ದೊಡ್ಡಬಳ್ಳಾಪುರ: ತಾಲ್ಲೂಕಿನಲ್ಲಿ ವೀರಶೈವ ಸಮುದಾಯದ ಸಂಘಟನೆಯನ್ನು ಬಲಪಡಿಸುವ ದೃಷ್ಠಿಯಿಂದ ಅ.10 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸೋಮೇಶ್ವರ ದೇವಾಲಯದ ಸಭಾಂಗಣದಲ್ಲಿ ಸಭೆ ನಡೆಯಲಿದೆ ಎಂದು ತಾಲ್ಲೂಕು ವೀರಶೈವ ಲಿಂಗಾಯಿತ ಸಂಘದ ಅಧ್ಯಕ್ಷ ಎಸ್.ಜಿ.ಸೋಮರುದ್ರಶರ್ಮ, ಕಾರ್ಯದರ್ಶಿ ಪುಟ್ಟಬಸವರಾಜು ಹೇಳಿದರು.
ಈ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ತಾಲ್ಲೂಕು ಸೇರಿದಂತೆ ಹೋಬಳಿ ಹಂತದವರೆಗೆ ವಿವಿಧ ಘಟಕಗಳಿಗೆ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸಮಾಜದ ಯುವಕರು, ಮಹಿಳೆಯರು ಮಹಾಸಭಾದ ಕಾರ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಅನುಕೂಲವಾಗುವಂತೆ ಎಲ್ಲರಿಗು ಜವಾಬ್ದಾರಿಗಳನ್ನು ನೀಡಲಾಗುತ್ತಿದೆ. ಈಗಾಗಲೇ ತಾಲ್ಲೂಕಿನಲ್ಲಿ ವೀರಶೈವ ಲಿಂಗಾಯಿತ ಪತ್ತಿನ ಸಹಕಾರ ಸಂಘವನ್ನು ಸ್ಥಾಪನೆ ಮಾಡಲಾಗಿದ್ದು ಆರ್ಥಿಕ ಚಟುವಟಿಕೆಗಳು ನಡೆಯುತ್ತಿವೆ. ಕೃಷಿ, ಉದ್ಯಮ ಸೇರಿದಂತೆ ಇನ್ನಿತರೆ ಚಟುವಟಿಕೆಗಳಿಗೆ ಸಾಲ ಸೌಲಭ್ಯಗಳನ್ನು ಪತ್ತಿನ ಸಹಕಾರ ಸಂಘದ ವತಿಯಿಂದ ನೀಡಲಾಗುವುದು ಎಂದರು.
ಪೂರ್ವಭಾವಿ ಸಭೆಯಲ್ಲಿ ವೀರಶೈವ ಲಿಂಗಾಯಿತ ಸಮಾಜದ ಮುಖಂಡರಾದ ಸಿದ್ದರಾಮಣ್ಣ, ಕೆ.ಮಹಾಲಿಂಗಯ್ಯ, ವಿ.ಸಿ.ಜ್ಯೋತಿಕುಮಾರ್, ಮಂಜುನಾಥ್, ಮಲ್ಲಾತಹಳ್ಳಿ ರಮೇಶ್ ಇದ್ದರು.

