ಕೋವಿಡ್ ನಿಂದ ಮೃತರಾದವರ ಶವಸಂಸ್ಕಾರಕ್ಕೆ ಉಚಿತ ಅಂಬುಲೆನ್ಸ್ ಸೇವೆಗೆ ಆದೇಶ ಕಂದಾಯ ಸಚಿವ ಆರ್.ಅಶೋಕ್

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಮೃತಪಟ್ಟವರ ಶವಸಂಸ್ಕಾರಕ್ಕೆ ಆಯಾ ತಾಲ್ಲೂಕಿನಲ್ಲೇ ತಾತ್ಕಾಲಿಕವಾಗಿ ಚಿತಾಗಾರ ನಿರ್ಮಿಸಲಾಗುತ್ತಿದೆ ಎಂದು ಕಂದಾಯ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್. ಅಶೋಕ ತಿಳಿಸಿದರು.

ದೇವನಹಳ್ಳಿ ತಾಲ್ಲೂಕಿನ ಕೋರಮಂಗಲ ಕೆರೆಯ ಆವರಣದಲ್ಲಿ ನಿರ್ಮಾಣವಾಗುತ್ತಿರುವ ತಾತ್ಕಾಲಿಕ ಚಿತಾಗಾರದ ಸ್ಥಳ ಪರಿಶೀಲನೆ ನಡೆಸಿ  ಮಾತನಾಡಿದ ಕಂದಾಯ ಸಚಿವರು ವಿಶ್ವವನ್ನೇ ಕಾಡುತ್ತಿರುವ ಕೋವಿಡ್ ಸೋಂಕು ಅನೇಕರನ್ನು ಬಲಿಪಡೆಯುತ್ತಿದೆ. ವಿಧಿವಿಧಾನದ ಮೂಲಕ ಶವಸಂಸ್ಕಾರ ನೆರವೇರಿಸಲು ಆಯಾ ಭಾಗದಲ್ಲೇ ಸರ್ಕಾರಿ ಜಮೀನುಗಳಲ್ಲಿ ತಾತ್ಕಾಲಿಕ ಚಿತಾಗಾರ ನಿರ್ಮಿಸಲಾಗುತ್ತಿದೆ ಎಂದರು. 

ಬೆಂಗಳೂರಿನ ತಾವರೆಕೆರೆ ಹಾಗೂ ಗಿಡ್ಡಪ್ಪನಹಳ್ಳಿಯಲ್ಲಿ ಈಗಾಗಲೇ ಚಿತಾಗಾರ ಆರಂಭವಾಗಿದೆ. ಅದೇ ಮಾದರಿಯಲ್ಲಿ ದೇವನಹಳ್ಳಿ ತಾಲ್ಲೂಕಿನಲ್ಲಿ  ಚಿತಾಗಾರ ನಿರ್ಮಾಣ ಅಂತಿಮ‌‌ ಹಂತದಲ್ಲಿದ್ದು, ಉಳಿದ ಮೂರು ತಾಲ್ಲೂಕುಗಳಲ್ಲಿ ಚಿತಾಗಾರ ನಿರ್ಮಾಣಕ್ಕೆ ಕ್ರಮವಹಿಸಲಾಗಿದೆ ಎಂದು ತಿಳಿಸಿದ ಸಚಿವರು ಇದೊಂದು ಭಾವನಾತ್ಮಕ ಪ್ರಕ್ರಿಯೆ ಆಗಿರುವುದರಿಂದ ಶವಸಂಸ್ಕಾರಕ್ಕೆ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಬಾರದು. ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮೃತಪಟ್ಟವರ ಶವ ಸಂಸ್ಕಾರ ಮಾಡಲು ಕುಟುಂಬಸ್ಥರು ಪರದಾಡುತ್ತಿದ್ದಾರೆ. ಹೀಗಾಗಿ ಬೆಂಗಳೂರು ನಗರದ ಸುತ್ತಮುತ್ತ ತಾತ್ಕಾಲಿಕ ಚಿತಾಗಾರಗಳನ್ನು ನಿರ್ಮಿಸಲಾಗಿದೆ ಎಂದು ಹೇಳಿದರು.

ಕೋವಿಡ್ ಕಾರಣದಿಂದ ಮೃತರಾದವರ ಅಂತ್ಯಸಂಸ್ಕಾರಕ್ಕೆ ಕರೆತರುವ ಅಂಬುಲೆನ್ಸ್ ಗಳಲ್ಲಿ‌ ಹಣ ಸುಲಿಗೆ ಮಾಡಲಾಗುತ್ತಿದೆ ಎಂಬ ಆರೋಪ‌ ಕೇಳಿಬರುತ್ತಿರುವುದರಿಂದ ಇನ್ನುಂದೆ ಇಂಥ ಶವಸಂಸ್ಕಾರಕ್ಕೆ ಉಚಿತ ಅಂಬುಲೆನ್ಸ್ ಸೇವೆಗೆ ಆದೇಶ ಮಾಡಲಾಗಿದೆ ಎಂದು ತಿಳಿಸಿದರು.

ಕೋವಿಡ್ ವಿಚಾರದಲ್ಲಿ ಯಾರೇ ಆಗಲಿ ಅಕ್ರಮ ಎಸಗಿದರೆ, ಸೋಂಕಿತರು ಹಾಗೂ ಸಂಬಂಧಿಕರ ಜೊತೆ ಅನುಚಿತವಾಗಿ ವರ್ತಿಸಿದರೆ ನೋಟೀಸ್ ಸಹಾ ನೀಡದೆ, ಶಿಸ್ತುಕ್ರಮ ಕೈಗೊಳ್ಳಲಾಗುವುದು  ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಂಜುಳಾದೇವಿ, ಉಪವಿಭಾಗಾಧಿಕಾರಿ ಅರುಳ್ ಕುಮಾರ್, ತಹಶೀಲ್ದಾರ್ ಅನಿಲ್ ಕುಮಾರ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!