
ದೊಡ್ಡಬಳ್ಳಾಪುರ: ಪ್ರಜ್ಞಾವಂತ ಆಹಾರವಾದ ಸಿರಿಧಾನ್ಯದ ಕುರಿತು ವ್ಯಾಪಕ ಪ್ರಚಾರವನ್ನು ನೀಡಲು, ಸಾವಯವ ಉತ್ಪನ್ನಗಳ ಮಾರುಕಟ್ಟೆಗೆ ಹೆಚ್ಚಿನ ಆಧ್ಯತೆ ನೀಡಲು ಕೃಷಿ ಇಲಾಖೆ ಆಯೋಜಿಸಿದ್ದ ಸಿರಿಧಾನ್ಯಗಳ ನಡಿಗೆ ಆರೋಗ್ಯದ ಕಡೆಗೆ ಎಂಬ ಮ್ಯಾರಥಾನ್ಗೆ ಶಾಸಕ ಟಿ.ವೆಂಕಟರಮಣಯ್ಯ ಚಾಲನೆ ನೀಡಿದರು.
ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಕಾರ್ಯದಲ್ಲಿ ಮಾತನಾಡಿದ ಅವರು, ಸಾವಯವ-ಸಿರಿಧಾನ್ಯ ಕುರಿತು ಜಾಗೃತಿ. ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ರೈತರ ಕೊಡುಗೆ ಅಪಾರ. ಅವರ ಮನವೊಲಿಸಿ ಸಾವಯವ ಕೃಷಿಗೆ ಇನ್ನೂ ಹೆಚ್ಚಿನ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಕ್ರಿಮಿನಾಶಕ, ರಸಗೊಬ್ಬರಗಳ ಅತೀಯಾದ ಬಳಕೆಯಾಗುತ್ತಿದೆ. ಆರೋಗ್ಯಕರ ಆಹಾರದ ಕಡೆ ಗಮನಹರಿಸಬೇಕಿದೆ.
ರಾಸಾಯನಿಕ ಬಳಕೆಯಿಂದ ನಮ್ಮ ಭೂಮಿಯ ಫಲವತ್ತತೆ ಹಾಳು ಮಾಡುತ್ತಿದ್ದೇವೆ. ಹಿರಿಯರು ನೀಡಿದ ಭೂಮಿ ರಕ್ಷಿಸಬೇಕಿದೆ ಎಂದು ಮನವಿ ಮಾಡಿದರು.
ಟಿಬಿ ವೃತ್ತದಿಂದ ಆರಂಭವಾದ ಮ್ಯಾರಥಾನ್ ಕೋರ್ಟ್ ರಸ್ತೆ, ತಾಲೂಕು ಕಚೇರಿ ರಸ್ತೆ, ಬಸವ ಭವನದ ಮೂಲ ಮೂರು ಕಿಮಿ ಸಾಗಿ ಟಿಬಿ ವೃತ್ತದಲ್ಲಿ ಕೊನೆಯಾದಲಿದೆ.
ಇದಕ್ಕು ಮುನ್ನ ಸಾಮೂಹಿಕ ವ್ಯಾಯಾಮ, ಲಾಂಚನ ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ತಹಶಿಲ್ದಾರ್ ಟಿ.ಎಸ್.ಶಿವರಾಜ್, ತಾಪಂ ಅಧ್ಯಕ್ಷ ನಾರಾಯಣಗೌಡ, ಎಪಿಎಂಸಿ ಅಧ್ಯಕ್ಷ ವಿಶ್ವನಾಥ್, ಜಂಟಿ ಕೃಷಿ ನಿರ್ದೇಶಕ ಜಯಚಂದ್ರ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ನಗರ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಸೋಮಶೇಖರ್, ತೋಟಗಾರಿಕೆ ಇಲಾಖೆಯ ಶ್ರೀನಿವಾಸ್, ತಾಲೂಕು ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ, ತಾಂತ್ರಿಕ ಅಧಿಕಾರಿ ರೂಪ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ.

