ಅರ್ಹ ವಿಕಲಚೇತನರಿಗೆ ಸೌಲಭ್ಯಗಳನ್ನು ಪೂರ್ಣ ಪ್ರಮಾಣದಲ್ಲಿ ತಲುಪಿಸುವುದು ಸರ್ಕಾರದ ಆದ್ಯ ಕರ್ತವ್ಯ: ಆರ್.ಅಶೋಕ್

ಬೆಂ.ಗ್ರಾ.ಜಿಲ್ಲೆ: ವಿಕಲಚೇತನರ ಸಬಲೀಕರಣಕ್ಕಾಗಿ ಜಾರಿಗೊಳಿಸಲಾದ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪೂರ್ಣ ಪ್ರಮಾಣದಲ್ಲಿ ತಲುಪಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ ಎಂದು‌ ಕಂದಾಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಅಶೋಕ್‌  ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ವಿಕಲಚೇತನರ ಸಬಲೀಕರಣ ಇಲಾಖೆ, ಭಾರತ ಸರ್ಕಾರ, ಕೃತಕ ಅಂಗಾಂಗ ತಯಾರಿಕಾ ಕಾರ್ಪೋರೇಷನ್ ಆಫ್ ಇಂಡಿಯಾ(ಆಲಿಂಕೋ), ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದೊಂದಿಗೆ ಏರ್ಪಡಿಸಲಾಗಿದ್ದ “ಸಾಮಾಜಿಕ ಅಧಿಕಾರಿತಾ ಶಿಬಿರ, ಕೇಂದ್ರ ಸರ್ಕಾರದ ವಿಶೇಷ ಅಡಿಪ್(ADIP)  ಯೋಜನೆಯಡಿ ವಿಕಲಚೇತನರಿಗೆ ಉಚಿತವಾಗಿ ಸಾಧನ ಸಲಕರಣೆಗಳ ಸಮರ್ಪಣೆಯ(ದಿವ್ಯಂಗಜನ) ಉದ್ಘಾಟನೆ ಹಾಗೂ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳ ವಿತರಣಾ ಸಮಾರಂಭ”ವನ್ನು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ವಿಕಲಚೇತನರು, ಹಿರಿಯ ನಾಗರಿಕರು ಹಾಗೂ ವಿಧವೆಯರಿಗಾಗಿ ವಾರ್ಷಿಕವಾಗಿ 7500 ಕೋಟಿ ಪಿಂಚಣಿಯನ್ನು ಸರ್ಕಾರ ನೀಡುತ್ತಿದ್ದು, ಅವರು ಗೌರವದಿಂದ ಬದುಕಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಪಿಂಚಣಿ ಯೋಜನೆಯನ್ನು ಕೆಲವು ಮಧ್ಯವರ್ತಿಗಳು ದುರುಪಯೋಗ ಪಡಿಸಿಕೊಂಡಿದ್ದಾರೆ. ಇದರಿಂದಾಗಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪುತ್ತಿಲ್ಲವಾದ ಕಾರಣ  ಇಂತಹ ಘಟನೆಗಳು ಮರುಕಳಿಸದಂತೆ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡುವ ಯೋಜನೆ ಶೀಘ್ರವೇ ಅಂದರೆ 15 ದಿನಗಳಲ್ಲಿ ಜಾರಿಗೆ ಬರಲಿದ್ದು, ಅಕ್ರಮಗಳಿಗೆ ಕಡಿವಾಣ ಬೀಳಲಿದೆ ಎಂದರು.ರಾಜ್ಯದಲ್ಲಿ 8,59,761 ಅಂಗವಿಕಲ ಪಿಂಚಣಿದಾರರಿದ್ದು, ಶೇ. 75% ರಷ್ಟು ಅಂಗವೈಕಲ್ಯ ಇರುವ 3,79,116 ವಿಕಲಚೇತನರಿಗೆ ಪ್ರತಿ‌ ತಿಂಗಳು ರೂ. 600 ಪಿಂಚಣಿ  ಮತ್ತು ಶೇ. 75% ಕ್ಕಿಂತ ಹೆಚ್ಚು ಅಂಗವೈಕಲ್ಯ ಹೊಂದಿರುವವ 4,86,645 ವಿಕಲಚೇತನರಿಗೆ ಪ್ರತಿ ತಿಂಗಳು ರೂ.1400 ಪಿಂಚಣಿ ಕೊಡಲಾಗುತ್ತಿದೆ. ಎಂದರಲ್ಲದೆ, ವಿಕಲಚೇತನರಿಗೆ ವಿಶೇಷ ಸಾಧನೆ ಮಾಡುವ ಶಕ್ತಿಯಿದ್ದು, ಸಾಧನೆಯತ್ತ ಗಮನ ಹರಿಸುವಂತೆ ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಶಶಿಕಲಾ ಅಣ್ಣಾ ಸಾಹೇಬ ಜೊಲ್ಲೆ ಅವರು ಮಾತನಾಡಿ ಜನಪ್ರತಿನಿಧಿಗಳು, ಅಧಿಕಾರಿಗಳು ವಿಕಲಚೇತನರಿಗೆ ನೆರವಾಗುವ ಕಾರ್ಯಕ್ರಮಗಳನ್ನು ಹೆಚ್ಚು ಆಯೋಜಿಸಬೇಕು ಎಂದರಲ್ಲದೆ, ಕೇಂದ್ರ ಸರ್ಕಾರ ಹಾಗೂ ಅಲಿಂಕೋ ಸಂಸ್ಥೆ ‌ಸಹಯೋಗದೊಂದಿಗೆ ರೂ.48.32ಲಕ್ಷ ಮೌಲ್ಯದ ಗಾಲಿ‌ ಕುರ್ಚಿ, ದ್ವಿ ಚಕ್ರ ವಾಹನಗಳು ಸೇರಿದಂತೆ ವಿವಿಧ ರೀತಿಯ ‌ವಿಕಲಚೇತನರ ಸಾಧನ ಸಲಕರಣೆಗಳು, ಪರಿಕರಗಳನ್ನು ನೀಡುತ್ತಿರುವುದು ಶ್ಲಾಘನೀಯ ‌ಎಂದರು.

ವಿ.ಆರ್. ಡಬ್ಲ್ಯೂ ಗಳಿಗೆ ಮಾಸಿಕ ಗೌರವಧನ ರೂ.3000ದಿಂದ ರೂ.6000ಕ್ಕೆ ಹಾಗೂ ಎಂ.ಆರ್.ಡಬ್ಲೂ ಮಾಸಿಕ ಗೌರವಧನ ರೂ.6000ದಿಂದ ರೂ.12000ಕ್ಕೆ ಹೆಚ್ಚು ಮಾಡಲಾಗಿದೆ.

ದಿವ್ಯಾಂಗರಿಗೆ ಬೇಕಿರುವುದು ಅನುಕಂಪವಲ್ಲ, ಸಬಲೀಕರಣಗೊಳ್ಳಲು ಅಗತ್ಯವಾದ ಅವಕಾಶಗಳು ಎಂದರಲ್ಲದೆ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೊಸ ಹೊಸ ಯೋಜನೆಗಳನ್ನು ರೂಪಿಸುತ್ತಿದ್ದು ಸ್ವಯಂ ‌ಉದ್ಯೋಗ‌ ರೂಪಿಸಿಕೊಳ್ಳಲು ವಿಕಲಚೇತನರಿಗೆ ಸಹಾಯಧನದಡಿ ‌ಸಾಲ‌ ಸೌಲಭ್ಯ ನೀಡಲಾಗುತ್ತಿದ್ದು, ಯೋಜನೆಗಳ ಸೌಲಭ್ಯ ಪಡೆಯುವಂತೆ ತಿಳಿಸಿದರು ಹಾಗೂ ವಿಕಲಚೇತನರು ಒಬ್ಬಂಟಿ‌ ಎಂಬ ಭಾವನೆ ಮರೆತು ಸರ್ಕಾರ ಅವರೊಂದಿಗೆ ಸದಾ ಇದೆ ಎಂದು‌ ಹೇಳಿದರು.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಕಲಚೇತನರು ಎಂಬ ಮನೋಭಾವದಿಂದ ಹೊರಬಂದು ಕೆಲಸ ಮಾಡಬೇಕು ಎಂದರಲ್ಲದೆ, ಖಾಸಗಿ‌ ಸಂಸ್ಥೆ ಮತ್ತು ಕೈಗಾರಿಕಾ ವಲಯಗಳಲ್ಲಿ ವಿಕಲಚೇತನರಿಗೆ ರಾಜ್ಯ ಸರ್ಕಾರ ಮೀಸಲಾತಿ ಕಲ್ಪಿಸುವ ಮೂಲಕ ಗೌರವಯುತ ಜೀವನ ಕಟ್ಟಿಕೊಳ್ಳಲು ನೆರವಾಗಬೇಕಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಚಿವರುಗಳು ವಿಕಲಚೇತನರಿಗೆ ದ್ವಿ ಚಕ್ರವಾಹನ, ಗಾಲಿ ಕುರ್ಚಿ, ಶ್ರವಣ ಸಾಧನ ಯಂತ್ರ, ಕೃತಕ ಕೈ, ಕಾಲುಗಳು, ಊರುಗೋಲುಗಳು ಸೇರಿದಂತೆ ವಿಕಲಚೇತನರ ವಿವಿಧ ಸಾಧನ ಸಲಕರಣೆಗಳನ್ನು ವಿತರಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸಿ.ಮಂಜುನಾಥ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಪುಷ್ಪಲತಾ.ಜಿ.ರಾಯರ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ ಅವರು ಸೇರಿದಂತೆ ಆಲಿಂಕೋ ಸಂಸ್ಥೆ ಪ್ರತಿನಿಧಿಗಳು, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು, ದಿವ್ಯಾಂಗರು ಮತ್ತಿತ್ತರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

ರಾಜಕೀಯ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಅಭಿವೃದ್ಧಿ ಮಾಡಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D.K. Shivakumar) ʼಬ್ರ್ಯಾಂಡ್‌ ಬೆಂಗಳೂರುʼ ಘೋಷಿಸಿದ್ದರು. ಆದರೆ ಈಗ ಇ-ಖಾತಾ ಹೆಸರಲ್ಲಿ ಪಾಲಿಕೆ ಅಧಿಕಾರಿಗಳು ದಂಧೆ ಮಾಡುತ್ತಿದ್ದಾರೆ. ಇ ಖಾತಾ ಹೆಸರಲ್ಲಿ ಮಾಫಿಯಾ ಸೃಷ್ಟಿಯಾಗಿದೆ. ತೆರಿಗೆ ಪಾವತಿಸಿದರೂ

[ccc_my_favorite_select_button post_id="120417"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!