ಫೆ.20ರಂದು ಹೊಸಹಳ್ಳಿಯಲ್ಲಿ ನಡೆಯುವ ಜಿಲ್ಲಾಧಿಕಾರಿ ನಡೆ, ಹಳ್ಳಿ ಕಡೆ ಕಾರ್ಯಕ್ರಮಕ್ಕೆ ನೂತನ ಜಿಲ್ಲಾಧಿಕಾರಿ ಶ್ರೀನಿವಾಸ್

ಬೆಂ.ಗ್ರಾ.ಜಿಲ್ಲೆ: ದಿಢೀರ್ ನಡೆದ ವರ್ಗಾವಣೆ ಪ್ರಕ್ರಿಯೆಯ ಕಾರಣ ಫೆಬ್ರವರಿ 20ರಂದು ಹೊಸಹಳ್ಳಿಯಲ್ಲಿ ನಡೆಯುವ ಜಿಲ್ಲಾಧಿಕಾರಿ ನಡೆ, ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿದ್ದ ಪಿ.ಎನ್.ರವೀಂದ್ರ ವರ್ಗಾವಣೆ ಹಿನ್ನೆಲೆಯಲ್ಲಿ ಅವರ ಬದಲಾಗಿ ನೂತನ ಜಿಲ್ಲಾಧಿಕಾರಿ ಶ್ರೀನಿವಾಸ್ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಕುರಿತು ಮಾಹಿತಿ ನೀಡಿರುವ ಅವರು, ಗ್ರಾಮಗಳಲ್ಲಿನ ಸಮಸ್ಯೆ ಆಲಿಸಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರ್ಕಾರವು “ಜಿಲ್ಲಾಧಿಕಾರಿಗಳ ನಡೆ-ಹಳ್ಳಿಗಳ ಕಡೆ” ಎಂಬ ವಿನೂತನ ಕಾರ್ಯಕ್ರಮವನ್ನು ಪ್ರತಿ ತಿಂಗಳ ಮೂರನೇ ಶನಿವಾರದಂದು ತಾಲ್ಲೂಕಿನ ಒಂದು ಗ್ರಾಮದಲ್ಲಿ ಹಮ್ಮಿಕೊಂಡು ಜಿಲ್ಲಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ ಹಾಗೂ ಜಿಲ್ಲಾಧಿಕಾರಿಗಳ ವಾಸ್ತವ್ಯದ ತಾಲ್ಲೂಕನ್ನು ಹೊರತುಪಡಿಸಿ ಉಳಿಕೆ ತಾಲ್ಲೂಕುಗಳಲ್ಲಿ ತಹಶೀಲ್ದಾರ್ ಹಾಗೂ ಇತರೆ ಅಧಿಕಾರಿಗಳು ಗ್ರಾಮ ವಾಸ್ತವ್ಯ ಹೂಡಲಿದ್ದಾರೆ.

2021ರ ಫೆಬ್ರವರಿ 20ರ ಮೂರನೇ ಶನಿವಾರದಂದು ದೊಡ್ಡಬಳ್ಳಾಪುರ ತಾಲ್ಲೂಕು ಸಾಸಲು ಹೋಬಳಿಯ ಹೊಸಹಳ್ಳಿ ಗ್ರಾಮದಲ್ಲಿ “ಜಿಲ್ಲಾಧಿಕಾರಿ ನಡೆ-ಹಳ್ಳಿ ಕಡೆಗೆ” ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಕಂದಾಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಅಶೋಕ ಅವರು ಭಾಗವಹಿಸಿ  ಫೆ.20ರ ಬೆಳಿಗ್ಗೆ 10.00 ಗಂಟೆಯಿಂದ 21ರ ಬೆಳಿಗ್ಗೆ 8.00 ಗಂಟೆಯವರೆಗೆ ಕಂದಾಯ ಇಲಾಖೆ ಹಾಗೂ ಇತರೆ ಇಲಾಖೆಗಳಿಂದ ವಿವಿಧ ಸವಲತ್ತುಗಳ ವಿತರಣೆ ಹಾಗೂ ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ.

ಸರ್ಕಾರದ ನಿರ್ದೇಶನದಂತೆ ಈಗಾಗಲೇ ಕಂದಾಯ ಅಧಿಕಾರಿಗಳು ಹಲವು ವಿಷಯಗಳ ಫಲಾನುಭವಿಗಳನ್ನು ಗುರುತಿಸಲು ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ ಪಹಣಿ ಕಾಲಂ 3 ಮತ್ತು 9ಕ್ಕೆ ವ್ಯತ್ಯಾಸ ಸರಿಪಡಿಸುವ ಬಗ್ಗೆ ಆದೇಶಗಳನ್ನು ಹೊರಡಿಸಲಾಗುವುದು‌. ಗ್ರಾಮದಲ್ಲಿ ಪೌತಿ ಹೊಂದಿದ ಖಾತೆದಾರರನ್ನು ಗುರುತಿಸಿ ಪೌತಿ ಖಾತೆ ಬದಲಾವಣೆ ಮಾಡಲು ಕ್ರಮಕೈಗೊಳ್ಳಲಾಗಿದೆ. ಗ್ರಾಮದ ಎಲ್ಲಾ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಪಿಂಚಣಿಯನ್ನು ಮಂಜೂರು ಮಾಡಲಾಗುವುದು.

ಆಶ್ರಯ ಯೋಜನೆಗೆ ಜಮೀನು ಮಂಜೂರು ಮಾಡುವುದು. ಆಧಾರ್ ಕಾರ್ಡ್‌ನ ಅನುಕೂಲತೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು. ಹದ್ದುಬಸ್ತು ಪೋಡಿ ಬಗ್ಗೆ ಮಾಹಿತಿ ನೀಡುವುದು. ಸರ್ಕಾರಿ ವಸತಿ ನಿಲಯಕ್ಕೆ ಭೇಟಿ ನೀಡಿ ಸುಸ್ಥಿತಿ ಬಗ್ಗೆ ಪರಿಶೀಲಿಸಲಾಗುವುದು. ಎಲ್ಲಾ ಅರ್ಹ ಬಡ ಕುಟುಂಬದವರಿಗೆ ಬಿಪಿಎಲ್ ಕಾರ್ಡ್ ನೀಡಲು ಕ್ರಮವಹಿಸಲಾಗುವುದು. ಗುಡಿಸಲು ರಹಿತ ವಾಸದ ಮನೆಗಳ ನಿರ್ಮಾಣದ ಬಗ್ಗೆ ಗ್ರಾಮ ಭೇಟಿಯ ಸಂರ್ಧಭದಲ್ಲಿ ಪರಿಶೀಲಿಸಲಾಗುವುದು. ಇತರೆ ಇಲಾಖೆಗಳಿಂದ ನೀಡಬಹುದಾದ ಸೌಲಭ್ಯದ ಬಗ್ಗೆ ಗ್ರಾಮದಲ್ಲಿ ಮಾಹಿತಿ ನೀಡಲು ಕ್ರಮ ಕೈಗೊಳ್ಳಲಾಗಿದೆ. 

ಕಂದಾಯ ಇಲಾಖೆಯಿಂದ ನೀಡಲಾಗುವ ಸವಲತ್ತುಗಳಾದ ವಿವಿಧ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆಯಡಿಯಲ್ಲಿ 150 ಫಲಾನುಭವಿಗಳಿಗೆ ಪಿಂಚಣಿ ಮಂಜೂರಾತಿ ನೀಡಲಾಗುವುದು, 250 ಫಲಾನುಭವಿಗಳ ಆಧಾರ್ ನೋಂದಣಿ, 50 ಫಲಾನುಭವಿಗಳಿಗೆ ಮತದಾರರ ಗುರುತಿನ ಚೀಟಿ(EPIC), 200 ಪಹಣಿ ಕಾಲಂ 3&9ರ ತಿದ್ದುಪಡಿ, 25 ಪೌತಿ ಖಾತೆ ಸೇರಿದಂತೆ 625 ಫಲಾನುಭವಿಗಳಿಗೆ ಸವಲತ್ತುಗಳನ್ನು ನೀಡಲಿದ್ದಾರೆ.

ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಹೋಬಳಿ ಕೋರಮಂಗಲ ಗ್ರಾಮ, ಹೊಸಕೋಟೆ ತಾಲ್ಲೂಕಿನ ಜಡಿಗೇನಹಳ್ಳಿ ಹೋಬಳಿ ತವಟಹಳ್ಳಿ ಗ್ರಾಮ ಹಾಗೂ ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಹೋಬಳಿಯ ಹೊನ್ನಾರಾಯನಹಳ್ಳಿ ಗ್ರಾಮವನ್ನು ಆಯ್ಕೆ ಮಾಡಿದ್ದು, ತಹಶೀಲ್ದಾರ್, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳು ಗ್ರಾಮದಲ್ಲಿ ಸರ್ಕಾರದ ನಿರ್ದೇಶನದಂತೆ ಗ್ರಾಮಸ್ಥರಿಗೆ ಸವಲತ್ತುಗಳನ್ನು ನೀಡಲು ಹಾಗೂ ಪಹಣಿ ಕಾಲಂ 3 ಮತ್ತು 9ರ ವ್ಯತ್ಯಾಸದ ಬಗ್ಗೆ ಹಾಗೂ ಪಿಂಚಣಿ ಆಂದೋಲನದ ಬಗ್ಗೆ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಹಾಗೂ ಗ್ರಾಮ ವಾಸ್ತವ್ಯಕ್ಕೆ ಸಕಲ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.

ಕಾರ್ಯಕ್ರಮದ ಆಯೋಜನೆ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಹೊಸಹಳ್ಳಿಗೆ ಭೇಟಿ ನೀಡಿ ಸಿದ್ದತೆ ಪರಿಶೀಲಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

ರಾಜಕೀಯ

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಆರಂಭ: ಪೆಂಡಾಲ್ ತೆರವಿಗೆ ಡಿಸಿ ಸೂಚನೆ

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಆರಂಭ: ಪೆಂಡಾಲ್ ತೆರವಿಗೆ ಡಿಸಿ ಸೂಚನೆ

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ (Bashettihalli town panchayat election) ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದೆ.

[ccc_my_favorite_select_button post_id="117602"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!