಕೆ (Accident) ಒಳಗಾಗುತ್ತಿರುವ ಘಟನೆ ರಾಜಘಟ್ಟ ಕೆರೆ ಏರಿ ಮೇಲೆ ನಡೆಯುತ್ತಿದೆ.

[ccc_my_favorite_select_button post_id="120455"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!