ದೊಡ್ಡಬಳ್ಳಾಪುರ: ರೈತರ ಹಾಲಿನ ಖರೀದಿ ಬೆಲೆ ಹೆಚ್ಚಿಸಲು ಆಗ್ರಹ

ದೊಡ್ಡಬಳ್ಳಾಪುರ: ಲಾಕ್‌ಡೌನ್ ಸಂದರ್ಭದಲ್ಲಿ ರೈತರಿಂದ ಖರೀದಿಸುವ ಹಾಲಿನ ಬೆಲೆಯಲ್ಲಿ ಖಡಿತಮಾಡಲಾಗಿರುವ ₹4ಗಳನ್ನು ರೈತರ ಖಾತೆಗೆ ಜಮಾ ಮಾಡದೇ ಇದ್ದರೆ ಹಾಗೂ ರೈತರಿಂದ ಖರೀದಿಸುವ ಹಾಲಿನ ಬೆಲೆಯನ್ನು ಹೆಚ್ಚು ಮಾಡದೇ ಇದ್ದರೆ ಹೋರಾಟ ನಡೆಸಲಾಗುವುದು ಎಂದು ಕೆಎಂಎಫ್‌ ನಿರ್ದೇಶಕ ಬಿ.ಸಿ.ಆನಂದ್‌ಕುಮಾರ್‌ ಹೇಳಿದರು.

ಅವರು ನಗರದ ಬೆಸೆಂಟ್‌ ಪಾರ್ಕ್‌ನಲ್ಲಿ ಬುಧವಾರ ನಡೆದ ಬಮೂಲ್‌ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಪ್ರಾದೇಶಿಕ ಸಭೆಯಲ್ಲಿ ಮಾತನಾಡಿದರು.

ಲಾಕ್‌ಡೌನ್‌ ಸಂದರ್ಭದಲ್ಲೂ ಸಹ ರೈತರು, ಸಹಕಾರ ಸಂಘದ ಹಾಗೂ ಒಕ್ಕೂಟದ ಸಿಬ್ಬಂದಿ ಕೆಲಸ ನಿರ್ವಹಸಿದ್ದಾರೆ. ಆದರೆ ರೈತರಿಂದ ಖರೀದಿಸುವ ಹಾಲಿಗೆ ಮಾತ್ರ ಬೆಲೆ ಕಡಿತಮಾಡಲಾಗಿದೆ.ರೈತರು ಪ್ರಶ್ನೆ ಮಾಡಿಲ್ಲ ಅಂದ ಮಾತ್ರಕ್ಕೆ ಇದು ರೈತರ ಅಸಹಾಯಕತೆ ಎಂದು ಭಾವಿಸದೆ ಈಗ ಬೆಲೆ ಹೆಚ್ಚು ಮಾಡಬೇಕು. ಒಕ್ಕೂಟದಲ್ಲಿ ಕೆಲಸ ಮಾಡುವ ಅಧಿಕಾರಿಗಳ ಸಂಬಳ ಮಾತ್ರ ಕಡಿಮೆಯಾಗಿಲ್ಲ.ಆದರೆ ರೈತರ ಹಾಲಿನ ಬೆಲೆ ಏಕೆ ಕಡಿತಮಾಡಬೇಕು ಎಂದು ಪ್ರಶ್ನಿಸಿದರು.

ಸದ್ಯಕ್ಕೆ 8 ಸಾವಿರ ಟನ್‌ ಹಾಲಿನ ಪುಡಿ ದಾಸ್ತಾನು ಇದೆ. ಇದರಿಂದ ರಾಜ್ಯದ ಎಲ್ಲಾ ಮಹಾಮಂಡಲಗಳು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿವೆ. ಇದರ ಪರಿಣಾಮ ಮುಂದಿನ ದಿನಗಳಲ್ಲಿ ರೈತರ ಮೇಲೆ ಬೀರಲಿದೆ. ಗ್ರಾಮೀಣ ಭಾಗದ ಜನರ ಆರ್ಥಿಕ ಶಕ್ತಿಯಾಗಿರುವ ಹೈನುಗಾರಿಕೆಯನ್ನು ಉಳಿಸಿಕೊಳ್ಳುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಹಾಲು ಒಕ್ಕೂಟಗಳ ನೆರವಿಗೆ ಬಂದಂತೆ ಈಗಲು ಸಹ ಮುಖ್ಯಮಂತ್ರಿಗಳ ರೈತರ ನೆರವಿಗೆ ಬರಬೇಕು  ಎಂದು ಒತ್ತಾಯಿಸಿದರು.

ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಜಾರಿಗೆ ತರಲಾದ ಕ್ಷೀರಭಾಗ್ಯ ಯೋಜನೆಯಿಂದ ರೈತರ ಹಾಲಿಗೆ ಬೇಡಿಕೆ ಹೆಚ್ಚಾಗಿತ್ತು. ಅಲ್ಲದೆ ಪ್ರತಿ ಲೀಟರ್‌ ಹಾಲಿಗೆ ₹3 ಪ್ರೋತ್ಸಾಹವನ್ನು ನೀಡಿದ್ದರು ಎಂದರು.

ಈ ಬಾರಿ ತಾಲ್ಲೂಕಿನಲ್ಲಿ ರಾಗಿ ಇಳುವರಿ ಉತ್ತಮವಾಗಿದೆ. ಇದರಿಂದಾಗಿ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಖರೀದಿ ಕೇಂದ್ರ ತೆರೆಯುವಂತೆ ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಮನವಿ ಮಾಡಿದ್ದರು ಯಾವುದೇ ರೀತಿಯ ಸ್ಪಂಧನೆ ಇಲ್ಲದಾಗಿದೆ. ಅಲ್ಲದೆ ಒಂದು ಎಕರೆಗೆ ಇಂತಷ್ಟೇ ಚೀಲ ರಾಗಿ ಖರೀದಿ ಮಾಡಬೇಕು ಎನ್ನುವ ಮಿತಿಯನ್ನು ಹಾಕಿರುವುದು ಸರಿಯಲ್ಲ ಎಂದರು.

ತಾಲ್ಲೂಕಿನ ರೈತರು ಸರಬರಾಜು ಮಾಡುವ ಹಾಲಿಗೆ ಪ್ರತಿ ತಿಂಗಳು ₹11 ಕೋಟಿ ಖರೀದಿ ಹಣ ಹಾಗೂ ಸಹಾಯಧನವಾಗಿ ₹2 ಕೋಟಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ತಾಲ್ಲೂಕಿನಲ್ಲಿ ಹಾಲಿನ ಟೆಟ್ರಾಪ್ಯಾಕ್‌ ಹಾಗೂ ಪಶು ಆಹಾರ ತಯಾರಿಕಾ ಘಟಕ ಸ್ಥಾಪನೆಗೆ ಭೂಮಿ ನೀಡಲಾಗುವುದು ಕೆಎಂಎಫ್‌ ವತಿಯಿಂದ ಎರಡೂ ಘಟಕಗಳ ಸ್ಥಾಪನೆ ಮಾಡಬೇಕು ಎಂದರು.

ಇದೇ ಸಂದರ್ಭದಲ್ಲಿ ಇತ್ತೀಚೆಗಷ್ಟೇ ನಿಧನರಾದ ತಾಲ್ಲೂಕಿನ ಬಮೂಲ್‌ ಮಾಜಿ ನಿರ್ದೇಶಕ ಎನ್‌.ಹನುಮಂತೇಗೌಡ ಅವರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು. ಸಭೆಯಲ್ಲಿ ಬಮೂಲ್ ಅಧ್ಯಕ್ಷ ನರಸಿಂಹಮೂರ್ತಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ ಜಯರಾಂ, ಟಿಎಪಿಎಂಸಿಎಸ್‌ ಅಧ್ಯಕ್ಷ ಡಿ.ಸಿದ್ದರಾಮಣ್ಣ, ಕಾಂಗ್ರೆಸ್‌ ಮುಖಂಡರಾದ ತಿ.ರಂಗರಾಜು, ಬಿ.ಎಚ್‌.ಕೆಂಪಣ್ಣ, ಬಮೂಲ್‌ ಪ್ರಧಾನ ವ್ಯವಸ್ಥಾಪಕ ಬಿ.ಕೆ.ಜಗದೀಶ್‌, ವ್ಯವಸ್ಥಾಪಕ ಮಾಯಣ್ಣ, ಬಮೂಲ್‌ ಕಲ್ಯಾಣ ನಿಧಿ ಟ್ರಸ್ಟ್ ಸಿಇಒ ಡಾ.ಪ್ರಸನ್ನಕುಮಾರ್‌,ದೊಡ್ಡಬಳ್ಳಾಪುರ ಹಾಲು ಶೀಥಲ ಕೇಂದ್ರದ ವ್ಯವಸ್ಥಾಪಕ ಡಾ.ಗೋಪಾಲಕೃಷ್ಣ ಇದ್ದರು.

ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]