ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲಿಕುಂಟೆಯಲ್ಲಿ ನೂತನ ಕೈಗಾರಿಕಾ ಪ್ರದೇಶ ಸ್ಥಾಪನೆ…! / ಸ್ಥಳೀಯರಿಂದ ಪರ-ವಿರೋಧ ಅಭಿಪ್ರಾಯ

ದೊಡ್ಡಬಳ್ಳಾಪುರ: ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಂಟೆ ಬಳಿ ಹೊಸ ಕೈಗಾರಿಕಾ ಪ್ರದೇಶ ತಲೆ ಎತ್ತುವ ಮೂಲಕ ಬಾಶೆಟ್ಟಿಹಳ್ಳಿ ನಂತರ ಮತ್ತೊಂದು ಕೈಗಾರಿಕಾ ಪ್ರದೇಶ ಸ್ಥಾಪನೆಗೆ ಸಿದ್ದತೆಗಳು ಆರಂಭವಾಗಿವೆ. ಈ ಕುರಿತಂತೆ ಅಕ್ಟೋಬರ್ 10 ರಂದು ನಡೆದ ರಾಜ್ಯ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿರುವ ಗ್ರಾಮದ ಸರ್ವೇ ನಂಬರ್ ಹಾಗೂ ನೀಲ ನಕ್ಷೆ ಪ್ರಕಟವಾಗಿದೆ.

ನೆಲಮಂಗಲ ತಾಲ್ಲೂಕಿನ ಓಬಳಾಪುರ ಹಾಗೂ ಹುಲಿಕುಂಟೆ ವ್ಯಾಪ್ತಿಯ 1,150 ಎಕರೆ ಪ್ರದೇಶದಲ್ಲಿ ‘ಮಲ್ಟಿ ಮಾಡಲ್ ಲಾಜಿಸ್ಟಿಕ್ ಪಾರ್ಕ್’ (ಎಂಎಂಎಲ್ಪಿ)  ಸ್ಥಾಪನೆಯಾಗುತ್ತಿದೆ. ನೆಲಮಂಗಲ ತಾಲ್ಲೂಕಿನ ಓಬಳಾಪುರ ಕೈಗಾರಿಕಾ ಪ್ರದೇಶದಲ್ಲಿ 550 ಎಕರೆ. ಹುಲಿಕುಂಟೆ ಕೈಗಾರಿಕಾ ಪ್ರದೇಶದಲ್ಲಿ 600 ಎಕರೆಯನ್ನು ಗುರುತಿಸಲಾಗಿದೆ. 

ಕೈಗಾರಿಕೆಗೆ ಸ್ವಾಧೀನವಾಗುತ್ತಿರುವ ಒಂದು ಎಕರೆ ಖುಷ್ಕಿಗೆ ಜಮೀನಿಗೆ ಕನಿಷ್ಠ ₹17 ರಿಂದ ₹55 ಲಕ್ಷ, ತರಿ ಜಮೀನಿಗೆ ₹19 ರಿಂದ ₹59 ಲಕ್ಷ, ಬಾಗಾಯ್ತು ಜಮೀನಿಗೆ ₹20 ರಿಂದ ₹65 ಲಕ್ಷ, ಸ್ಥಳೀಯ ಸಂಸ್ಥೆ ವಸತಿ ನಿವೇಶನ ಮೌಲ್ಯ ಪ್ರತಿ ಚದರಿ ಮೀಟರ್ಗೆ ₹1,200 ರಿಂದ ₹2,400. ಪ್ರಸ್ತಾಮಿತ ಬೆಲೆ ₹1,320 ರಿಂದ ₹2,880, ಸಕ್ಷಮ ಪ್ರಾಧಿಕಾರದಿಂದ ವಸತಿ ನಿವೇಶನದ ಮೌಲ್ಯ ಪ್ರತಿ ಚರದ ಮೀಟರ್ಗೆ ಪ್ರಸ್ತಾಪಿತ ಬೆಲೆ ₹2,640 ರಿಂದ ₹5,760 ಎಂದು ನಿಗದಿಪಡಿಸಲಾಗಿದೆ.

ಈ ಕೈಗಾರಿಕೆ ಅಗತ್ಯವಿತ್ತ ? ತಾಲ್ಲೂಕಿನ ಬಾಶೆಟ್ಟಿಹಳ್ಳಿಯಲ್ಲಿ 80ರ ದಶಕದಲ್ಲಿ ಆರಂಭವಾದ ಕೈಗಾರಿಕಾ ಪ್ರದೇಶ ನಾಲ್ಕು ಬಾರಿ ವಿಸ್ತರಣೆಯಾಗಿ ಈಗ ಸುಮಾರು 2,500 ಎಕರೆಗೆ ಬಂದು ನಿಂತಿದೆ. ಹಾಗೆಯೇ ಹುಲಿಕುಂಟೆ ಗಡಿ ಭಾಗಕ್ಕೆ ಹೊಂದಿಕೊಂಡಂತೆಯೇ ನೆಲಮಂಗಲ ತಾಲ್ಲೂಕಿನ ದಾಬಸ್ಪೇಟೆ, ಶಿವಗಂಗೆ ಸಮೀಪವು ಸುಮಾರು 1,500 ಎಕರೆ ಪ್ರದೇಶದಲ್ಲಿ ಕೈಗಾರಿಕೆ ಸ್ಥಾಪನೆಯಾಗಿದೆ. ಈ ಇಷ್ಟೂ ಪ್ರದೇಶದಲ್ಲೂ ಭೂ ಸ್ವಾಧೀನವಾಗಿ ದಶಕಗಳು ಕಳೆದಿದ್ದರು ಇನ್ನು ಪೂರ್ಣಪ್ರಮಾಣದಲ್ಲಿ ಕೈಗಾರಿಕೆಗಳು ಕಾರ್ಯಾರಂಭ ಮಾಡದೇ ಜಮೀನು ಖಾಲಿಯಾಗಿಯೇ ಉಳಿದಿವೆ. ವಾಸ್ತವ ಸ್ಥಿತಿ ಹೀಗಿರುವಾಗ ತಾಲ್ಲೂಕಿಗೆ ಮತ್ತೊಂದು ಕೈಗಾರಿಕಾ ಪ್ರದೇಶ ಸ್ಥಾಪನೆ ಅಗತ್ಯ ಇತ್ತ ಎನ್ನುವ ಪ್ರಶ್ನೆ ಈಗ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. 

ಹುಲಿಕುಂಟೆ, ಓಬಳಾಪುರ ವ್ಯಾಪ್ತಿಯಲ್ಲಿ ಬಹುತೇಕ ಜನ ಕೃಷಿಯನ್ನೇ ನಂಬಿ ಬದುಕು ನಡೆಸುತ್ತಿರುವ ಸಣ್ಣ ಹಿಡುವಳಿದಾರ ಕುಟುಂಬಗಳ ಹಾಗೂ ಸಂಖ್ಯೆಯೇ ಹೆಚ್ಚಾಗಿದೆ. ಇಂತಹ ಪ್ರದೇಶದಲ್ಲಿ ಕೃಷಿಕರನ್ನು ಒಕ್ಕಲೆಬ್ಬಿಸಿ ಕೈಗಾರಿಕೆ ಸ್ಥಾಪನೆ ಮಾಡುವ ಅಗತ್ಯವಾದರು ಏನಿದೆ ಎನ್ನುವುದು ಈ ಭಾಗದ ರೈತರ ಪ್ರಶ್ನೆಯಾಗಿದೆ.

ಎತ್ತಿನಹೊಳೆ ಕುಡಿಯುವ ನೀರಿಗು ತೊಂದರೆ: ತಾಲ್ಲೂಕಿನ ಸಾಸಲು ಹೋಬಳಿಯ ಗರುಡಗಲ್ಲು, ಮಂಚೇನಹಳ್ಳಿ ಸಮೀಪ ಕುಡಿಯುವ ನೀರಿನ ಎತ್ತಿನಹೊಳೆ ಯೋಜನೆಯಿಂದ ಬರುವ ನೀರನ್ನು ಸಂಗ್ರಹಿಸಲು ಬೈರಗೊಂಡ್ಲು ಜಲಾಶಯ ನಿರ್ಮಿಸುವ ಕಾಮಗಾರಿ ಪ್ರಗತಿಯಲ್ಲಿದೆ. ಹುಲಿಕುಂಟೆ ಸುತ್ತಮುತ್ತಲಿನ ಪ್ರದೇಶದಲ್ಲಿ ಮಳೆಯಾದರೆ ನೀರು ಹರಿದು ಹೋಗುವುದೇ ಈ ಜಲಾಶಯದ ಕಡೆಗೆ. ಇಂತಹ ಪ್ರದೇಶದಲ್ಲೇ ಕೈಗಾರಿಕೆಗಳು ಸ್ಥಾಪನೆಯಾದರೆ ಇಲ್ಲಿಂದ ಹರಿದು ಬರುವ ಕೊಳಚೆ ನೀರು ಎತ್ತಿನಹೊಳೆಯ ನೀರು ಸಂಗ್ರಹಣೆ ಮಾಡುವ ಬೈರಗೊಂಡ್ಲು ಜಲಾಶಯಕ್ಕೆ ಹೋಗಿ ಸೇರುವ ಅಪಾಯಗಳಿವೆ. ಹೀಗಾಗಿ ಕುಡಿಯುವ ನೀರಿನ ಯೋಜನೆಗು ಕುತ್ತುಬರಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.  

ನ.22 ರಂದು ರೈತರ ಸಭೆ: ಕೈಗಾರಿಕೆಗಳು ಸ್ಥಾಪನೆಯಾದರೆ ತಾಲ್ಲೂಕಿನ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಸ್ಥಳಿಯರಿಗೆ ಉದ್ಯೋಗ ದೊರೆಯಲಿದೆ ಎನ್ನುವ ವಾದಗಳು ಸಹ ಇವೆ. ಆದರೆ ಈಗಾಗಲೇ ತಾಲ್ಲೂಕಿನಲ್ಲಿ ಸ್ಥಾಪನೆಯಾಗಿರುವ ಬಹುತೇಕ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ದೊರೆಯದಾಗಿದೆ. ಇಂತಹ ಅತಂತ್ರ ಸ್ಥಿತಿಯಲ್ಲಿ ಮೊತ್ತೊಂದು ಕೈಗಾರಿಕೆ ಸ್ಥಾಪನೆ ಅಗತ್ಯ ಇದೆಯ ಅಥವಾ ಬೇಡವ ಎನ್ನುವ ಕುರಿತಂತೆ ನ.22 ರಂದು ಬೆಳಿಗ್ಗೆ 11 ಗಂಟೆಗೆ ಹುಲಿಕುಂಟೆ ಗ್ರಾಮದಲ್ಲಿ ಸಭೆ ನಡೆಯಲಿದೆ.

ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]