ಬೆಂಗಳೂರು: ಎಲ್ಲೆಲ್ಲೋ ಹೋಗಿ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಕರ್ನಾಟಕ ಬಿಜೆಪಿಯ ನಾಯಕರಿಗೆ ದಾನ ಮಾಡೋಣ ಎಂದು 90 ಜೊತೆ ಬಟ್ಟೆ ಖರೀದಿ ಮಾಡಿದ್ದೇನೆ. ಬೇಕಿದ್ದರೆ ನಳಿನ್ ಕುಮಾರ್ ಕಟೀಲು ಅವರಿಗೂ ಒಂದೆರಡು ಜೊತೆ ಬಟ್ಟೆ ದಾನ ಮಾಡುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ ತಿಂಗಳಲ್ಲಿ ಕಾಂಗ್ರೆಸ್ ಪಕ್ಷ ಬಿಡಲಿದ್ದಾರೆ ಎಂದಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ಟ್ವೀಟ್ ಮಾಡಿದ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಬೇಕಿದ್ದರೆ ನಳಿನ್ ಕುಮಾರ್ ಕಟೀಲು ಅವರಿಗೂ ಒಂದೆರಡು ಜೊತೆ ಬಟ್ಟೆ ದಾನ ಮಾಡುತ್ತೇನೆ. ಇನ್ನೂ 19 ಸಿಡಿ ಇದೆಯಂತೆ, ಎಲ್ಲವೂ ಹಿಡಿತದಲ್ಲಿರಲಿ, ನಾಲಗೆ ಕೂಡಾ ಎಂದು ಎಚ್ಚರಿಸಿದ್ದಾರೆ.
ಇದಕ್ಕು ಮುನ್ನ ಮಸ್ಕಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸಿದ್ದರಾಮಯ್ಯ ಈ ಹಿಂದೆ ಗುರುವಿಗೆ ತಿರುಮಂತ್ರ ಹಾಕಿ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದರು. ಇದೀಗ ಕಾಂಗ್ರೆಸ್ ನಲ್ಲಿ ತನ್ನ ಅಸ್ವಿತ್ವ ಕಳೆದುಕೊಳ್ಳುತ್ತಿದ್ದು, ಅದಕ್ಕಾಗಿ ಅವರು 90 ಜೊತೆ ಬಟ್ಟೆ ಹೊಲಿಸಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..