ಹೊಸಹಳ್ಳಿ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಗಳ ಕಡೆ ಕಾರ್ಯಕ್ರಮಕ್ಕೆ ಜನರ ಮೆಚ್ಚಿಗೆ / ತಾಲೂಕಿನಲ್ಲಿ 688 ಅರ್ಜಿಗಳ ಇತ್ಯರ್ಥ

ದೊಡ್ಡಬಳ್ಳಾಪುರ: ಫೆ.20ರಂದು ತಾಲೂಕಿನ ಸಾಸಲು ಹೋಬಳಿಯ ಹೊಸಹಳ್ಳಿ ಗ್ರಾಮದಲ್ಲಿ ಕಂದಾಯ ಇಲಾಖೆ ವತಿಯಿಂದ ನಡೆದ ಜಿಲ್ಲಾಕಾರಿಗಳ ನಡೆ-ಹಳ್ಳಿಗಳ ಕಡೆ ಕಾರ್ಯಕ್ರಮದಲ್ಲಿ ತಾಲೂಕಿನಲ್ಲಿ 688 ವಿವಿಧ ಸಾಮಾಜಿಕ ಯೋಜನೆಗಳ ಫಲಾನುಭವಿಗಳಿಗೆ ಮಂಜೂರಾತಿ ಹಾಗೂ ಕಂದಾಯ ಸಮಸ್ಯೆ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದ್ದು, ಕಾರ್ಯಕ್ರಮಕ್ಕೆ ಉತ್ತಮ ಸ್ಪಂಧನೆ ವ್ಯಕ್ತವಾಗಿದೆ.

ಸರ್ಕಾರ ಒಂದು ಕಡೆ. ಜನ ಒಂದು ಕಡೆ ಇರುವ ಪದ್ಧತಿ ಹೋಗಿ ಸರ್ಕಾರವೇ ಮನೆಯ ಬಾಗಿಲಿಗೆ ಹೋಗಬೇಕು. ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ ಪರಿಹಾರ ಒದಗಿಸಬೇಕು ಎನ್ನುವ ಉದ್ದೇಶದಿಂದ ಕಂದಾಯ ಇಲಾಖೆಯಿಂದ ರಾಜ್ಯದ 227 ತಾಲೂಕುಗಳಲ್ಲಿ ಏಕಕಾಲಕ್ಕೆ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಗಳ ಕಡೆ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 

ಈ ರಾಜ್ಯ ಮಟ್ಟದ ಕಾರ್ಯಕ್ರಮದ ಚಾಲನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿಯಿಂದ ಕಂದಾಯ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ, ಶಾಸಕ ಟಿ.ವೆಂಕಟರಮಣಯ್ಯರೊಂದಿಗೆ ಚಾಲನೆ ನೀಡಿದ್ದರು.

ಕಾರ್ಯಕ್ರಮದಲ್ಲಿ ಸಂಧ್ಯಾ ಸುರಕ್ಷಾ ಯೋಜನೆಯ 58, ವೃದ್ಧಾಪ್ಯ ವೇತನ 97, ವಿಧವಾ ವೇತನ 17, ಅಂಗವಿಕಲರಿಗೆ -4, ಮನಸ್ವಿನಿ 3 ಮಂದಿಗೆ ಪಿಂಚಣಿಗಳನ್ನು ವಿತರಿಸಲಾಗಿದೆ. ಎನ್‍ಎಸ್‍ಎಪಿ ಅಡಿಯಲ್ಲಿ 3 ಮಂದಿ ವಿಧವೆಯರಿಗೆ ನೆರವು ನೀಡಲಾಗಿದೆ.

30 ಪವತಿ ಖಾತೆಗಳನ್ನು ಮಾಡಿಕೊಡಲಾಗಿದೆ. 16 ಪಹಣಿ ತಿದ್ದುಪಡಿ, ಪೋಡಿ ಮುಕ್ತ ಗ್ರಾಮದಡಿ 5 ಫಲಾನುಭವಿಗಳಿಗೆ ಪೋಡಿ ಮಾಡಿಕೊಡಲಾಗಿದೆ. 381 ಆಧಾರ್‍ಕಾರ್ಡ್ ತಿದ್ದುಪಡಿ ಮಾಡಿ 63 ಮತದಾರರ ಗುರುತಿನ ಚೀಟಿ ವಿತರಿಸಲಾಗಿದೆ. ಸಾಗುವಳಿ ಚೀಟಿಯನ್ವಯ 12 ಮಂದಿಗೆ ಖಾತೆ ಮಾಡಲಾಗಿದೆ  ಸರ್ಕಾರದ ವಿವಿಧ ಇಲಾಖೆಗಳಿಗೆ 11 ಜಮೀನು ಮಂಜೂರಾಗಿದೆ ಎಂದು ತಹಸೀಲ್ದಾರ್ ಟಿ.ಎಸ್.ಶಿವರಾಜ್ ತಿಳಿಸಿದ್ದಾರೆ.

ಹೊಸಹಳ್ಳಿ ಗ್ರಾಮದ ಸರ್ವೆ ನಂ.55ರಲ್ಲಿ 5 ಎಕರೆ ಭೂಮಿಯನ್ನು 20*30 ಅಳತೆಯಲ್ಲಿ 400 ಮಂದಿಗೆ ವಸತಿ ನಿರ್ಮಾಣಕ್ಕೆ ಮಂಜೂರು ಮಾಡುವ ನಿಟ್ಟಿನಲ್ಲಿ ಕಂದಾಯ ಇಲಾಖೆಯಿಂದ ಜಿಲ್ಲಾಕಾರಿಗಳಿಗೆ ಹಸ್ತಾಂತರ ಮಾಡುವಂತೆ ಹಾಗೂ ಸ್ಮಶಾನ ಒತ್ತುವರಿ ತೆರವಿಗೆ ಸಚಿವ ಅಶೋಕ್ ಸೂಚಿಸಿದ್ದಾರೆ. ಕಾರ್ಯಕ್ರಮದಲ್ಲಿ ಅಂಗವಿಕಲರಿಗೆ ವೀಲ್ ಚೇರ್, ಶ್ರವಣ ಸಾಧನಗಳನ್ನು ವಿತರಿಸಲಾಗಿದೆ.

ತಿದ್ದುಪಡಿ ಹಾಗೂ ಸಣ್ಣಪುಟ್ಟ ದೋಷಗಳು ಸ್ಥಳದಲ್ಲಿಯೇ ಬಗೆಹರಿದಿವೆ. ಸಾಮಾಜಿಕ ಭದ್ರತಾ ಯೋಜನೆಯ ಬಾಕಿ ಇದ್ದ ಪ್ರಕರಣಗಳು ಇತ್ಯರ್ಥವಾಗಿವೆ.  ಕಾರ್ಯಕ್ರಮ ಯಶಸ್ವಿಯಾಗಿದ್ದು, ಕಂದಾಯ ಇಲಾಖೆಗೆ ಸಂಬಂಧ ಪಟ್ಟ ಸಮಸ್ಯೆಗಳು ಶೀಘ್ರವಾಗಿ ವಿಲೇವಾರಿಯಾಗಿದೆ. ಆಧಾರ್ ಕೌಂಟರ್ ಮಾಡಿದ್ದರಿಂದ 381 ಆಧಾರ್‍ಕಾರ್ಡ್‍ಗಳು ತಿದ್ದುಪಡಿಯಾಗಿವೆ. ಹೆಚ್ಚು ಸಮಯವಿಲ್ಲದ ಖಾತೆ ಬದಲಾವಣೆ ಮೊದಲಾದ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಇತ್ಯರ್ಥವಾಗಬಹುದಾಗಿದೆ. ಕಂದಾಯ ಇಲಾಖೆಗೆ ಆಧಾರ್ ಕಾರ್ಡ್-ಬಿಪಿಎಲ್ ಕಾರ್ಡ್‍ಗೆ  ಈಗಾಗಲೇ ಹೊಸ ನವೋದಯ ಆ್ಯಪ್ ತಂತ್ರಾಂಶ ರೂಪಿಸಿದ್ದು, ಅಧಿಕಾರಿಗಳಿಗೆ ತರಬೇತಿ ನೀಡಲಾಗಿದೆ. ರಾಜ್ಯ ಮಟ್ಟದ ಕಾರ್ಯಕ್ರಮ ಸಮರ್ಪಕವಾಗಿ ನಿರ್ವಹಿಸಿದ ತೃಪ್ತಿ ಇದೆ ಎನ್ನುತ್ತಾರೆ ತಹಸೀಲ್ದಾರ್ ಟಿ.ಎಸ್.ಶಿವರಾಜ್.

ಬಹಿರಂಗ ವಿಲೆವಾರಿಯಾಗಲಿ: ಆಧಾರ್, ಮತದಾರರ ಗುರುತಿನ ಚೀಟಿಗಳ ವಿತರಣೆಗೆ ಆದ್ಯತೆ ನೀಡುವುದಕ್ಕಿಂತ, ಜಿಲ್ಲಾಧಿಕಾರಿ, ತಹಸೀಲ್ದಾರ್ ರಂತಹ ಅಧಿಕಾರಿಗಳು ಭಾಗವಹಿಸುವ ಇಂತಹ ಕಾರ್ಯಕ್ರಮಗಳಲ್ಲಿ ಪೋಡಿ ಮುಕ್ತ ಗ್ರಾಮ ಘೋಷಣೆ, ಕಂದಾಯ ದಾಖಲೆಗಳಾದ ಪಹಣಿ, ಮ್ಯುಟೇಷನ್, ಮೊದಲಾದ ದಾಖಲಾತಿಗಳು ರೈತರಿಗೆ ತಲುಪಬೇಕು. ದಂಡಾಧಿಕಾರಿಗಳ ನ್ಯಾಯಾಲಯಗಳಲ್ಲಿನ ಪ್ರಕರಣಗಳ ದಾಖಲೆ ಪರಿಶೀಲಿಸಿ ಬಹಿರಂಗವಾಗಿ ವಿಳೇವಾರಿಯಾಗಬೇಕು.ಪೌತಿ ಖಾತೆಗಳನ್ನು ಗ್ರಾಮಸ್ಥರ ಸಮ್ಮುಖದಲ್ಲಿ ಯಾವುದೇ ದಾಖಲೆಗಳಿಲ್ಲದೇ ಹೇಳಿಕೆ ಪಡೆದು ಮಾಡಿಕೊಡಬೇಕು ಎನ್ನುತ್ತಾರೆ ರೈತ ನಟರಾಜ್.

ಇಂತಹ ಕಾರ್ಯಕ್ರಮಗಳು ನಿರಂತರವಾಗಿರಲಿ: ನಮ್ಮ ತಂದೆ ಸಂಜೀವಪ್ಪ ಪವತಿಯಾಗಿದ್ದು ಅವರ ಪವತಿ ಖಾತೆಯನ್ನು ನಮ್ಮ ತಾಯಿ ರಂಗಮ್ಮ ಹೆಸರಿಗೆ ವರ್ಗಾಯಿಸಲು ಅರ್ಜಿ ಸಲ್ಲಿಸಿ 6 ತಿಂಗಳಾಗಿತ್ತು, ಕಾರ್ಯಕ್ರಮದಲ್ಲಿ ತ್ವರಿತವಾಗಿ ಖಾತೆ ಬದಲಾವಣೆಯಾಯಿತು. ಇಲ್ಲವಾದಲ್ಲಿ ವರ್ಷಗಟ್ಟಲೆ ಅಲೆಯಬೇಕಿತ್ತು. ಕಾರ್ಯಕ್ರಮದಲ್ಲಿ ಅಧಿಕಾರಿಗಳು ಒಂದು ತಿಂಗಳ ಮೊದಲೇ ಸಿದ್ದತೆಗಳನ್ನು ಮಾಡಿಕೊಂಡು, ಯಶಸ್ಸು ಮಾಡಿದ್ದಾರೆ. ಇಂತಹ ಕಾರ್ಯಕ್ರಮಗಳು ನಿರಂತರವಾಗಿರಲಿ ಎನ್ನುತ್ತಾರೆ ಹೊಸಹಳ್ಳಿ ಗ್ರಾಮದ ಎಚ್.ಎಸ್.ಮಂಜುನಾಥ್.

ಮರೆಯಲಾಗದ ಕ್ಷಣ: ವಾಸ್ತವ್ಯದ ವೇಳೆ ನಮ್ಮ ಮನೆಯಲ್ಲಿಯೇ ಕಂದಾಯ ಸಚಿವರು, ಶಾಸಕರು, ಜಿಲ್ಲಾಧಿಕಾರಿ, ತಹಸೀಲ್ದಾರ್ ಹಾಗೂ ಅಧಿಕಾರಿಗಳು ಉಪಹಾರ ಸೇವಿಸಿದ್ದು, ಮರೆಯಲಾಗದ ಕ್ಷಣಗಳು.ಕಾರ್ಯಕ್ರಮದಲ್ಲಿ ಎನ್‍ಎಸ್‍ಎಪಿ ಅಡಿಯಲ್ಲಿ ನನಗೆ ನೆರವು ದೊರೆತಿದೆ. ಖಾತೆ ವಿಚಾರವಾಗಿ ನಮ್ಮ ಮಕ್ಕಳ ಹೆಸರಿಗೆ ಜಂಟಿ ಖಾತೆ ಮಾಡಲಾಗಿದ್ದು, ವಿಭಾಗ ಪತ್ರ ಇನ್ನು ಒಂದೂವರೆ ತಿಂಗಳಲ್ಲಿ ಆಗಲಿದೆ. ಮಗನಿಗೆ ಕೆಲಸ ನೀಡುವ ಭರವಸೆ ದೊರೆತಿದೆ ಎನ್ನುತ್ತಾರೆ ಹೊಸಹಳ್ಳಿ ಗ್ರಾಮದ ವೆಂಕಟಲಕ್ಷ್ಮಮ್ಮ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಿಂದ ಆಯ್ಕೆಯಾಗುವ ಗ್ರಾಮ ಪಂಚಾಯತಿಗಳ (Grama Panchayats) ಚುನಾಯಿತ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿದೆ

[ccc_my_favorite_select_button post_id="121230"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!