ಎಸ್ ಡಿಪಿಐ, ಪಿಎಫ್ ಐ ನಿಷೇಧಿಸುವಂತೆ ಹಿಂದು ಜಾಗರಣಾ ವೇದಿಕೆ ಪ್ರತಿಭಟನೆ

ದೊಡ್ಡಬಳ್ಳಾಪುರ: ಆಗಸ್ಟ್ 11 ರಂದು ಬೆಂಗಳೂರು ನಗರದ ಕಾಡುಗೊಂಡನಹಳ್ಳಿ,ಡಿಜೆ ಹಳ್ಳಿಯಲ್ಲಿ ಸಂಭವಿಸಿದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಭೆಗೆ ಕಾರಣವೆನ್ನಲಾಗುತ್ತಿರುವ ಎಸ್ ಡಿಪಿಐ, ಪಿಎಫ್ ಐ ಸಂಘಟನೆಗಳನ್ನು ನಿಷೇಧಿಸಬೇಕೆಂದು ಹಿಂದೂ ಜಾಗರಣಾ ವೇದಿಕೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದಿಂದ ನಗರದ ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಪ್ರಾಂತ ಕಾರ್ಯದರ್ಶಿ ದೊ.ಕೇಶವ ಮೂರ್ತಿ, ದೇವರಾಜೀವನಹಳ್ಳಿ ಹಾಗೂ ಕಾಡುಗೊಂಡನಹಳ್ಳಿಯಲ್ಲಿ ಪೊಲೀಸ್ ಠಾಣೆ,ಅಶಾಂತಿ ಸೃಷ್ಟಿಸಿ ಹಿಂದೂಗಳ ಮೇಲೆ ನಡೆದ ಕೋಮುದಾಳಿ ಮಾಡಿದ ಮತಾಂಧರ ವ್ಯವಸ್ಥಿತ ಷಡ್ಯಂತ್ರದ ಕೈವಾಡವಿದೆ ಎಂದು ಈಗಾಗಲೇ ಮಾದ್ಯಮಗಳಲ್ಲಿ ವರದಿಯಾಗಿ ಜನತೆ ತಿಳಿದು ಬಂದಿರುತ್ತದೆ. ಈ ಕೋಮು ದಾಳಿ ಹಿಂದೆ ಎಸ್ ಡಿಪಿಐ ಹಾಗೂ ಪಿಎಫ್ ಐ ನಂತಹ ಸಮಾಜಘಾತುಕ ಸಂಘಟನೆಗಳು ನೇರವಾಗಿ ಪಾಲ್ಗೊಂಡು ಹಿಂದೂಗಳ ಆಸ್ತಿ ಪಾಸ್ತಿ ನಾಶಪಡಿಸಿ ಸಮಾಜದಲ್ಲಿ ನೆಲೆಸಿರುವ ಶಾಂತಿಗೆ ಭಂಗ ತಂದಿರುತ್ತಾರೆ. ಈ ಹಿಂದೆಯೂ ಈ ಘಟನೆಗಳು ಹಲವು ಬಾರಿ ಸಮಾಜದಲ್ಲಿ ಅಶಾಂತಿಯನ್ನುಂಟು ಮಾಡುವ ಕಾರ್ಯದಲ್ಲಿ ಭಾಗವಹಿಸಿ ಅಲ್ಲಿ ನೆಲೆಸಿರುವ ಹಿಂದೂ ಕುಟುಂಬಗಳ ಅಭದ್ರತೆ ಹಾಗೂ ಭಯದಿಂದ ಜೀವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಈ ಸಂಘಟನೆಗಳ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ದೇವತೆಗಳ ವಿರುದ್ಧ ಅಸಭ್ಯ ಹಾಗೂ ಆಕ್ಷೇಪಾರ್ಹ ಪೋಸ್ಟ್ ಗಳನ್ನು ಸದಾ ಹರುಬಿಡುತ್ತಿದ್ದು ಇಡೀ ಹಿಂದೂ ಸಮಾಜವೇ ಅವರ ಟಾರ್ಗೆಟ್ ಆಗಿರುತ್ತದೆ ಎಂದು ಆರೋಪಿಸಿದರು.

ಜಿಲ್ಲಾ ಅಧ್ಯಕ್ಷ ನಂದಾರಾಮ್ ಸಿಂಗ್ ಮಾತನಾಡಿ,ದೇಶದ ಅಖಂಡತೆ ಹಾಗೂ ಸುಭದ್ರತೆಗೆ ಮಾರಕವಾಗಿರುವ ಎಸ್ ಡಿಪಿಐ ಹಾಗೂ ಪಿಎಫ್ ಐ ಎಂಬ ಸಮಾಜ ಘಾತುಕ ಸಂಘಟನೆಗಳನ್ನು ಪೊಲೀಸ್ ಇಲಾಖೆ ಹಾಗೂ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಈ ಕೂಡಲೇ  ನಿಷೇಧಿಸಿ ಅವರ ಭಯೋತ್ಪಾದಕ ಚಟುವಟಿಕೆಗಳನ್ನು ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿದರು.

ಈ ವೇಳೆ ಪ್ರಧಾನ ಕಾರ್ಯದರ್ಶಿ ದೊಡ್ಡತುಮಕೂರು ಆನಂದ್, ಕಾರ್ಯದರ್ಶಿ ಡಾಬಸ್ ಪೇಟೆ ಮಂಜುನಾಥ್,ಜಿಲ್ಲಾ ಪ್ರಾಚಾರ ಪ್ರಮುಖ್ ನೆಲಮಂಗಲ ಹೇಮಂತಕುಮಾರ್,ಹೊಸಕೋಟೆ ತಾಲೂಕು ಅಧ್ಯಕ್ಷ ರಮೇಶ್,ದೇವನಹಳ್ಳಿ ತಾಲೂಕು ಅಧ್ಯಕ್ಷ ಅರವಿಂದ್,ಉಪಾಧ್ಯಕ್ಷ ಪ್ರಶಾಂತ್, ನಗರ ಕಾರ್ಯದರ್ಶಿ ಖಾಸ್ ಬಾಗ್ ವಾಸು, ಬಿಜೆಪಿಯ ಶಿವಶಂಕರ್,ಮುದ್ದಪ್ಪ,ಪುಷ್ಪಶಿವಶಂಕರ್, ಹಿಂಜಾವೆ ಮಹಿಳಾ ಘಟಕದ ಅಧ್ಯಕ್ಷೆ ಯಶೋಧ ರಘುನಾಥ್,ಸದಸ್ಯರಾದ ಘಾಟಿ ಚಿನ್ನಿ, ಪ್ರವೀಣ್ ಮತ್ತಿತರಿದ್ದರು.

ರಾಜಕೀಯ

ಒಳಮೀಸಲಾತಿ: ಸಚಿವ ಸಂಪುಟ ಸಭೆಯ ನಿರ್ಧಾರ.. ನೇಮಕಾತಿ ಪ್ರಕ್ರಿಯೆ ಶೀಘ್ರವೇ ಪ್ರಾರಂಭ

ಒಳಮೀಸಲಾತಿ: ಸಚಿವ ಸಂಪುಟ ಸಭೆಯ ನಿರ್ಧಾರ.. ನೇಮಕಾತಿ ಪ್ರಕ್ರಿಯೆ ಶೀಘ್ರವೇ ಪ್ರಾರಂಭ

ಪರಿಶಿಷ್ಟ ಜಾತಿಯ ಎಲ್ಲ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಇಂದಿನ ಸಚಿವ ಸಂಪುಟ ಸಭೆ ನಿರ್ಧಾರವನ್ನು ತೆಗೆದುಕೊಂಡಿದ್ದು, ಎಡ, ಬಲ ಹಾಗೂ ಇತರೇ ಸಮುದಾಯಗಳಿಗೆ 5.25:5.25:4.5 ಮೀಸಲಾತಿ (Internal reservation) ಕಲ್ಪಿಸಲು ಸರ್ವಾನುಮತದಿಂದ ಒಪ್ಪಿಗೆ

[ccc_my_favorite_select_button post_id="121345"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]