ದೊಡ್ಡಬಳ್ಳಾಪುರ: ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ 2020-21ನೇ ಸಾಲಿನಲ್ಲಿ ಅಲೆಮಾರಿ/ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ ಬೈರಾಗಿ (ಬಾವ), ಬಾ ಸಂತೋಷಿ-ಜೋಷಿ, ಬಾಜಿಗರ್, ಭರಡಿ, ಬುಡಬುಡಕಿ-ಜೋಷಿ-ಗೋಂಧಳಿ, ಚಾರ, ಚಿತ್ರಕಥಿ-ಜೋಷಿ, ಧೋಲಿ, ಢವೇರಿ, ದೊಂಬರಿ, ಘಿಸಾಡಿ, ಗರುಡಿ, ಗೋಪಾಲ್, ಗೊಂದಳಿ, ಹೆಳವ, ಜೋಗಿ, ಕೇಲ್ಕರಿ, ಕೋಲ್ಹಟಿ, ನಂದಿವಾಲ-ಜೋಷಿ-ಗೊಂದಳಿ, ಪುಲ್ಮಾಲ್ಲಿ, ನಾಥಪಂಥಿ-ಡೌರಿ-ಗೋಸಾವಿ, ನಿರ್ತಿಕಾರಿ, ಪಾಂಗ್ಯುಯಲ್, ಜೋಷಿ (ಸಾದ ಜೋಷಿ), ಸಾನ್ಸಿಯ, ಸರಾನಿಯ, ತಿರುಮಲಿ, ವಾಯ್ಡು, ವಾಸುದೇವ್, ವಾಡಿ, ವಾಗ್ರಿ, ವಿರ್, ಬಜನಿಯ, ಶಿಕ್ಕಲಿಗರ್, ಗೊಲ್ಲ, ಕಿಲ್ಲಿಕ್ಯಾತಸ್, ಸರೋಡಿ, ದುರ್ಗ-ಮುರ್ಗ (ಬುರ್ಬುರ್ಚ), ಹಾವಗಾರ್ (ಹಾವಾಡಿಗಾರ್), ಪಿಚಗುಂಟಲ, ಮಸಣಿಯ ಯೋಗಿ, (ಬೆಸ್ತರ್), ಬುಂಡಬೆಸ್ತ, ಕಟಬು, ದರ್ವೇಶ್, ಕಾಶಿ ಕಪಾಡಿ, ದೊಂಬಿದಾಸ ಮತ್ತು ಟೈಲ್ಪತರ್ ಜನರ ಆರ್ಥಿಕ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವ ಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಭೂಖರೀದಿ ಯೋಜನೆ ಮತ್ತು ಬ್ಯಾಂಕ್ಗಳ ಸಹಯೋಗದೊಂದಿಗೆ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಇಚ್ಛಿಸುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ಅಲೆಮಾರಿ/ಅರೆ ಅಲೆಮಾರಿ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಇಚ್ಛಿಸುವ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರು ಅರ್ಜಿ ನಮೂನೆಯನ್ನು ಜಿಲ್ಲಾ ಕಚೇರಿಯಲ್ಲಿ ಅಥವಾ ನಿಗಮದ ವೆಬ್ಸೈಟ್ನಲ್ಲಿ ಪಡೆದು ಅರ್ಜಿಯೊಂದಿಗೆ ಅಗತ್ಯ ದಾಖಲೆಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಫೆÇೀಟೋವನ್ನು ಮತ್ತು ವಿದ್ಯಾರ್ಥಿಗಳ ವ್ಯಾಸಂಗದ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸುವುದು.
ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿದಾರರು ಹೊಂದಿರುವ ಜಮೀನಿನ ದಾಖಲಾತಿಗಳು ಮತ್ತು ಸಣ್ಣ ರೈತರ ಪ್ರಮಾಣ ಪತ್ರಗಳನ್ನು ಮತ್ತು ಭೂ ಖರೀದಿಗೆ ಸಂಬಂಧಿಸಿದಂತೆ ಜಮೀನುದಾರರ ಕಂದಾಯ ದಾಖಲೆಗಳೊಂದಿಗೆ ನಿಗಮದ ವೆಬ್ಸೈಟ್ www.dbcdc.karnataka.gov.iಟಿ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು, ಅರ್ಜಿ ಸಲ್ಲಿಸಲು ಸಾಧ್ಯವಾಗದಿದ್ದಲ್ಲಿ, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸುವುದು. ಅರ್ಜಿ ಸಲ್ಲಿಸಲು 2020ರ ಅಕ್ಟೋಬರ್ 29 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೊಠಡಿ ಸಂ.08, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಹಾಗೂ ನಿಗಮದ ದೂರವಾಣಿ ಸಂಖ್ಯೆ: 080-29605761 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ನಿಯಮಿತದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರಾದ ಎನ್. ಸುಜಾತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

