ಹೊಸಹಳ್ಳಿ ಗ್ರಾಮ ವಾಸ್ತವ್ಯದಲ್ಲಿ ನವ ಬೆಂಗಳೂರು ಕೂಗು / ಕಂದಾಯ ಸಚಿವ ಆರ್.ಅಶೋಕ್ಗೆ ಮನವಿ ಸಲ್ಲಿಸಿದ ನವ ಬೆಂಗಳೂರು ಹೋರಾಟ ಸಮಿತಿ

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರ ಘೋಷಣೆ ವಿವಾದದ ಬೆನ್ನಲ್ಲೇ ಜಿಲ್ಲೆಯ ನಾಲ್ಕೂ ತಾಲ್ಲೂಕುಗಳಿಗೆ ಸಮಾನ ನ್ಯಾಯ ಹಾಗೂ ಆರ್ಥಿಕ ಅಭಿವೃದ್ಧಿಯ ಕಾರಣ ಬೆಂಗಳೂರು ನಗರಕ್ಕೆ ಪರ್ಯಾಯವಾಗಿ ಗ್ರಾಮಾಂತರ ಜಿಲ್ಲೆಯನ್ನು “ನವ ಬೆಂಗಳೂರು” ಎಂದು ಘೋಷಣೆ ಮಾಡಿ ಅಭಿವೃದ್ಧಿಪಡಿಸಬೇಕೆಂಬ ಹೋರಾಟ ಚುರುಕು ಪಡೆದಿದ್ದು, ‘ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದ ನಿಮಿತ್ತ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ವಾಸ್ತವ್ಯ ಹೂಡಿರುವ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಅವರಿಗೆ ನವ ಬೆಂಗಳೂರು ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು.

ಮನವಿ ಸಲ್ಲಿಸಿ ಮಾತನಾಡಿದ “ನವ ಬೆಂಗಳೂರು ಹೋರಾಟ ಸಮಿತಿಯ ಮುಖಂಡ ಜಿ.ಎನ್.ಪ್ರದೀಪ್, ಕಿರಿದಾದ ಭೌಗೋಳಿಕ ಪ್ರದೇಶ ಹಾಗೂ ಮಿತಿಮೀರಿದ ಜನಸಂಖ್ಯೆಯ ಕಾರಣ ಪ್ರಸ್ತುತ ಬೆಂಗಳೂರು ನಗರದಲ್ಲಿ ವಿಪರೀತ ಟ್ರಾಫಿಕ್ ಸಮಸ್ಯೆ, ಪರಿಸರ ಮಾಲಿನ್ಯ ಹಾಗೂ ಹೂಡಿಕೆದಾರರ ನಿರಾಸಕ್ತಿ ಹೆಚ್ಚಾಗಿದ್ದು, ಬೆಂಗಳೂರು ನಗರದ ಅಭಿವೃದ್ಧಿ ಕುಂಠಿತವಾಗಿದೆ. ಆದ್ದರಿಂದ ಬೆಂಗಳೂರು ನಗರಕ್ಕೆ ಪರ್ಯಾಯವಾಗಿ ಇನ್ನೊಂದು ಪರ್ಯಾಯ ನಗರದ ಅನಿವಾರ್ಯತೆ ರಾಜ್ಯಕ್ಕಿದ್ದು, ನಗರಕ್ಕೆ ಹೊಂದಿಕೊಂಡಂತಿರುವ ನಮ್ಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಪರ್ಯಾಯ ನಗರವಾಗಲು ಬೇಕಾದ ಎಲ್ಲಾ ಅರ್ಯತೆಗಳನ್ನೂ ಹೊಂದಿದ್ದು, ಮುಂಬರುವ ರಾಜ್ಯ ಬಜೆಟ್‌ನಲ್ಲಿ  ನಮ್ಮ ಜಿಲ್ಲೆಯನ್ನು “ನವ ಬೆಂಗಳೂರು” ಎಂದು ಘೋಷಿಸಿ ವಿಶೇಷ ಅನುದಾನದಡಿಯಲ್ಲಿ ಅಭಿವೃದ್ಧಿಪಡಿಸಬೇಕು ಎಂದು ಮಾನ್ಯ ಉಸ್ತುವಾರಿ ಸಚಿವರಿಗೆ ಮನವರಿಕೆ ಮಾಡಿ ಮನವಿ ಸಲ್ಲಿಸಿದ್ದೇವೆ ಎಂದರು.

ನಮ್ಮ ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆಂದು ಹೇಳಿದ್ದಾರೆ. ಸಚಿವರ ಹಾಗೂ ಮುಖ್ಯಮಂತ್ರಿಗಳ ಮೇಲೆ ನಮಗೆ ಭರವಸೆ ಇದೆ. ಹಾಗೇನಾದರೂ ಮುಂದಿನ ದಿನಗಳಲ್ಲಿ ಸರ್ಕಾರವು ಈ ಬಗ್ಗೆ ನಿರ್ಲಕ್ಷ್ಯ ಮಾಡಿದರೆ, ನಮ್ಮ ನಾಯಕರಾದ ಕೆ.ವಿ.ಸತ್ಯ ಪ್ರಕಾಶ್ ರವರ ನೇತೃತ್ವದಲ್ಲಿ ಹೋರಾಟ ಮುಂದುವರೆಸಲಾಗುವುದು ಎಂದು ಹೇಳಿದರು.

ನಂತರ ಮಾತನಾಡಿದ ಮುಖಂಡ ಕೆ.ವಿ.ಸತ್ಯಪ್ರಕಾಶ್, ನಮ್ಮ ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಹಾಗೂ ರಾಜ್ಯದ ಆರ್ಥಿಕ ಭವಿಷ್ಯದ ದೃಷ್ಟಿಯಿಂದ “ನವ ಬೆಂಗಳೂರು” ಘೋಷಣೆ ಅನಿವಾರ್ಯವಾಗಿದ್ದು, ಈಗಾಗಲೇ ಜಿಲ್ಲೆಯ ನಾಲ್ಕೂ ಶಾಸಕರ ಬಳಿ ವಿಚಾರ ಪ್ರಸ್ತಾಪಿಸಿ ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ನಡೆಸಿದ್ದೇವೆ. ಇಡೀ ಜಿಲ್ಲೆಯ ಜನಪ್ರತಿನಿಧಿಗಳು, ಮುಖಂಡರು, ಹೋರಾಟಗಾರರು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಒಗ್ಗಟ್ಟಾಗಿ ಹೋರಾಟ ನಡೆಸಿ “ನವ ಬೆಂಗಳೂರು” ಪರಿಕಲ್ಪನೆಯನ್ನು ಸಾಕಾರ ಮಾಡಿಕೊಳ್ಳುತ್ತೇವೆ” ಎಂದರು.

ಸಚಿವರ ಜೊತೆಯಿದ್ದ ದೊಡ್ಡಬಳ್ಳಾಪುರ ಶಾಸಕ ಟಿ.ವೆಂಕಟರಮಣಯ್ಯ ಜಿಲ್ಲೆಯ ಹಾಗೂ ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ “ನವ ಬೆಂಗಳೂರು” ಪರಿಕಲ್ಪನೆಯ ಅನುಷ್ಠಾನ ಅವಶ್ಯವಿದೆ ಎನ್ನುವ ಮೂಲಕ “ನವ ಬೆಂಗಳೂರು ಹೋರಾಟ ಸಮಿತಿ” ಗೆ ಬೆಂಬಲ ವ್ಯಕ್ತಪಡಿಸಿದರು.

ಈ ವೇಳೆ ಮುಖಂಡರಾದ ಸಿ.ಕೆ.ದಯಾನಂದ್, ಕೆ.ನಾಗೇಶ್,ಆನಂದ್ ದೊಡ್ಡತುಮಕೂರು, ಎಂ.ಹರ್ಷ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಬಿಜೆಪಿ (BJP) ಸರ್ಕಾರ ಜನರಿಗೆ ಉಜ್ವಲ ಯೋಜನೆ ಬದಲಾಗಿ ಸೌದೆ ಒಲೆ ಯೋಜನೆ ನೀಡಿದೆ. ಅಚ್ಛೇದಿನ ಏನಾಯ್ತು? ಈಗ ಇರುವುದನ್ನು ಕಚ್ಚಾ ದಿನ ಎಂದು ಹೇಳಬೇಕಾ? ಎಂದು ಬಿಜೆಪಿ ನಾಯಕರನ್ನು ಕೇಳಬಯಸುತ್ತೇನೆ" ಎಂದು

[ccc_my_favorite_select_button post_id="120598"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]