ದೊಡ್ಡಬಳ್ಳಾಪುರ: ರಸ್ತೆ ವಿಸ್ತರಣೆ ಸಂಚಾರಕ್ಕಿಂತಲು ವಾಹನಗಳ ನಿಲುಗಡೆಗೆ ಹೆಚ್ಚು ಬಳಕೆ

ದೊಡ್ಡಬಳ್ಳಾಪುರ: ಹೆಸರಿಗೆ ಮಾತ್ರ ನಾಲ್ಕು ಪಥದ ರಸ್ತೆ. ಆದರೆ ವಾಹನಗಳ ಓಡಾಟಕ್ಕೆ ಲಭ್ಯ ಇರುವುದು ಮಾತ್ರ ಎರಡು ಪಥದ ರಸ್ತೆಗಿಂತಲು ಕಡಿಮೆ. ರಸ್ತೆ ವಿಸ್ತರಣೆಯಾಗಿರುವುದು  ವಾಹನಗಳ ಓಡಾಟಕ್ಕಿಂತಲು ವಾಹನಗಳ ನಿಲುಗಡೆಗೆ ಹೆಚ್ಚು ಬಳಕೆಯಾಗುತ್ತಿದೆ. 

ದೊಡ್ಡಬಳ್ಳಾಪುರದ ಮೂಲಕ ಹಾದು ಹೋಗಿರುವ ಹಿಂದೂಪುರ-ಬೆಂಗಳೂರು ರಾಜ್ಯ ಹೆದ್ದಾರಿಯನ್ನು ನಾಲ್ಕು ಪಥಗಳ ರಸ್ತೆಯಾಗಿ ಅಭಿವೃದ್ಧಿಪಡಿಸಲಾಗಿದೆ. ಹಾಗೆಯೇ ಇದು ಟೋಲ್ ಪಾವತಿ ರಸ್ತೆಯು ಸಹ ಆಗಿದೆ. ಆದರೆ ಟೋಲ್ನವರು ಶುಲ್ಕ ವಸೂಲಿ ಮಾಡಿಕೊಂಡು ತಮ್ಮ ಪಾಡಿಗೆ ತಾವಿದ್ದಾರೆ ವಿನಹ ರಸ್ತೆಯಲ್ಲಿ ವಾಹನಗಳ ಓಡಾಟಕ್ಕೆ ಏನಾದರು ಅಡೆತಡೆ ಇದೆಯ ಎನ್ನುವ ಬಗ್ಗೆ ಮಾತ್ರ ಒಂದಿಷ್ಟು ತಲೆಕೆಡಿಸಿಕೊಳ್ಳುತ್ತಲೇ ಇಲ್ಲ. 

ಹೆದ್ದಾರಿಯಲ್ಲಿನ ಬಾಶೆಟ್ಟಿಹಳ್ಳಿ ಯಿಂದ ಆರಂಭವಾಗಿ ದೊಡ್ಡಬಳ್ಳಾಪುರ ನಗರ ವ್ಯಾಪ್ತಿ ಮುಕ್ತಾಯವಾಗುವ ಪಾಲನಜೋಗಳ್ಳಿವರೆಗೂ ರಸ್ತೆಯ ಎರಡೂ ಬದಿಯಲ್ಲೂ ರಾತ್ರಿ ವೇಳೆ ಸರಕು ಸಾಗಾಣಿಕೆ ಲಾರಿಗಳು, ಹಗಲಿನ ವೇಳೆಯಲ್ಲಿ ಕಾರು, ಬೈಕ್ಗಳನ್ನು ನಿಲುಗಡೆ ಮಾಡಲಾಗುತ್ತದೆ. ಅದರಲ್ಲೂ ನಗರಸಭೆ ವ್ಯಾಪ್ತಿಯ ರೈಲ್ವೆ ನಿಲ್ದಾಣ ವೃತ್ತ, ಡಿ.ಕ್ರಾಸ್, ಪ್ರವಾಸಿ ಮಂದಿರ ವೃತ್ತ, ಎಪಿಎಂಸಿ ಮಾರುಕಟ್ಟೆ ಸಮೀಪದ ರಸ್ತೆಯ ಎರಡೂ ಬದಿಯಲ್ಲೂ ವಾಹನಗಳು ಸಾಲುಗಟ್ಟಿ ನಿಂತಿರುತ್ತವೆ. ಹೀಗಾಗಿ ಈ ಪ್ರದೇಶಗಳಲ್ಲಿ ನಾಲ್ಕು ಪಥದ ರಸ್ತೆ ಇರಲಿ ಎರಡೂ ಪಥಕ್ಕೂ ಕಡಿಮೆಯಾಗಿದೆ ಎನ್ನುವುದು ಸಾರ್ವಜನಿಕರ ದೂರು. 

ವಾನಗಳವರು ರಸ್ತೆ ಬಳಕೆಗೆ ಟೋಲ್ ನೀಡಿಯು ರಸ್ತೆಯಲ್ಲಿ ಸುಗಮವಾಗಿ ಸಂಚರಿಸಲು ಸಾಧ್ಯವಿಲ್ಲದಂತಾಗಿದೆ. ಲಾಕ್ಡೌನ್ ಜಾರಿಗೆ ಬಂದಾಗಿನಿಂದ ಇಲ್ಲಿಯವರೆಗೂ ಟ್ರಾಫಿಕ್ ನಿಯಂತ್ರಣ ಇರಲಿ, ಕನಿಷ್ಟ ರಸ್ತೆ ಬದಿಯಲ್ಲಿ ಬೇಕಾಬಿಟ್ಟಿಯಾಗಿ ಪಾರ್ಕಿಂಗ್ ಮಾಡಿರುವ ವಾಹನಗಳ ತೆರವಿನ ಕಡೆಗೂ ಸಹ ಪೊಲೀಸರು ನಿಗಾವಹಿಸುವುದನ್ನೇ ಬಿಟ್ಟಿದ್ದಾರೆ ಎಂದು ಹಿರಿಯ ಕನ್ನಡಪರ ಹೋರಾಟಗಾರ ಜಿ.ಸತ್ಯನಾರಾಯಣ್ ದೂರಿದ್ದಾರೆ.  

ನನಗರದ ಬಸವ ಭವನದಿಂದ ತಾಲ್ಲೂಕು ಕಚೇರಿ ಮೂಲಕ ನೆಲಮಂಗಲ ರಸ್ತೆಯ ಕನಕದಾಸ ವೃತ್ತದವರೆಗೂ ರಸ್ತೆಯನ್ನು ವಿಸ್ತರಣೆ ಮಾಡಿ ರಸ್ತೆ ಮಧ್ಯದಲ್ಲಿ ವಿಭಜಕವನ್ನು ಹಾಕಲಾಗಿದೆ. ಆದರೆ ಗ್ರಾಮಾಂತರ ಪೊಲೀಸ್ ಠಾಣೆ ಮುಂಭಾಗವು ಸೇರಿದಂತೆ ತಾಲ್ಲೂಕು ಕಚೇರಿ ವೃತ್ತ, ಇಸ್ಲಾಂಪುರದಲ್ಲಿನ ರಸ್ತೆಯ ಎರಡೂ ಬದಿಯಲ್ಲೂ ಬೈಕ್, ಕಾರು, ಸರಕು ಸಾಗಾಣಿಕೆ ವಾಹನಹಗಳನ್ನು ಇಡೀ ದಿನ ನಿಲ್ಲಿಸಿಯೇ ಇರುತ್ತಾರೆ. ಹೀಗಾಗಿ ರಸ್ತೆ ವಿಸ್ತರಣೆ ಮಾಡಿ ಡಾಂಬರು ಹಾಕಿರುವುದು ವಾಹನಗಳ ನಿಲುಗಡೆಗೆ ಸೂಕ್ತ ಸ್ಥಳ ಕಲ್ಪಿಸಿದಂತಾಗಿದೆಯೆ ವಿನಹ ಸಂಚಾರಕ್ಕೆ ಮಾತ್ರ ಬಳಕೆಯಾಗುತ್ತಿಲ್ಲ ಎಂದು ಜೆಡಿಎಸ್ ಹಿರಿಯ ಮುಖಂಡ ಲಕ್ಷ್ಮೀನಾರಾಯಣ್ ತಿಳಿಸಿದ್ದಾರೆ.

ರಾಜಕೀಯ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ: ಜೆಡಿಎಸ್ ಅಭ್ಯರ್ಥಿ ಪರ ಬಿ.ಮುನೇಗೌಡ ಭರ್ಜರಿ ಪ್ರಚಾರ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ: ಜೆಡಿಎಸ್ ಅಭ್ಯರ್ಥಿ ಪರ ಬಿ.ಮುನೇಗೌಡ ಭರ್ಜರಿ ಪ್ರಚಾರ

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣಾ ಕಣದಲ್ಲಿ ಸೋಮವಾರದಿಂದ ಜೆಡಿಎಸ್ (JDS) ಅಭ್ಯರ್ಥಿಗಳ ಪರವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ (B. Mune Gowda) ಅವರು ಮತಯಾಚನೆಗೆ ಚಾಲನೆ ನೀಡಿದ್ದಾರೆ.

[ccc_my_favorite_select_button post_id="117387"]
ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ರಾಜ್ಯ ಕಾಂಗ್ರೆಸ್ ನ ದಾವಣಗೆರೆ ಮೂಲದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ವಿಧಿವಶರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="117359"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕಬ್ಬಡಿ ಚಾಂಪಿಯನ್ ಶಿಪ್; ಕರ್ನಾಟಕಕ್ಕೆ ಕಂಚಿನ ಪದಕ.. ದೊಡ್ಡಬಳ್ಳಾಪುರದ ಹರೀಶ್ ಭಾಗಿ

ಕಬ್ಬಡಿ ಚಾಂಪಿಯನ್ ಶಿಪ್; ಕರ್ನಾಟಕಕ್ಕೆ ಕಂಚಿನ ಪದಕ.. ದೊಡ್ಡಬಳ್ಳಾಪುರದ ಹರೀಶ್ ಭಾಗಿ

ಅಮೆಚೂರ್ ಕಬಡ್ಡಿ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ಮಹಾರಾಷ್ಟ್ರದ ಜಾಲ್ಗೊಂನ್ ನಲ್ಲಿ ನಡೆದ 5ನೇ ಫೆಡರೇಶನ್ ಕಪ್ ನ್ಯಾಷನಲ್ ಕಬ್ಬಡಿ ಚಾಂಪಿಯನ್ ಶಿಪ್ ನಲ್ಲಿ (Kabbadi Championship) ಭಾಗವಹಿಸಿದ ಕರ್ನಾಟಕದ ಕಬ್ಬಡಿ ತಂಡ ಕಂಚಿನ

[ccc_my_favorite_select_button post_id="117398"]
ದೊಡ್ಡಬಳ್ಳಾಪುರ: ಹಾಡೋನಹಳ್ಳಿ ಚೌಡೇಶ್ವರಿ ದೇವಸ್ಥಾನದಲ್ಲಿ ಮತ್ತೆ ಕಳ್ಳತನ..! CCTV Video ನೋಡಿ

ದೊಡ್ಡಬಳ್ಳಾಪುರ: ಹಾಡೋನಹಳ್ಳಿ ಚೌಡೇಶ್ವರಿ ದೇವಸ್ಥಾನದಲ್ಲಿ ಮತ್ತೆ ಕಳ್ಳತನ..! CCTV Video ನೋಡಿ

ಘಾಟಿ ಸುಬ್ರಹ್ಮಣ್ಯ ರಸ್ತೆಯಲ್ಲಿನ ಹಾಡೋನಹಳ್ಳಿಯ ಚೌಡೇಶ್ವರಿ ದೇವಸ್ಥಾನದಲ್ಲಿ (Chowdeshwari Temple) ಮತ್ತೆ ಕಳ್ಳತನ ಪ್ರಕರಣ ನಡೆದಿದ್ದು, ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

[ccc_my_favorite_select_button post_id="117382"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]