ಫಸಲ್ ಬಿಮಾ ಯೋಜನೆ: ಯುನೈಟೆಡ್ ಇಂಡಿಯ ಇನ್ಸೂರೆನ್ಸ್ ಕಂಪೆನಿ ವಿರುದ್ಧ ನೊಟೀಸ್ ನೀಡುವಂತೆ ಬಿ.ಸಿ.ಪಾಟೀಲ್ ಸೂಚನೆ

ಬೆಂಗಳೂರು: ರೈತರಿಗೆ ಸರಿಯಾಗಿ ವಿಮೆ ಪಾವತಿಸದ ಹಾಗೂ ಕೃಷಿ ಇಲಾಖೆಯ ಸಭೆಗಳಿಗೆ ಸರಿಯಾಗಿ ಹಾಜರಾಗಿ ಮಾಹಿತಿ ನೀಡದ ಯುನೈಟೆಡ್ ಇಂಡಿಯ ಇನ್ಸೂರೆನ್ಸ್ ಕಂಪೆನಿ ವಿರುದ್ಧ ನೊಟೀಸ್ ನೀಡುವಂತೆ ಕೃಷಿ ಇಲಾಖಾಧಿಕಾರಿಗಳಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಖಡಕ್ ಸೂಚನೆ ನೀಡಿದ್ದಾರೆ.

ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಕೃಷಿ ಸಚಿವರು ಶನಿವಾರ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಸಂಬಂಧ ಕೃಷಿ ಇಲಾಖೆ ಅಧಿಕಾರಿಗಳು ಎನ್.ಐ.ಸಿ ಹಾಗೂ ವಿಮಾ ಕಂಪೆನಿಗಳ ಮುಖ್ಯಸ್ಥರ ಜೊತೆ ಪ್ರಗತಿಪರಿಶೀಲನಾ ಸಭೆ ನಡೆಯಿತು.

ಸಭೆಯಲ್ಲಿ ಬಜಾಜ್ ಅಲೈಯನ್ಸ್, ಭಾರತಿ ಎಎಕ್ಸೆ, ಫ್ಯೂಚರ್ ಜೆನರಲ್, ಯುನಿವರ್ಸಲ್ ಸೋಂಪೋ ಹೆಚ್.ಡಿ.ಎಫ್.ಸಿ. ಸೇರಿದಂತೆ ಇನ್ನಿತರೆ ವಿಮಾ ಕಂಪೆನಿಗಳ ಮುಖ್ಯಸ್ಥರು ಭಾಗವಹಿಸಿ ಬೆಳೆ ವಿಮೆ ಸಂಬಂಧ ಮಾಹಿತಿ ಹಾಗೂ ರೈತರ ಬ್ಯಾಂಕ್ ಖಾತೆಯಲ್ಲಾಗಿರುವ ತಾಂತ್ರಿಕ ತೊಂದರೆಗಳ ಬಗ್ಗೆ ಸಚಿವರ ಗಮನಕ್ಕೆ ತಂದರು. ಆದರೆ ಯುನೈಟೆಡ್ ಇಂಡಿಯ ಇನ್ಸೂರೆನ್ಸ್ ಕಂಪೆನಿಯಿಂದ ಯಾರೊಬ್ಬ ಪ್ರತಿನಿಧಿಯಾಗಲೀ ಮುಖಸ್ಥರಾಗಲೀ ಸಭೆಯಲ್ಲಿ ಭಾಗವಹಿಸರಲಿಲ್ಲ.ಅಲ್ಲದೇ ಸರಿಯಾದ ಮಾಹಿತಿಯನ್ನು ಕೂಡ ಇಲಾಖೆಗೆ ನೀಡದಿರುವುದನ್ನು ಗಮನಿಸಿದ ಕೃಷಿ ಸಚಿವರು, ಈ ಕಂಪೆನಿ ವಿರುದ್ಧ ನೊಟೀಸ್ ನೀಡುವಂತೆ ಸಭೆಯಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.

ಯಾವೊದೋ ಒಂದೆರಡು ಕಂಪೆನಿಗಳು ಮಾಡುವ ತಪ್ಪಿಗೆ ಇಲಾಖೆಗೆ ಕೆಟ್ಟಹೆಸರು ಬರುವಂತೆ ಆಗುತ್ತದೆ. ಅಲ್ಲದೇ ಇನ್ಸೂರೆನ್ಸ್ ಕಂಪೆನಿಗಳು ಪ್ರೀಮಿಯಮ್ ಕಟ್ಟಿಸಿಕೊಳ್ಳುವಾಗ ಷರತ್ತುಗಳನ್ನು ಸಡಿಲಿಸಿ ಕ್ಲೇಮ್ ಮಾಡುವಾಗ ಷರತ್ತುಗಳನ್ನು ಬಿಗಿಗೊಳಿಸುವುದು ಸರಿಯಲ್ಲ. ಇಲ್ಲಿಯವರೆಗೆ ರೈತರಿಗೆ ವಿಮಾ ಹಣವನ್ನು ನೀಡದೇ ಬಾಕಿ ಉಳಿಸಿಕೊಂಡಿರುವ ವಿಮಾ ಕಂಪೆನಿಗಳು ಆದಷ್ಟುಬೇಗ ಹಣವನ್ನು ರೈತರ ಖಾತೆಗೆ ಪಾವತಿಯಾಗುವಂತೆ ನೋಡಿಕೊಳ್ಳಬೇಕು. ರೈತರ ಖಾತೆಗಳಲ್ಲಿ ಏನಾದರೂ ತಾಂತ್ರಿಕ ತೊಂದರೆಗಳಾಗಿದ್ದರೆ ಅವುಗಳನ್ನು ರೈತರ ಗಮನಕ್ಕೂ ಹಾಗೂ ಇಲಾಖೆಯ ಗಮನಕ್ಕೂ ತಂದು ಸರಿಪಡಿಸಬೇಕು. ವಿಮಾ ಕಂಪೆನಿಗಳಿಗೆ ಸರಿಯಾಗಿ ಕಂತು ಪಾವತಿಸಿದ ಯಾವುದೇ ರೈತರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಎಂದು ಬಿ.ಸಿ.ಪಾಟೀಲ್ ಹೇಳಿದರು.

50 ಸಾವಿರಕ್ಕೂ ಮೇಲ್ಪಟ್ಟ ಹಣ ರೈತರ ಖಾತೆಗೆ ಜಮೆ ಮಾಡಲು ಆರ್.ಬಿ.ಐ ನಿಯಮಾವಳಿ ಪ್ರಕಾರ ಕೆಲವು ಬ್ಯಾಂಕ್ ಗಳ ಖಾತೆಗಳಿಗೆ ಸಾಧ್ಯವಾಗುತ್ತಿಲ್ಲ. ಈ ಸಂಬಂಧ ಕೇಂದ್ರದ ಗಮನಕ್ಕೆ ತರುವ ಬಗ್ಗೆ ಸಭೆಯಲ್ಲಿ ಅಧಿಕಾರಿಗಳು ಹೇಳಿದರು.

ಸಭೆಯಲ್ಲಿ ಕೃಷಿ ಇಲಾಖೆ ಆಯುಕ್ತ ಬ್ರಿಜೆಶ್ ಕುಮಾರ್ ದೀಕ್ಷಿತ್, ಅಪರ ಕೃಷಿ ನಿರ್ದೇಶಕ ಅಂತೋನಿ ಇಮ್ಯಾನ್ಯುಯಲ್ ಸೇರಿದಂತೆ ಮತ್ತಿತ್ತರ ಅಧಿಕಾರಿಗಳು ಭಾಗವಹಿಸಿದ್ದರು.

ಕೃಷಿ ಸಚಿವ ಬಿ.ಸಿ.ಪಾಟೀಲ್ ಮನವಿ: ಕೆಲವು ಬ್ಯಾಂಕುಗಳ ವಿಲೀಕರಣವಾಗಿರುವುದರಿಂದ ಬ್ಯಾಂಕ್ ಗಳ ಐಎಫ್ ಸಿ ಕೋಡ್ ಬದಲಾವಣೆಯಾಗಿರುತ್ತದೆ.ಆದ್ದರಿಂದ ರೈತರು ಆದಷ್ಟು ಬೇಗ ತಮ್ಮ ಬ್ಯಾಂಕ್ ಖಾತೆಗೆ ಸರಿಯಾದ ಆಧಾರ್ ಸಂಖ್ಯೆ ಐಎಫ್ ಸಿ ಸಂಖ್ಯೆ ,ಖಾತೆ ಸಂಖ್ಯೆ ಸರಿಯಾಗಿದೆಯೇ ಎಂಬುದನ್ನು ಪರೀಕ್ಷಿಸಿಕೊಂಡು ಕೃಷಿ ಇಲಾಖೆಯ ಗಮನಕ್ಕೆ ತರುವಂತೆ ಕೃಷಿ ಸಚಿವರು ರೈತ ಬಾಂಧವರಲ್ಲಿ ಮನವಿ ಮಾಡಿದ್ದಾರೆ.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]