ಕೈಗಾರಿಕೆಗಳ ಮಾಲೀಕರಿಗೆ ಸಾಮಾಜಿಕ ಕಳಕಳಿಯ ಪ್ರೇರಣೆ ಕರೀಗೌಡ

ದೊಡ್ಡಬಳ್ಳಾಪುರ: ಕೈಗಾರಿಕೆಗಳ ಮಾಲೀಕರು ತಮ್ಮ ಸಾಮಾಜಿಕ ಕಳಕಳಿಯ ಕೆಲಸಗಳನ್ನು ಸಮಾಜಮುಖಿಯಾಗಿ ಮಾಡಬೇಕು ಎನ್ನುವುದನ್ನು ನಮಗೆ ತೋರಿಸಿಕೊಟ್ಟವರಲ್ಲಿ ಪ್ರಮುಖರು ಈ ಹಿಂದಿನ ಜಿಲ್ಲಾಧಿಕಾರಿ ಕರೀಗೌಡರು ಎಂದು ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಕೈಗಾರಿಕೆಗಳ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಂಜಿನೇಯಲು ಹೇಳಿದರು.

ಅವರು ನಗರದ ನಾಗರಕೆರೆ ಏರಿಯ ಅಂಚಿನಲ್ಲಿ ಏಸಿಲಾರ್ ಕಂಪನಿ ವತಿಯಿಂದ ಸಸಿಗಳನ್ನು ನೆಟ್ಟು ಬೆಳೆಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. 

2018-19ರಲ್ಲಿ ಕೈಗಾರಿಕೆಗಳವರು ಸಹ ಕೆರೆಗಳ ಅಭಿವೃದ್ಧಿ,ಸಸಿಗಳನ್ನು ನೆಟ್ಟು ಬೆಳೆಸಲು ನಮ್ಮನ್ನು ಪ್ರೋತ್ಸಾಹಿಸುತ್ತ ಮಲಗಿದ್ದವರನ್ನು ಎಬ್ಬಿಸಿಕೊಂಡು ಬಂದು ಕೆಲಸ ಮಾಡಿಸಿದ್ದು ಕರೀಗೌಡರು. ಇವರ ಪರಿಸರದ ಕಾಳಜಿಯ ಫಲವನ್ನು ಎರಡೇ ವರ್ಷಗಳಲ್ಲಿಯೇ ನಾವು ಕಾಣುತ್ತಿದ್ದೇವೆ. ಸಸಿಗಳನ್ನು ನೆಟ್ಟರಷ್ಟೇ ಸಾಲದು ಅವುಗಳನ್ನು ಒಂದೆರಡು ವರ್ಷಗಳಾದರು ಪೋಷಣೆ ಮಾಡಬೇಕು ಎಂದು ಹೇಳುತ್ತಿದ್ದರು. ಇದರಂತೆ ಏಸಿಲಾರ್ ಕಂಪನಿಯು ನಾಗರಕೆರೆ ಏರಿಯ ಅಂಚಿನಲ್ಲಿ ಮೊದಲ ಹಂತದಲ್ಲಿ 500 ಸಸಿಗಳನ್ನು ನೆಟ್ಟು ಬೆಳೆಸಿರುವ ಸಸಿಗಳು ಎರಡೇ ವರ್ಷಗಳಲ್ಲಿ ನೆರಳು ನೀಡುವಷ್ಟು ದೊಡ್ಡದಾಗಿ ಬೆಳೆದು ನಿಂತಿರುವುದನ್ನು ನೋಡಿದಾಗ ಸಾರ್ಥಕವೆನಿಸುತ್ತದೆ ಎಂದು ಹೇಳುವ ಮೂಲಕ ಭಾವುಕರಾದರು.  

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಕ್ಲೋ ಕೈಗಾರಿಕೆಯ ವ್ಯವಸ್ಥಾಪಕ ಪ್ರೇಮ್ಚಂದ್ ಮಾತನಾಡಿ, ಹತ್ತಾರು ಜನ ಅಧಿಕಾರಿಗಳು ಬಂದು ಹೋಗುತ್ತಾರೆ. ಆದರೆ ಕೆಲವರು ಮಾತ್ರ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯುವಂತಹ ಕೆಲಸ ಮಾಡುತ್ತಾರೆ. ಇಂತಹ ಕೆಲಸ ಮಾಡಲು ಸ್ಪೋರ್ತಿಯಾಗಿದ್ದಷ್ಟೇ ಅಲ್ಲದೆ ಇವರ ಮಾರ್ಗದರ್ಶನದಂತೆ ನಮ್ಮ ಕಾರ್ಖಾನೆಯಲ್ಲಿ ಮೇಲ್ಛಾವಣಿ ಮಳೆ ನೀರು ಸಂಗ್ರಹ ಮಾಡಲು ಆರಂಭಿಸಿದ ನಂತರ ಮಳೆಗಾದಲ್ಲಿ ಆರು ತಿಂಗಳ ಕಾಲ ನಮ್ಮ ಕೈಗಾರಿಕೆಗೆ ಅಗತ್ಯವಾಗುಷ್ಟು ಮಳೆ ನೀರನ್ನೇ ಬಳಸಲಾಗಿದೆ. ಇದರಿಂದ ಸಾಕಷ್ಟು ಅಂತರ್ಜಲ, ವಿದ್ಯುತ್ ಬಿಲ್ ಸಹ ಉಳಿತಾಯವಾಗಿದೆ ಎಂದರು.

ಬೆಂಗಳೂರು ರೋಟರ್ ಕ್ಲಬ್ ಗರ್ವನರ್  ನಾಗೇಂದ್ರ ಪ್ರಸಾದ್ ಮಾತನಾಡಿ, ದೇವನಹಳ್ಳಿ ತಾಲ್ಲೂಕಿನ ಕೊಯಿರ ಗ್ರಾಮದ ಕೆರೆಯನ್ನು ಅಂದಿನ ಜಿಲ್ಲಾಧಿಕಾರಿಗಳಾಗಿದ್ದ ಕರೀಗೌಡ ಅವರ ಸಹಕಾರದೊಂದಿಗೆ ರೋಟರಿ ಕ್ಲಬ್ ಅಭಿವೃದ್ಧಿ ಮಾಡಿತ್ತು. ದಶಕಗಳ ಕಾಲ ಕೆರೆಗೆ ನೀರು ಬಂದು ತುಂಬದೇ ಬರಿದಾಗಿದ್ದ ಕೆರೆ ಹೂಳು ತೆಗೆದ ನಂತರ ತುಂಬಿಕೊಂಡಿತು. ಇದರಿಂದ ಈ ಪ್ರದೇಶದಲ್ಲಿನ ರೈತರು ಮತ್ತೆ ಭತ್ತ ಬೆಳೆದರು, ಕೊಳವೆ ಬಾವಿಗಳಲ್ಲಿನ ಅಂತರ್ಜಲ ವೃದ್ಧಿಯಾಗಿದೆ. ರೋಟರಿ ಕ್ಲಬ್ಗೆ ಇದೊಂದು ಸಾರ್ಥಕ ಕೆಲಸ. ಇದರಿಂದ ಸ್ಪೂರ್ತಿಗೊಂಡು ಈಗ ಮತ್ತಷ್ಟು ಕೆರೆಗಳ ಅಭಿವೃದ್ಧಿ ಕೆಲಸ ಆರಂಭಿಸಲಾಗಿದೆ. ಹಾಗೆಯೆ ರೋಟರಿ ವನಗಳನ್ನು ಬೆಳೆಸಲಾಗುತ್ತಿದೆ ಎಂದರು. 

ಏಸ್ಸಿಲಾರ್ ಕಂಪನಿಯ ಸೈಟ್ ಹೆಡ್ ಕುಲದೀಪ್ಸಿಂಗ್ ಮಾತನಾಡಿ, ನಾಗರಕೆರೆ ಏರಿಯ ಅಂಚಿನಲ್ಲಿ ಕಂಪನಿಯ ಸಿಎಸ್ಆರ್ ಯೋಜನೆಯಲ್ಲಿ 500 ಸಸಿಗಳನ್ನು ನೆಡಲಾಗಿದೆ. ಈಗ ಎರಡನೇ ಹಂತದಲ್ಲಿ 550 ಸಸಿಗಳನ್ನು ನೆಟ್ಟು ಎರಡು ವರ್ಷಗಳ ಕಾಲ ಪೋಷಣೆ ಮಾಡುವ ಕೆಲಸವನ್ನು ವಹಿಸಿಕೊಳ್ಳಲಾಗಿದೆ ಎಂದರು.

ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕೃಷಿ ಮಾರುಕಟ್ಟೆ ನಿರ್ದೇಶಕ ಸಿ.ಎಸ್. ಕರೀಗೌಡ, ಜಮ್ಮು ಕಾಶ್ಮೀರದ ಲಡಾಖ್ ಪ್ರದೇಶದಲ್ಲಿ ₹150 ಕೋಟಿ ಸಿಎಸ್ಆರ್ ನೆರವಿನಿಂದಲೇ ಶಾಲಾ, ಕಾಲೇಜು ಈಗ ವಿಶ್ವ ವಿದ್ಯಾಲಯವನ್ನು ಸ್ಥಾಪಿಸಿ ಮುನ್ನಡೆಸಲಾಗುತ್ತಿದೆ. ಒಳ್ಳೆಯ ಕೆಲಸಕ್ಕೆ ಜನರಿಂದ ಸದಾ ಸಹಕಾರ ಇದ್ದೇ ಇರುತ್ತದೆ. ಆದರೆ ನಾವು ನೀಡುವ ಹಣ ಒಳ್ಳೆಯ ಕೆಲಸಕ್ಕೆ ಉಪಯೋಗಿಸುವುದು ಪಾರದರ್ಶಕವಾಗಿರಬೇಕು ಎಂದರು.

ಕಾರ್ಯಕ್ರಮದಲ್ಲಿ ಏಸಿಲಾರ್ ಸಿಎಸ್ಆರ್ ವಿಭಕರೀಗೌಡರನ್ ಮಲ್ಪೆ,ರಶ್ಮಿ, ತಿರುಮಲ ನರ್ಸರಿಯ ಹನುಮಂತರೆಡ್ಡಿ ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್, ಕೂ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

ರಾಜಕೀಯ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಜೆಡಿಎಸ್‌ನ (JDS) ಹಿರಿಯ ಮುಖಂಡ ಹುಸ್ಕೂರು ಆನಂದ್ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು, ಭಿನಮತ ಶಮನವಾಗಿರುವ ಮಾಹಿತಿ ತಿಳಿದು ಬಂದಿದೆ.

[ccc_my_favorite_select_button post_id="121822"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]