ಯುಗಾದಿ ಸಂಭ್ರಮ: ನಾಡಿನ ಜನತೆಗೆ ಪ್ರಧಾನಿ ಮೋದಿ, ಸಿಎಂ, ಶಾಸಕ ಟಿ.ವೆಂಕಟರಮಣಯ್ಯ ಸೇರಿ ಗಣ್ಯರ ಶುಭಾಶಯ

ದೊಡ್ಡಬಳ್ಳಾಪುರ: ಪ್ಲವನಾಮ ಸಂವತ್ಸರ ಪ್ರಾರಂಭವಾಗಿರುವ ಇಂದಿನ ಯುಗಾದಿ ಹಬ್ಬವನ್ನು ದೇಶಾದ್ಯಂತ ಜನತೆ ಸಡಗರ ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಸಿಎಂ ಬಿ,ಎಸ್, ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಶುಭ ಹಾರೈಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ: ನಿಮ್ಮೆಲ್ಲರಿಗೂ ಯುಗಾದಿಯ ಶುಭಕಾಮನೆಗಳು. ಮುಂಬರುವ ವರ್ಷ ಅದ್ಭುತವಾಗಲಿ. ನೀವೆಲ್ಲರೂ ಆರೋಗ್ಯ ಹಾಗು ಸಂತಸದಿಂದಿರಿ. ಎಲ್ಲೆಡೆ ಸಮೃದ್ಧಿ ಹಾಗು ಸಂತೋಷ ಪಸರಿಸಲಿ ಎಂದು ಕನ್ನಡದಲ್ಲಿ ಶುಭಕೋರಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ: ನಾಡಿನ ಸಮಸ್ತ ಜನತೆಗೆ ಯುಗಾದಿಯ ಹಾರ್ದಿಕ ಶುಭಾಶಯಗಳು. ನೂತನ ಪ್ಲವ ಸಂವತ್ಸರವು ಎಲ್ಲರ ಬಾಳಿನಲ್ಲಿ ಆರೋಗ್ಯ, ಸುಖ, ಸಮೃದ್ಧಿ, ಯಶಸ್ಸನ್ನು ಹೊತ್ತು ತರಲಿ, ಸಾಂಕ್ರಾಮಿಕ ರೋಗದ ಪಿಡುಗು ನಾಡಿನಿಂದ ತೊಲಗಲಿ. ನಾವೂ ಸುರಕ್ಷಿತರಾಗಿದ್ದು, ಇತರರೂ ಸುರಕ್ಷಿತರಾಗಿರುವಂತೆ, ಎಲ್ಲ ಮುನ್ನೆಚ್ಚರಿಕೆ ವಹಿಸಿ ಹಬ್ಬ ಆಚರಿಸೋಣ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ: ಹೊಸತನ, ನಿರೀಕ್ಷೆ, ಭರವಸೆಗಳನ್ನು ಹೊತ್ತು ಯುಗಾದಿ ಬಂದಿದೆ. ಕಳೆದ ವರ್ಷದ ತೊಡಕುಗಳು ಈ ಹೊಸ ವರ್ಷ ನೀಗಲಿ. ಬೇವು-ಬೆಲ್ಲದ ಅನುಭವಗಳು ಈ ವರ್ಷ ಸಮನಾಗಿರಲಿ ಎಂದು ನಾನು ಆಶಿಸುತ್ತೇನೆ. ಈ ಶುಭ ವರ್ಷ ಎಲ್ಲರಿಗೂ ಒಳಿತು ತರಲೆಂದು ಭಗವಂತನಲ್ಲಿ ನಾನು ಕೋರುತ್ತೇನೆ. ನಾಡಿನ ಸಮಸ್ತರಿಗೂ ಯುಗಾದಿ-ಹೊಸ ವರ್ಷದ ಹಾರ್ದಿಕ ಶುಭಾಶಯಗಳು. 

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ: ಓ ಯುಗಾದಿಯೇ, ಹೊಸ ಕಾಲದ ಆದಿಯೇ, ಲೋಕದ ಜನರ ಕಷ್ಟಗಳ ನೀಗುತ್ತಾ ಬಾ.ಆರೋಗ್ಯದ ಭಾಗ್ಯವನ್ನು ಕರುಣಿಸು ಬಾ.ಎಲ್ಲರ ಬಾಳಲ್ಲಿ ಹೊಸ ವರ್ಷದ ಉತ್ಸಾಹ ತುಂಬುತ್ತಾ ಬಾ. ನಾಡಿನ ಎಲ್ಲ ನನ್ನ ಪ್ರೀತಿಯ ಬಂಧುಗಳಿಗೆ ಯುಗಾದಿಯ ಹಾರ್ದಿಕ ಶುಭಾಶಯಗಳು.

ದೊಡ್ಡಬಳ್ಳಾಪುರ ಶಾಸಕ ಟಿ.ವೆಂಕಟರಮಣಯ್ಯ: ತಾಲೂಕಿನ ಜನತೆ ಯುಗಾದಿ ಸಂಕಷ್ಟಗಳ ದೂರಾಗಿಸಲಿ. ಕರೊನಾ ಸೋಂಕಿನ ಮುಕ್ತಿ ನೀಡಿ, ಉತ್ತಮ ಮಳೆಯಾಗಿ ನೀರಿನ ಭವಣೆ ನೀಗಲಿ. ರಾಜ್ಯದಲ್ಲಿ ಉಂಟಾಗಿರುವ ಸಮಸ್ಯೆಗಳು ತ್ವರಿತವಾಗಿ ನೀಗಲಿ ಎಂದು ಹಾರೈಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

"ಬಹಿರಂಗವಾಗಿ ನಾನು ಏಕೆ ಮಾತನಾಡಲಿ? ನಾನುಂಟು, ಪಕ್ಷವುಂಟು. ನಾವೆಲ್ಲರೂ ಒಟ್ಟಿಗೆ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇವೆ" ಎಂದು ತಿಳಿಸಿದರು. D.K. Shivakumar

[ccc_my_favorite_select_button post_id="110708"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!