ಸಂಪತ್ ರಾಜ್ ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಶಿಕ್ಷೆಯಾಗುತ್ತೆ: ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಮೇಯರ್ ಸಂಪತ್‌ರಾಜ್ ವಿರುದ್ಧ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದೆಯಷ್ಟೆ, ವಿಚಾರಣೆ ನಡೆಯುವ ಮೊದಲೆ ಅವರನ್ನು ಅಪರಾಧಿ ಅಥವಾ ನಿರಪರಾಧಿ ಎಂದು ನಿರ್ಧರಿಸಲಾಗುವುದಿಲ್ಲ. ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಶಿಕ್ಷೆಯಾಗುತ್ತೆ. ಈ ಹಂತದಲ್ಲಿ ನಾವು ಅವರ ಪರವೂ ಇಲ್ಲ, ವಿರುದ್ಧವೂ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಹೇಳಿದ್ದಾರೆ.

ಕೆಜಿ ಹಳ್ಳಿ, ಡಿಜಿ ಹಳ್ಳಿ ಗಲಭೆ ಪ್ರಕ್ರಣದ ಹಿನ್ನೆಲೆ ಮಾಜಿ ಮೇಯರ್ ಸಂಪತ್‌ರಾಜ್ ಬಂಧನ, ಶಾಲಾ ಕಾಲೇಜು ತೆರೆಯುವ ವಿಚಾರ, ಉಪಚುನಾವಣೆ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಹರಿಹಾಯ್ದು ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯ, ರಾಜ್ಯದಲ್ಲಿ ಶಾಲಾ-ಕಾಲೇಜು ತೆರೆಯದಂತೆ ಸರ್ಕಾರಕ್ಕೆ 2 ಬಾರಿ ಪತ್ರ ಬರೆದಿದ್ದೆ, ಆದರೂ ಇಂದು ಸರ್ಕಾರ ಪೂರ್ವತಯಾರಿ ಇಲ್ಲದೆ ಪದವಿ ಕಾಲೇಜುಗಳನ್ನು ಆರಂಭಿಸಿದೆ. ವಿದ್ಯಾರ್ಥಿಗಳ ಜೀವದ ಜೊತೆ ಚೆಲ್ಲಾಟ ಸರಿಯಲ್ಲ, ಕಾಲೇಜು ನಡೆಸಲೇಬೇಕು ಎಂದು ನಿರ್ಧರಿಸಿದ್ದರೆ ಸರ್ಕಾರವೇ ವಿದ್ಯಾರ್ಥಿಗಳ ನಿಯಮಿತ ಸೋಂಕು ಪರೀಕ್ಷೆಯನ್ನು ಮಾಡಿ, ತರಗತಿಗಳನ್ನು ನಡೆಸಬೇಕು. 

ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 30,000 ಮರಾಠ ಸಮುದಾಯದ ಮತದಾರರಿದ್ದಾರೆ, ಅವರ ಓಲೈಕೆಗಾಗಿ ಸರ್ಕಾರ ಅಭಿವೃದ್ಧಿ ಪ್ರಾಧಿಕಾರ ರಚನೆಯ ನಿರ್ಧಾರ ಮಾಡಿದೆಯೇ ಹೊರತು ಅವರ ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿ ಸುಧಾರಣೆ ಮಾಡುವ ನೈಜ ಕಾಳಜಿ ಬಿಜೆಪಿ ಸರ್ಕಾರಕ್ಕೆ ಇಲ್ಲ. ರಾಜ್ಯದಲ್ಲಿ ಹಲವಾರು ಹಿಂದುಳಿದ ಸಮುದಾಯಗಳು ಇನ್ನೂ ಇವೆ, ಅವುಗಳ ಅಭಿವೃದ್ಧಿಗೂ ಸರ್ಕಾರ ಪ್ರಾಧಿಕಾರ ರಚನೆ ಮಾಡಲಿ. ಮತ ಓಲೈಕೆ ಕಾರಣಕ್ಕಾಗಿ ಯಾವುದೋ ಒಂದು ಸಮುದಾಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡುವುದು ಸರಿಯಲ್ಲ. ಅಭಿವೃದ್ಧಿಯ ಹಾದಿಯಲ್ಲಿ ಎಲ್ಲರು ಒಂದಾಗಿ ಸಾಗಿದಾಗ ಮಾತ್ರ ಸಮಾನತೆ ತರಲು ಸಾಧ್ಯ. 

ಈ ಬಾರಿಯ ಪ್ರವಾಹದಿಂದ ರಾಜ್ಯದಲ್ಲಿ ಸುಮಾರು ರೂ.25,000 ಕೋಟಿಗೂ ಅಧಿಕ ನಷ್ಟ ಸಂಭವಿಸಿದೆ, ಆದರೆ ಕೇಂದ್ರ ಸರ್ಕಾರದಿಂದ ಈ ವರೆಗೆ ಬಂದಿರುವುದು ರೂ.577 ಕೋಟಿ ಮಾತ್ರ. ಇದರಲ್ಲಿ ಎಷ್ಟು ಜನರಿಗೆ ನೆರೆ ಪರಿಹಾರ ನೀಡಲು ಸಾಧ್ಯ? ರಾಜ್ಯ ಸರ್ಕಾರದ ಬಳಿಯೂ ಹಣವಿಲ್ಲ, ಕೇಂದ್ರವೂ ನೀಡುತ್ತಿಲ್ಲ. ಹೀಗಾದರೆ ಜನರಿಗೆ ಯಾರು ದಿಕ್ಕು? ರೈತರ ಆದಾಯ ದುಪ್ಪಟ್ಟುಗೊಳಿಸ್ತೀವಿ ಅಂತ ಭರವಸೆ ನೀಡಿ, ಈಗ ಭತ್ತ, ಮೆಕ್ಕೆಜೋಳ ಮುಂತಾದ ಬೆಳೆಗಳಿಗೆ ಸರ್ಕಾರ ಬೆಂಬಲ ಬೆಲೆಯನ್ನೂ ನೀಡದೆ ರೈತರನ್ನು ಕಷ್ಟಕ್ಕೆ ತಳ್ಳಿ ಕೈತೊಳೆದುಕೊಂಡಿದೆ. ಇದರ ಮೇಲೆ ರೈತವಿರೋಧಿ ಕಾನೂನುಗಳನ್ನು ಬೇರೆ ಜಾರಿ ಮಾಡಿದ್ದಾರೆ. ಒಟ್ಟಿನಲ್ಲಿ ಉಳ್ಳವರ ಸರ್ಕಾರದಲ್ಲಿ ಅನ್ನದಾತ ನರಳಾಡುತ್ತಿದ್ದಾನೆ.

ಬಿಜೆಪಿ ಮತ್ತು ಜೆಡಿಎಸ್‌ನ ಒಳ‌ಒಪ್ಪಂದದ ರಾಜಕಾರಣ ಹೊಸತಲ್ಲ. ಹಿಂದೆಯೂ  ಮಾಡಿಕೊಂಡಿದ್ದರು, ಕಳೆದ ಉಪಚುನಾವಣೆಯಲ್ಲೂ ಈ ಆರೋಪ ಇತ್ತು, ಮುಂದೆಯೂ ನಡೆಯಬಹುದು. ಅವಕಾಶವಾದಿ ರಾಜಕಾರಣ ಜೆಡಿಎಸ್‌ನ ನೈಜ ಸಿದ್ಧಾಂತ, ಇದನ್ನು ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲೂ ಮುಂದುವರೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಹರಿತಲೇಖನಿ ಫೇಸ್ಬುಕ್ ಹಾಗೂ ಟ್ವಿಟರ್ ಗಳಲ್ಲಿ ಲೈಕ್ ಮತ್ತು ಫಾಲೋ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ (Accident) ತಾಲೂಕಿನ ತಪಸೀಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="111050"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!