ದೊಡ್ಡಬಳ್ಳಾಪುರ ನಗರಸಭೆಗೆ 13.58 ಕೋಟಿ ರೂ ಉಳಿತಾಯದ ಕರಡು ಬಜೆಟ್ ಮಂಡನೆ: ಆದಾಯ ಕ್ರೋಢೀಕರಣಕ್ಕೆ ಒತ್ತು ನೀಡುವಂತೆ ಸಲಹೆ

ದೊಡ್ಡಬಳ್ಳಾಪುರ: ನಗರಸಭೆಗೆ ಆದಾಯ ತರುವ ಪ್ರಮುಖ ಮೂಲಗಳಾದ ವಾಣಿಜ್ಯ, ಉದ್ಯಮ, ಪರವಾನಗಿ, ಆಸ್ತಿ ತೆರಿಗೆ, ಜಾಹಿರಾತು ಶುಲ್ಕಗಳ ಸಂಗ್ರಹದ ಕಡೆಗೆ ಆದ್ಯತೆ ನೀಡಿ, ನಗರದಲ್ಲಿ ತುರ್ತಾಗಿ ಆಗಬೇಕಿರುವ ವಿದ್ಯುತ್ ಚಿತಾಗಾರ, ಮಳೆ ನೀರು ಸಂಗ್ರಹಣೆ, ಒಳಚರಂಡಿ ನೀರಿನ ಶುದ್ದೀಕರಣ, ಕಸಾಯಿಖಾನೆ ಸ್ಥಳಾಂತರಕ್ಕೆ ಬಜೆಟ್‍ನಲ್ಲಿ ಹೆಚ್ಚಿನ ಒತ್ತು ನೀಡಬೇಕು ಎನ್ನುವ  ಸಾರ್ವಜನಿಕ ಅಭಿಪ್ರಾಯಗಳು ನಗರದ ಡಾ.ರಾಜ್‍ಕುಮಾರ್ ಕಲಾಮಂದಿರದಲ್ಲಿ ನಗರಸಭೆ ವತಿಯಿಂದ ಪೌರಾಯುಕ್ತ ರಮೇಶ್ ಎಸ್.ಸುಣಗಾರ್ ಅಧ್ಯಕ್ಷತೆಯಲ್ಲಿ ನಡೆದ ಬಜೆಟ್ ಪೂರ್ವ ಸಾರ್ವಜನಿಕ ಸಮಾಲೋಚನೆ ಸಭೆಯಲ್ಲಿ ಕೇಳಿ ಬಂದವು.

ಸಭೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು, ನಗರಸಭೆ ಮಾಜಿ ಸದಸ್ಯರು ಮಾತನಾಡಿ,  ನಗರಸಭೆಯ ಆದಾಯ ಬರೀ ಪುಸ್ತಕದಲಿ ಕಾಣುತ್ತಿರುವುದೇ ಹೊರತು ವಾಸ್ತವದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಸಂಗ್ರಹವಾಗುತ್ತಿಲ್ಲ. ನಗರಸಭೆಯಲ್ಲಿ ಸ್ವಚ್ಛತೆ, ವಾಹನಗಳ ನಿರ್ವಹಣೆ ಬೀಡಾಡಿ ರಾಸುಗಳ, ಬೀದಿ ನಾಯಿಗಳ ಹಾವಳಿ ಮಿತಿ ಮೀರಿದೆ. ಇವುಗಳ ನಿಯಂತ್ರಣಕ್ಕೆ ಬಜೆಟ್‍ನಲ್ಲಿ ಹಣ ಮೀಸಲಿಟ್ಟು ಕೆಲಸ ಮಾಡಬೇಕು. ಉದ್ದಿಮೆ ತೆರಿಗೆಯನ್ನು ಕಡ್ಡಾಯಗೊಳಿಸಬೇಕು. ನಗರಸಭೆಯ ಸ್ವತ್ತುಗಳನ್ನು ಉಳಿಸಿಕೊಳ್ಳಲು, ಈ ಸ್ಥಳಗಳಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸುವ ಮೂಲಕ ಆದಾಯ ಬರಲಿದೆ ಎಂದು ಸಲಹೆ ನೀಡಿದರು.

ನಗರದ ಪ್ರಮುಖ ವೃತ್ತಗಳಲ್ಲಿ ಸಿಸಿ ಟಿವಿ ಕ್ಯಾಮರಗಳ ಆಳವಡಿಕೆ, ನಾಗರಕೆರೆ ಅಭಿವೃದ್ದಿ, ಉದ್ಯಾನವನಗಳ ಅಭಿವೃದ್ಧಿಗೆ ಬಜೆಟ್‍ನಲ್ಲಿ ಹೆಚ್ಚಿನ ಹಣ ಮೀಸಲಿಡಬೇಕು. ಹೊಸ ಮಾರುಕಟ್ಟೆ ಸಂಕೀರ್ಣ ಪೂರ್ಣಗೊಳಿಸಬೇಕು. ಕೊಳಗೇರಿ ನಿವಾಸಿಗಳಿಗೆ ಮಂಜೂರಾಗಿರುವ ಮನೆಗಳಿಗೆ ಬಾಕಿ ಹಣವನ್ನು ನಗರಸಭೆ ಪಾವತಿಸಬೇಕಿದೆ. ಚಿಕ್ಕತುಮಕೂರು ಕೆರೆ ಅಂಗಳದಲ್ಲಿ ನಿರ್ಮಿಸಲಾಗಿರುವ ಒಳಚರಂಡಿ ನೀರು ಶುದ್ಧೀಕರಣ ಘಟಕದಲ್ಲಿ ನೈಸರ್ಗಿಕವಾಗಿ ನೀರು ಶುದ್ದೀಕರಣ ಸಮರ್ಪಕವಾಗಿ ಕೆಲಸ ನಿರ್ವಹಿಸುತ್ತಿಲ್ಲ. ನೀರು ಶುದ್ದೀಕರಣಕ್ಕೆ ಯಾಂತ್ರಿಕ ವಿಧಾನವನ್ನು ಆಳವಡಿಸಬೇಕು. ಇದಕ್ಕೆ ಅಗತ್ಯ ಹಣಕಾಸನ್ನು ಬಜೆಟ್‍ನಲ್ಲಿ ಮೀಸಲಿಡಬೇಕು.

ಕೊಂಗಾಡಿಯಪ್ಪ ಅವರ ಹೆಸರಿನಲ್ಲಿ ಕಾರ್ಯಕ್ರಮಕ್ಕೆ ಹೆಚ್ಚಿನ ಅನುದಾನ, ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುದಾನ, ಪ್ರಮುಖ ವೃತ್ತಗಳಲ್ಲಿ ಅಂಬೇಡ್ಕರ್, ಕೊಂಗಾಡಿಯಪ್ಪ ಮೊದಲಾದ ಮಹನೀಯರ ಪುತ್ಥಳಿ ಸ್ಥಾಪನೆ ಮಾಡಬೇಕು ಎನ್ನುವ ಅಭಿಪ್ರಾಯಗಳು ಕೇಳಿ ಬಂದವು.

13.58 ಕೋಟಿ ರೂ ಉಳಿತಾಯದ ಕರಡು ಬಜೆಟ್: ನಗರಸಭೆ ಮುಖ್ಯ ಲೆಕ್ಕಾಕಾಧಿರಿ ನಂದೀಶ್ ಬಜೆಟ್ ವಿವರ ಮಂಡಿಸಿ, ನಗರಸಭೆಯ 2020-21ನೇ ಸಾಲಿನ ಪರಿಷ್ಕೃತ ಅಂದಾಜು ಆಯವ್ಯಯದಲ್ಲಿ ಆದಾಯ 44.47 ಕೋಟಿ ರೂ ನಿರೀಕ್ಷಿಸಲಾಗಿದ್ದು, ಇದರಲ್ಲಿ ಖರ್ಚು 30.89 ಕೋಟಿ ರೂಗಳಾಗಿದೆ. 13.58 ಕೋಟಿ ರೂ ಉಳಿತಾಯ ನಿರೀಕ್ಷಿಸಲಾಗಿದೆ.

2019-20 ನೇ ಸಾಲಿನ ವಾಸ್ತವಿಕ ಲೆಕ್ಕದಲ್ಲಿ  ಆದಾಯ 40.89 ಕೋಟಿ ರೂ ಇದರಲ್ಲಿ ಖರ್ಚು 23.01 ಕೋಟಿ ರೂಗಳಾಗಿದೆ. 17.87 ಕೋಟಿ ರೂ ಉಳಿತಾಯವಾಗಿದೆ.

2020ರ ಡಿಸೆಂಬರ್ ತಿಂಗಳ ಅಂತ್ಯದವರೆಗೆ 34.05 ಕೋಟಿ  ರೂ ಕ್ರೋಡೀಕರಣವಾಗಿದ್ದು,ಇದರಲ್ಲಿ ಖರ್ಚಾಗಿರುವುದು 17.01 ಕೋಟಿಯಾಗಿದೆ. ಡಿಸೆಂಬರ್ ಅಂತ್ಯಕ್ಕೆ ಉಳಿಕೆ 17.03 ಕೋಟಿ ರೂ ಆಗಿದೆ ಎಂದು ತಿಳಿಸಿದರು.

ಪೌರಾಯುಕ್ತ ರಮೇಶ್ ಎಸ್.ಸುಣಗಾರ್ ಮಾತನಾಡಿ, ಸಾರ್ವಜನಿಕರ ಸಲಹೆ ಸೂಚನೆಗಳನ್ನು ಪರಿಗಣಿಸಿ ಆದಷ್ಟೂ ಅನುಷ್ಟಾನಕ್ಕೆ ತರಲು ಕ್ರಮ ವಹಿಸಲಾಗುವುದು.  ತೆರಿಗೆ ಸಂಗ್ರಹಕ್ಕೆ ನಿರ್ವಾಹಕರನ್ನು ನೇಮಿಸಿಕೊಂಡಿದ್ದು, ಇನ್ನೆರಡು ತಿಂಗಳಲ್ಲಿ ಬಗೆಹರಿಯಲಿದೆ. ಕಸ ನಿರ್ವಹಣೆ, ನೈರ್ಮಲ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು. ಬಜೆಟ್‍ನಲ್ಲಿ ವ್ಯಕ್ತವಾದ ಸಲಹೆಗಳನ್ನು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

ಸಭೆಯಲ್ಲಿ ನಗರಸಭೆ ಎಇಇ ಶೇಖ್ ಫಿರೋಜ್ ಸೇರಿದಂತೆ ನಗರಸಭೆ ವಿವಿಧ ವಿಭಾಗದ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು, ಮಾಜಿ ನಗರಸಭಾ ಸದಸ್ಯರು, ಸಾರ್ವಜನಿಕರು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್, ಕೂ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

ರಾಜಕೀಯ

ಗ್ಯಾರಂಟಿ ಯೋಜನೆಗಳು ಮಹಿಳಾಸಮೂಹಕ್ಕೆ ವರದಾನ; ಮುಖ್ಯಮಂತ್ರಿ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳು ಮಹಿಳಾಸಮೂಹಕ್ಕೆ ವರದಾನ; ಮುಖ್ಯಮಂತ್ರಿ ಸಿದ್ದರಾಮಯ್ಯ

ಆರ್ಥಿಕವಾಗಿ ಶಕ್ತಿಯಿಲ್ಲದವರಿಗೆ ಗ್ಯಾರಂಟಿ ಯೋಜನೆಗಳನ್ನು ಸಮಾನವಾಗಿ ನೀಡಲಾಗಿದೆ. ಮಹಿಳೆಯರಿಗೆ ಶಕ್ತಿ ಹಾಗೂ ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ತಾರತಮ್ಯವಿಲ್ಲದೇ ನೀಡಲಾಗುತ್ತಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121806"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]