ದೊಡ್ಡಬಳ್ಳಾಪುರ: ತೀವ್ರಗೊಂಡ ಟಿಎಪಿಎಂಸಿಎಸ್ ಚುನಾವಣೆ / ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಮತ ನೀಡುವಂತೆ ಶಾಸಕ ಟಿ.ವೆಂಕಟರಮಣಯ್ಯ ಮನವಿ

ದೊಡ್ಡಬಳ್ಳಾಪುರ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (ಟಿಎಪಿಎಂಸಿಎಸ್) ಚುನಾವಣ ಪ್ರಚಾರದ ಭರಾಟೆ ಜೋರಾಗಿದ್ದು ಅಭ್ಯರ್ಥಿಗಳು ಮತದಾರರ ಮನೆಗಳಿಗೆ ಭೇಟಿ ನೀಡಿ ಮತ ನೀಡುವಂತೆ ಮನವಿ ಮಾಡುತ್ತಿದ್ದಾರೆ.                    ಜಮೀನಿನ ಪಹಣಿ ಹೊಂದಿರುವ ರೈತರು ಮಾತ್ರ ಟಿಎಪಿಎಂಸಿಎಸ್ನಲ್ಲಿ ಸದಸ್ಯತ್ವ ಹೊಂದಲು ಅರ್ಹರು. ಸದಸ್ಯತ್ವ ಹೊಂದಿರುವ ರೈತರು ಟಿಎಪಿಎಂಸಿಎಸ್ನಲ್ಲಿ ನಡೆಯುವ ಸರ್ವ ಸದಸ್ಯರ ಸಭೆಗಳಲ್ಲಿ ಕನಿಷ್ಠ ಮೂರು ಸಭೆಗಳಲ್ಲಿ ಭಾಗವಹಿಸಿದ್ದರೆ ಮಾತ್ರ ಮತ ಚಲಾಯಿಸಲು ಹಕ್ಕು ಹೊಂದಿರುತ್ತಾರೆ.                            ಟಿಎಪಿಎಂಸಿಎಸ್ನ 4,200 ಸದಸ್ಯರ ಪೈಕಿ 2,163 ಜನ ಸದಸ್ಯರು ಮಾತ್ರ ಮತಚಲಾಯಿಸುವ ಹಕ್ಕು ಹೊಂದಿದ್ದರು. ಸರ್ವ ಸದಸ್ಯರ ಸಭೆಗಳಲ್ಲಿ ಭಾಗವಹಿಸದೆ ಮತದಾನದ ಹಕ್ಕು ಕಳೆದುಕೊಂಡಿದ್ದವರಲ್ಲಿ  1,500 ಜನ ಸದಸ್ಯರು ನ್ಯಾಯಾಲಯದ ಮೊರೆ ಹೋಗಿ ಮತ ಚಲಾಯಿಸುವ ಹಕ್ಕು ಪಡೆದುಕೊಂಡು ಬಂದಿದ್ದಾರೆ. ಈ ಸಂಖ್ಯೆ ಇನ್ನು ಹೆಚ್ಚಾಗಲಿದೆ. 13 ಸ್ಥಾನಗಳನ್ನು ಹೊಂದಿರುವ ಟಿಎಪಿಎಂಸಿಎಸ್ನಲ್ಲಿ ‘ಎ’ತರಗತಿಯಿಂದ 4 (ವಿಎಸ್ಎಸ್ಎನ್ಗಳಿಂದ), ‘ಬಿ’ ತರಗತಿಯಿಂದ 9 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. 13 ಜನ ನಿರ್ದೇಶಕರ ಸ್ಥಾನಗಳನ್ನು ಹೊಂದಿರುವ ಟಿಎಪಿಎಂಸಿಎಸ್ನಲ್ಲಿ ‘ಎ’ ತಗತಿಯ 4 ಸ್ಥಾನಗಳಿಗೆ 7 ಜನ ಅಂತಿಮ ಕಣದಲ್ಲಿ ಉಳಿದಿದ್ದಾರೆ. ಬಿಸಿಎಂ ‘ಎ’ 1 ನಿರ್ದೇಶಕ ಸ್ಥಾನಕ್ಕೆ 4 ಜನ, ಬಿಸಿಎಂ ‘ಬಿ’ 1 ನಿರ್ದೇಶಕ ಸ್ಥಾನಕ್ಕೆ 3 ಜನ, ಮಹಿಳಾ ಅಭ್ಯರ್ಥಿಗಳಿಗೆ ಮೀಸಲಾದ 2 ನಿರ್ದೇಶಕ ಸ್ಥಾನಗಳಿಗೆ 5 ಜನ, ಸಾಮಾನ್ಯ ಅಭ್ಯರ್ಥಿಗಳಿಗೆ ಮೀಸಲಾಗಿರುವ 3 ಸ್ಥಾನಗಳಿಗೆ 9 ಜನ, ಎಸ್ಸಿ ಅಭ್ಯರ್ಥಿಗೆ ಮೀಸಲಾಗಿರುವ 1 ಸ್ಥಾನಕ್ಕೆ 4 ಜನ, ಎಸ್ಟಿ ಅಭ್ಯರ್ಥಿಗೆ ಮೀಸಲಾದ 1 ಸ್ಥಾನಕ್ಕೆ 3 ಜನ ಅಭ್ಯರ್ಥಿಗಳು ಅಂತಿಮ ಚುನಾವಣ ಕಣದಲ್ಲಿದ್ದಾರೆ. ನ.8 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮತದಾನ ನಡೆಯಲಿದ್ದು, ಅಂತಿಮ ಚುನಾವಣ ಕಣದಲ್ಲಿ 35 ಜನ ಅಭ್ಯರ್ಥಿಗಳು ಉಳಿದಿದ್ದಾರೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಮತ ನೀಡಿ: ಶಾಸಕ ಟಿ.ವೆಂಕಟರಮಣಯ್ಯ            ಟಿಎಪಿಎಂಸಿಎಸ್ ಆರ್ಥಿಕ ಅಭಿವೃದ್ಧಿಗೆ ಬಹಳಷ್ಟು ಕ್ರಮಕೈಗೊಂಡಿದ್ದು, ಮತದಾರರು ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳಿಗೆ ಮತ ನೀಡುವಂತೆ ಮನವಿ ಮಾಡಿದ್ದಾರೆ. 2013 ರಿಂದ 2018ರ ವರೆಗೆ ಟಿಎಪಿಎಂಸಿಎಸ್ ಆರ್ಥಿಕವಾಗಿ ಅಭಿವೃದ್ಧಿಗೊಳಿಸಲು ನಗರಸಭೆಯಿಂದ 200×400 ನಿವೇಶನ ಖಾತೆ ಮಾಡಿಸಿ ಕಟ್ಟಡ ನಿರ್ಮಿಸಲು ಅನುಕೂಲ ಮಾಡಿಕೊಟ್ಟು ಸುಮಾರು 2.5ಲಕ್ಷ ಬಾಡಿಗೆ ಬರುವಂತಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ 30 ನ್ಯಾಯಬೆಲೆ ಅಂಗಡಿ ತೆರೆದು ಅದರ ಮೂಲಕ ವರಮಾನ ಹೆಚ್ಚಿಸಲು ಕ್ರಮ, ಅನೇಕ ವರ್ಷಗಳಿಂದ ಬೇಜವಬ್ದಾರಿಯಿಂದ ವರ್ತಿಸುತ್ತಿದ್ದ ಅಧಿಕಾರಿಯ ವರ್ಗಾವಣೆ ಮಾಡಿ ಸಂಘದಲ್ಲಿ ಶಿಸ್ತುತರಲು ಕ್ರಮ, ಜನತಾ ಬಜಾರ್ ಗಳ ಸ್ಥಾಪನೆ ಸೇರಿದಂತೆ ಅನೇಕ ಕ್ರಮಗಳನ್ನು ಕೈಗೊಂಡಿದ್ದು, ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಕಾರ್ಯಗಳಿಗೆ ಮನ್ನಣೆ ನೀಡುವಂತೆ ಮನವಿ ಮಾಡಿದ್ದಾರೆ.

ಬಹಿರಂಗವಾದ ಭಿನ್ನಮತ: ಟಿಎಪಿಎಂಸಿಎಸ್ ಚುನಾವಣೆ ಜೆಡಿಎಸ್ ಪಕ್ಷದ ಒಳಗೆ ಇದ್ದೆ ಭಿನ್ನಮತ ಈಗ ಬಹಿರಂಗವಾಗಿದೆ. ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ ಅವರು ಎಲ್ಲಾ 9 ಸ್ಥಾನಗಳಿಗು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳನ್ನು ಚುನಾವಣ ಕಣಕ್ಕೆ ಇಳಿಸಿದ್ದಾರೆ. ಆದರೆ ಜೆಡಿಎಸ್ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ಎಚ್.ಅಪ್ಪಯ್ಯ ಅವರು ಐದು ಸ್ಥಾನಗಳಿಗೆ ಮಾತ್ರ ಜೆಡಿಎಸ್ ಪಕ್ಷ ಬೆಂಬಲಿತ  ಅಭ್ಯರ್ಥಿಗಳನ್ನು ಚುನಾವಣ ಕಣಕ್ಕೆ ಇಳಿಸಿದ್ದು, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ನಾಲ್ಕು ಸ್ಥಾನಗಳನ್ನು ಬಿಟ್ಟುಕೊಟ್ಟಿದ್ದಾರೆ.

ಮೈತ್ರಿಗೆ ಇಳಿದ ಬಿಜೆಪಿರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿದ್ದರು ಸಹ ದೊಡ್ಡಬಳ್ಳಾಪುರ ಕ್ಷೇತ್ರದ ಮಟ್ಟಿಗೆ ಸಮರ್ಥ ನಾಯಕತ್ವದ ಕೊರತೆಯಿಂದಾಗಿ ಟಿಎಪಿಎಂಸಿಎಸ್ ನಂತಹ ತಾಲ್ಲೂಕಿನ ಪ್ರಮುಖ ಸಹಕಾರಿ ಸಂಸ್ಥೆಯ ಎಲ್ಲಾ 13 ಸ್ಥಾನಗಳಿಗು ಸ್ಪರ್ಧಿಸುವ ಅಭ್ಯರ್ಥಿಗಳ ಕೊರತೆ ಎದುರಾಗಿದೆ. ಸದಸ್ಯರು ಮತಚಲಾಯಿಸುವ ‘ಬಿ’ ತರಗತಿಯ 9 ಸ್ಥಾನಗಳಿಗೂ ಸಹ ಸ್ಪರ್ಧಿಸುವ ಅಭ್ಯರ್ಥಿಗಳ ಕೊರತೆಯಿಂದಾಗಿ ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು 4 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳುವಂತ ಸ್ಥಿತಿಗೆ ತಲುಪಿದೆ.

ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

ರಾಜಕೀಯ

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ ಬಿ.ಮುನೇಗೌಡ ಬೆಂಬಲಿಗರ ಸಭೆ..!

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ

ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ (JDS) ಪಕ್ಷದಲ್ಲಿ ಆಕ್ರೋಶ ಸ್ಪೋಟವಾಗಿದ್ದು, ಬಿ.ಮುನೇಗೌಡ (B.Mine Gowda, ಹುಸ್ಕೂರು ಆನಂದ್ (Huskur Anand), ಬೆಂಬಲಿಗರು ಇಂದು ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಭೆ ಸೇರಿ,

[ccc_my_favorite_select_button post_id="121521"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]