ದೊಡ್ಡಬಳ್ಳಾಪುರ: ಪಿಎಸ್‌ಐ ಜಗದೀಶ್ 5ನೇ ವರ್ಷದ ಹುತಾತ್ಮ ದಿನಾಚರಣೆ

ದೊಡ್ಡಬಳ್ಳಾಪುರ: ಹುತಾತ್ಮ ಪಿಎಸ್‌ಐ ಜಗದೀಶ್ ಅವರ 5ನೇ ವರ್ಷದ ಹುತಾತ್ಮ ದಿನಾಚರಣೆಯನ್ನು ನಗರದ ಡಿ.ಕ್ರಾಸ್ ಬಳಿ ಇರುವ ಪಿಎಸ್‌ಐ ಜಗದೀಶ್ ವೃತ್ತದಲ್ಲಿ ಶುಕ್ರವಾರ ಅವರ ಅಭಿಮಾನಿ ಬಳಗದವತಿಯಿಂದ ನಡೆಸಲಾಯಿತು.

ಈ ವೇಳೆ ಪುಷ್ಪ ನಮನ ಸಲ್ಲಿಸಿ ಡಿವೈಎಸ್‌ಪಿ ಟಿ.ರಂಗಪ್ಪಮಾತನಾಡಿ, ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪಿಎಸ್‌ಐ ಜಗದೀಶ್ ಅವರ ಕರ್ತವ್ಯ ಹಾಗು ಜನರ ಮೇಲಿನ ಪ್ರೀತಿಯ ನೆನಪಿನಲ್ಲಿ ಇಂದು ಕಾರ್ಯಕ್ರಮ ಮಾಡುತ್ತಿರುವುದು ತುಂಬಾ ಸಂತೋಷದ ಸಂಗತಿ. ಒಬ್ಬ ನಿಷ್ಟಾವಂತ ಸಾಮಾನ್ಯ ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ವೃತ್ತವನ್ನು ನಿರ್ಮಾಣ ಮಾಡಿರುವುದು ಅವರ ಕರ್ತವ್ಯ ನಿಷ್ಟೆಗೆ ಹಿಡಿದ ಕೈಗನ್ನಡಿಯಾಗಿದೆ. ಅಲ್ಲದೆ ಅವರು ತಾಲೂಕಿನಲ್ಲಿ ಗಳಿಸಿರುವ ಪ್ರೀತಿ ಜನರ ಬಾವನಾತ್ಮಕ ಸಂಬಂಧಗಳ ಜೊತೆ ಅವರ ಪ್ರಾಮಾಣಿಕ ಕೆಲಸವನ್ನು ಇಂದಿಗೂ ಸ್ಮರಿಸುತ್ತಿರುವ ನಿಮಗೆ ಇಲಾಖೆವತಿಯಿಂದ ಅಭಿನಂದನೆಗಳನ್ನು ಸಲ್ಲಿಸುತ್ತಾ, ಮತ್ತೆ ಇಂತಹ ದುರಂತಗಳು ಮರುಕಳಿಸದಂತೆ ನೋಡಿಕೊಂಡು ಸಮಾಜದಲ್ಲಿರುವ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲು ನಾವು ಕಂಕಣ ಬದ್ದರಾಗಿದ್ದೇವೆ. ನಾಗರೀಕರು ಸಹಕಾರ ಜತೆಗೆ ಮಾಹಿತಿ ನೀಡಬೇಕಾಗಿದೆ ಎಂದರು.

ಕರವೇ ಪ್ರವೀಣ್ ಶೆಟ್ಟಿ ಬಣದ ರಾಜ್ಯ ಕಾರ್ಯದರ್ಶಿ ರಾಜಘಟ್ಟರವಿ ಮಾತನಾಡಿ, ಸಮಾಜಕ್ಕಾಗಿ ದುಡಿದವರ, ಮಡಿದವರನ್ನು ಸಮಾಜ ಎಂದು ಮರೆಯುವುದಿಲ್ಲ ಎಂಬುದಕ್ಕೆ ಕಳೆದ ಐದು ವರ್ಷಗಳಿಂದ ತಾಲೂಕಿನ ಜನತೆ ನಡೆಸುತ್ತಾ ಬಂದಿರುವ ಈ ಕಾರ್ಯಕ್ರಮ ಸಾಕ್ಷಿಯಾಗಿ. ಜಗದೀಶ್ ಅವರ ಸವಿನೆನಪಿಗಾಗಿ ನಗರದ ಡಿ.ಕ್ರಾಸ್ ಬಳಿ ಇರುವ ರೈಲ್ವೆ ಮೆಲ್ಸೆತುವೆ ವೃತ್ತವನ್ನು ಪಿಎಸ್‌ಐ ಜಗದೀಶ್‌ವೃತ್ತ ಎಂದು ನಾಮಕರಣ ಮಾಡಿ, ಪ್ರತಿ ವರ್ಷ ಅವರ ಜನ್ಮ ದಿನ ಹಾಗು ಹುತಾತ್ಮ ದಿನಾಚರಣೆಯನ್ನು ಅವರ ಅಭಿಮಾನಿಗಳು, ನಾಗರೀಕರೆಲ್ಲಾ ಸೇರಿ ಕಳೆದ ಐದು ವರ್ಷಗಳಿಂದ ಆಚರಿಸಿಕೊಂಡು ಬಂದಿರುವುದು ನೋಡಬಹುದು. 

ಕಾರ್ಯಕ್ರಮದ ಅಂಗವಾಗಿ ಕರೊನಾ ಸೋಂಕು ನಿರ್ವಹಣೆಗೆ ಶ್ರಮಿಸುತ್ತಿರುವ ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಎ ಎಸ್ ಐ ವರಲಕ್ಷ್ಮಿ, ಆಶಾ ಕಾರ್ಯಕರ್ತೆಯರಾದ ಸೋಚನಾ, ಶಶಿಕಲಾ, ಪೊಲೀಸ್ ಸಿಬ್ಬಂದಿಗಳಾದ ಬೆಟ್ಟಸ್ವಾಮಿಗೌಡ, ಶಿವಾನಂದ. ಕಾವ್ಯ, ಸುನೀಲ್ ಬಾಸಗಿ, ಪಾಂಡುರಂಗರನ್ನು ಸನ್ಮಾನಿಸಲಾಯಿತು.

ಈ ವೇಳೆ ಸರ್ಕಲ್ ಇನ್ಸ್ಪೆಕ್ಟರ್ ನವೀನ್ ಕುಮಾರ್, ಸಬ್ ಇನ್ಸ್ ಪೆಕ್ಟರ್ ಸೋಮಶೇಖರ್, ಶಂಕರಪ್ಪ, ದಿವಂಗತ ಜಗದೀಶ್ ತಾಯಿ ಕಮಲಮ್ಮ, ಮಡದಿ ರಮ್ಯ, ನಗರಸಭೆ ಸ್ಥಾಯಿಸಮಿತಿ ಮಾಜಿ  ಅಧ್ಯಕ್ಷ ರೈಲ್ವೆಸ್ಟೇಷನ್ ಮಲ್ಲೇಶ್, ಕನ್ನಡ ಪಕ್ಷದ ವಿ.ಪರಮೇಶ್, ಮುಖಂಡರಾದ ಧುನಿಯಾ ಚಂದ್ರು. ಕರವೆ ಪ್ರವೀಣ್ ಶೆಟ್ಟಿ ಬಣದ ಹಮಾಮ್ ವೆಂಕಟೇಶ್, ಎಸ್ ಎಲ್ ಎನ್ ವೇಣು, ಪು.ಮಹೇಶ್ ಮತ್ತಿತರಿದ್ದರು.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]