ದೊಡ್ಡಬಳ್ಳಾಪುರ: ಮಣ್ಣನ್ನು ಫಲವತ್ತುಗೊಳಿಸುವ ಸೆಣಬು ಬೆಳೆ

ಹರಿತಲೇಖನಿ ದೊಡ್ಡಬಳ್ಳಾಪುರ: ಮಣ್ಣನ್ನು ಫಲವತ್ತಾಗಿಸುವಲ್ಲಿ ನಮ್ಮ ಹಿರಿಯರು ಅನುಸರಿಸುತ್ತಿದ್ದ  ಸಾಂಪ್ರದಾಯಿಕ ವಿಧಾನ ಈಗ ಮತ್ತೆ ಮುನ್ನೆಲೆಗೆ ಬರುತ್ತಿದೆ. ಅಂದರೆ ಯಾವುದೇ ಬೆಳೆ ಬೆಳೆಯುವ ಮುನ್ನ ಹಸಿರೆಲೆ ಗೊಬ್ಬರದ ಗಿಡಗಳನ್ನು ಬೆಳೆಸಿ ಮಣ್ಣಿಗೆ ಸೇರಿಸುವ ಕಡೆಗೆ ರೈತರು ಹೆಚ್ಚು ಒಲವು ತೋರುತ್ತಿದ್ದಾರೆ. 

ಮಣ್ಣಿನಲ್ಲಿ ಸಾವಯವ ಪದಾರ್ಥಗಳು ಹೆಚ್ಚಾಗಿದ್ದರೆ ಮಾತ್ರ ಯಾವುದೆ ಬೆಳೆ ಸಮೃದ್ಧವಾಗಿ ಬೆಳೆಯಲು, ಉತ್ತಮ ಇಳುವರಿ ಬರಲು ಸಾಧ್ಯ. ಇಂತಹ ಸಾವಯವ ಪದಾರ್ಥವನ್ನು ಮಣ್ಣಿಗೆ ಸೇರಿಸುವಲ್ಲಿ  ಗೊಬ್ಬರದ ಗಿಡ ಅಥವಾ ಸೆಣಬು ಮುಖ್ಯವಾಗಿದೆ.

ಸೆಣಬಿನ ಬೀಜವನ್ನು ಸಾಮಾನ್ಯ ಉಳುಮೆ ಮಾಡಿದ ನಂತರ ಒಂದು ಎಕರೆಗೆ 25 ರಿಂದ 30 ಕೆಜಿಯಷ್ಟು ಬೀಜವನ್ನು ಚೆಲ್ಲಿ ಮಣ್ಣಿನಲ್ಲಿ ಸೇರುವಂತೆ ಉಳುಮೆ ಮಾಡಬೇಕು. ಬಿತ್ತನೆ ಮಾಡಿದ 45 ರಿಂದ 50 ದಿನಗಳಲ್ಲಿ ಸೆಣಬಿನ ಗಿಡಗಳು ಸಮೃದ್ಧವಾಗಿ ಬೆಳೆದು ಹೂವು ಬಿಡಲು ಆರಂಭಿಸುತ್ತವೆ. ಹೂವು ಬರುವ ಸಂದರ್ಭದಲ್ಲಿ ಭೂಮಿಯಲ್ಲಿ ಸೇವಾಂಶ ಕಡಿಮೆ ಇರುವುದನ್ನು ಗಮನಿಸಿ ಉಳುವೆ ಮಾಡುವ ಮೂಲಕ ಸೆಣಬಿನ ಸೊಪ್ಪು ಮಣ್ಣಿಗೆ ಸೇರುವಂತೆ ಮಾಡಬೇಕು. ಮಣ್ಣಿನಲ್ಲಿ ಹೆಚ್ಚು ತೇವಾಂಶ ಇದ್ದು ಉಳುಮೆ ಮಾಡಲು ಅವಕಾಶ ಇಲ್ಲದಿದ್ದರೆ ಕುಡುಗೊಲಿನಿಂದ ಗಿಡಗಳನ್ನು ಕತ್ತರಿಸಿ ಮೆಣ್ಣಿಗೆ ಹೊದಿಕೆಯಾಗುವಂತೆ ಮಾಡಬೇಕು. 45 ದಿನಗಳ ನಂತರ ಹೂವು ಹೆಚ್ಚಾಗಿ ಬಂದು ಗಿಡ ಬಲಿತರೆ ಹಸಿರು ಎಲೆಗಳ ಪ್ರಮಾಣ ಕಡಿಮೆಯಾಗಲಿದೆ.

ಮಿಶ್ರ ಬೀಜಗಳು ಮುಖ್ಯ: ಹಸಿರು ಎಲೆ ಗೊಬ್ಬರಕ್ಕಾಗಿ ಯಾವುದೇ ರೀತಿಯ ಬೀಜವನ್ನು ಚೆಲ್ಲುವಾಗ ಒಂದೇ ರೀತಿಯ ಬೀಜಗಳನ್ನು ಚೆಲ್ಲುವ ಬದಲಿಗೆ ಸೆಣಬಿನೊಂದಿಗೆ ಊರುಳಿ, ಹುಚ್ಚಳ್ಳು, ಅಲಸಂದೆ, ಅವರೆ, ಸಾಸುವೆ,ಉದ್ದು,ಹೆಸರು ಕಾಳು, ಕಡಳೆ ಕಾಳು, ಕೊತ್ತಂಬರಿ ಬೀಜ ಹೀಗೆ ನಾನಾ ರೀತಿಯ ಬೀಜಗಳನ್ನು ಮಿಶ್ರಣ ಮಾಡಿ ಚೆಲ್ಲುವುದು ಮಣ್ಣಿನ ಫಲವತ್ತತೆ ದೃಷ್ಠಿಯಿಂದ ಮುಖ್ಯ ಎನ್ನುತ್ತಾರೆ ಪ್ರಗತಿಪರ ರೈತ ನಟರಾಜ್.

ಸೆಣಬಿನಷ್ಟು ವೇಗವಾಗಿ ಊರುಳಿ, ಅವರೆ, ಅಲಸಂದೆ, ಸಾಸಿವೆ ಮತ್ತಿತರೆ ಗಿಡಗಳು ಬೆಳೆಯುವುದಿಲ್ಲ, 45 ರಿಂದ 50 ದಿನಗಳಲ್ಲಿ ಕಟಾವಿಗು ಬರುವುದಿಲ್ಲ. ಆದರೆ ಒಂದೊಂದು ರೀತಿಯ ಗಿಡಗಳ ಗುಣ ಲಕ್ಷಣ, ಮಣ್ಣಿನ ಫಲತ್ತತೆಗೆ ತಮ್ಮದೇ ಭಿನ್ನ ರೀತಿಯ ಸಾವಯವ ಪದಾರ್ಥಗಳನ್ನು ಕೊಡುಗೆಯಾಗಿ ನೀಡುತ್ತವೆ. ಮಣ್ಣು ಫಲವತ್ತುಗೊಳ್ಳುವ ಹಾಗೂ ಮಣ್ಣಿನಲ್ಲಿ ಸೂಕ್ಷ್ಮಾಣು ಜೀವಿಗಳ ಬೆಳವಣಿಗೆಗೆ ಸಹಕಾರಿಯಾಗಲಿವೆ. 

ಯಾವುದೇ ಬೆಳೆ ಉತ್ತಮ ಫಸಲು ನೀಡಲು ಮಣ್ಣಿನಲ್ಲಿ 16 ಬಗೆಯ ಪೋಷಕಾಂಶಗಳು ಕಡ್ಡಾಯವಾಗಿ ಇರಲೇ ಬೇಕು ಎನ್ನುವುದು ಎಲ್ಲರಿಗೂ ತಿಳಿದಿದೆ. ಆದರೆ ಪೋಷಕಾಂಶಗಳ ವೃದ್ಧಿಗೆ ಏಕ ಬೆಳೆಯ ಹಸಿರು ಎಲೆ ಗೊಬ್ಬರ ಒಂದೇ ಸಹಕಾರಿಯಾಗುವುದಿಲ್ಲ. ಹಸಿರು ಎಲೆ ಗೊಬ್ಬರಕ್ಕೆ ಸೆಣಬಿನಷ್ಟೇ ಊರುಳಿಯು ಸಹ ಮುಖ್ಯ ಬೆಳೆಯಾಗಿದೆ.

ಬಿತ್ತನೆ ಸಮಯ: ಸೆಣಬನ್ನು ಮುಂಗಾರು ಆರಂಭಕ್ಕು ಮುನ್ನ ಕನಿಷ್ಟ ಪ್ರಮಾಣದಲ್ಲಿ ಉಳುಮೆ ಮಾಡಿ ಬೀಜ ಚೆಲ್ಲಬಹುದಾಗಿದೆ. ಇದಲ್ಲದೆ ಹೆಚ್ಚು ಮಳೆ ಬರುವ ಸಮಯವನ್ನು ಹೊರತು ಪಡಿಸಿ ಯಾವುದೇ ಋತುಮಾನದಲ್ಲಿ ಬೇಕಿದ್ದರು ಸೆಣಬನ್ನು ಬೆಳಯಬಹುದಾಗಿದೆ. ಸೆಣಬು ಬೆಳೆಯಲು ಯಾವುದೇ ರೀತಿಯ ರಸಗೊಬ್ಬರ ಅಥವಾ ಕೊಟ್ಟಿಗೆ ಗೊಬ್ಬರದ ಅಗತ್ಯ ಇರುವುದಿಲ್ಲ. ಸೆಣಬಿನ ಬೀಜ ಉತ್ಪಾದಿಸಿಕೊಳ್ಳಬೇಕಿದ್ದರೆ ನಂವೆಂಬರ್ ನಂತರ ಬೀಜ ಚೆಲ್ಲಿದರೆ ಮಳೆ ಕಡಿಮೆಯಾಗುವ ವೇಳೆಗೆ ಹೂವು ಬಿಟ್ಟು ಬೀಜ ಬಲಿಯಲು ಅನುಕೂಲವಾಗಲಿದೆ. 

ತೆಂಗು, ಅಡಿಕೆ, ಬಾಳೆ, ಸಪೋಟೋ, ಮಾವು ಸೇರಿದಂತೆ ಯಾವುದೇ ಬೆಳೆಯ ನಡುವೆ ಇದನ್ನು ಅಂತರ ಬೆಳೆಯಾಗಿ ಬೆಳೆದು ಮಣ್ಣಿಗೆ ಸೇರುವಂತೆ ಮಾಡುವುದರಿಂದ ಮಣ್ಣಿನ ಫಲವತ್ತತೆ ಹೆಚ್ಚಾಗುತ್ತದೆ. ಬೆಳೆ ಬೆಳೆಯುವ ಜಮೀನಿಗೆ ಹೊರಗಿನಿಂದ ತಂದು ಒಳಸುರಿ ಸುರಿಯುವುದು ಕಡಿಮೆಯತಾಗಲಿದೆ ಎನ್ನುವುದು ಬಹುತೇಕ ಹಿರಿಯ ರೈತರ ಅನುಭವದ ಮಾತು.

ರಾಜಕೀಯ

ಬೆಂಗಳೂರು ಗ್ರಾಮಾಂತರ ಜಿ.ಪಂ ಸೇರಿ 8 ಕ್ಷೇತ್ರಗಳ ಪುನರ್ ವಿಂಗಡಣೆ

ಬೆಂಗಳೂರು ಗ್ರಾಮಾಂತರ ಜಿ.ಪಂ ಸೇರಿ 8 ಕ್ಷೇತ್ರಗಳ ಪುನರ್ ವಿಂಗಡಣೆ

ಬೆಂಗಳೂರು ಗ್ರಾಮಾಂತರ ಸೇರಿದಂತೆ ಎಂಟು ಜಿಲ್ಲೆಗಳ ಜಿಲ್ಲಾ ಪಂಚಾಯಿತಿ (Z.P) ಕ್ಷೇತ್ರಗಳ (Constituencies) ಗಡಿ ಗುರುತಿಸಿ ಮತ್ತು ಚುನಾಯಿತ ಸದಸ್ಯರ ಸಂಖ್ಯೆ ನಿಗದಿಪಡಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

[ccc_my_favorite_select_button post_id="121409"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]