ದೊಡ್ಡಬಳ್ಳಾಪುರ: ರಸ್ತೆ ವಿಸ್ತರಣೆ ಸಂಚಾರಕ್ಕಿಂತಲು ವಾಹನಗಳ ನಿಲುಗಡೆಗೆ ಹೆಚ್ಚು ಬಳಕೆ

ದೊಡ್ಡಬಳ್ಳಾಪುರ: ಹೆಸರಿಗೆ ಮಾತ್ರ ನಾಲ್ಕು ಪಥದ ರಸ್ತೆ. ಆದರೆ ವಾಹನಗಳ ಓಡಾಟಕ್ಕೆ ಲಭ್ಯ ಇರುವುದು ಮಾತ್ರ ಎರಡು ಪಥದ ರಸ್ತೆಗಿಂತಲು ಕಡಿಮೆ. ರಸ್ತೆ ವಿಸ್ತರಣೆಯಾಗಿರುವುದು  ವಾಹನಗಳ ಓಡಾಟಕ್ಕಿಂತಲು ವಾಹನಗಳ ನಿಲುಗಡೆಗೆ ಹೆಚ್ಚು ಬಳಕೆಯಾಗುತ್ತಿದೆ. 

ದೊಡ್ಡಬಳ್ಳಾಪುರದ ಮೂಲಕ ಹಾದು ಹೋಗಿರುವ ಹಿಂದೂಪುರ-ಬೆಂಗಳೂರು ರಾಜ್ಯ ಹೆದ್ದಾರಿಯನ್ನು ನಾಲ್ಕು ಪಥಗಳ ರಸ್ತೆಯಾಗಿ ಅಭಿವೃದ್ಧಿಪಡಿಸಲಾಗಿದೆ. ಹಾಗೆಯೇ ಇದು ಟೋಲ್ ಪಾವತಿ ರಸ್ತೆಯು ಸಹ ಆಗಿದೆ. ಆದರೆ ಟೋಲ್ನವರು ಶುಲ್ಕ ವಸೂಲಿ ಮಾಡಿಕೊಂಡು ತಮ್ಮ ಪಾಡಿಗೆ ತಾವಿದ್ದಾರೆ ವಿನಹ ರಸ್ತೆಯಲ್ಲಿ ವಾಹನಗಳ ಓಡಾಟಕ್ಕೆ ಏನಾದರು ಅಡೆತಡೆ ಇದೆಯ ಎನ್ನುವ ಬಗ್ಗೆ ಮಾತ್ರ ಒಂದಿಷ್ಟು ತಲೆಕೆಡಿಸಿಕೊಳ್ಳುತ್ತಲೇ ಇಲ್ಲ. 

ಹೆದ್ದಾರಿಯಲ್ಲಿನ ಬಾಶೆಟ್ಟಿಹಳ್ಳಿ ಯಿಂದ ಆರಂಭವಾಗಿ ದೊಡ್ಡಬಳ್ಳಾಪುರ ನಗರ ವ್ಯಾಪ್ತಿ ಮುಕ್ತಾಯವಾಗುವ ಪಾಲನಜೋಗಳ್ಳಿವರೆಗೂ ರಸ್ತೆಯ ಎರಡೂ ಬದಿಯಲ್ಲೂ ರಾತ್ರಿ ವೇಳೆ ಸರಕು ಸಾಗಾಣಿಕೆ ಲಾರಿಗಳು, ಹಗಲಿನ ವೇಳೆಯಲ್ಲಿ ಕಾರು, ಬೈಕ್ಗಳನ್ನು ನಿಲುಗಡೆ ಮಾಡಲಾಗುತ್ತದೆ. ಅದರಲ್ಲೂ ನಗರಸಭೆ ವ್ಯಾಪ್ತಿಯ ರೈಲ್ವೆ ನಿಲ್ದಾಣ ವೃತ್ತ, ಡಿ.ಕ್ರಾಸ್, ಪ್ರವಾಸಿ ಮಂದಿರ ವೃತ್ತ, ಎಪಿಎಂಸಿ ಮಾರುಕಟ್ಟೆ ಸಮೀಪದ ರಸ್ತೆಯ ಎರಡೂ ಬದಿಯಲ್ಲೂ ವಾಹನಗಳು ಸಾಲುಗಟ್ಟಿ ನಿಂತಿರುತ್ತವೆ. ಹೀಗಾಗಿ ಈ ಪ್ರದೇಶಗಳಲ್ಲಿ ನಾಲ್ಕು ಪಥದ ರಸ್ತೆ ಇರಲಿ ಎರಡೂ ಪಥಕ್ಕೂ ಕಡಿಮೆಯಾಗಿದೆ ಎನ್ನುವುದು ಸಾರ್ವಜನಿಕರ ದೂರು. 

ವಾನಗಳವರು ರಸ್ತೆ ಬಳಕೆಗೆ ಟೋಲ್ ನೀಡಿಯು ರಸ್ತೆಯಲ್ಲಿ ಸುಗಮವಾಗಿ ಸಂಚರಿಸಲು ಸಾಧ್ಯವಿಲ್ಲದಂತಾಗಿದೆ. ಲಾಕ್ಡೌನ್ ಜಾರಿಗೆ ಬಂದಾಗಿನಿಂದ ಇಲ್ಲಿಯವರೆಗೂ ಟ್ರಾಫಿಕ್ ನಿಯಂತ್ರಣ ಇರಲಿ, ಕನಿಷ್ಟ ರಸ್ತೆ ಬದಿಯಲ್ಲಿ ಬೇಕಾಬಿಟ್ಟಿಯಾಗಿ ಪಾರ್ಕಿಂಗ್ ಮಾಡಿರುವ ವಾಹನಗಳ ತೆರವಿನ ಕಡೆಗೂ ಸಹ ಪೊಲೀಸರು ನಿಗಾವಹಿಸುವುದನ್ನೇ ಬಿಟ್ಟಿದ್ದಾರೆ ಎಂದು ಹಿರಿಯ ಕನ್ನಡಪರ ಹೋರಾಟಗಾರ ಜಿ.ಸತ್ಯನಾರಾಯಣ್ ದೂರಿದ್ದಾರೆ.  

ನನಗರದ ಬಸವ ಭವನದಿಂದ ತಾಲ್ಲೂಕು ಕಚೇರಿ ಮೂಲಕ ನೆಲಮಂಗಲ ರಸ್ತೆಯ ಕನಕದಾಸ ವೃತ್ತದವರೆಗೂ ರಸ್ತೆಯನ್ನು ವಿಸ್ತರಣೆ ಮಾಡಿ ರಸ್ತೆ ಮಧ್ಯದಲ್ಲಿ ವಿಭಜಕವನ್ನು ಹಾಕಲಾಗಿದೆ. ಆದರೆ ಗ್ರಾಮಾಂತರ ಪೊಲೀಸ್ ಠಾಣೆ ಮುಂಭಾಗವು ಸೇರಿದಂತೆ ತಾಲ್ಲೂಕು ಕಚೇರಿ ವೃತ್ತ, ಇಸ್ಲಾಂಪುರದಲ್ಲಿನ ರಸ್ತೆಯ ಎರಡೂ ಬದಿಯಲ್ಲೂ ಬೈಕ್, ಕಾರು, ಸರಕು ಸಾಗಾಣಿಕೆ ವಾಹನಹಗಳನ್ನು ಇಡೀ ದಿನ ನಿಲ್ಲಿಸಿಯೇ ಇರುತ್ತಾರೆ. ಹೀಗಾಗಿ ರಸ್ತೆ ವಿಸ್ತರಣೆ ಮಾಡಿ ಡಾಂಬರು ಹಾಕಿರುವುದು ವಾಹನಗಳ ನಿಲುಗಡೆಗೆ ಸೂಕ್ತ ಸ್ಥಳ ಕಲ್ಪಿಸಿದಂತಾಗಿದೆಯೆ ವಿನಹ ಸಂಚಾರಕ್ಕೆ ಮಾತ್ರ ಬಳಕೆಯಾಗುತ್ತಿಲ್ಲ ಎಂದು ಜೆಡಿಎಸ್ ಹಿರಿಯ ಮುಖಂಡ ಲಕ್ಷ್ಮೀನಾರಾಯಣ್ ತಿಳಿಸಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ

ವಿವಿಧ ರಾಜ್ಯಗಳ ಚುನಾವಣೆಗಳು ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ಬೆಲೆಯನ್ನು ಏಕಾಏಕಿ ರೂ.993 ಹೆಚ್ಚಳ ಮಾಡಿರುವ ಕುರಿತು ದೇಶಾದ್ಯಂತ ಆಕ್ರೋಶ ತೀವ್ರಗೊಂಡಿವೆ. ಈ ಕುರಿತು ಪ್ರತಿಕ್ರಿಯೆ ಕೇಳುತ್ತಿದ್ದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

[ccc_my_favorite_select_button post_id="121678"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]