ನಕಲಿ ಮತದಾರರಿಂದ ಗೆಲ್ಲುತ್ತೇನೆ ಎನ್ನುವ ಭ್ರಮೆ ಈಗ ಕಳಚಿದೆ / ಅಸಲಿ ಮತದಾರ ಶಿಕ್ಷಕರು ಜೆಡಿಎಸ್‌ ಬೆಂಬಲಿಸಲಿದ್ದಾರೆ

ದೊಡ್ಡಬಳ್ಳಾಪುರ: ಅಧಿಕಾರ ಅನುಭವಿಸಿದ್ದ ಪಕ್ಷಕ್ಕೆ ನಂಬಿಕೆ ದ್ರೋಹ ಬಗೆದು ಹಣದ ಆಸೆಗೆ ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರ ಪತನವಾಗಲು ಪ್ರಮುಖ ಕಾರಣ ಕರ್ತರು ಪುಟ್ಟಣ್ಣ. ಇಂತಹವರಿಂದ ಶಿಕ್ಷಕರಿಗೆ ಎಂದೂ ಅನುಕೂಲವಾಗುವುದಿಲ್ಲ ಎಂದು ದಾಸರಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕ ಮಂಜುನಾಥ್‌ ದೂರಿದರು.

ಅವರು ಶುಕ್ರವಾರ ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ಜೆಡಿಎಸ್‌ ಪಕ್ಷದ ವರಿಷ್ಟರಾದ ಎಚ್‌.ಡಿ.ದೇವೇಗೌಡರು ಶಿಕ್ಷಕರ ಪರವಾಗಿ ಮಾಡಿರುವ ಕೆಲಸವನ್ನು ಮೆಚ್ಚಿ ಶಿಕ್ಷಕ ಸಮುದಾಯ ಪುಟ್ಟಣ ಅವರಿಗೆ ಮತ ನೀಡಿ ಮೂರು ಬಾರಿ ಆಯ್ಕೆಯಾಗಲು ಸಾಧ್ಯವಾಯಿತು. ಆದರೆ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದ ನಂತರ ಪುಟ್ಟಣ್ಣ ಅವರು ಎಂದೂ ಶಿಕ್ಷಕರ ಪರವಾಗಿ ಕೆಲಸ ಮಾಡದೆ ಶಿಕ್ಷಣ ಸಂಸ್ಥೆಗಳ ಮಾಲೀಕರ ಪರವಾಗಿ ಕೆಲಸ ಮಾಡಿದ್ದಾರೆ ಎಂದರು.

ರಾಜ್ಯದಲ್ಲಿನ ಬಿಜೆಪಿ ಸರ್ಕಾರ ಆಡಳಿತ ಯಂತ್ರವನ್ನು ದುರ್ಬಳಕೆ ಮಾಡಿಕೊಂಡು ಶಿಕ್ಷಣ ಇಲಾಖೆಯ ಜಿಲ್ಲಾ ಹಂತದಿಂದ ತಾಲ್ಲೂಕು ಮಟ್ಟದ ಅಧಿಕಾರಿಗಳಿಂದ ಶಿಕ್ಷಕರ ಮೇಲೆ ಒತ್ತಡ ಹಾಕುವ ಮೂಲಕ ಮತ ಪಡೆಯಲು ಮುಂದಾಗಿದೆ ಎಂದು ಆರೋಪಿಸಿದರು.

ಬೆಂಗಳೂರು ಪದವೀಧರ ಶಿಕ್ಷಕರ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಎ.ಪಿ.ರಂಗನಾಥ್‌ ಮಾತನಾಡಿ, ರಾಜ್ಯದಲ್ಲಿ ಎಂದೂ ಪುಟ್ಟಣ್ಣ ಅವರು ಶಿಕ್ಷಕರ ಪರವಾಗಿ ಕೆಲಸ ಮಾಡಿರುವ ಉದಾಹರಣೆಯೇ ಇಲ್ಲ. ಕೆಲವೇ ಜನ ಶಿಕ್ಷಕರ ಗುಂಪನ್ನು ಕಟ್ಟಿಕೊಂಡು ಅವರ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದ್ದಾರೆ. ನಕಲಿ ಮತದಾರರ ಮೂಲಕ ಗೆಲ್ಲಬಹುದು ಎನ್ನುವ ಭ್ರಮೆಯಲ್ಲಿದ್ದರು. ಈ ಬಾರಿ ಅಸಲಿ ಮತದಾರರು ಮಾತ್ರ ಪಟ್ಟಿಯಲ್ಲಿದ್ದಾರೆ ಎಂದರು.

ದೊಡ್ಡಬಳ್ಳಾಪುರದ ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳವರು ತಮ್ಮ ಇಡೀ ಕುಟುಂಬದ ಸದಸ್ಯರೆಲ್ಲರನ್ನು ಪದವೀಧರ ಶಿಕ್ಷಕರ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿದ್ದರು. ಇಂತಹವುಗಳಿಗೆ ಕಡಿವಾಣ ಹಾಕಿದ್ದನ್ನು ಸಹದೇ ನಮ್ಮ ಪಕ್ಷದ ಮುಖಂಡರನ್ನು ದೂರುತ್ತಿದ್ದಾರೆ. ಪಾಠ ಮಾಡುತ್ತಿದ್ದ ಶಿಕ್ಷಕರು ಲಾಕ್‌ಡೌನ್‌ ಆರಂಭವಾದ ನಂತರ ರಸ್ತೆ ಬದಿಯಲ್ಲಿ ತರಕಾರಿ,ಬೋಂಡಾ ಮಾರಾಟ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಖಾಸಗಿ ಶಾಲೆಗಳಲ್ಲಿ ಪಾಠ ಮಾಡುತ್ತಿದ್ದ ಶಿಕ್ಷಕರಿಗೆ ಸಂಕಷ್ಟದ ಸಮಯದಲ್ಲಿ ಸಂಬಳ ನೀಡದೆ ಬೀದಿಗೆ ದಬ್ಬಿದವರು ಇಂದು ಯಾವ ನೈತಿಕತೆ ಮೇಲೆ ಶಿಕ್ಷಕರನ್ನು ಮತಹಾಕುವಂತೆ ಕೇಳಲು ಹೋಗುತ್ತಾರೆ ಎಂದು ಪ್ರಶ್ನಿಸಿದರು.

ಸಭೆಯಲ್ಲಿ ಖ್ಯಾತ ವೈದ್ಯರಾದ ಡಾ.ಅಂಜನಪ್ಪ, ಜೆಡಿಎಸ್‌ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ, ಜೆಡಿಎಸ್‌ ಮುಖಂಡ ಎಂ.ಸಿ.ವೇಣುಗೋಪಾಲ್‌ ಇದ್ದರು.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]