ಯುವಕರು ವಾಟ್ಸ್ ಆಪ್, ಫೇಸ್ ಬುಕ್ಗಳಲ್ಲಿ ಕಾಲಹರಣ ಮಾಡದೆ ದೇಶಿಯ ಕ್ರೀಡೆಗಳಲ್ಲಿ ತೊಡಗಿ: ಸಿ.ಎಸ್.ಕರೀಗೌಡ

ದೊಡ್ಡಬಳ್ಳಾಪುರ: ದೈಹಿಕ ಶ್ರಮ, ದೇಶಿಯ ಕೌಶಲ್ಯವನ್ನು ಹೊಂದಿರುವ ಕಬಡ್ಡಿ ನಮ್ಮ ಜನಪದರ ನೆಚ್ಚಿನ ಆಟವಾಗಿ ಇಂದಿಗೂ ಜನಪ್ರಿಯತೆಯನ್ನು ಉಳಿಸಿಕೊಂಡು ಬಂದಿದೆ ಎಂದು ಲೇಖಕ ಹಾಗೂ ಪತ್ರಕರ್ತ ಮಂಜುನಾಥ ಎಂ.ಅದ್ದೆ ಹೇಳಿದರು.

ಅವರು ನಗರದ ಕೆರೆಬಾಗಿನಲ್ಲಿ ಪ್ರಸನ್ನ ಲಕ್ಷ್ಮೀವೆಂಕಟರಮಣಸ್ವಾಮಿ ಬ್ರಹ್ಮ ರಥೋತ್ಸವದ ಅಂಗವಾಗಿ ಭಾನುವಾರ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ವತಿಯಿಂದ ನಡೆದ ಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.

ಕ್ರೀಡೆ ಅಂದರೆ ಕ್ರಿಕೇಟ್ ಮಾತ್ರವಷ್ಟೇ ಅಲ್ಲ. ಯುವ ಸಮೂಹದ ದೈಹಿಕ ಶಕ್ತಿ ಪ್ರದರ್ಶನಕ್ಕೆ ಹೆಸರಾಗಿರುವ ಕಬಡ್ಡಿಗು ಸೂಕ್ತ ಪ್ರಾತಿನಿಧ್ಯವನ್ನು ನೀಡಬೇಕು. ಅಂತರ ರಾಷ್ಟ್ರೀಯ ಮಟ್ಟದವರೆಗೂ ಕಬಡ್ಡಿಯಲ್ಲಿ ಹೆಸರು ಮಾಡಲು ಸಾಕಷ್ಟು ಅವಕಾಶಗಳು ಈಗ ಇವೆ. ಗ್ರಾಮೀಣ ಪ್ರದೇಶದಲ್ಲಿ ಇಂದಿಗೂ ಸಾಕಷ್ಟು ಜನ ಯುವ ಕಬಡ್ಡಿ ಪಟುಗಳು ಇದ್ದಾರೆ. ಸೂಕ್ತ ವೇದಿಕೆಯನ್ನು ಸಂಘ ಸಂಸ್ಥೆಗಳು ಕಲ್ಪಿಸುವ ಮೂಲಕ ಉನ್ನತ ಮಟ್ಟದ ಸಾಧನೆ ಮಾಡಲು ಪ್ರೋತ್ಸಾಹ ನೀಡಬೇಕಿದೆ ಎಂದರು.

ಕೃಷಿ ಮಾರುಕಟ್ಟೆ ನಿರ್ದೇಶಕ ಸಿ.ಎಸ್.ಕರೀಗೌಡ ಮಾತನಾಡಿ, ಗ್ರಾಮೀಣ ಯುವಕರು ವಿನಾಕರಣ ಸಮಯವನ್ನು ವ್ಯರ್ಥ ಮಾಡದೆ ಕಬಡ್ಡಿ ಸೇರಿದಂತೆ ದೇಶಿಯ ಕ್ರೀಡೆಗಳಲ್ಲಿ ಬಿಡುವಿನ ಸಮಯದಲ್ಲಿ ತೊಡಗಿಸಿಕೊಂಡರೆ ದೈಹಿಕ, ಮಾನಸಿಕ ಆರೋಗ್ಯ ಎಲ್ಲವು ಸುಧಾರಣೆಯಾಗಲಿದೆ. ವಾಟ್ಸ್ ಆಪ್, ಫೇಸ್ ಬುಕ್ಗಳಲ್ಲಿ ಕಾಲಹಣ ಮಾಡುವುದರಿಂದ ದೂರ ಇರಬೇಕಿದೆ ಎಂದರು.

ಕಬಡ್ಡಿ ಪಂದ್ಯಾವಳಿ ಉದ್ಘಾಟನ ಸಮಾರಂಭದಲ್ಲಿ ಕೆಎಎಸ್ ಅಧಿಕಾರಿ ಡಾ.ನೆಲ್ಲುಕುಂಟೆ ವೆಂಕಟೇಶಯ್ಯ, ಹಿರಿಯ ಕ್ರೀಡಾ ಪ್ರೋತ್ಸಾಹಕ ಬಿ.ಎಚ್.ಕೆಂಪಣ್ಣ, ಐಟಿ ಎಂಜಿನಿಯರ್ ಜಿ.ರಾಜಶೇಖರ,ಕಬಡ್ಡಿ ಪಂದ್ಯಾವಳಿ ಆಯೋಜಕರಾದ ಜಿ.ಯಲ್ಲಪ್ಪ, ನರೇಂದ್ರ, ರವಿಚಂದ್ರನ್, ಲಕ್ಷೀಶ, ಶರಣಪ್ಪ,ರಾಮಮೂರ್ತಿ ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ಜೆಡಿಎಸ್ ಹಳೆ ಮೈಸೂರು ಭಾಗಕ್ಕೆ ಸೀಮಿತವಾದ ಪಕ್ಷವಲ್ಲ. ನಮ್ಮ ಪಕ್ಷದ ಶಾಸಕರಲ್ಲಿ 50ರಷ್ಟು ಮಂದಿ*** ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110847"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ಮೆಳೇಕೋಟೆ ಕ್ರಾಸ್‌ಗೆ KSRTC ಸಾರಿಗೆ ಬಸ್ಸಿನಲ್ಲಿ ಬರುವ ವೇಳೆ ಮಹಿಳೆಯೋರ್ವ ಆಯತಪ್ಪಿ ಬಸ್ಸಿಂದ ಬಿದ್ದು ಸಾವನಪ್ಪಿರುವ ಘಟನೆ

[ccc_my_favorite_select_button post_id="110837"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!