ಸಮಗ್ರ ಕೃಷಿಯಿಂದ ರೈತರು ಆರ್ಥಿಕವಾಗಿ ಸಬಲರಾಗಲು ಸಾಧ್ಯ: ಪ್ರಗತಿಪರ ರೈತ ಮಹಿಳೆ ಮಂಜುಳಾ

ದೊಡ್ಡಬಳ್ಳಾಪುರ: ಕೊವಿಡ್-19 ಸಂಕಷ್ಟದಲ್ಲಿಯೂ ಕೃಷಿ ವಲಯದ ಜಿಡಿಪಿ ಕುಸಿತವಾಗಲಿಲ್ಲ. ಕೃಷಿ ಲಾಭದಾಯಕವಾಗಿದ್ದು, ಸಮಗ್ರ ಕೃಷಿ ಪದ್ದತಿ ಅಳವಡಿಸಿಕೊಂಡು, ಕೃಷಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರೆ ರೈತರು ಆರ್ಥಿಕವಾಗಿ ಸಬಲರಾಗಲು ಸಾಧ್ಯವಿದೆ ಎಂದು ಪ್ರಗತಿಪರ ರೈತ ಮಹಿಳೆ ಮಂಜುಳಾ ತಿಳಿಸಿದರು.

ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ರೈತರ ದಿನಾಚರಣೆ ಹಾಗೂ ಮಣ್ಣು ಆರೋಗ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕರೊನಾ ಕಾಲದಲ್ಲಿ ಬಹುತೇಕ ಎಲ್ಲಾ ವ್ಯಾಪಾರಗಳು ನಷ್ಟ ಅನುಭವಿಸಿದವು. ಆದರೆ ಕೃಷಿ ವಲಯ ಮತಾತ್ರ ಸಬಲವಾಗಿತ್ತು. ರೈತರು ಒಂದೇ ರೀತಿಯ ಬೆಳೆ ಬೆಳೆಯದೇ ವಿಭಿನ್ನ ಬೆಳೆಗಳನ್ನು ಬೆಳೆದರೆ, ಒಂದರಲ್ಲಿ ನಷ್ಟವಾದರೂ ಇನ್ನೊಂದು ಲಾಭ ತರುತ್ತದೆ. ಇಂದು ಸಾಪ್ಟ್ ವೇರ್ ಉದ್ಯೋಗಿಗಳು ಸಹ ಕೃಷಿಯಲ್ಲಿ ಆಸಕ್ತಿ ವಹಿಸುತ್ತಿದ್ದಾರೆ. ರೈತರು ಭೂ ತಾಯಿಯನ್ನು ನಂಬಿ ಬದುಕಬೇಕಿದೆ ಎಂದರು.

ಪ್ರಗತಿಪರ ರೈತ ಶ್ರೀನಿವಾಸ ರೆಡ್ಡಿ ಮಾತನಾಡಿ, ಇಂದು ರೈತರು ಹೆಚ್ಚು ನೀರನ್ನು ಬಳಸುತ್ತಿರುವುದರಿಂದ ಅಂತರ್ಜಲ ಬರಿದಾಗುತ್ತಿದೆ. ನೂರಾರು ವರ್ಷಗಳ ನೀರನ್ನು ನಾವು ಖಾಲಿ ಮಾಡುತ್ತಿದ್ದೇವೆ. ಆದರೆ ಹಿಂದಿನ ನಮ್ಮ ಹಿರಿಯರು ಅಗತ್ಯವಿದ್ದಷ್ಟು ಸ್ವಾಭಾವಿಕ ನೀರಿನ ಮೂಲಗಳಿಂದ ಕೃಷಿ ಮಾಡುತ್ತಿದ್ದರು.  ಇಂದು ರೈತರು ತಮ್ಮ ಆಹಾರ ತಾವೇ ಬೆಳೆದುಕೊಳ್ಳುವಷ್ಟಾದರೂ ಸ್ವಾವಲಂಬಿಗಳಾಗಬೇಕಿದೆ. ಕೃಷಿಯಲ್ಲಿ ಕೆಲಸವಿದ್ದರೂ ಕಾರ್ಖಾನೆಗಳಿಗೆ ಕೆಲಸಕ್ಕೆ ಸೇರಿ ಕೃಷಿಯಿಂದ ವಿಮುಖರಾಗುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದರು.

ಪ್ರಗತಿಪರ ರೈತ ಮಹಿಳೆ ರತ್ನ ಮಂಜುನಾಥ್ ಮಾತನಾಡಿ, ರೇಷ್ಮ ಕೃಷಿಯಲ್ಲಿ ಹೆಚ್ಚು ಲಾಭವಿದ್ದು, ಹಿಂದಿನ ಪದ್ದತಿಯಂತೆ ಹೆಚ್ಚು ಶ್ರಮವಹಿಸಬೇಕಿಲ್ಲ. 25 ದಿನಗಳಲ್ಲಿ ತಿಂಗಳ ಸಂಬಳದಂತೆ ನಾವು ಹಣ ಗಳಿಸಬಹುದು ಎಂದರು.

ಸಹಾಯಕ ಕೃಷಿ ನಿರ್ದೇಶಕರಾದ ಎನ್.ಸುಶೀಲಮ್ಮ ಮಾತನಾಡಿ, ಕೃಷಿ ಇಲಾಖೆ ವತಿಯಿಂದ ಮಾಜಿ ಪ್ರಧಾನ ಮಂತ್ರಿ ಚೌದರಿ ಚರಣ್ ಸಿಂಗ್ ಅವರ ಹುಟ್ಟು ಹಬ್ಬದ ಅಂಗವಾಗಿ ನಡೆದ ವಿಶ್ವ ರೈತ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಲಾಗುತ್ತಿದ್ದು, ಈ ಬಾರಿ ಈ ಕಾರ್ಯಕ್ರಮದೊಂದಿಗೆ ಮಣ್ಣು ಆರೋಗ್ಯ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ರೈತರು ಕೃಷಿ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದು ಸೂಕ್ತ ಮಾಹಿತಿ ಪಡೆಯಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ತಾಲೂಕಿನ ಪ್ರಗತಿಪರ ರೈತರಾದ ಅರುಣ್ ಕುಮಾರ್(ಹುಸ್ಕೂರು), ಶ್ರೀನಿವಾಸ ರೆಡ್ಡಿ (ವಡ್ಡರಹಳ್ಳಿ), ಮಂಜುಳ(ಅರಳುಮಲ್ಲಿಗೆ), ನಿತಿನ್(ಗಂಟಿಗಾನಹಳ್ಳಿ), ಮಂಜುನಾಥ್ (ತಳಗವಾರ), ಮಂಜುಳ (ಹುಸ್ಕೂರು)ಅವರನ್ನು ಸನ್ಮಾನಿಸಲಾಯಿತು.

ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿ ರೂಪಾ, ಕೃಷಿ ಅಧಿಕಾರಿಗಳಾದ  ಸಿದ್ದಗಂಗಯ್ಯ, ಹರೀಶ್ ಕುಮಾರ್, ನವೀನ್, ಗೀತಾ, ಕವಿತಾ, ಪ್ರಗತಿಪರ ರೈತರಾದ ಕೃಷ್ಣಮೂರ್ತಿ, ಅಶ್ವತ್ಥಪ್ಪ, ಮತ್ತಿತರರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]