HL Web Exclusive: ಕನ್ನಡ ಕಟ್ಟಾಳು ಪ್ರಶಸ್ತಿಗೆ ಆಯ್ಕೆ

ದೊಡ್ಡಬಳ್ಳಾಪುರ: ಕೋವಿಡ್-19 ಹಿನ್ನಲೆಯಲ್ಲಿ ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಶಾಲಾ ಮಕ್ಕಳ ಅನುಪಸ್ಥಿತಿಯಲ್ಲಿ, ಸಾರ್ವಜನಿಕರ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಭಾಗವಹಿಸುವಿಕೆಯೊಂದಿಗೆ ಸರ್ಕಾರದ ಸೂಚನೆಯಂತೆ ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ತಹಶೀಲ್ದಾರ್ ಹಾಗೂ ರ್ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಟಿ.ಎಸ್.ಶಿವರಾಜ್ ತಿಳಿಸಿದರು.

ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು, ಇಲಾಖೆಗಳ ಮುಖ್ಯಸ್ಥರೊಂದಿಗೆ ತಾಲೂಕು ಕಚೇರಿಯ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ಎಂದಿನಂತೆ ರಾಜ್ಯೋತ್ಸವವನ್ನು ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸುವಂತೆ ಸಭೆಯಲ್ಲಿ ಪ್ರಸ್ತಾಪಿಸಿದಾಗ, ಶಾಲಾ ಮಕ್ಕಳಿಲ್ಲದೇ ಸೀಮಿತ ಜನರು ಭಾಗವಹಿಸುವುದರಿಂದ ಕ್ರೀಡಾಂಗಣದಲ್ಲಿ ಬೇಡ ಎನ್ನುವ ಅಭಿಪ್ರಾಯಗಳು ವ್ಯಕ್ತವಾದವು. ಈ ಹಿನ್ನಲೆಯಲ್ಲಿ ಮೆರವಣಿಗೆ ಇಲ್ಲದೇ ತಾಲೂಕು ಕಚೇರಿ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ, ನಂತರ ಪುರಭವನದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ನಾಡಗೀತೆ ಸೇರಿದಂತೆ ಕನ್ನಡ ಗೀತೆಗಳ ಗಾಯನ ಹಾಗೂ ಶಿಷ್ಟಾಚಾರದಂತೆ ಕಾರ್ಯಕ್ರಮವನ್ನು ರೂಪಿಸಲು ತೀರ್ಮಾನಿಸಲಾಯಿತು.

ಡಾ.ವೆಂಕಟರೆಡ್ಡಿ ಹೆಸರಿನಲ್ಲಿ ಕನ್ನಡ ಕಟ್ಟಾಳು ಪ್ರಶಸ್ತಿ: ಪ್ರತಿವರ್ಷದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ಹಾಗೂ ಕನ್ನಡ ನಾಡು ನುಡಿಗಾಗಿ ಹೋರಾಟ ನಡೆಸಿದವರಿಗೆ  ಕನ್ನಡ ಕಟ್ಟಾಳು ಪ್ರಶಸ್ತಿಯನ್ನು ನೀಡಬೇಕೆಂದು ಸಭೆಯಲ್ಲಿ ಹಾಜರಿದ್ದ ಕನ್ನಡಪರ ಸಂಘಟನೆಗಳ ಮುಖಂಡರು ಸಲಹೆ ನೀಡಿದರು. ಆದರೆ ಈ ಬಾರಿ ಚುನಾವಣೆ ನೀತಿ ಸಂಹಿತೆ ಇದ್ದುದರರಿಂದ ಮುಂಚಿತವಾಗಿ ಸಭೆ ಕರೆಯಲು ಸಾಧ್ಯವಾಗಲಿಲ್ಲ. ಇನ್ನು ಮೂರು ದಿನಗಳಲ್ಲಿ  ಅರ್ಜಿ ಪಡೆದು ಸನ್ಮಾನಿತರನ್ನು ಆಯ್ಕೆ ಮಾಡುವುದು ಸಹ ಕಷ್ಟಕರ. ಹೀಗಾಗಿ ಸಭೆಯಲ್ಲಿಯೇ ಸನ್ಮಾನಿತರನ್ನು ಸೂಚಿಸಿ ಎಂದು ತಹಶಿಲ್ದಾರರು ಪ್ರಸ್ತಾಪಿಸಿದಾಗ, ಈ ಹಿಂದಿನ ಸಭೆಯಲ್ಲಿ ತೀರ್ಮಾನಿಸಿದಂತೆ ಈ ವರ್ಷದಿಂದ ರೈತ ಹಾಗೂ ಕನ್ನಡಪರ ಹೋರಾಟಗಾರ ಡಾ.ವೆಂಕಟ ರೆಡ್ಡಿ ಹೆಸರಿನಲ್ಲಿ ಕನ್ನಡ ಕಟ್ಟಾಳು ಪ್ರಶಸ್ತಿಯನ್ನು ಹಿರಿಯ ಕನ್ನಡಪರ ಹೋರಾಟಗಾರರಾದ ಟಿ.ಎನ್.ಪ್ರಭುದೇವ್, ಎಂ.ಸಂಜೀವ್ ನಾಯಕ್ ಹಾಗೂ ಜಿ.ಸತ್ಯನಾರಾಯಣ ಅವರಿಗೆ ನೀಡುವಂತೆ ಸಭೆಯಲ್ಲಿ ತೀರ್ಮಾನಿಸಲಾತು. ಕನ್ನಡ ಮಾಧ್ಯಮದಲ್ಲಿ ಹಾಗೂ ಕನ್ನಡ ವಿಷಯದಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳನ್ನು ಅಭಿನಂದಿಸಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬೈಯಪ್ಪರೆಡ್ಡಿ ತಿಳಿಸಿದರು.

ಕಾರ್ಯಕ್ರಮ ಸರಳ ಆಚರಣೆ  ಎಂದು ಕಾಟಾಚಾರವಾಗವುದು ಬೇಡ. ಸಭಾ ಗೌರವಕ್ಕೆ ದಕ್ಕೆಯಾಗಬಾರದು ಹಾಗೂ ಸನ್ಮಾನಿತರಿಗೆ ಸಿಗಬೇಕಾದ ಮನ್ನಣೆ ಸಿಗಬೇಕು ಎಂದು ಸಭೆಯಲ್ಲಿದ್ದ ಮುಖಂಡರು ಅಭಿಪ್ರಾಯ ಪಟ್ಟರು.

ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಬೈಯಪ್ಪರೆಡ್ಡಿ, ದೈಹಿಕ ಶಿಕ್ಷಣಾಧಿಕಾರಿ ನಾಗರಾಜ್, ನಗರಸಭೆ ಪರಿಸರ ಅಧಿಕಾರಿ ಈರಣ್ಣ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಹಾಜರಿದ್ದರು.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]