ಪೊಲೀಸ್ ವ್ಯವಸ್ಥೆ ಬಲಪಡಿಸಲು ಕ್ರಮ / ಸಾರ್ವಜನಿಕರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ತಂತ್ರಜ್ಞಾನ ಬೆಳವಣಿಗೆಯೊಂದಿಗೆ ಅಪರಾಧಗಳ ಸ್ವರೂಪವೂ ಬದಲಾಗುತ್ತಿದೆ. ಇಂತಹ ಅಪರಾಧಗಳನ್ನು ನಿಯಂತ್ರಿಸಲು ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ರಾಜ್ಯ ಪೊಲೀಸ್ ವ್ಯವಸ್ಥೆಯನ್ನು ಬಲ ಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪೊಲೀಸರ ಮನೋಸ್ಥೈರ್ಯವನ್ನು ಹೆಚ್ಚಿಸಿ, ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಲು ಪೊಲೀಸ್ ಸಿಬ್ಬಂದಿಗಳ ಕಲ್ಯಾಣ ಕಾರ್ಯಕ್ರಮಗಳನ್ನು ಸರ್ಕಾರ ಹಮ್ಮಿಕೊಂಡಿದೆ.

ರಾಜ್ಯಾದ್ಯಂತ ಪೊಲೀಸ್ ಗೃಹ-2020 ಯೋಜನೆಯಡಿ 2020ರ ಅಕ್ಟೋಬರ್ ಅಂತ್ಯಕ್ಕೆ ಒಟ್ಟು 9,820 ವಸತಿ ಗೃಹಗಳು ನಿರ್ಮಾಣಗೊಂಡಿವೆ. ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳ ನೇಮಕಾತಿ ಹಾಗೂ ಪರಿಹಾರ ಭತ್ಯೆಗಳ ಮಂಜೂರಾತಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಯೋಜನೆಗಳು ಪೊಲೀಸ್ ಸಿಬ್ಬಂದಿಯ ಕುರಿತ ನಮ್ಮ ಕಾಳಜಿಯ ಪ್ರತೀಕವಾಗಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ರಾಜ್ಯ ನ್ಯಾಯ ವಿಜ್ಞಾನ ಪ್ರಯೋಗಾಲಯ, ಬೆಂಗಳೂರು ಮತ್ತು ಬೆಳಗಾವಿ ನಗರದಲ್ಲಿ 02 ಮಹಿಳಾ ಬ್ಯಾರೆಕ್‍ಗಳು, ದಾವಣಗೆರೆಯಲ್ಲಿ ಸಾರ್ವಜನಿಕ ಪೊಲೀಸ್ ಪಬ್ಲಿಕ್ ಶಾಲೆಗಳ ನಿರ್ಮಾಣ, 5 ನಗರಗಳಲ್ಲಿ ಒನ್ ಸ್ಟಾಪ್ ಸರ್ವೀಸ್ ಸೆಂಟರ್‍ಗಳ ಸ್ಥಾಪನೆ ಸೇರಿದಂತೆ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಸಂಕಷ್ಟದಲ್ಲಿರುವ ಜನರಿಗೆ ತ್ವರಿತವಾಗಿ ಸ್ಪಂದಿಸಲು ಅನುಕೂಲವಾಗುವಂತೆ ನಿರ್ಭಯ ಯೋಜನೆಯಡಿಯಲ್ಲಿ 700 ದ್ವಿ-ಚಕ್ರ ವಾಹನಗಳನ್ನು ರಾಜ್ಯದ ವಿವಿಧ ಪೊಲೀಸ್ ಠಾಣೆಗಳಿಗೆ ನೀಡಲಾಗಿದೆ ಎಂದು ತಿಳಿಸಿದರು.

ಸಮಾಜದಲ್ಲಿ ಅಪರಾಧ ಪ್ರಕರಣಗಳನ್ನು ಹತ್ತಿಕ್ಕಲು ಸೈಬರ್ ಎಕನಾಮಿಕ್ ಮತ್ತು ನಾರ್ಕೊಟಿಕ್ಸ್ ಪೊಲೀಸ್ ಠಾಣೆ, ಹೊಸ ಸಂಚಾರಿ ಪೊಲೀಸ್ ಠಾಣೆಗಳನ್ನು ಸೃಜಿಸಲಾಗಿದೆ. ಅಪರಾಧ ನಿಯಂತ್ರಣ, ಅಪರಾಧ ಪತ್ತೆಯಲ್ಲಿಯೂ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು.ಸೈಬರ್ ಅಪರಾಧ, ಆರ್ಥಿಕ ಅಪರಾಧಗಳನ್ನು ತಡೆಗಟ್ಟಲು ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಜೊತೆಗೆ ಠಾಣೆಗೆ ದೂರು ನೀಡಲು ಬರುವ ಸಾರ್ವಜನಿಕರೊಂದಿಗೆ ಮಾನವೀಯತೆಯಿಂದ ವರ್ತಿಸುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕ ಪೊಲೀಸ್ ಇಲಾಖೆ ದಕ್ಷತೆ, ಪ್ರಾಮಾಣಿಕತೆಯ ಪರಂಪರೆಯನ್ನು ಹೊಂದಿದೆ. ಅತ್ಯಂತ ಒತ್ತಡ, ಸವಾಲಿನ ಸನ್ನಿವೇಶದಲ್ಲಿಯೂ ಪೊಲೀಸರು ದಕ್ಷತೆಯಿಂದ ಕಾರ್ಯನಿರ್ವಹಿಸಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದರು.

ಮುಂದಿನ ದಿನಗಳಲ್ಲಿಯೂ ಸ್ವಚ್ಛ, ದಕ್ಷ ಮತ್ತು ಒತ್ತಡಮುಕ್ತವಾಗಿ ಪೊಲೀಸರು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಪೊಲೀಸರು ಹೊಸ ಸವಾಲುಗಳನ್ನು ಎದುರಿಸಲು ಅನುವಾಗುವಂತೆ ಇಲಾಖೆಯನ್ನು ಬಲಪಡಿಸಬೇಕಾಗಿದೆ. ಪೊಲೀಸರಿಗೆ ತರಬೇತಿ, ತಾಂತ್ರಿಕ ಬೆಂಬಲ, ತಂತ್ರಜ್ಞಾನದ ಉನ್ನತೀಕರಣದ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಕಳೆದ ವರ್ಷದಲ್ಲಿ ಮಾದಕವಸ್ತುಗಳನ್ನು ದಾಖಲೆ ಪ್ರಮಾಣದಲ್ಲಿ ವಶಪಡಿಸಿಕೊಳ್ಳಲಾಗಿದ್ದು, ಶಾಲೆ, ಕಾಲೇಜುಗಳ ಸಮೀಪ ಮಾದಕವಸ್ತುಗಳು ಲಭ್ಯವಾಗದಂತೆ ಪೊಲೀಸ್ ಠಾಣೆಯ ಹಂತದಲ್ಲಿಯೇ ಆದ್ಯತೆಯ ಮೇರೆಗೆ ಕ್ರಮ ವಹಿಸುವಂತೆ ಸೂಚಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಪ್ರವೀಣ್ ಸೂದ್ ಅವರು ಪೊಲೀಸ್ ಐಟಿ ಉನ್ನತೀಕರಣ ತುರ್ತು ಅಗತ್ಯವೆಂದು ಮುಖ್ಯಮಂತ್ರಿಗಳ ಗಮನ ಸೆಳೆದರು. ಇದಕ್ಕೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಒಳಾಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್, ಕೂ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

ರಾಜಕೀಯ

ಡೋನಾಲ್ಡ್ ಟ್ರಂಪ್‌ ವಿರುದ್ಧ ಹೆಚ್.ಡಿ. ದೇವೇಗೌಡ ತೀವ್ರ ಆಕ್ರೋಶ

ಡೋನಾಲ್ಡ್ ಟ್ರಂಪ್‌ ವಿರುದ್ಧ ಹೆಚ್.ಡಿ. ದೇವೇಗೌಡ ತೀವ್ರ ಆಕ್ರೋಶ

ಭಾರತದ ಆರ್ಥಿಕತೆ ಸತ್ತಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ (Donald Trump) ಹೇಳಿಕೆ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ (H.D. Deve Gowda)

[ccc_my_favorite_select_button post_id="111998"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು..!

ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು..!

ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಮನೆ ಕೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ಹೊರಡಿಸಿದೆ.

[ccc_my_favorite_select_button post_id="111989"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!