ದೊಡ್ಡಬಳ್ಳಾಪುರ: ಕೆಲಸಕ್ಕೆ ಹಾಜರಾಗದೆ ಮುಷ್ಕರದಲ್ಲಿ ತೊಡಗಿಕೊಳ್ಳುವಂತೆ ವಿಡಿಯೋ ಮಾಡಿ ವಾಟ್ಸ್ ಆಪ್ನಲ್ಲಿ ಹರಿದು ಬಿಟ್ಟಿದ್ದ ನಗರದ ಕೆಎಸ್ಆರ್ಟಿಸಿ ಬಸ್ ಡಿಪೋದಲ್ಲಿ ಚಾಲಕ,ನಿರ್ವಾಹಕನಾಗಿ ಕತ್ಯವ್ಯ ನಿರ್ವಹಿಸುತ್ತಿರುವ ಎಂ.ಜಿ.ಕೃಷ್ಣಪ್ಪ ಅವರ ವಿರುದ್ದ ಎಸ್ಮಾ 2013ರ ಕಾಯ್ದೆ ಅಡಿಯಲ್ಲಿ ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಠಾಣೆ ಸಬ್ಇನ್ಸ್ಪೆಕ್ಟರ್ ಕೆ.ವೆಂಕಟೇಶ್ ತಿಳಿಸಿದ್ದಾರೆ.
ನಗರ ಪೊಲೀಸ್ ಠಾಣೆಗೆ ದೂರು ನೀಡಿರುವ ಕೆಎಸ್ಆರ್ಟಿಸಿ ಬಸ್ ಡಿಪೋ ವ್ಯವಸ್ಥಾಪಕ ಎಂ.ಬಿ.ಆನಂದ್ ಈ ಬಗ್ಗೆ ಮಾಹಿತಿ ನೀಡಿ, ಎಂ.ಜಿ.ಕೃಷ್ಣಪ್ಪ ಅವರು ಡಿಪೋದಲ್ಲಿನ ನೌಕರರು ಕೆಲಸಕ್ಕೆ ಹಾಜರಾಗದಂತೆ, ಮುಷ್ಕರದಲ್ಲಿ ತೊಡಗಿಕೊಳ್ಳುವಂತೆ ಹಾಗೂ ಸಾರ್ವಜನಿಕರು ಸರ್ಕಾರಿ ಬಸ್ ನಲ್ಲಿ ಸಂಚರಿಸಿ ಜೀವಕ್ಕೆ ತೊಂದರೆಯಾದರೆ ನಾವು ಕಾರಣರಲ್ಲ ಎಂದು ವಿಡಿಯೋ ಮಾಡಿ ವಾಟ್ಸ್ ಆಫ್ನಲ್ಲಿ ಹರಿದು ಬಿಟ್ಟಿ ಪ್ರಯೋದನೆ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಕೃಷ್ಣಪ್ಪ ವಿರುದ್ದ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿತ್ತು ಎಂದರು.
ಬುಧವಾರ 10 ಮಾರ್ಗಗಳಲ್ಲಿ ಬಸ್ ಗಳು ಸಂಚರಿಸಿವೆ. ಗುರುವಾರ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಸ್ಗಳ ಸಂಚಾರ ಆರಂಭವಾಗಲಿವೆ. ಕರೊನಾ ಸಂಕಷ್ಟದ ಸಮಯದಲ್ಲಿ ಮುಷ್ಕರ ನಡೆಸುವುದು ಸರಿಯಾದ ಕ್ರಮ ಅಲ್ಲ ಎನ್ನುವು ಬಗ್ಗೆ ಇಲಾಖೆಯಲ್ಲಿನ ಹಿರಿಯ ನೌಕರರಿಗೆ ಮನವರಿಕೆಯಾಗಿದೆ. ಅಲ್ಲದೆ ಯುಗಾದಿ ಹಬ್ಬ ಮುಕ್ತಾಯವಾಗಿರುವುದರಿಂದ ಗುರುವಾರದಿಂದ ಪ್ರಯಾಣಿಕರ ಸಂಚಾರ ಹೆಚ್ಚಾಗಲಿದೆ. ಈ ಹಿನ್ನೆಲೆಯಲ್ಲಿ ಹಿರಿಯ ನೌಕರರು ಕತ್ಯವ್ಯಕ್ಕೆ ಹಾಜರಾಗುವ ಭರವಸೆ ನೀಡಿದ್ದಾರೆ.ಕತ್ಯವ್ಯಕ್ಕೆ ಹಾಜರಾಗುವ ನೌಕರರಿಗೆ ಪೊಲೀಸ್ ಭದ್ರತೆಯನ್ನು ಕಲ್ಪಿಸಲಾಗುತ್ತಿದೆ ಎಂದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..