ಎರೆಹುಳು ಗೊಬ್ಬರ ತಯಾರಿಕೆಯ ಮೂಲಕ ಮಣ್ಣಿಗೆ ಭದ್ರತೆ ನೀಡಿ ಯುವಕರು ಸ್ವಾವಲಂಭಿಗಳಾಗಿ: ಡಾ.ಎ.ಪಿ.ಮಲ್ಲಿಕಾರ್ಜುನ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲೆಯ ಗ್ರಾಮೀಣ ಯುವಕರಿಗೆ ಜೀವನೋಪಾಯ ಭದ್ರತೆ ಪ್ರಾಯೋಜನೆಯಡಿಯಲ್ಲಿ ಆರು ದಿನಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿತ್ತು. 

ತರಬೇತಿ ಕಾರ್ಯಾಗಾರವನ್ನು ಕೇಂದ್ರದ ಮುಖ್ಯಸ್ಥ ಡಾ.ಎ.ಪಿ.ಮಲ್ಲಿಕಾರ್ಜುನ ಗೌಡ ಉದ್ಘಾಟಿಸಿ ಮಾತನಾಡಿ, ಕೃಷಿಯಲ್ಲಿ ಎರೆಹುಳುಗಳ ಪಾತ್ರ, ಯುವಕರಿಗೆ ಕೃಷಿಯಲ್ಲಿರುವ ಹಲವಾರು ಕೌಶಲ್ಯಗಳ ಕುರಿತು ಮಾಹಿತಿ ನೀಡಿದರು. ಸದ್ಯದ ಪರಿಸ್ಥಿತಿಯಲ್ಲಿ ಗ್ರಾಮೀಣ ಯುವಕರು ಕೃಷಿ ಕಡೆಗೆ ಗಮನ ತೋರುತ್ತಿರುವುದು ಆಶಾದಾಯಕವಾಗಿದ್ದು, ಯುವಕರು ವಿವಿಧ ಕೌಶಲ್ಯಗಳ ಬಗ್ಗೆ ತರಬೇತಿ ಪಡೆಯುವುದರಿಂದ ನಗರ ಪ್ರದೇಶಗಳಿಗೆ ಯುವಕರು ಉದ್ಯೋಗ ಹುಡುಕಿಕೊಂಡು ಹೋಗುವುದನ್ನು ತಪ್ಪಿಸಬಹುದು ಎಂದು ಅಭಿಪ್ರಾಯ ಪಟ್ಟರು.

ಭಾರತ ಸರ್ಕಾರದ ಕೃಷಿ ತಂತ್ರಜ್ಞಾನ ಮಾಹಿತಿ ಮತ್ತು ಸಂಶೋಧನಾ ಸಂಸ್ಥೆ, ಬೆಂಗಳೂರು ಕೇಂದ್ರದ ನೋಡಲ್ ಅಧಿಕಾರಿ ಡಾ.ತಿಮ್ಮಪ್ಪ ತರಬೇತಿಯಲ್ಲಿ ಭಾಗವಹಿಸಿ ಯುವಕರಿಗೆ ಕೇಂದ್ರ ಸರ್ಕಾರದಿಂದ ಲಭ್ಯವಿರುವ ವಿವಿಧ ಉದ್ಯಮಗಳ ಬಗ್ಗೆ ಮಾಹಿತಿ ನೀಡಿ, ಪ್ರಾಯೋಜನೆ ವತಿಯಿಂದ ಮುಂದಿನ ವರ್ಷ ದೊರೆಯಲಿರುವ ವಿವಿಧ ಉದ್ಯಮಶೀಲ ಕೌಶಲ್ಯ ತರಬೇತಿಗಳ ಕುರಿತು ತಿಳಿಸಿಕೊಟ್ಟರು.

ತರಬೇತಿ ಸಂಯೋಜಕ ಡಾ.ಪಿ.ವೀರನಾಗಪ್ಪ, ಎರೆ ಹುಳು ಗೊಬ್ಬರ ತಯಾರಿಕೆಯ ಬಗ್ಗೆ ಉಪನ್ಯಾಸ ನೀಡಿ ಎರೆಗೊಬ್ಬರದಿಂದ ಮಣ್ಣಿನ ಫಲವತ್ತತೆಯ ಮೇಲಾಗುವ ಪರಿಣಾಮಗಳು, ಎರೆಗೊಬ್ಬರ ಬಳಕೆ ಮತ್ತು ಎರೆಹುಳು ಗೊಬ್ಬರವನ್ನು ಒಂದು ಉದ್ದಿಮೆಯಾಗಿ ಸ್ಥಾಪಿಸುವುದರ ಬಗ್ಗೆ ಪ್ರಾಯೋಗಿಕ ತರಗತಿಗಳನ್ನು ಹಮ್ಮಿಕೊಂಡಿದ್ದರು.

ರೇಷ್ಮೆ ಕೃಷಿ ಮಹಾವಿದ್ಯಾಲಯ ಸಹಾಯಕ ಪ್ರಾಧ್ಯಾಪಕರಾದ ಡಾ. ಡಿ.ವಿ.ನವೀನ್ ಮತ್ತು ಡಾ. ಸಿ.ಎನ್.ನಳಿನ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ತರಬೇತಿದಾರರಿಗೆ ಎರೆಹುಳು ಗೊಬ್ಬರ ತಯಾರಿಕೆ ವಿಧಾನಗಳು, ತ್ಯಾಜ್ಯ ಪದಾರ್ಥಗಳ ಸಿದ್ಧತೆ ಮತ್ತು ಎರೆಹುಳುಗಳ ಜೀವನ ಚಕ್ರದ ಬಗ್ಗೆ ತರಬೇತಿ ನೀಡಿದರು.

ಕೇಂದ್ರದ ವಿಜ್ಞಾನಿಗಳಾದ ಡಾ.ಜೆ.ವೆಂಕಟೇ ಗೌಡ ಮತ್ತು ಡಾ.ಬಿ.ಮಂಜುನಾಥ್  ಸಾವಯವ ಗೊಬ್ಬರ ತಯಾರಿಕೆ ವಿಧಾನಗಳು ಮತ್ತು ಎರೆಹುಳುಗಳ ಸಂರಕ್ಷಣೆಯ ಕುರಿತು ವಿವರಿಸಿದರು.

ಡಾ.ಆರ್.ಎನ್.ಲಕ್ಷ್ಮೀಪತಿ, ಸಾವಯವ ಸಂಶೋಧನಾ ಕೇಂದ್ರ, ಬೆಂಗಳೂರು ಇವರು ಎರೆಹುಳು ಗೊಬ್ಬರ ತಯಾರಿಸುವ ವಿಧಾನಗಳು, ಸೂಕ್ಷ್ಮ ಜೀವಿಗಳ ಜೊತೆ ಎರೆಹುಳುವಿನ ಸಂಬಂಧದ ಕುರಿತು ಉಪನ್ಯಾಸ ನೀಡಿದರು.ಎನ್.ಜಗದೀಶ್ ಮತ್ತು ಶ್ರೀ ಶಿವಪ್ರಸಾದ್ ರವರು ಎರೆಗೊಬ್ಬರದ ಬಳಕೆ ಹಾಗೂ ಗೊಬ್ಬರದ ವಿಶ್ಲೇಷಣೆಯ ಬಗ್ಗೆ ಮಾಹಿತಿ ನೀಡಿದರು.

ತರಬೇತಿಯಲ್ಲಿ ಭಾಗವಹಿಸಿದ್ದ 40 ಜನ ಯುವಕರಿಗೆ ಎರೆಗೊಬ್ಬರ ತಯಾರಿಕೆ ತೊಟ್ಟಿ, ಜರಡಿ, ವಾಟರ್ ಕ್ಯಾನ್ ಮತ್ತು 1 ಕಿ.ಗ್ರಾಂ. ಎರೆಹುಳು ವಿತರಿಸಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಲೈಕ್ ಮಾಡಿ ಹಾಗೂ ಟ್ವಿಟರ್ ಫಾಲೋ ಮಾಡಿ, ಟೆಲಿಗ್ರಾಂ ಗುಂಪನ್ನು ಸೇರಿ.

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]