ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟದಿಂದ ಫೆ.23ರಂದು ಪ್ರತಿಭಟನೆ / ಫೆ.23ರಂದು ಖಾಸಗಿ ಶಾಲೆಗಳಿಗೆ ರಜೆ ಘೋಷಣೆ

ದೊಡ್ಡಬಳ್ಳಾಪುರ: ಕರೊನಾ ಸಂದರ್ಭದಿಂದ ಇಲ್ಲಿಯವರೆಗೂ ಖಾಸಗಿ ಶಾಲೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ನೆರವಿಗೆ ಬಾರದೆ, ಶಾಲೆಗಳ ಆರಂಭದ ಕುರಿತು ವಿಳಂಬ ಮಾಡುತ್ತಾ, ಶುಲ್ಕದ ಕುರಿತು ಗೊಂದಲ ಸೃಷ್ಟಿಸಿ ಶಾಲೆಗಳ ಆಡಳಿತ ಮಂಡಳಿ ವಿರುದ್ದ ಪೋಷಕರನ್ನು ಎತ್ತಿ ಕಟ್ಟುತ್ತಿರುವ ಸರ್ಕಾರದ ಧೋರಣೆ ಖಂಡಿಸಿ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟದಿಂದ ಫೆ.23ರಂದು ಪ್ರತಿಭಟನೆ ನಡೆಸಲಾಗುವುದೆಂದು ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟದ ತಾಲೂಕು ಅಧ್ಯಕ್ಷ ಎ.ಸುಬ್ರಮಣ್ಯ, ಕಾರ್ಯದರ್ಶಿ ಎಸ್.ಆರ್.ರಮೇಶ್ ತಿಳಿಸಿದರು.

ನಗರದ ವಿದ್ಯಾನಿಕೇತನ ಶಾಲೆಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಕುರಿತು ಮಾತನಾಡಿದರು.

ಕೋವಿಡ್-19 ತಡೆಗಟ್ಟಲು ಘೋಷಿಸಲಾದ ಲಾಕ್‌ಡೌನ್‌ ಸಮಯದಿಂದ ಖಾಸಗಿ ಶಾಲೆಗಳ ಶಿಕ್ಷಕರು ಹಾಗೂ ಸಿಬ್ಬಂದಿಗಳ ಜೀವನ ಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ಇತರೆ ಕ್ಷೇತ್ರಗಳಿಗೆ ನೆರವು ನೀಡಿದ ಸರ್ಕಾರ ಇತ್ತ ಗಮನ ಹರಿಸದೆ ಸಂಪೂರ್ಣವಾಗಿ ಕಡೆಗಣಿಸಿದೆ. ಶಾಲೆಗಳ ಆಡಳಿತ ಮಂಡಳಿಗಳು ಪೋಷಕರು ಶುಲ್ಕ ಕಟ್ಟದೆ ಇದ್ದರೂ ಕೈಲಾದ ನೆರವನ್ನು ನೀಡುತ್ತಿದ್ದಾರೆ, ಆದರೂ ಸರ್ಕಾರ ನೆರವಿಗೆ ಬರುತ್ತಿಲ್ಲ. ಕೋವಿಡ್ ಕಡಿಮೆಯಾಗಿ ಈ ವೇಳೆ ಸರ್ಕಾರ ಎಲ್ಲಾ ಕ್ಷೇತ್ರಗಳಿಗೆ ಆರಂಭಕ್ಕೆ ಅನುಮತಿ ನೀಡಿದೆ. ಇತರೆ ರಾಜ್ಯಗಳಲ್ಲಿ ಶಾಲೆಗಳ ಆರಂಭಿಸಲಾಗಿದೆ ಹಾಗೂ ನಮ್ಮ ರಾಜ್ಯದಲ್ಲಿ ಅಂಗನವಾಡಿಗಳನ್ನು ತೆರೆಯಲು ಸಿದ್ದತೆ ನಡೆಸುತ್ತಿದ್ದರು ಸಹ ಪೂರ್ಣ ಪ್ರಮಾಣದಲ್ಲಿ ಶಾಲೆಗಳ ಆರಂಭಕ್ಕೆ ಅನುಮತಿ ನೀಡದೆ ವಿಳಂಬ ಮಾಡಿ ಮತ್ತೆ ಶಿಕ್ಷಕರ ಜೀವನವನ್ನು ಹಾಳುಮಾಡುತ್ತಿದೆ.

ಈಗಾಗಲೆ ಶೈಕ್ಷಣಿಕ ಜೀವನ ಏರು ಪೇರಾಗಿರುವ ವರದಿಗಳ ಜೊತೆಗೆ ಮಕ್ಕಳು ಬಾಲ ಕಾರ್ಮಿಕರಾಗುತ್ತಿರುವ ಆತಂಕಕಾರಿ ಘಟನೆಗಳು ಹಲವು ಕಡೆ ಕಂಡು ಬಂದಿದ್ದರೂ ಶಿಕ್ಷಣ ಸಚಿವರು ಮಾತ್ರ ಜವಬ್ದಾರಿಯಿಂದ ವರ್ತಿಸುತ್ತಿಲ್ಲ.

ಇದರ ಬೆನ್ನಲ್ಲೆ, ಗಾಯದ ಮೇಲೆ ಬರೆ ಎಳೆದಂತೆ  ಸುಮಾರು ಮೂವತ್ತು ವರ್ಷಗಳ ಹಿಂದೆ ಅನುಮತಿ ಪಡೆದ ಶಾಲೆಗಳಿಗೆ ಈಗ ಹೊಸದಾಗಿ ಸುರಕ್ಷತಾ ಅನುಮತಿ ಪಡೆಯುವಂತೆ ಸೂಚಿಸಿರುವುದು ಸರ್ಕಾರದ ದ್ವಂದ್ವ ನಿಲುವನ್ನು ತೋರುತ್ತದೆ. ನೂತನ ಶಾಲೆಗಳಿಗೆ ಅನುಮತಿ ಕಡ್ಡಾಯ ಮಾಡಲಿ ಅದು ಬಿಟ್ಟು, ಈ ಮುಂಚೆ ಅನುಮತಿ ಪಡೆದ ಶಾಲೆಗಳಿಗೆ ಹೊಸ ಹೊಸ ಕಾನೂನು‌ ಮಾಡುವುದು ಖಂಡನೀಯ.ಹಾಗೊಂದು ವೇಳೆ ಮಾಡುವುದಾದರೆ ಸರ್ಕಾರಿ ಶಾಲೆಗಳಿಗೂ ಮಾಡಲಿ. ಈಗಾಗಲೇ ಅನೇಕ ಸರ್ಕಾರಿ ಶಾಲೆಗಳು ಬೀಳುವ ಮಟ್ಟದಲ್ಲಿವೆ ಅದು ಬಿಟ್ಟು ಖಾಸಗಿ ಶಾಲೆಗಳ ಮೇಲೆ ಶಿಕ್ಷಣ ಸಚಿವರ ಮಲತಾಯಿ ಧೋರಣೆ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಸರ್ಕಾರದ ಈ ಎಲ್ಲಾ ನಿಲುವುಗಳನ್ನು ವಿರೋಧಿಸಿ ಫೆ.23ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಅಂದು ತಾಲೂಕಿನ ಸುಮಾರು 54 ಅನುದಾನ ರಹಿತ ಶಾಲೆಗಳು ರಜೆ ಘೋಷಿಸಿ ಶಿಕ್ಷಕರು ಹಾಗೂ ಸಿಬ್ಬಂದಿಗಳು ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಖಜಾಂಚಿ ಕೆ.ಜಿ.ಶ್ರೀನಿವಾಸ್ ಮೂರ್ತಿ, ಶ್ರೀ ದೇವರಾಜ ಅರಸ್ ಅಂತಾರಾಷ್ಟ್ರೀಯ ವಸತಿ ಶಾಲೆಯ ವ್ಯವಸ್ಥಾಪಕ ಎಸ್.ರವಿಕುಮಾರ್ ಸೇರಿದಂತೆ ವಿವಿಧ ಖಾಸಗಿ ಶಾಲೆಗಳ ಮುಖ್ಯಸ್ಥರು, ಕಾರ್ಯದರ್ಶಿಗಳು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!