ದೊಡ್ಡಬಳ್ಳಾಪುರ: ರಸ್ತೆ ವಿಸ್ತರಣೆ ಸಂಚಾರಕ್ಕಿಂತಲು ವಾಹನಗಳ ನಿಲುಗಡೆಗೆ ಹೆಚ್ಚು ಬಳಕೆ

ದೊಡ್ಡಬಳ್ಳಾಪುರ: ಹೆಸರಿಗೆ ಮಾತ್ರ ನಾಲ್ಕು ಪಥದ ರಸ್ತೆ. ಆದರೆ ವಾಹನಗಳ ಓಡಾಟಕ್ಕೆ ಲಭ್ಯ ಇರುವುದು ಮಾತ್ರ ಎರಡು ಪಥದ ರಸ್ತೆಗಿಂತಲು ಕಡಿಮೆ. ರಸ್ತೆ ವಿಸ್ತರಣೆಯಾಗಿರುವುದು  ವಾಹನಗಳ ಓಡಾಟಕ್ಕಿಂತಲು ವಾಹನಗಳ ನಿಲುಗಡೆಗೆ ಹೆಚ್ಚು ಬಳಕೆಯಾಗುತ್ತಿದೆ. 

ದೊಡ್ಡಬಳ್ಳಾಪುರದ ಮೂಲಕ ಹಾದು ಹೋಗಿರುವ ಹಿಂದೂಪುರ-ಬೆಂಗಳೂರು ರಾಜ್ಯ ಹೆದ್ದಾರಿಯನ್ನು ನಾಲ್ಕು ಪಥಗಳ ರಸ್ತೆಯಾಗಿ ಅಭಿವೃದ್ಧಿಪಡಿಸಲಾಗಿದೆ. ಹಾಗೆಯೇ ಇದು ಟೋಲ್ ಪಾವತಿ ರಸ್ತೆಯು ಸಹ ಆಗಿದೆ. ಆದರೆ ಟೋಲ್ನವರು ಶುಲ್ಕ ವಸೂಲಿ ಮಾಡಿಕೊಂಡು ತಮ್ಮ ಪಾಡಿಗೆ ತಾವಿದ್ದಾರೆ ವಿನಹ ರಸ್ತೆಯಲ್ಲಿ ವಾಹನಗಳ ಓಡಾಟಕ್ಕೆ ಏನಾದರು ಅಡೆತಡೆ ಇದೆಯ ಎನ್ನುವ ಬಗ್ಗೆ ಮಾತ್ರ ಒಂದಿಷ್ಟು ತಲೆಕೆಡಿಸಿಕೊಳ್ಳುತ್ತಲೇ ಇಲ್ಲ. 

ಹೆದ್ದಾರಿಯಲ್ಲಿನ ಬಾಶೆಟ್ಟಿಹಳ್ಳಿ ಯಿಂದ ಆರಂಭವಾಗಿ ದೊಡ್ಡಬಳ್ಳಾಪುರ ನಗರ ವ್ಯಾಪ್ತಿ ಮುಕ್ತಾಯವಾಗುವ ಪಾಲನಜೋಗಳ್ಳಿವರೆಗೂ ರಸ್ತೆಯ ಎರಡೂ ಬದಿಯಲ್ಲೂ ರಾತ್ರಿ ವೇಳೆ ಸರಕು ಸಾಗಾಣಿಕೆ ಲಾರಿಗಳು, ಹಗಲಿನ ವೇಳೆಯಲ್ಲಿ ಕಾರು, ಬೈಕ್ಗಳನ್ನು ನಿಲುಗಡೆ ಮಾಡಲಾಗುತ್ತದೆ. ಅದರಲ್ಲೂ ನಗರಸಭೆ ವ್ಯಾಪ್ತಿಯ ರೈಲ್ವೆ ನಿಲ್ದಾಣ ವೃತ್ತ, ಡಿ.ಕ್ರಾಸ್, ಪ್ರವಾಸಿ ಮಂದಿರ ವೃತ್ತ, ಎಪಿಎಂಸಿ ಮಾರುಕಟ್ಟೆ ಸಮೀಪದ ರಸ್ತೆಯ ಎರಡೂ ಬದಿಯಲ್ಲೂ ವಾಹನಗಳು ಸಾಲುಗಟ್ಟಿ ನಿಂತಿರುತ್ತವೆ. ಹೀಗಾಗಿ ಈ ಪ್ರದೇಶಗಳಲ್ಲಿ ನಾಲ್ಕು ಪಥದ ರಸ್ತೆ ಇರಲಿ ಎರಡೂ ಪಥಕ್ಕೂ ಕಡಿಮೆಯಾಗಿದೆ ಎನ್ನುವುದು ಸಾರ್ವಜನಿಕರ ದೂರು. 

ವಾನಗಳವರು ರಸ್ತೆ ಬಳಕೆಗೆ ಟೋಲ್ ನೀಡಿಯು ರಸ್ತೆಯಲ್ಲಿ ಸುಗಮವಾಗಿ ಸಂಚರಿಸಲು ಸಾಧ್ಯವಿಲ್ಲದಂತಾಗಿದೆ. ಲಾಕ್ಡೌನ್ ಜಾರಿಗೆ ಬಂದಾಗಿನಿಂದ ಇಲ್ಲಿಯವರೆಗೂ ಟ್ರಾಫಿಕ್ ನಿಯಂತ್ರಣ ಇರಲಿ, ಕನಿಷ್ಟ ರಸ್ತೆ ಬದಿಯಲ್ಲಿ ಬೇಕಾಬಿಟ್ಟಿಯಾಗಿ ಪಾರ್ಕಿಂಗ್ ಮಾಡಿರುವ ವಾಹನಗಳ ತೆರವಿನ ಕಡೆಗೂ ಸಹ ಪೊಲೀಸರು ನಿಗಾವಹಿಸುವುದನ್ನೇ ಬಿಟ್ಟಿದ್ದಾರೆ ಎಂದು ಹಿರಿಯ ಕನ್ನಡಪರ ಹೋರಾಟಗಾರ ಜಿ.ಸತ್ಯನಾರಾಯಣ್ ದೂರಿದ್ದಾರೆ.  

ನನಗರದ ಬಸವ ಭವನದಿಂದ ತಾಲ್ಲೂಕು ಕಚೇರಿ ಮೂಲಕ ನೆಲಮಂಗಲ ರಸ್ತೆಯ ಕನಕದಾಸ ವೃತ್ತದವರೆಗೂ ರಸ್ತೆಯನ್ನು ವಿಸ್ತರಣೆ ಮಾಡಿ ರಸ್ತೆ ಮಧ್ಯದಲ್ಲಿ ವಿಭಜಕವನ್ನು ಹಾಕಲಾಗಿದೆ. ಆದರೆ ಗ್ರಾಮಾಂತರ ಪೊಲೀಸ್ ಠಾಣೆ ಮುಂಭಾಗವು ಸೇರಿದಂತೆ ತಾಲ್ಲೂಕು ಕಚೇರಿ ವೃತ್ತ, ಇಸ್ಲಾಂಪುರದಲ್ಲಿನ ರಸ್ತೆಯ ಎರಡೂ ಬದಿಯಲ್ಲೂ ಬೈಕ್, ಕಾರು, ಸರಕು ಸಾಗಾಣಿಕೆ ವಾಹನಹಗಳನ್ನು ಇಡೀ ದಿನ ನಿಲ್ಲಿಸಿಯೇ ಇರುತ್ತಾರೆ. ಹೀಗಾಗಿ ರಸ್ತೆ ವಿಸ್ತರಣೆ ಮಾಡಿ ಡಾಂಬರು ಹಾಕಿರುವುದು ವಾಹನಗಳ ನಿಲುಗಡೆಗೆ ಸೂಕ್ತ ಸ್ಥಳ ಕಲ್ಪಿಸಿದಂತಾಗಿದೆಯೆ ವಿನಹ ಸಂಚಾರಕ್ಕೆ ಮಾತ್ರ ಬಳಕೆಯಾಗುತ್ತಿಲ್ಲ ಎಂದು ಜೆಡಿಎಸ್ ಹಿರಿಯ ಮುಖಂಡ ಲಕ್ಷ್ಮೀನಾರಾಯಣ್ ತಿಳಿಸಿದ್ದಾರೆ.

ರಾಜಕೀಯ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

“ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು

[ccc_my_favorite_select_button post_id="119228"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ..  ರೈತರಿಗೆ ಅಪಾರ ನಷ್ಟ

ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ.. ರೈತರಿಗೆ ಅಪಾರ ನಷ್ಟ

ಸಹೋದರರು ಒಂದೇ ಕಡೆ ಹಾಕಿದ್ದ ಬಣವೆಗೆ (Haystack) ಆಕಸ್ಮಿಕವಾಗಿ ಬೆಂಕಿ (Fire) ತಗುಲಿ, ಹುಲ್ಲು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ತಾಲೂಕಿನ ***** ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119190"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!