ಬೆಂ.ಗ್ರಾ.ಜಿಲ್ಲೆ: ನಾಟಕ ಅಕಾಡೆಮಿಯಿಂದ ರಂಗ ಸಂಗೀತ ತರಬೇತಿ ಶಿಬಿರಕ್ಕೆ ದೊಡ್ಡಬಳ್ಳಾಪುರದಲ್ಲಿ ಚಾಲನೆ

ಬೆಂ.ಗ್ರಾ.ಜಿಲ್ಲೆ: ಕಲಾವಿದರು ತಮ್ಮಲ್ಲಿ ಅಂತರ್ಗತವಾಗಿರುವ ಕಲೆಯನ್ನು ಶಾಸ್ತ್ರೀಯ ನೆಲೆಗಟ್ಟಿನಲ್ಲಿ ಹೊರಹೊಮ್ಮಿಸಬೇಕಾದ ಅಗತ್ಯವಿದ್ದು, ಇದಕ್ಕೆ ಸೂಕ್ತ ತರಬೇತಿ ಅಗತ್ಯವಿದೆ ಎಂದು ಕೇಂದ್ರ ರೇಷ್ಮೆ ಮಂಡಲಿ ಮಾಜಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ ತಿಳಿಸಿದರು.

ನಗರದ ಬಿ.ಆರ್.ಜಿ ಯೋಗಭವನದಲ್ಲಿ  ಕರ್ನಾಟಕ ನಾಟಕ ಅಕಾಡೆಮಿ ವತಿಯಿಂದ ಆರಂಭಗೊಂಡಿರುವ ಮೂರು ದಿನಗಳ ಕಾಲ ಜಿಲ್ಲಾ ಮಟ್ಟದ ರಂಗ ಸಂಗೀತ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೊಡ್ಡಬಳ್ಳಾಪುರದಲ್ಲಿ ಅಸಂಖ್ಯಾತ ಕಲಾವಿದರಿದ್ದು, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿರುವ ಕಲಾವಿದರು, ಕ್ರೀಡಾಪಟುಗಳಿರುವುದು ಹೆಮ್ಮೆಯ ವಿಚಾರ. ಆದರೆ ಬಹಳಷ್ಟು ಕಲಾವಿದರಿಗೆ ಸೂಕ್ತ ವೇದಿಕೆ ಹಾಗೂ ಕಲೆಯ ಮಾರ್ಗದರ್ಶನದ ಅಗತ್ಯವಿದೆ. ಈ ದಿಸೆಯಲ್ಲಿ ನಾಟಕ ಅಕಾಡೆಮಿಯ ರಂಗ ಸಂಗೀತ ತರಬೇತಿ ಶಿಬಿರ ಇಂಬು ನೀಡುತ್ತದೆ. ಸರ್ಕಾರದಲ್ಲಿ ಇಂತಹ ಹಲವಾರು ಯೋಜನೆಗಳಿದ್ದರೂ ಅದನ್ನು ಅರ್ಹರು ಪಡೆದುಕೊಳ್ಳುತ್ತಿರುವುದು ವಿಷಾದಕರ ಎಂದ ಅವರು ತಾವು ರೇಷ್ಮೆ ಮಂಡಲಿ ಅಧ್ಯಕ್ಷರಾಗಿದ್ದಾಗ ದೊಡ್ಡಬಳ್ಳಾಪುರದ ಮಂದಿ ಸೌಲಭ್ಯಗಳನ್ನು ಕೇಳದಿದ್ದದ್ದು, ಇಂದಿಗೂ ಕಾಡುತ್ತಿದೆ. ಸರ್ಕಾರದ ಸೌಲಭ್ಯಗಳನ್ನು ಕಲಾವಿದರು ಪಡೆದುಕೊಂಡು ತಮ್ಮ ಕಲಾಪ್ರೌಢಿಮೆಯನ್ನು ವಿಸ್ತರಿಸಿಕೊಳ್ಳಬೇಕು. ಸರ್ಕಾರದಿಂದಲೂ ಇದಕ್ಕೆ ವ್ಯಾಪಕ ಪ್ರಚಾರ ದೊರೆಯಬೇಕು ಎಂದು, ಕಲಾವಿದರಿಗೆ ತಮ್ಮ ಕೈಲಾದ ಅಗತ್ಯ ನೆರವು ನೀಡುವ ಭರವಸೆ ನೀಡಿದರು.

ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯ ಸಂಚಾಲಕರಾದ ಎಂ.ಎಸ್.ಗುಣಶೀಲನ್ ಮಾತನಾಡಿ, ಹಲವಾರು ಕಲಾವಿದರು ರಂಗಕಲೆಯಲ್ಲಿ ತೊಡಗಿಸಿಕೊಂಡರಷ್ಟೇ ಸಾಲದು, ಕಲೆಗೆ  ಪೂರಕವಾದ ರಂಗ ತರಬೇತಿ ಹಾಗೂ  ಮಾರ್ಗದರ್ಶನಗಳನ್ನು ಪಡೆದು ಪ್ರಬುದ್ದರಾಗಬೇಕಿದೆ. ಈ ದಿಸೆಯಲ್ಲಿ  ಕರ್ನಾಟಕ ನಾಟಕ ಅಕಾಡೆಮಿಯಿಂದ ರಂಗ ಸಂಗೀತ ಪರಿಣಿತರಿಂದ ತರಬೇತಿ ಹಾಗೂ ಮಾಗದರ್ಶನ ನೀಡಲಾಗುತ್ತಿದೆ. ಕಲಾವಿದರು ತಮ್ಮ ಕಲಾ ಪ್ರದರ್ಶನವನ್ನು ಸೀಮಿತಗೊಳಿಸದೇ ವಿಸ್ತಾರಗೊಳಿಸಿಕೊಳ್ಳಬೇಕು. ತಾವು ಭಾಗವಹಿಸಿರುವ ಕಾರ್ಯಕ್ರಮಗಳ ಛಾಯಾಚಿತ್ರಗಳು, ಆಹ್ವಾನ ಪತ್ರಿಕೆ, ಪ್ರಶಸ್ತಿಪತ್ರಗಳನ್ನು ಸಂಗ್ರಹಿಸಿಟ್ಟುಕೊಂಡರೆ ವಿವಿಧ ಯೋಜನೆಗಳ ಪ್ರಯೋಜನ ಪಡೆಯಬಹುದು ಎಂದರು.

ಕಾರ್ಯಕ್ರಮದಲ್ಲಿ ಸಂಗೀತ ಸಂಯೋಜಕ ಹಾಗೂ ಶಿಬಿರದ ನಿರ್ದೇಶಕ ಅನಿಲ್ ಅಂಬಾರಿ, ಶಿಬಿರದ ಸಂಚಾಲಕರಾದ ಎಸ್.ಮೋಹನ್ ಕುಮಾರ್, ಬಿ.ಜಿ.ಅಮರನಾಥ್, ರಂಗ ಕಲಾವಿದ ಕೆ.ಪಿ.ಪ್ರಕಾಶ್, ಯಕ್ಷಗಾನ ಕಲಾವಿದ ಕೆ.ಸಿ.ನಾರಾಯಣ್  ಹಾಗೂ ಶಿಬಿರಾರ್ಥಿಗಳು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

ರಾಜಕೀಯ

ಚುನಾವಣಾ ಅಕ್ರಮ ಆರೋಪ; ಕಾಂಗ್ರೆಸ್ ಬಳಿ ಪುರಾವೆ ಇದ್ದರೆ ನ್ಯಾಯಾಲಯಕ್ಕೆ ಸಲ್ಲಿಸಿ: ಬಿ.ವೈ. ವಿಜಯೇಂದ್ರ ಸವಾಲು

ಚುನಾವಣಾ ಅಕ್ರಮ ಆರೋಪ; ಕಾಂಗ್ರೆಸ್ ಬಳಿ ಪುರಾವೆ ಇದ್ದರೆ ನ್ಯಾಯಾಲಯಕ್ಕೆ ಸಲ್ಲಿಸಿ: ಬಿ.ವೈ.

ರಾಹುಲ್ ಗಾಂಧಿಯವರು ಕರ್ನಾಟಕದಲ್ಲಿ ಈ ಕಪಟ ನಾಟಕ ಮಾಡಲು ಮುಂದಾದಂತಿದೆ: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="111927"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ರೋಚಕ ಹಂತಕ್ಕೆ ಬಂದ ಧರ್ಮಸ್ಥಳದ ಪ್ರಕರಣ: 6ನೇ ಪಾಯಿಂಟ್ ‌ನಲ್ಲಿ ಮೃತದೇಹದ ಅವಶೇಷ ಪತ್ತೆ..!

ರೋಚಕ ಹಂತಕ್ಕೆ ಬಂದ ಧರ್ಮಸ್ಥಳದ ಪ್ರಕರಣ: 6ನೇ ಪಾಯಿಂಟ್ ‌ನಲ್ಲಿ ಮೃತದೇಹದ ಅವಶೇಷ

ಧರ್ಮಸ್ಥಳ (Dharmasthala): ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ.31 ರಂದು 6ನೇ ಗುರುತಿನ ಎಸ್‌ಐಟಿ (SIT) ನಡೆಸಿದ ಉತ್ಖನನದಲ್ಲಿ ಶವದ ಅವಶೇಷ ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಕೆಲ ಮೂಳೆಗಳು ಪತ್ತೆಯಾಗಿದ್ದು, ವಿಧಿ ವಿಜ್ಞಾನ ಅಧಿಕಾರಿಗಳು ಅದನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಿದ್ದಾರೆ. ಧರ್ಮಸ್ಥಳ ಗ್ರಾಮ

[ccc_my_favorite_select_button post_id="111942"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!