ನೆರೆ ಹಾನಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಕೇಂದ್ರ ಅಧ್ಯಯನ ತಂಡ

ಕಲಬುರಗಿ: ಕಳೆದ ಸೆಪ್ಟೆಂಬರ್ ಮತ್ತು ಅಕ್ಟೋಬರ್ ಮಾಹೆಯಲ್ಲಿ ಜಿಲ್ಲೆಯಲ್ಲಿ ಸುರಿದ ದಾಖಲೆ ಮಳೆ ಮತ್ತು ಭೀಮಾ ನದಿಯ ಭೀಕರ ಪ್ರವಾಹದಿಂದ ಉಂಟಾದ ನೆರೆ ಹಾನಿ ಕುರಿತು ಅಧ್ಯಯನಕ್ಕೆ ಆಗಮಿಸಿದ ಅಂತರ ಸಚಿವಾಲಯದ ಕೇಂದ್ರ ಅಧ್ಯಯನ ತಂಡವು ಸೋಮವಾರ ಇಲ್ಲಿನ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಹಾನಿಗೆ ಸಂಬಂಧಿಸಿದಂತೆ ವಿವರವಾದ ಮಾಹಿತಿ ಪಡೆದುಕೊಂಡರು.

ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ (ಎನ್.ಡಿ.ಎಂ.ಎ.) ರಮೇಶಕುಮಾರ ಘಂಟಾ ನೇತೃತ್ವದ ದ್ವಿ-ಸದಸ್ಯ ತಂಡದಲ್ಲಿ ಕೇಂದ್ರ ಹಣಕಾಸು ಸಚಿವಾಲಯದ ವೆಚ್ಚ ವಿಭಾಗದ ನಿರ್ದೇಶಕ ಡಾ. ಭರ್ತೇಂದು ಕುಮಾರ್ ಅವರು ಅಧ್ಯಯನಕ್ಕೆ ಆಗಮಿಸಿದ್ದರು.

ಸಭೆಗೂ ಮುನ್ನ ಪ್ರವಾಹ ಪರಿಸ್ಥಿತಿಯ ನೈಜ ಚಿತ್ರಣ ತಂಡದ ಮುಂದಿಡಲು ಕೃಷಿ, ಲೋಕೋಪಯೋಗಿ, ಪಂಚಾಯತ್ ರಾಜ್, ಗ್ರಾಮೀಣ ಕುಡಿಯುವ ನೀರು, ತೋಟಗಾರಿಕೆ ಇಲಾಖೆಯಿಂದ ಹಾನಿಯಾದ ಛಾಯಾಚಿತ್ರಗಳನ್ನು ಅಧ್ಯಯನ ತಂಡಕ್ಕೆ ತೋರಿಸಲಾಯಿತು.

ತದನಂತರ ನಡೆದ ಸಭೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಜಿಲ್ಲೆಯ ಪ್ರವಾಹ ಪರಿಸ್ಥಿತಿ ವಿವರಿಸುತ್ತಾ ಜಿಲ್ಲೆಯಲ್ಲಿ ಸೆಪ್ಟೆಂಬರ್‍ನಲ್ಲಿ ವಾಡಿಕೆಗಿಂತ ಶೇ.120 ಮತ್ತು ಅಕ್ಟೋಬರ್ ನಲ್ಲಿ ಶೇ.933 ಅಧಿಕ ಮಳೆಯಾಗಿದೆ. ಇದು ವಾಡಿಕೆಗಿಂತ ಹತ್ತು ಪಟ್ಟು ಹೆಚ್ಚಳವಾಗಿದೆ. ಭೀಮಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ ಕಾರಣ ಅಫಜಲಪೂರ ತಾಲೂಕಿನ ಸೊನ್ನ ಬ್ಯಾರೇಜಿನಿಂದ 5 ರಿಂದ 8 ಲಕ್ಷಕ್ಕೂ ಹೆಚ್ಚಿನ ಕ್ಯುಸೆಕ್ ನೀರು ಹರಿದಿದ್ದರಿಂದ ಭೀಮಾ ನದಿ ದಂಡೆ ಹಾಗೂ ಹಿನ್ನೀರಿನಿಂದ ಕಾಗಿಣಾ ನದಿ ದಂಡೆಯಲ್ಲಿ ಪ್ರವಾಹ ಉಂಟಾಗಿತ್ತು. ಇದುವರೆಗೆ ಸೊನ್ನ ಬ್ಯಾರೇಜಿನಿಂದ 2.80 ಲಕ್ಷ ಕ್ಯುಸೆಕ್ ಹೆಚ್ಚಿನ ಹೊರ ಹರಿವಾಗಿತ್ತು. ಆದರೆ ಕಳೆದ ಅಕ್ಟೋಬರ್ ಮಾಹೆಯಲ್ಲಿ 8 ಲಕ್ಷಕ್ಕೂ ಹೆಚ್ಚು ಕ್ಯುಸೆಕ್ ನೀರು ನದಿಗೆ ಹರಿಬಿಟ್ಟಿರುವುದು ದಾಖಲೆಯ ಪ್ರಮಾಣದಾಗಿದೆ ಎಂದರು.

ಅಕ್ಟೋಬರ್ 14ರ ಇಡೀ ರಾತ್ರಿ ಮಳೆ ಸುರಿದ ಕಾರಣ ಬೆಳೆ ನಾಶಕ್ಕೆ ಕಾರಣವಾಗಿದೆ. ಭೀಕರ ಮಳೆಯ ಮುನ್ಸೂಚನೆ ಅರಿತು ರಾತ್ರೋರಾತ್ರಿ ಅಧಿಕಾರಿಗಳ ಸಭೆ ನಡೆಸಿ ಮುಖ್ಯವಾಗಿ ಭೀಮಾ ನದಿ ದಂಡೆಯ ಗ್ರಾಮಸ್ಥರನ್ನು ಸುರಕ್ಷಿತವಾಗಿ ಸ್ಥಳಾಂತರಕ್ಕೆ ಆದ್ಯತೆ ನೀಡಿ ಪ್ರತಿ 4-5 ಗ್ರಾಮಗಳಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನಿಯೋಜಿಸಿ ಅವರೊಂದಿಗೆ ವಾಹನ ಮತ್ತು ಅಂಬುಲೆನ್ಸ್ ಕಳುಹಿಸಲಾಯಿತು. ಗ್ರಾಮಗಳಲ್ಲಿ ಮೈಕ್ ಮತ್ತು ಡಂಗೂರ ಬಾರಿಸಿ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಮೂಲಕ ಮಾನವ ಹಾನಿಗೆ ತಡೆಯಲಾಯಿತು ಎಂದರು.

ಭೀಮಾ ನದಿಯ ಪ್ರವಾಹದ ಹಿನ್ನೆಲೆಯಲ್ಲಿ 11 ಪೂರ್ಣ ಗ್ರಾಮಗಳು ಸೇರಿದಂತೆ 92 ಜಲಾವೃತಗೊಂಡ ಗ್ರಾಮಗಳ 27809 ಜನರನ್ನು ತಕ್ಷಣವೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. ಗ್ರಾಮಗಳು ನಡುಗಡ್ಡೆಯಾಗಿ ಪ್ರವಾಹದಲ್ಲಿ ಸಿಲುಕಿದವರ ರಕ್ಷಣೆಗೆ 98 ಸದಸ್ಯರ ಸೇನಾ ಪಡೆ, 73 ಸದಸ್ಯರ 3 ಎನ್.ಡಿ.ಆರ್.ಎಫ್. ತಂಡಗಳು, 75 ಸದಸ್ಯರ ಅಗ್ನಿಶಾಮಕ ದಳದ ತಂಡಗಳು, 101 ಸದಸ್ಯರ ತಜ್ಞ ಈಜುಗಾರರ ತಂಡ ಹಗಲಿರುಳು ರಕ್ಷಣಾ ಕಾರ್ಯಾಚರಣೆಯಲ್ಲಿ ಕಾರ್ಯನಿರ್ವಹಿಸಿ 2890 ಜನರನ್ನು ರಕ್ಷಿಸಿ ಕಾಳಜಿ ಕೇಂದ್ರಕ್ಕೆ ರವಾನಿಸಲಾಯಿತು.

ಸಂತ್ರಸ್ತರಿಗಾಗಿ ಜಿಲ್ಲೆಯಲ್ಲಿ 163 ಕಾಳಜಿ ಕೇಂದ್ರ ತೆಗೆದು 6234 ಕುಟುಂಬಗಳ 36691 ಜನರಿಗೆ ಆಶ್ರಯ ಕಲ್ಪಿಸಿ ಕೋವಿಡ್-19 ಸುರಕ್ಷತಾ ಕ್ರಮದೊಂದಿಗೆ ಊಟೋಪಚಾರದ ಜೊತೆಗೆ ಅಗತ್ಯ ಮೂಲಸೌಲಭ್ಯಗಳನ್ಬು ನೀಡಲಾಗಿದೆ. 3542 ಮನೆಗಳು ಭಾಗಶ: ಹಾನಿಯಾದರೆ 13055 ಮನೆಗಳ ಬಟ್ಟೆ, ಇತರೆ ಸಾಮಗ್ರಿಗಳು ಪ್ರವಾಹಕ್ಕೆ ತುತ್ತಾಗಿವೆ. ಜಿಲ್ಲೆಯಲ್ಲಿ ಯಾವುದೇ ಮಾನವ ಹಾನಿಯಾಗಿಲ್ಲ, ಆದರೆ ಪಶು-ಪಕ್ಷಿಗಳು ಸೇರಿದಂತೆ 904 ಜಾನುವಾರಗಳ ಜೀವ ಹಾನಿಯಾಗಿದೆ ಎಂದು ಮಾಹಿತಿ ನೀಡಿದರು.

154696 ಹೆಕ್ಟೇರ್ ಕೃಷಿ ಮತ್ತು 2492 ಹೆಕ್ಟೇರ್ ತೋಟಗಾರಿಕೆ ಪ್ರದೇಶ ಹಾನಿಗೆ 15698.70 ಲಕ್ಷ ರೂ. ಅಂದಾಜು ಹಾನಿ ಗುರುತಿಸಿದೆ. ರಸ್ತೆ, ಸೇತುವೆ, ಕೆರೆ, ಕಾಲುವೆ, ವಿದ್ಯುತ್ ಕಂಬ ದುರಸ್ತಿ, ಕುಡಿಯುವ ನೀರಿನ ಘಟಕಗಳು, ಪಶು-ಪ್ರಾಣಿ ಜೀವ ಹಾನಿಗೆ ಒಟ್ಟಾರೆ 40092.73 ಲಕ್ಷ ರೂ. ಮೊತ್ತದ ಹಾನಿಯಾಗಿದೆ. ಭಾಗಶ ಮನೆ ಹಾನಿ, ಮನೆಯಲ್ಲಿ ಸಾಮಗ್ರಿಗಳು ನೀರಿಗೆ ಕೊಚ್ಚಿಕೊಂಡು ಹೋಗಿದ್ದು, ಅಂಗನವಾಡಿ ಮತ್ತು ಸರ್ಕಾರಿ ಕಟ್ಟಡಗಳ ಹಾನಿಯನ್ನು 8798.55 ಲಕ್ಷ ರೂ. ಗುರುತಿಸಿದೆ. ಕಲಬುರಗಿ ನಗರದಲ್ಲಿನ ರಸ್ತೆ ಹಾನಿಗೆ 8246 ಲಕ್ಷ ರೂ. ಅಂದಾಜು ಮಾಡಲಾಗಿ ಒಟ್ಟಾರೆ ಪ್ರವಾಹದಿಂದ ಜಿಲ್ಲೆಯಲ್ಲಿ 72835.98 ಲಕ್ಷ ರೂ. ಹಾನಿಯಾಗಿದೆ ಎಂದು ಅಧ್ಯಯನ ತಂಡಕ್ಕೆ ಮಾಹಿತಿ ನೀಡಿದರು.

ಕೇಂದ್ರ ಅಧ್ಯಯನ ತಂಡದೊಂದಿಗೆ ಆಗಮಿಸಿದ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ ರಾಜನ್ ಅವರು ಮಾತನಾಡಿ, ಮಹಾರಾಷ್ಟ್ರದಿಂದ ಹೆಚ್ಚಿನ ನೀರು ಭೀಮಾ ನದಿಗೆ ಹರಿಬಿಟ್ಟಿರುವುದರಿಂದ  ಭೀಕರ ಪ್ರವಾಹ ನಿಯಂತ್ರಣ ಜಿಲ್ಲೆಗೆ ಸವಾಲಾಗಿತ್ತು. ರಾಜ್ಯ ಸರ್ಕಾರವು ಜಿಲ್ಲಾಡಳಿತದೊಂದಿಗೆ 24 ಗಂಟೆ ನಿರಂತರ ಸಮನ್ವಯ ಸಾಧಿಸಿದ ಪರಿಣಾಮ ಯಾವದೇ ಮಾನವ ಹಾನಿಯಾಗಿಲ್ಲ. ನೆರೆಯಲ್ಲಿ ಸಿಲುಕಿದವರ ರಕ್ಷಣೆಗೆ ದೂರದ ಉಡುಪಿ, ಕಾರವಾರದಿಂದ ರಾತ್ರೋರಾತ್ರಿ ಬೋಟ್ ತರಿಸಲಾಯಿತು. ಅಗತ್ಯಬಿದ್ದಲ್ಲಿ ಸಂತ್ರಸ್ತರ ರಕ್ಷಣೆಗೆಂದೇ ಬೀದರ ವಾಯು ನಿಲ್ದಾಣದಲ್ಲಿ ಹೆಲಿಕಾಫ್ಟರ್ ಬಳಕೆಗೂ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಬಟ್ಟೆ-ಬರೆಗಳನ್ನು ಕಳೆದುಕೊಂಡವರಿಗೆ ತಲಾ 10 ಸಾವಿರ ರೂ. ಪರಿಹಾರ ಧನ ನೀಡಲಾಗಿದೆ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]