ಡಾ.ರಾಜ್‌ಕುಮಾರ್ ವಿರುದ್ಧ ವಿವಾದಿತ ಹೇಳಿಕೆ: ಶಾಸಕ ಹ್ಯಾರಿಸ್ ವಿರುದ್ದ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆ

ದೊಡ್ಡಬಳ್ಳಾಪುರ: ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಕಾಂಗ್ರೆಸ್ ಮುಖಂಡ ಎನ್.ಎ.ಹ್ಯಾರಿಸ್ ಅವರು ವರನಟ ಡಾ.ರಾಜ್‌ಕುಮಾರ್ ಪ್ರತಿಮೆ ಸ್ಥಾಪನೆ ಕುರಿತು ನೀಡಿರುವ ವಿವಾದಿತ ಹೇಳಿಕೆಯನ್ನು ಖಂಡಿಸಿ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದಿಂದ‌ ನಗರದ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ರಾಜ್ ಕುಮಾರ್ ಸಂಘದ ತಾಲ್ಲೂಕು ಅಧ್ಯಕ್ಷ ಸು.ನರಸಿಂಹಮೂರ್ತಿ, ನಾಡಿನ ಕೆಲ ನೀಚ ರಾಜಕಾರಣಿಗಳಿಗೆ ಕನ್ನಡದ ಬಗ್ಗೆ ಸ್ವಲ್ಪವೂ ಕಾಳಜಿ ಇಲ್ಲವಾಗಿದೆ. ಶಾಸಕ ಹ್ಯಾರಿಸ್ ಮೇರುನಟ ಡಾ.ರಾಜ್ ಕುಮಾರ್ ಅವರ ಸಾಧನೆ ಬಗ್ಗೆ ತಿಳಿಯದೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ, ರಾಜ್ ಕುಮಾರ್ ರವರ ಸಾಧನೆ ಮತ್ತು ಕನ್ನಡ ಪರ ಹೋರಾಟಗಳು ಕನ್ನಡ ಭಾಷೆಗೆ ಅವರು ಕೊಟ್ಟ ಕೊಡುಗೆ ಅಪಾರ. ಇಡೀ ವಿಶ್ವಕ್ಕೆ ಕನ್ನಡದ ನಾಡು ನುಡಿಯ ಬಗ್ಗೆ ತಿಳಿಸಿಕೊಟ್ಟ ಅವರ ಬಗ್ಗೆ ಮಾತನಾಡುವ ಯೋಗ್ಯತೆ ಹ್ಯಾರಿಸ್ ಗೆ ಇಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಯದರ್ಶಿ ಸುರೇಶ್ ರಾವ್, ಖಜಾಂಚಿ ತಿಮ್ಮರಾಜು, ಸಂಘಟನಾ ಕಾರ್ಯದರ್ಶಿ ವಿ‌.ಪರಮೇಶ್ ಮಾತನಾಡಿ, ಶಾಸಕ ಹ್ಯಾರಿಸ್ ಕೇರಳದಲ್ಲಿ ಹುಟ್ಟಿ ಕರ್ನಾಟಕ್ಕೆ ಬಂದು ಕನ್ನಡದ ಮೇರು ನಟನ ಬಗ್ಗೆ ಅವಹೇಳನವಾಗಿ ಮಾತನಾಡುತ್ತಿದ್ದಾರೆ ಎಂದರೆ ನಮ್ಮ ಸರ್ಕಾರ ಮತ್ತು ಅಧಿಕಾರಿಗಳು ಕೈ ಕಟ್ಟಿ ಕುಳಿತಿದ್ದಾರೆ ಎಂದರ್ಥ. ಈ ಕೂಡಲೇ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಿ ಕ್ಷಮೆಯಾಚಿಸುವಂತೆ ಒತ್ತಾಯಿಸಿದರು.

ಇದೇ ವೇಳೆ ಅಗತ್ಯ ವಸ್ತುಗಳಾದ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಬೆಲೆ ಏರಿಕೆ ವಿರುದ್ದ ಆಕ್ರೋಶ ಹೊರಹಾಕಿದ ಪ್ರತಿಭಟನಾಕಾರರು, ಜನ ಸಾಮಾನ್ಯರಿಗೆ ಒಳಿತು ಮಾಡುವುದಾಗಿ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕೇಂದ್ರ ಸರ್ಕಾರ, ದಿನೇ ದಿನೇ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಬಡ ಹಾಗೂ ಮದ್ಯಮ ವರ್ಗದವರ ಬದುಕಿನ ಗಾಯದ ಮೇಲೆ ಬರೆ ಎಳೆಯುತ್ತಿದೆ. ಕೂಡಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಡಿವಾಣ ಹಾಕಲು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘದ ನಗರ ಉಪಾಧ್ಯಕ್ಷ ಕೆ.ಕೆ.ವೆಂಕಟೇಶ್, ಉಪಾಧ್ಯಕ್ಷ ವಿಠಲ್ ರಾವ್, ಸಂಚಾಲಕ  ಆನಂದ್, ಸಂಘಟನಾ ಸಂಚಾಲಕ ಕನ್ನಡ ಸೋಮು ಮತ್ತಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೀತಿಸಿದ ಯುವತಿಯ ಕೊಲೆಗೈದ ಪ್ರೇಮಿ.. ತಾಳಿ ಕಟ್ಟಿ ಸೆಲ್ಫಿ ಸ್ಟೇಟಸ್ ಅಪ್ಲೋಡ್..!

ಪ್ರೀತಿಸಿದ ಯುವತಿಯ ಕೊಲೆಗೈದ ಪ್ರೇಮಿ.. ತಾಳಿ ಕಟ್ಟಿ ಸೆಲ್ಫಿ ಸ್ಟೇಟಸ್ ಅಪ್ಲೋಡ್..!

ಪ್ರೀತಿಸಿದ್ದ ಪ್ರಿಯತಮೆಯನ್ನು ಕೊಲೆ (Murder) ಮಾಡಿ, ಆ ನಂತರ ಶವಕ್ಕೆ ತಾಳಿ ಕಟ್ಟಿ ವಿಕೃತಿ ಮೆರೆದ ವಿಚಿತ್ರ ಘಟನೆ ಮೈಸೂರಿನಲ್ಲಿ ಮೈಸೂರಿನ ಆಶೋಕಪುರಂನಲ್ಲಿ ನಡೆದಿದೆ.

[ccc_my_favorite_select_button post_id="110642"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!