ಗ್ರಾಮಪಂಚಾಯಿತಿ ನೂತನ ಸದಸ್ಯರಿಗೆ ಸಾಮರ್ಥ್ಯ ಅಭಿವೃದ್ಧಿ ತರಬೇತಿ / ಗೈರಾಗುವ ಸದಸ್ಯರ ವಿರುದ್ದ ಶಿಸ್ತು ಕ್ರಮ

ದೊಡ್ಡಬಳ್ಳಾಪುರ: ಇತ್ತೀಚೆಗೆ ನಡೆದ ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ವಿಜೇತರಾದ ಸದಸ್ಯರಿಗೆ ನಗರ ತಾಲೂಕು ಪಂಚಾಯಿತಿ ಹಿಂಬಾಗದಲ್ಲಿನ ಸಾಮರ್ಥ್ಯ ಸೌಧದಲ್ಲಿ  ಸಾಮರ್ಥ್ಯ ಅಭಿವೃದ್ಧಿ ತರಬೇತಿಯನ್ನು ಆರಂಭಿಸಲಾಯಿತು.

ತರಬೇತಿ ಕಾರ್ಯಕ್ರಮವನ್ನು  ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಕಾರ್ಯದರ್ಶಿ ಕೆ.ಕರಿಯಪ್ಪ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಪ್ರತಿಯೊಬ್ಬ ಗ್ರಾಮಪಂಚಾಯಿತಿ ಸದಸ್ಯರೂ ಕೂಡ ಗೈರಾಗದೆ ತರಬೇತಿಯ ಅನುಕೂಲತೆಗಳನ್ನು ಪಡೆದು ಕೊಳ್ಳಬೇಕು, ಸದಸ್ಯರಿಗೆ ಬೇಕಾದ ಊಟ ,ಉಪಹಾರದ ವ್ಯವಸ್ಥೆ ಯನ್ನು ಕಲ್ಪಿಸಲಾಗಿದೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಜರಾತಿ ಕಡೆ ಹೆಚ್ಚು ಗಮನಹರಿಸಬೇಕು, ಗೈರಾದ ಸದಸ್ಯರ ಪಟ್ಟಿಯನ್ನು ಮೇಲಿನ ಅಧಿಕಾರಿಗಳಿಗೆ ನೀಡಬೇಕಿದೆ. ತರಬೇತಿಗೆ ಗೈರಾಗುವ ಸದಸ್ಯರ ವಿರುದ್ದ ಶಿಸ್ತು ಕ್ರಮಕೈಗೊಳ್ಳಲಾಗುವುದೆಂದರು.

ಚುನಾಯಿತ ಸದಸ್ಯರು ಗ್ರಾಮಪಂಚಾಯಿತಿ ಅಭಿವೃದ್ಧಿಗೆ ಶ್ರಮಿಸಬೇಕು, ಯಾವುದೇ ಕುಂದು ಕೊರತೆ ಬಂದರೆ ತಾಲೂಕು ಪಂಚಾಯಿತಿ ಇಒ ಅವರ ಗಮನಕ್ಕೆ ತರಬೇಕು ಎಂದು ಸಲಹೆ ನೀಡಿದರು‌.

ತಾಪಂ ಕಾರ್ಯನಿರ್ವಹಣಾಧಿಕಾರಿ ಸಿ.ಮುರುಡಯ್ಯ ಮಾತನಾಡಿ, ಗ್ರಾಮ ಪಂಚಾಯತಿಗಳಲ್ಲಿ ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಸದಸ್ಯರಿಗೆ ಮಾಹಿತಿ ನೀಡುವ ಸಲುವಾಗಿ ಈ ತರಬೇತಿ ಆಯೋಜಿಸಲಾಗಿದೆ. 

ಎರಡು ಗ್ರಾಮಪಂಚಾಯಿತಿಗಳ ಸದಸ್ಯರನ್ನು ಸೇರಿಸಿ 5ದಿನಗಳ ಕಾಲ ತರಬೇತಿ ನೀಡಲಾಗುತ್ತಿದ್ದು, 25 ಗ್ರಾಮಪಂಚಾಯಿತಿಗಳ ಸದಸ್ಯರಿಗೆ ತರಬೇತಿ ನೀಡಲಾಗುವುದು.

ಈ ತರಬೇತಿಯಲ್ಲಿ ಗ್ರಾಪಂಗಳ ಅಭಿವೃದ್ಧಿ ಹೇಗೆ ಎಂಬ ಕುರಿತಾದ ಮಾಹಿತಿ, ತಾಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯಿತಿಯಿಂದ ಸಿಗುವ ಸವಲತ್ತುಗಳ ಬಗ್ಗೆ ಸಂಕ್ಷಿಪ್ತವಾಗಿ ಎಲ್ಲಾ ಸದಸ್ಯರು ತಿಳಿದುಕೊಂಡು ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.

ತಾಪಂ ಅಧ್ಯಕ್ಷ ನಾರಾಯಣಗೌಡ ಮಾತನಾಡಿ, ಗ್ರಾಮಪಂಚಾಯಿತಿಯ ಅಭಿವೃದ್ಧಿ ಕನಸು ಹೊತ್ತು ಚುನಾವಣೆಯಲ್ಲಿ ಜಯಗಳಿಸಿದ ಎಲ್ಲ ಸದಸ್ಯರು ಈ ತರಬೇತಿಯ ಅನುಕೂಲಗಳನ್ನು ಪಡೆದು ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುವ ಸಂಕಲ್ಪ ಮಾಡಬೇಕಿದೆ. ಯಾವುದೇ ಪಕ್ಷಪಾತವಿಲ್ಲದೆ ಶಿಸ್ತಿನಿಂದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಬೇಕಿದೆ. ಪ್ರತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಪ್ರಶ್ನಿಸಿ ಅಭಿವೃದ್ಧಿ ಪಥದಲ್ಲಿ ನಡೆಯಿರಿ ಎಂದು ಸದಸ್ಯರಿಗೆ ಸಲಹೆ ನೀಡಿದರು.

ಈ ವೇಳೆ ಪಿಡಿಒಗಳಾದ ಮುನಿಯಾ ನಾಯ್ಕ್, ರಮಿತ, ತರಬೇತುದಾರ ಬೈಲಾಜನಮೂರ್ತಿ, ಸಹಾಯಕ ನಿರ್ದೇಶಕ ಗಂಗರಾಜು, ವ್ಯವಸ್ಥಾಪಕ ಗಂಗಾರಂಗಯ್ಯ, ಕೃಷ್ಣಮೂರ್ತಿ, ವೆಂಕಟೇಶ್ ಮತ್ತಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

ರಾಜಕೀಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ ಹೆಸರುಗಳಿವೆ: ಸಿಎಂ ಸಿದ್ದರಾಮಯ್ಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ

ಬಿಜೆಪಿಯವರು ಪ್ರಚೋದನಾ ಕಾರಿಯಾದ ಭಾಷಣ ಮಾಡಿದರೆ ಏನು ಮಾಡಬೇಕು? ಶಾಂತಿ ನೆಮ್ಮದಿಯನ್ನು ಕಾಪಾಡುವುದು ಅತ್ಯಂತ ಅವಶ್ಯಕ. ಅದಕ್ಕಾಗಿ ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ: Cmsiddaramaiah

[ccc_my_favorite_select_button post_id="113856"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ತಾಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆಯ (MSV Public School) ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

[ccc_my_favorite_select_button post_id="113787"]
ಸಾಲಬಾಧೆ: ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಮುಂದಾದ ದಂಪತಿ‌‌.. ಪತಿ ಸಾವು, ಪತ್ನಿ ಪಾರು..!

ಸಾಲಬಾಧೆ: ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಮುಂದಾದ ದಂಪತಿ‌‌.. ಪತಿ ಸಾವು, ಪತ್ನಿ ಪಾರು..!

ಹೊಸಕೋಟೆ: ಸಾಲಬಾಧೆಯಿಂದ ಬೇಸತ್ತ ಕುಟುಂಬವೊಂದು ಆತ್ಮಹತ್ಯೆಗೆ (Suicide) ಯತ್ನಿಸಿದ್ದು, ಪರಿಣಾಮ ಮೂವರು ಸಾವನ್ನಪ್ಪಿದ್ದರೆ ಒಬ್ಬರು ಗಂಭೀರವಾಗಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಶಿವು (32 ವರ್ಷ), ಮಗಳು ಚಂದ್ರಕಲಾ (11ವರ್ಷ) ಮಗ ಉದಯ್ ಸೂರ್ಯ (07 ವರ್ಷ) ಎಂದು ಗುರುತಿಸಲಾಗಿದೆ. ಶಿವುವಿನ

[ccc_my_favorite_select_button post_id="113883"]
ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ ಸಂಖ್ಯೆ ..!| Video

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ

ಶುಕ್ರವಾರ ರಾತ್ರಿ ಗಣೇಶ (Ganesha) ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟ‌ರ್ ಲಾರಿ ನುಗ್ಗಿದ ಪರಿಣಾಮ, 9 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="113840"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!