ಯುವ ಮತದಾರರ ನೋಂದಣಿಗೆ ಅಗತ್ಯ ಕ್ರಮವಹಿಸಿ: ಡಾ.ಬಿ.ಆರ್.ಮಮತಾ

ಬೆಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಯುವ ಮತದಾರರನ್ನು ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡಿಸುವ ಸಂಬಂಧ 01.01.2003ರ ಅರ್ಹತಾ ದಿನಾಂಕದಂತೆ 01.01.2021ಕ್ಕೆ 18 ವರ್ಷ ತುಂಬುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯುವ ಮತದಾರರ ನೋಂದಣಿಗೆ ಅಗತ್ಯ ಕ್ರಮ ವಹಿಸಿ ಎಂದು ಸಕಾಲ ಮಿಷನ್‌ನ ಅಪರ ನಿರ್ದೇಶಕರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾರರ ಪಟ್ಟಿಯ ವೀಕ್ಷಕರಾದ(Roll Observer) ಡಾ.ಬಿ.ಆರ್.ಮಮತಾ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ “ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2021ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ತಯಾರಿಸುವಿಕೆ ಹಾಗೂ ಸಂಬಂಧಿತ ಕಾರ್ಯಗಳ ಕುರಿತ ಸಭೆಯ” ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

18 ವರ್ಷ ಪೂರೈಸಿರುವ ಯುವ ಮತದಾರರ ನೋಂದಣಿ ನಮ್ಮ ಗುರಿಯಾಗಿದ್ದು, ಕಾಲೇಜಿನ ಪ್ರಾಂಶುಪಾಲರೊಂದಿಗೆ ಮಾತನಾಡಿ, ಹೊಸದಾಗಿ ಮತದಾರರ ಪಟ್ಟಿಗೆ ಸೇರಬೇಕಿರುವ ಪಿ.ಯು.ಸಿ. ದ್ವಿತೀಯ ವರ್ಷ ಹಾಗೂ ಪದವಿ ಪ್ರಥಮ ವರ್ಷ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ನೋಂದಣಿ ಮಾಡಿಸಲು ನಮೂನೆ-6ರ ಅರ್ಜಿಯನ್ನು ಭರ್ತಿ ಮಾಡಿ, ಸಲ್ಲಿಸಲು ತಿಳಿಸಿ ಎಂದರಲ್ಲದೆ, ಮತದಾರರ ಪಟ್ಟಿಗೆ ಹೊಸದಾಗಿ ಸೇರಿಸುವ ಹಾಗೂ ಹೆಸರು ತೆಗೆದು ಹಾಕಬೇಕಿರುವುದರ ಎಚ್ಚರಿಕೆವಹಿಸಿ ಕಾರ್ಯವಹಿಸಿ ಎಂದರು.

ನೆಲಮಂಗಲ ತಾಲ್ಲೂಕಿನಲ್ಲಿ ಕೈಗಾರಿಕೆಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಸಲ್ಲಿಸುವ ಅರ್ಜಿಗಳನ್ನು ಸರಿಯಾಗಿ ಪರಿಶೀಲಿಸಿ, ನೋಂದಣಿ ಮಾಡಿಕೊಳ್ಳುವಂತೆ ತಿಳಿಸಿದರಲ್ಲದೆ, ಕೋವಿಡ್-19 ಹಿನ್ನೆಲೆ ವಲಸೆ ಹೋಗುವವರು ಹೆಚ್ಚಾಗಿರುವ ಕಾರಣ ಸೂಕ್ತ ಪರಿಶೀಲನೆಯೊಂದಿಗೆ ಮತದಾರರ ನೋಂದಣಿಗೆ ಕ್ರಮವಹಿಸಿ ಎಂದು ತಿಳಿಸಿದರು.

ಕೋವಿಡ್-19 ಕಾರಣದಿಂದಾಗಿ ಮತದಾರರ ನೋಂದಣಿ ಬಗ್ಗೆ ಹೆಚ್ಚಿನ ಪ್ರಚಾರ ನಡೆಸಲು ಸಾಧ್ಯವಾಗದಿರುವ ಕಾರಣ ಜಿಲ್ಲೆಗೆ ಒಬ್ಬರು ಯುವ ಐಕಾನ್ ಆಯ್ಕೆ ಮಾಡಿ ಯುವ ಜನರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಪ್ರೇರಿತರಾಗುವಂತೆ ಜಾಗೃತಿ ಮೂಡಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಸ್ಥಳೀಯ ಮತಗಟ್ಟೆಗಳು, ಅಂಗನವಾಡಿ ಕೇಂದ್ರಗಳು, ಸರ್ಕಾರಿ ಶಾಲಾ-ಕಾಲೇಜುಗಳು, ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ Know Your BLO ಕುರಿತು ಫಲಕ ಪ್ರದರ್ಶಿಸಲು ತಿಳಿಸಿದರು ಹಾಗೂ ಮತಗಟ್ಟೆ ಅಧಿಕಾರಿ(ಬಿ.ಎಲ್.ಓ.)ಗಳಿಗೆ ಪರಿಕರಗಳನ್ನು ಪೂರೈಸಲು ತಿಳಿಸಿದರಲ್ಲದೆ, ಸ್ವೀಪ್ ಚಟುವಟಿಕೆಗಳ ಕುರಿತು ಛಾಯಾಚಿತ್ರ ಮತ್ತು ದೃಶ್ಯೀಕರಣ ಮಾಡುವಂತೆ ತಿಳಿಸಿದರಲ್ಲದೆ, ಚುನಾವಣಾ ದೂರುಗಳ ನೋಂದಣಿ ಪುಸ್ತಕವನ್ನು ಸರಿಯಾಗಿ ನಿರ್ವಹಿಸುವಂತೆ ತಿಳಿಸಿದರು. 

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಮಾತನಾಡಿ ಜಿಲ್ಲಾದ್ಯಂತ ಮತದಾರರ ಮಿಂಚಿನ ನೋಂದಣಿಯನ್ನು ಪರಿಣಾಮಕಾರಿಯಾಗಿ ನಡೆಸಲು ಅಧಿಕಾರಿಗಳಿಗೆ ತಿಳಿಸಿದರಲ್ಲದೆ, ಕೋವಿಡ್-19 ಕಾರಣದಿಂದ ಹೊರಾಂಗಣ ಕಾರ್ಯಕ್ರಮ ನಡೆಸಲಾಗಿಲ್ಲವಾದರೂ, ಮೊಬೈಲ್ ಬಳಸಿ, ಸಾಮಾಜಿಕ ಮಾಧ್ಯಮಗಳ ಮೂಲಕ ಮತದಾರರ ನೋಂದಣಿ ಕುರಿತು ಅರಿವು ಮೂಡಿಸಲಾಗುವುದು ಎಂದು‌ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್.ಎಮ್.ನಾಗರಾಜ ಅವರು ಮಾತನಾಡಿ, ಡಿಸೆಂಬರ್ 7 ರಿಂದ ಮತದಾರರ ನೋಂದಣಿಗೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಚುನಾವಣಾ ಆಯೋಗ ಸೂಚಿಸಿದ್ದು, ಪದವಿ ಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಪ್ರಬಂಧ, ಭಾಷಣ, ರಸಪ್ರಶ್ನೆ ಸ್ಪರ್ಧೆ ಇನ್ನಿತರ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜಾಗೃತಿ ಮೂಡಿಸುವುದಾಗಿ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಜಗದೀಶ್. ಕೆ.ನಾಯಕ್ ಅವರು ಮಾತನಾಡಿ ಯಾದೃಚ್ಛಿಕವಾಗಿ(Random) ಮನೆ-ಮನೆಗೆ ಭೇಟಿ ನೀಡಿ, ಮತದಾರರ ಪಟ್ಟಿ ಪರಿಷ್ಕರಿಸಲಾಗುತ್ತಿದ್ದು, ಸೇವಾ ಸಿಂಧೂ ಕೇಂದ್ರಗಳ ಮೂಲಕ ಮತದಾರರ ನೋಂದಣಿಗೆ ಅರ್ಜಿಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ನಗರಾಭಿವೃದ್ಧಿ ಯೋಜನಾ ಕೋಶದ ನಿರ್ದೇಶಕಿ ಸುಮಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕ ಎನ್.ಎಸ್.ಮಹೇಶ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಮಾರೇಗೌಡ ಸೇರಿದಂತೆ ಜಿಲ್ಲೆಯ ತಹಶೀಲ್ದಾರ್‌ಗಳು, ತಾಲ್ಲೂಕು ಕಾರ್ಯ ನಿರ್ವಹಣಾಧಿಕಾರಿಗಳು, ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸಭೆಯ ನಂತರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕರಾದ ಡಾ.ಬಿ.ಆರ್.ಮಮತಾ ಅವರು ದೇವನಹಳ್ಳಿ ತಾಲ್ಲೂಕಿನ ಕುಂದಾಣ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಜಿಲ್ಲೆಯ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2021ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ತಯಾರಿಸುವಿಕೆ ಹಾಗೂ ಸಂಬಂಧಿತ ಕಾರ್ಯಗಳ ಕುರಿತು ಮತಗಟ್ಟೆ ಅಧಿಕಾರಿಗಳೊಂದಿಗೆ ಸಮಾಲೋಚಿಸಿದರು.

ಕ್ಷಣ ಕ್ಷಣದ ತಾಜಾ ಸುದ್ದಿ, ಮಾಹಿತಿಗಾಗಿ Harithalekhaniಯನ್ನು Facebook / Twitterಗಳಲ್ಲಿ ಫಾಲೋ ಮಾಡಿ.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]