ಫೆ.20ರಂದು ಹೊಸಹಳ್ಳಿಯಲ್ಲಿ ನಡೆಯುವ ಜಿಲ್ಲಾಧಿಕಾರಿ ನಡೆ, ಹಳ್ಳಿ ಕಡೆ ಕಾರ್ಯಕ್ರಮಕ್ಕೆ ನೂತನ ಜಿಲ್ಲಾಧಿಕಾರಿ ಶ್ರೀನಿವಾಸ್

ಬೆಂ.ಗ್ರಾ.ಜಿಲ್ಲೆ: ದಿಢೀರ್ ನಡೆದ ವರ್ಗಾವಣೆ ಪ್ರಕ್ರಿಯೆಯ ಕಾರಣ ಫೆಬ್ರವರಿ 20ರಂದು ಹೊಸಹಳ್ಳಿಯಲ್ಲಿ ನಡೆಯುವ ಜಿಲ್ಲಾಧಿಕಾರಿ ನಡೆ, ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿದ್ದ ಪಿ.ಎನ್.ರವೀಂದ್ರ ವರ್ಗಾವಣೆ ಹಿನ್ನೆಲೆಯಲ್ಲಿ ಅವರ ಬದಲಾಗಿ ನೂತನ ಜಿಲ್ಲಾಧಿಕಾರಿ ಶ್ರೀನಿವಾಸ್ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಕುರಿತು ಮಾಹಿತಿ ನೀಡಿರುವ ಅವರು, ಗ್ರಾಮಗಳಲ್ಲಿನ ಸಮಸ್ಯೆ ಆಲಿಸಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರ್ಕಾರವು “ಜಿಲ್ಲಾಧಿಕಾರಿಗಳ ನಡೆ-ಹಳ್ಳಿಗಳ ಕಡೆ” ಎಂಬ ವಿನೂತನ ಕಾರ್ಯಕ್ರಮವನ್ನು ಪ್ರತಿ ತಿಂಗಳ ಮೂರನೇ ಶನಿವಾರದಂದು ತಾಲ್ಲೂಕಿನ ಒಂದು ಗ್ರಾಮದಲ್ಲಿ ಹಮ್ಮಿಕೊಂಡು ಜಿಲ್ಲಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ ಹಾಗೂ ಜಿಲ್ಲಾಧಿಕಾರಿಗಳ ವಾಸ್ತವ್ಯದ ತಾಲ್ಲೂಕನ್ನು ಹೊರತುಪಡಿಸಿ ಉಳಿಕೆ ತಾಲ್ಲೂಕುಗಳಲ್ಲಿ ತಹಶೀಲ್ದಾರ್ ಹಾಗೂ ಇತರೆ ಅಧಿಕಾರಿಗಳು ಗ್ರಾಮ ವಾಸ್ತವ್ಯ ಹೂಡಲಿದ್ದಾರೆ.

2021ರ ಫೆಬ್ರವರಿ 20ರ ಮೂರನೇ ಶನಿವಾರದಂದು ದೊಡ್ಡಬಳ್ಳಾಪುರ ತಾಲ್ಲೂಕು ಸಾಸಲು ಹೋಬಳಿಯ ಹೊಸಹಳ್ಳಿ ಗ್ರಾಮದಲ್ಲಿ “ಜಿಲ್ಲಾಧಿಕಾರಿ ನಡೆ-ಹಳ್ಳಿ ಕಡೆಗೆ” ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಕಂದಾಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಅಶೋಕ ಅವರು ಭಾಗವಹಿಸಿ  ಫೆ.20ರ ಬೆಳಿಗ್ಗೆ 10.00 ಗಂಟೆಯಿಂದ 21ರ ಬೆಳಿಗ್ಗೆ 8.00 ಗಂಟೆಯವರೆಗೆ ಕಂದಾಯ ಇಲಾಖೆ ಹಾಗೂ ಇತರೆ ಇಲಾಖೆಗಳಿಂದ ವಿವಿಧ ಸವಲತ್ತುಗಳ ವಿತರಣೆ ಹಾಗೂ ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ.

ಸರ್ಕಾರದ ನಿರ್ದೇಶನದಂತೆ ಈಗಾಗಲೇ ಕಂದಾಯ ಅಧಿಕಾರಿಗಳು ಹಲವು ವಿಷಯಗಳ ಫಲಾನುಭವಿಗಳನ್ನು ಗುರುತಿಸಲು ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ ಪಹಣಿ ಕಾಲಂ 3 ಮತ್ತು 9ಕ್ಕೆ ವ್ಯತ್ಯಾಸ ಸರಿಪಡಿಸುವ ಬಗ್ಗೆ ಆದೇಶಗಳನ್ನು ಹೊರಡಿಸಲಾಗುವುದು‌. ಗ್ರಾಮದಲ್ಲಿ ಪೌತಿ ಹೊಂದಿದ ಖಾತೆದಾರರನ್ನು ಗುರುತಿಸಿ ಪೌತಿ ಖಾತೆ ಬದಲಾವಣೆ ಮಾಡಲು ಕ್ರಮಕೈಗೊಳ್ಳಲಾಗಿದೆ. ಗ್ರಾಮದ ಎಲ್ಲಾ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಪಿಂಚಣಿಯನ್ನು ಮಂಜೂರು ಮಾಡಲಾಗುವುದು.

ಆಶ್ರಯ ಯೋಜನೆಗೆ ಜಮೀನು ಮಂಜೂರು ಮಾಡುವುದು. ಆಧಾರ್ ಕಾರ್ಡ್‌ನ ಅನುಕೂಲತೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು. ಹದ್ದುಬಸ್ತು ಪೋಡಿ ಬಗ್ಗೆ ಮಾಹಿತಿ ನೀಡುವುದು. ಸರ್ಕಾರಿ ವಸತಿ ನಿಲಯಕ್ಕೆ ಭೇಟಿ ನೀಡಿ ಸುಸ್ಥಿತಿ ಬಗ್ಗೆ ಪರಿಶೀಲಿಸಲಾಗುವುದು. ಎಲ್ಲಾ ಅರ್ಹ ಬಡ ಕುಟುಂಬದವರಿಗೆ ಬಿಪಿಎಲ್ ಕಾರ್ಡ್ ನೀಡಲು ಕ್ರಮವಹಿಸಲಾಗುವುದು. ಗುಡಿಸಲು ರಹಿತ ವಾಸದ ಮನೆಗಳ ನಿರ್ಮಾಣದ ಬಗ್ಗೆ ಗ್ರಾಮ ಭೇಟಿಯ ಸಂರ್ಧಭದಲ್ಲಿ ಪರಿಶೀಲಿಸಲಾಗುವುದು. ಇತರೆ ಇಲಾಖೆಗಳಿಂದ ನೀಡಬಹುದಾದ ಸೌಲಭ್ಯದ ಬಗ್ಗೆ ಗ್ರಾಮದಲ್ಲಿ ಮಾಹಿತಿ ನೀಡಲು ಕ್ರಮ ಕೈಗೊಳ್ಳಲಾಗಿದೆ. 

ಕಂದಾಯ ಇಲಾಖೆಯಿಂದ ನೀಡಲಾಗುವ ಸವಲತ್ತುಗಳಾದ ವಿವಿಧ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆಯಡಿಯಲ್ಲಿ 150 ಫಲಾನುಭವಿಗಳಿಗೆ ಪಿಂಚಣಿ ಮಂಜೂರಾತಿ ನೀಡಲಾಗುವುದು, 250 ಫಲಾನುಭವಿಗಳ ಆಧಾರ್ ನೋಂದಣಿ, 50 ಫಲಾನುಭವಿಗಳಿಗೆ ಮತದಾರರ ಗುರುತಿನ ಚೀಟಿ(EPIC), 200 ಪಹಣಿ ಕಾಲಂ 3&9ರ ತಿದ್ದುಪಡಿ, 25 ಪೌತಿ ಖಾತೆ ಸೇರಿದಂತೆ 625 ಫಲಾನುಭವಿಗಳಿಗೆ ಸವಲತ್ತುಗಳನ್ನು ನೀಡಲಿದ್ದಾರೆ.

ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಹೋಬಳಿ ಕೋರಮಂಗಲ ಗ್ರಾಮ, ಹೊಸಕೋಟೆ ತಾಲ್ಲೂಕಿನ ಜಡಿಗೇನಹಳ್ಳಿ ಹೋಬಳಿ ತವಟಹಳ್ಳಿ ಗ್ರಾಮ ಹಾಗೂ ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಹೋಬಳಿಯ ಹೊನ್ನಾರಾಯನಹಳ್ಳಿ ಗ್ರಾಮವನ್ನು ಆಯ್ಕೆ ಮಾಡಿದ್ದು, ತಹಶೀಲ್ದಾರ್, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳು ಗ್ರಾಮದಲ್ಲಿ ಸರ್ಕಾರದ ನಿರ್ದೇಶನದಂತೆ ಗ್ರಾಮಸ್ಥರಿಗೆ ಸವಲತ್ತುಗಳನ್ನು ನೀಡಲು ಹಾಗೂ ಪಹಣಿ ಕಾಲಂ 3 ಮತ್ತು 9ರ ವ್ಯತ್ಯಾಸದ ಬಗ್ಗೆ ಹಾಗೂ ಪಿಂಚಣಿ ಆಂದೋಲನದ ಬಗ್ಗೆ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಹಾಗೂ ಗ್ರಾಮ ವಾಸ್ತವ್ಯಕ್ಕೆ ಸಕಲ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.

ಕಾರ್ಯಕ್ರಮದ ಆಯೋಜನೆ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಹೊಸಹಳ್ಳಿಗೆ ಭೇಟಿ ನೀಡಿ ಸಿದ್ದತೆ ಪರಿಶೀಲಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

ರಾಜಕೀಯ

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

“ಮನರೇಗಾ ಯೋಜನೆ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ (Prahlad Joshi) ಅವರು ಬಹಿರಂಗ ಚರ್ಚೆಗೆ ಬರಲಿ. ಆ ಮೂಲಕ ಜನರಿಗೆ ಈ ವಿಚಾರವಾಗಿ ಜಾಗೃತಿ

[ccc_my_favorite_select_button post_id="118281"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!