ಕೊಲೆ ಪ್ರಕರಣ ಬೇಧಿಸಿದ ದೊಡ್ಡಬಳ್ಳಾಪುರ ‌ಪೊಲೀಸರು: ಅಕ್ಕನನ್ನು ಪ್ರೀತಿಸಿದ್ದಕ್ಕೆ ದೊಣ್ಣೆಗಳಿಂದ ಬಡಿದು ಕೊಲೆ / ಏಳು ಜನರ ಬಂಧನ

ದೊಡ್ಡಬಳ್ಳಾಪುರ: ಅಕ್ಕನನ್ನು ಪ್ರೀತಿಸಿದ್ದಕ್ಕೆ ಕೋಪಗೊಂಡ ಪ್ರಜ್ವಲ್‌ ಎಂಬಾತ ಸ್ನೇಹಿತರೊಂದಿಗೆ ಸೇರಿ ಬೆಂಗಳೂರಿನ ವಿಜಯನಗರ ನಿವಾಸಿ ಪಿ.ಚೇತನ್(20) ಎಂಬಾತನನ್ನು ಅ.2 ರಂದು ಕೊಲೆ ಮಾಡಿ ತಾಲ್ಲೂಕಿನ ಹೊನ್ನಾಘಟ್ಟ ಕೆರೆ ಅಂಗಳದ ಗಿಡಗಳ ಪೊದೆಯಲ್ಲಿ ಬಿಸಾಡಿ ಹೋಗಿದ್ದ ಪ್ರಕರಣದಲ್ಲಿ ಏಳು ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸರ್ಕಲ್‌ ಇನ್‌ಸ್ಪೆಕ್ಟರ್‌ ಎಂ.ಬಿ.ನವೀನ್‌ಕುಮಾರ್‌ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿ,ಕೆರೆ ಅಂಗಳದಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ದೊರೆತಾಗ ಆರೋಪಿಗಳ ಬಗ್ಗೆ ಖಚಿತವಾದ ಯಾವುದೇ ಮಾಹಿತಿ ದೊರೆತಿರಲಿಲ್ಲ. ಆದರೆ ಬೆಂಗಳೂರಿನ ಅನ್ನಪೂರ್ಣೇಶ್ವರ ಪೊಲೀಸ್‌ ಠಾಣೆಯಲ್ಲಿ ಕಾಣೆಯಾಗಿದ್ದ ವ್ಯಕ್ತಿಯ ಬಟ್ಟೆ, ಭಾವ ಚಿತ್ರದ ಗುರುತುಗಳ ಆಧಾರದ ಮೇಲೆ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್‌, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮೀಗಣೇಶ್‌, ಡಿವೈಎಸ್‌ಪಿ ಟಿ.ರಂಗಪ್ಪ ಅವರ ಮಾರ್ಗದರ್ಶನದಲ್ಲಿ ತನಿಖೆ ಚುರುಕುಗೊಳಿಸಿ ಕೊಲೆ ನಡೆದ ಒಂದು ವಾರದ ಒಳಗೆ ಆರೋಪಿಗಳನ್ನು ಬಂಧಿಸಲಾಗಿದೆ. ಈಗ ಬಂಧಿತರಾಗಿರುವ ಆರೋಪಿಗಳು ತಾಲ್ಲೂಕಿನ ರಾಜಘಟ್ಟ ಗ್ರಾಮದ ಎಸ್‌.ಹೇಮಂತ್‌, ಪಾಲನಜೋಗಿಹಳ್ಳಿ ನಿವಾಸಿಗಳಾದ ಜಿ.ಟಿ.ತಿಮ್ಮರಾಜು, ಎಂ.ಪ್ರವೀಣ್‌, ಬೆಂಗಳೂರಿನ ಕಾಮಾಕ್ಷಿಪಾಳ್ಯದ ವಾಸೀಪ್‌, ಎಸ್‌.ನಿಖಿಲ್‌, ಶಾರದ ಕಾಲೋನಿ ನಿವಾಸಿ ಎಸ್‌.ನವೀನ್‌, ಮೀನಾಕ್ಷಿನಗರದ ನಿವಾಸಿ ಸಂಜೇಯ್‌.

ಫೇಸ್‌ಬುಕ್ ಕಾಮೆಂಟ್‌ ದ್ವೇಷಕ್ಕೆ ಕಾರಣ: ಹೊನ್ನಾಘಟ್ಟ ಕೆರೆ ಅಂಗಳದಲ್ಲಿ ನಡೆದ ಚೇತನ್ ಕೊಲೆ ಮೇಲ್ನೋಟಕ್ಕೆ ಅಕ್ಕನನ್ನು ವಿವಾಹವಾಗಿದ್ದೇ ಪ್ರಮುಖ ಕಾರಣವಾಗಿದೆ. ಆದರೆ ಈ ಕೊಲೆಯ ಸಂಚಿನಲ್ಲಿ ಏಳು ಜನರು ಒಂದಾಗಿರುವುದೇ ಚೇತನ್‌ ಫೇಸ್‌ ಬುಕ್‌ನಲ್ಲಿ ಕಾಮೆಂಟ್‌ ಹಾಕಿದ್ದು ಸಹ ಒಂದು ಕಾರಣವಾಗಿದೆ ಎನ್ನಲಾಗಿದೆ.

ಚೇತನ್‌ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಎಲ್ಲಾ ಆರೋಪಿಗಳು 18 ರಿಂದ 24 ವರ್ಷದ ಒಳಗಿನವರೇ ಆಗಿದ್ದಾರೆ. ಈ ವಯಸ್ಸಿನವರು  ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಒಂದಿಷ್ಟು ಎಚ್ಚರ ತಪ್ಪಿದರು ಸಹ ಇಡೀ ಜೀವನವೇ ದುರಂತಮಯವಾಗಲಿದೆ ಎನ್ನುವುದಕ್ಕೆ  ಈ ಪ್ರಕರಣ ಸಾಕ್ಷಿಯಾಗಿದೆ.

ಮಗನನ್ನು ಉಳಿಸಿಕೊಡಿ: ಚೇತನ್‌ ಕೊಲೆ ಪ್ರಕರಣದಲ್ಲಿ ಈಗ ಬಂಧಿತರಾಗಿರುವ ಏಳು ಜನರ ಪೈಕಿ ಒಬ್ಬಾತನ ತಾಯಿ ‘ನನ್ನ ಮಗ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಹೇಳಿಕೊಂಡು ಪಶ್ಚಾತಾಪ ಪಟ್ಟಿದ್ದಾನೆ. ಬೆಂಗಳೂರಿನಲ್ಲಿ ಕೂಲಿ ಮಾಡಿ ಜೀವನ ನಡೆಸುತ್ತ ಮಕ್ಕಳನ್ನು ಸಾಕುತ್ತಿದ್ದೇನೆ. ಗಂಡ ಮೃತಪಟ್ಟು ಹಲವಾರು ವರ್ಷಗಳಾಗಿವೆ. ಲಾಕ್‌ಡೌನ್‌ ನಂತರ ಮನೆ ಬಾಡಿಗೆ ಕಟ್ಟುವುದೇ ಕಷ್ಟವಾಗಿದೆ. ಇಂತಹ ಕಷ್ಟದ ಸಂದರ್ಭದಲ್ಲೂ ಮಕ್ಕಳನ್ನು ಸಾಕುತ್ತಿರುವೆ. ಸ್ನೇಹಿತರ ಸಹವಾಸದಿಂದ ನನ್ನ ಮಗ ತಪ್ಪು ಮಾಡಿದ್ದಾನೆ. ಹೇಗಾದರು ಮಾಡಿ ನನ್ನ ಮಗ ಜೈಲಿಗೆ ಹೋಗುವುದನ್ನು ತಪ್ಪಿಸಲು ಸಹಾಯ ಮಾಡಿ. ಇಲ್ಲವೆ ಹೆಚ್ಚು ದಿನ ನನ್ನ ಮಗ ಜೈಲಿನಲ್ಲಿ ಇರದಂತೆ ಸಹಾಯ ಮಾಡಿ’ ಎಂದು ಆರೋಪಿಯನ್ನು ಬಂಧಿಸಲು ಮನೆ ಬಳಿಗೆ ಹೋಗಿದ್ದಾಗ ತಾಯಿಯೊಬ್ಬರು ಪೊಲೀಸರನ್ನು ಅಂಗಲಾಚಿ ಕೇಳಿಕೊಂಡರಂತೆ.

ಈಗ ಮಾಡಿರುವ ತಪ್ಪೇ ದೊಡ್ಡದಾಗಿದೆ. ಜೈಲಿನಲ್ಲಿ ಹೆಚ್ಚು ದಿನಗಳ ಕಾಲ ಬಂಧಿಯಾಗಿದ್ದರೆ ಮತ್ತಷ್ಟು ದೊಡ್ಡ ಅಪರಾಧಗಳನ್ನು ಮಾಡುವುದನ್ನು ಕಲಿತು ಬರುತ್ತಾನೋ ಎನ್ನುವ ಆತಂಕ ಆ ತಾಯಿಯದ್ದಾಗಿತ್ತು ಎಂದು ಪೊಲೀಸರೊಬ್ಬರು ತಿಳಿಸಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ ಸಂಗ್ರಹ: ಸಚಿವರ ಭರವಸೆ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ

ದೊಡ್ಡಬಳ್ಳಾಪುರ (Doddaballapura) ಸೀರೆಗೆ ಜಿಐ ಟ್ಯಾಗ್‌ ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿಸಲಿದ್ದು, ಸೂರತ್‌ ಸೀರೆಗಳ ನಿಷೇದಕ್ಕೆ ಕಾನೂನು ತಜ್ಞರ ಅಭಿಪ್ರಾಯ ಪಡೆಯಲಾಗುವುದು ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ

[ccc_my_favorite_select_button post_id="117062"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!