22ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಕೇಂದ್ರದ ಕೃಷಿ ಕಾಯಿದೆಗಳು ಭಾರತದ ಕೃಷಿಯ ಬಹುತ್ವವನ್ನೇ ನಾಶ ಮಾಡುತ್ತದೆ

ದೊಡ್ಡಬಳ್ಳಾಪುರ: ಸಂಸ್ಕೃತಿ ಮತ್ತು ನಾಗರಿಕತೆಗಳನ್ನು ರೂಪಿಸಿದ್ದ ಕೃಷಿ ಇಂದು ಆಪತ್ತಿನಲ್ಲಿದೆ.ಇಡೀ ದೇಶವನ್ನು ಉದ್ದುದ್ದವಾಗಿ  ಪೂರ್ವ ಭಾರತ ಮತ್ತು ಪಶ್ಚಿಮ ಭಾರತ ಎಂದು ವಿಂಗಡಿಸಿದರೆ ಪಶ್ಚಿಮ ಭಾರತದಲ್ಲಿ ಕೃಷಿ ಸಮೃದ್ಧವಾಗಿದೆ. ಆದರೆ ಕೃಷಿ ಉತ್ಪನ್ನಗಳ ಮಾರಾಟದಲ್ಲಿ ಪೂರ್ವ ಭಾರತದ ಪ್ರಾಭಲ್ಯ ಹೆಚ್ಚಾಗಿದೆ ಎಂದು ಬರಹಗಾರ ಮತ್ತು ಸಾಮಾಜಿಕ ಹೋರಾಟಗಾರ ಮಂಜುನಾಥ ಎಂ.ಅದ್ದೆ ಹೇಳಿದರು.

ಅವರು ನಗರದ ಬಸವ ಭವನದಲ್ಲಿ ನಡೆದ 22ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೃಷಿ ಆರ್ಥಿಕತೆ ಕುರಿತು ಮಾತನಾಡಿದರು.

ಬೆವರು ಬಸಿಯುವವರಿಗೆ ನಷ್ಟ. ಮೌಲ್ಯ ವರ್ಧನೆ ಮಾಡಿ ಮಾರಾಟ ಮಾಡುವವರಿಗೆ ಜೇಬು ತುಂಬ ಕಾಸು. ಕೃಷಿ ನಾಶವಾದರೆ ಸಮಾನತೆಯೂ ನಾಶವಾಗುತ್ತದೆ.ಕೃಷಿ ಉತ್ಪನ್ನಗಳ ಬೆಲೆಯನ್ನು ಪ್ರಸ್ತಾಪಿಸಿದ ಅವರು,ರಾಗಿ- ಜೋಳಕ್ಕೆ  20-30 ವರ್ಷಗಳ  ಹಿಂದೆ ಇದ್ದ ಬೆಲೆ ಈಗಲೂ ಇದೆ. ಅಲ್ಪಸ್ವಲ್ಪ ಮಾತ್ರ ಬದಲಾವಣೆಯಾಗಿದೆ. ಇತರ ಉತ್ಪನ್ನಗಳಿಗೆ ಹೋಲಿಸಿದರೆ ಇವುಗಳ ಬೆಂಬಲ ಬೆಲೆ ಏನೇನೂ ಅಲ್ಲ.

ಐವತ್ತು ವರ್ಷಗಳ ಕಾಲ ಉಪ್ಪಿನ ಬೆಲೆ ₹1 ರಿಂದ 2 ಮೀರಿರಲಿಲ್ಲ. ಆದರೆ ಕಾರ್ಪೂರೆಟ್ ಕಂಪನಿಗಳ ಪ್ರವೇಶವಾಗಿದ್ದೇ ತಡ ಅವು ಹಲವು ಮಿತ್ಗಳನ್ನು ಹಬ್ಬಿಸಿದವು. ಆಯೋಡಿನ್ಯುಕ್ತ ಉಪ್ಪು ಅಲ್ಲದಿದ್ದರೆ ಜೀವವೇ ಹೋಗಿಬಿಡುತ್ತದೆ ಎಂದು ನಂಬಿಸಿದವು. ಈಗ ಒಂದು ಕೆ.ಜಿ. ಉಪ್ಪು ₹25 ರಿಂದ30 ಆಗುತ್ತಿದೆ. ಕೇಂದ್ರ ತಂದಿರುವ ಕೃಷಿ ಕಾಯಿದೆಗಳು ಭಾರತದ ಕೃಷಿಯ ಬಹುತ್ವವನ್ನೇ ನಾಶ ಮಾಡುತ್ತದೆ. ತಾತ್ಕಾಲಿಕ ಲಾಭದ ಆಸೆ ತೋರಿಸುವ ಕಂಪನಿಗಳು ಆನಂತರ ಕೃಷಿಕರನ್ನು ತಬ್ಬಲಿಗಳನ್ನಾಗಿಸುತ್ತವೆ. ಈ ಕುರಿತು ಎಲ್ಲರೂ ಜಾಗೃತರಾಗಬೇಕು ಎಂದರು. 

‘ಯಾರಿಗೆ ಬಂತು ಎಲ್ಲಿಗೆ ಬಂತು 47ರ ಸ್ವಾತಂತ್ರ್ಯ, ಟಾಟಾ ಬಿರ್ಲಾರ ಜೇಬಿಗೆ ಬಂತು’ ಎಂದು ಸಿದ್ದಲಿಂಗಯ್ಯ ಕವಿತೆ ಬರೆದರು. ಅವರಾದರೋ ಬೃಹತ್ ಉದ್ಯಮಗಳನ್ನು ಸ್ಥಾಪಿಸಿದರು. ಹಲವು ವಿಷಯಗಳಲ್ಲಿ ಭಾರತ ಸ್ವಾವಲಂಬನೆ ಸಾಧಿಸಲು ನೆರವಾದರು. ಆದರೆ ಇವತ್ತಿನ ಉದ್ಯಮಿಗಳು ಚಪ್ಪಲಿ, ತರಕಾರಿ, ಹಪ್ಪಳ, ಸಂಡಿಗೆ, ಪಾಪ್ಕಾರ್ನ್ಗೂ ಕೈ ಇಟ್ಟು  ಗೃಹೋದ್ಯಮವನ್ನೇ ನಾಶ ಮಾಡಿದ್ದಾರೆ. ಇಡೀ ದೇಶದಲ್ಲಿ ಕೆಲವೇ ಉದ್ಯಮಿಗಳು ಮಾತ್ರ ವರ್ಷಕ್ಕೆ ನೂರಾರು ಪಟ್ಟು ಆದಾಯಗಳಿಸುತ್ತಿದ್ದಾರೆ. ಬಡವರು ಇನ್ನಷ್ಟು ಬಡವರಾಗುತ್ತಿದ್ದಾರೆ ಎಂದರು.

ನಗರದ ನೇಕಾರಿಕೆ  ಕುರಿತು ಮಾತನಾಡಿದ ಸಮ್ಮೇಳನದ ಸರ್ವಾಧ್ಯಕ್ಷ ಟಿ.ಎನ್.ಪ್ರಭುದೇವ, ಪುರಾತನ ಕಾಲದಿಂದಲೂ ನಮ್ಮ ನಗರವು ನೇಕಾರಿಕೆಗೆ ತುಂಬಾ ಹೆಸರು ಮಾಡಿದ್ದು, ರೇಷ್ಮೆ ನಗರ ಎಂದೇ ಪ್ರಸಿದ್ದಿ ಪಡೆದಿದೆ, ಕರೊನಾ ಮಹಾಮಾರಿಯಿಂದ ನೇಕಾರಿಕೆಯ ಬದುಕು ನೆಲಕಚ್ಚಿದ್ದು, ನೇಯ್ಗೆ ಮಾಡುವ ಕುಟುಂಬಗಳ ಪರಿಸ್ಥಿತಿ ತುಂಬಾ ಅಸ್ತವ್ಯಸ್ತವಾಗಿದ್ದು ಈಗ ಚೇತರಿಸಿಕೊಳ್ಳುವ ಸಮಯ ಒದಗಿ ಬಂದರು ಬೆಲೆಯೇರಿಕೆ ಬರೆ ಮತ್ತೆ ಎಡೆಬಿಡದೆ ಕಾಡುತ್ತಿದೆ ಎಂದರು.

ತಾಲೂಕಿನ ಹಲವಾರು ಹಳ್ಳಿ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಇದ್ದು ನೀರಾವರಿ ಹೋಗಲಿ ಕುಡಿಯಲು ಸಹ ಬೇಸಿಗೆಯ ಸಮಯದಲ್ಲಿ ಪರದಾಡುವ ಸಮಸ್ಯೆ ಇದ್ದು ತಾಲೂಕಿಗೆ ಶಾಶ್ವತ ನೀರಾವರಿಯ ಅವಶ್ಯಕತೆ ಇದೆ, ಎತ್ತಿನಹೊಳೆ, ಜಕ್ಕಲುಮಡಗು ಹಾಗೂ ಇನ್ನಿತರ ನೀರಾವರಿ ಮೂಲಗಳಿಂದ ಸ್ವಲ್ಪವಾದರೂ ಚೇತರಿಸಿಕೊಳ್ಳುವ ನೀರೀಕ್ಷೆ ನಮ್ಮ ಬಯಲು ಸೀಮೆಗೆ ಒದಗಿಬರಲಿ, ರೈತ ವಿರೋಧಿನೀತಿಗಳನ್ನು ಸರ್ಕಾರ ಹಿಂಪಡೆದು ರೈತರ ಬಾಳು ಹಸನಾಗಿಸಲಿ ಎಂದರು,

ಸಮ್ಮೆಳನದಲ್ಲಿ ಮೊದಲಿಗೆ ಕೃಷಿ, ನೀರಾವರಿ, ನೇಕಾರಿಕೆ ಕುರಿತು ವಿಚಾರಗೋಷ್ಠಿ, ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ, ಅಧಿವೇಶನ, ಕವಿ ಗೋಷ್ಠಿ, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಹಾಗೂ ಸಮಾರೋಪ ಸಮಾರಂಭ ನಡೆಯಿತು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಪ್ರಮೀಳಮಹದೇವ, ಕನ್ನಡ ಜಾಗೃತ ಪರಿಷತ್ ಅಧ್ಯಕ್ಷ ಡಿ.ವಿ.ಅಶ್ವಥಪ್ಪ, ರಾಜ್ಯ ರೈತ ಸಂಘದ ಮುಖಂಡರಾದ ಕೆ.ಸುಲೋಚನಮ್ಮ ವೆಂಕಟರೆಡ್ಡಿ, ಶಾಶ್ವತ ನೀರಾವತರಿ ಹೋರಾಟ ಸಮಿತಿ ಮುಖಂಡ ಆಂಜಿನೇಯರೆಡ್ಡಿ ಮತ್ತಿತರರು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

ರಾಜಕೀಯ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಜೆಡಿಎಸ್‌ನ (JDS) ಹಿರಿಯ ಮುಖಂಡ ಹುಸ್ಕೂರು ಆನಂದ್ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು, ಭಿನಮತ ಶಮನವಾಗಿರುವ ಮಾಹಿತಿ ತಿಳಿದು ಬಂದಿದೆ.

[ccc_my_favorite_select_button post_id="121822"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]