ಮಾಹಿತಿ ಹಕ್ಕಿನ ಹಿಕ್ಮತ್ತು / ಬೆತ್ತಲೆ ಸತ್ಯ-ಸುಳ್ಳಿನ ಸೆರಗು

RTI……ಹೀಗಂದೊಡನೆ ಸರ್ಕಾರಿ ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ಒಮ್ಮೆ ಭಯದ ಢವ ಢವ ಶುರುವಾಗಿ ಬೆವರಿಳಿದುಬಿಡುತ್ತದೆ. 2005 ರ ಅಕ್ಟೋಬರ್‌ನಲ್ಲಿ ಅಂದಿನ ಯುಪಿಎ ಸರ್ಕಾರವು ಕೈಗೊಂಡ ಅತ್ಯಂತ ಪ್ರಶಂಸನೀಯ ಹಾಗೂ ಮಹತ್ತರವಾದ ಕಾಯಿದೆಯೇ ಮಾಹಿತಿ ಹಕ್ಕು ಕಾಯಿದೆ / Right To Information (RTI).

ಬಹುಶಃ   ಇಂದಿಗೂ  ಯುಪಿಎ ಬಗ್ಗೆ  ಅದರ ವಿರೋಧಿಗಳೂ ಸಹ ಮೆಚ್ಚಲು ಇರುವ ಹಲವು ಕಾರಣಗಳಲ್ಲಿ ಈ ಮಾಹಿತಿ ಹಕ್ಕು ಕಾಯಿದೆಯ ಅನುಷ್ಠಾನ ಎಂಬುದು ಅಗ್ರ ಪಂಕ್ತಿಯಲ್ಲಿ ನಿಲ್ಲುತ್ತದೆ. ಯಾಕೆಂದರೆ, 2005 ಕ್ಕೂ ಮುಂಚೆ ಭಾರತದ ಕೇಂದ್ರ ಹಾಗೂ ಯಾವುದೇ ರಾಜ್ಯ ಸರ್ಕಾರಗಳ ಒಂದಿಂಚೂ ಮಾಹಿತಿ ಜನಸಾಮಾನ್ಯರಿಗೆ ತಿಳಿಯಲಾಗುತ್ತಿರಲಿಲ್ಲ.

2005 ರ ಅಕ್ಟೋಬರ್ ನಲ್ಲಿ ಅಂದಿನ ಕೇಂದ್ರದ ಯುಪಿಎ ಸರ್ಕಾರವು ಮಾಹಿತಿ ಹಕ್ಕು ಕಾಯಿದೆ ಜಾರಿಗೆ ತಂದ ನಂತರ ಶಾಸಕಾಂಗ ಹಾಗೂ ಕಾರ್ಯಾಂಗ ಸಂಪೂರ್ಣವಾಗಿ ಮತ್ತು ನ್ಯಾಯಾಂಗ ಭಾಗಶಃ ಈ ಕಾಯಿದೆ ವ್ಯಾಪ್ತಿಯಲ್ಲಿ ಸೇರಿತು. ತದ ನಂತರದಲ್ಲಿ ಅಂದಿನ ಕೇಂದ್ರ ಯುಪಿಎ ಸರ್ಕಾರದ ಹಲವಾರು ಬ್ರಹ್ಮಾಂಡ ಭ್ರಷ್ಟಾಚಾರಗಳು ಇದೇ RTI ಅಡಿಯಲ್ಲಿ ಒಂದೊಂದಾಗಿ ಬಹಿರಂಗಗೊಳ್ಳತೊಡಗಿದವು. ಅದೇ ಸಮಯಕ್ಕೆ ಭಾರತದ ಸುದ್ದಿ ಮಾಧ್ಯಮ ಕ್ಷೇತ್ರದಲ್ಲಿ ಮಿಂಚಿನ ಕ್ರಾಂತಿಯ ಅಲೆಗಳೆದ್ದು ದೈನಂದಿನ ಚರ್ಚಾ ಕಾರ್ಯಕ್ರಮಗಳನ್ನು ಒಳಗೊಂಡ ಅನೇಕಾನೇಕ ವಾಹಿನಿಗಳು ಶುರುವಾದವು. ಇದೊಂತರ ಸುದ್ದಿಗಳ ಬೆಂಕಿಗೆ ಚಾನಲ್‌ಗಳ ಬಿರುಗಾಳಿ ಸೇರಿ ದೇಶಾದ್ಯಂತ ಕೇಂದ್ರ ಸರ್ಕಾರದ ಭ್ರಷ್ಟಾಚಾರದ ಪ್ರಕರಣಗಳ ಕಾಳ್ಗಿಚ್ಚು ಮನೆಮನೆಗೂ ಹರಡಿತು. ಒಂದು ರೀತಿಯಲ್ಲಿ ಯುಪಿಎ ಸರ್ಕಾರ ತಾನೇ ತೋಡಿದ ಹಳ್ಳಕ್ಕೆ ತಾನೇ ಬಿದ್ದಿತ್ತು. ಅದೇನಾದರೂ ಆಗಲಿ, ಯುಪಿಎ ಸರ್ಕಾರ ತಂದ ( ಈ ಕಾಯಿದೆಯ ಪ್ರಸ್ತಾವನೆ ಹಿಂದಿನ ವಾಜಪೇಯಿಯವರ ಸರ್ಕಾರದ್ದಾದರೂ  ಅನುಷ್ಠಾನಕ್ಕೆ ತಂದಿದ್ದು ಮಾತ್ರ 2005 ರಲ್ಲಿ ಅಸ್ತಿತ್ವದಲ್ಲಿದ್ದ ಯುಪಿಎ ಸರ್ಕಾರ) ಈ RTI ಕಾಯಿದೆ ಎಂಬುದು ನಿಜಕ್ಕೂ ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಒಂದು ಕ್ರಾಂತಿಕಾರಿ ನಿರ್ಧಾರವೆಂದೇ ಬಣ್ಣಿಸಲ್ಪಟ್ಟಿದೆ. ಆ ಕಾರಣಕ್ಕಾಗಿ ನಾವು ಅಂದಿನ ಯುಪಿಎ ಸರ್ಕಾರವನ್ನು ಶ್ಲಾಘಿಸಲೇಬೇಕು. ಇಂತಹ ಉಪಯೋಗಿ ಕಾಯಿದೆಯು ಇತ್ತೀಚಿನ ದಿನಗಳಲ್ಲಿ ದುರುಪಯೋಗವಾಗುತ್ತಿದೆ ಎಂಬ ಕೂಗು ಕೇಳಿಬರುತ್ತಿದೆ. ಯಾಕೆಂದರೆ, “ಬಹುತೇಕ” ಮಾಹಿತಿ ಹಕ್ಕು ಅರ್ಜಿಗಳು ಸರ್ಕಾರಿ ಅಧಿಕಾರಿಗಳನ್ನು ಹಾಗೂ ರಾಜಕಾರಣಿಗಳನ್ನು ಹೆದರಿಸಲೋ, ಹಣ ಪೀಕಲೋ, ಅಥವಾ ಸ್ವಹಿತಾಸಕ್ತಿ ಸಾಧಿಸಲೋಸುಗವಾಗಿಯೋ ದಾಖಲಾಗುತ್ತಿವೆ ಎಂಬುದು ಬೆತ್ತಲೆ ಸತ್ಯ.

ಇದನ್ನು ಪುಷ್ಟೀಕರಿಸುವ ಹಲವಾರು ಪ್ರಕರಣಗಳು ಆಗಿಂದಾಗ್ಗೆ ನಡೆಯುತ್ತಿರುತ್ತವೆ. ಯಾರೋ ಮಾಡಿದ ತಪ್ಪುಗಳಿಗೆ ಇನ್ಯಾರದ್ದೋ ತಲೆದಂಡವಾಗಿರುವ ಉದಾಹರಣೆಗಳೂ ನಮ್ಮ ಕಣ್ಣ ಮುಂದಿವೆ. ಇದನ್ನೆಲ್ಲಾ ಮನಗಂಡ ಮಾಹಿತಿ ಹಕ್ಕು ಆಯೋಗವು ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕುವ ಸಲುವಾಗಿ ಹಲವಾರು ಕಠಿಣ ನಿಯಮಗಳನ್ನು ತಂದರೂ ಸಂಪೂರ್ಣವಾಗಿ ತೊಡೆದುಹಾಕಲು ಸಾಧ್ಯವಾಗಲಿಲ್ಲ. ಪ್ರಸ್ತುತ ಅನೇಕ ಮಾಹಿತಿ ಹಕ್ಕು ಕಾರ್ಯಕರ್ತರು ಹುಟ್ಟಿಕೊಂಡಿದ್ದಾರೆ. ಅವರೆಲ್ಲರೂ ‘ಕೇವಲ ಮಾಹಿತಿಗಾಗಿ ಅರ್ಜಿ’ ಹಾಕ್ತಾರೆ ಅಂದುಕೊಂಡರೆ ಅದು ನಮ್ಮ ಭ್ರಮೆ. ಕೆಲವು ಹಣಬಾಕರು, ಸೌಲಭ್ಯಬಾಕರು ಮಾಹಿತಿ ಹಕ್ಕು ಕಾಯಿದೆಯನ್ನು ದುರುಪಯೋಗ ಮಾಡಿಕೊಂಡು ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿರುವುದು ಗುಟ್ಟಾಗಿ ಉಳಿದಿಲ್ಲ.   

ಭ್ರಷ್ಟಾಚಾರಿಗಳನ್ನು ಬಯಲಿಗೆಳೆಯುವ ಸಲುವಾಗಿ ಪ್ರಾಣ ಪಣಕ್ಕಿಟ್ಟು ಕಾನೂನಾತ್ಮಕ ಹೋರಾಟ ನಡೆಸುವ ಅಸಲಿ ನ್ಯಾಯಯುತ ಮಾಹಿತಿ ಹಕ್ಕು ಕಾರ್ಯಕರ್ತರನ್ನು ಬೆಂಬಲಿಸುತ್ತಾ ,,, ಇನ್ನು ಮುಂದೆಯಾದರೂ ಮಾಹಿತಿ ಹಕ್ಕು ಕಾಯಿದೆಯು ಭ್ರಷ್ಟಾಚಾರದ ಮುಖವಾಡ ಕಳಚಲು ಮಾತ್ರ ಬಳಕೆಯಾಗಲಿ ಹಾಗೂ ಈ ನಿಟ್ಟಿನಲ್ಲಿ ಮಾಹಿತಿ ಹಕ್ಕು ಆಯೋಗವು ಕಾಯಿದೆಯನ್ನು ಮಾರ್ಪಾಡು ಮಾಡಿ ಕಠಿಣ ನಿಯಮಗಳನ್ನು ತರಲಿ ಎಂದು ಆಶಿಸುತ್ತಾ….

       ಇಂತಿ ನಿಮ್ಮವ ಜಿ.ಎನ್.ಪ್ರದೀಪ್

ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]