ಬೆಂ.ಗ್ರಾ.ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ನೀಗಿಸಲು ಅಮೇರಿಕಾದಿಂದ 40 ಆಕ್ಸಿಜನ್ ಕಾನ್ಸೆನ್ಟ್ರೇಟರ್ ಆಮದು: ಕಂದಾಯ ಸಚಿವ ಆರ್.ಅಶೋಕ್

ಬೆಂ.ಗ್ರಾ.ಜಿಲ್ಲೆ: ಕೋವಿಡ್ ಸೋಂಕು ದೃಢಪಟ್ಟ ವ್ಯಕ್ತಿಗಳು ಉದಾಸೀನ ತೋರದೆ ಕೂಡಲೇ ಕೋವಿಡ್ ಕೇರ್ ಸೆಂಟರ್‌ಗಳಿಗೆ ದಾಖಲಾದ, ನಂತರ ವೈದ್ಯರ ಶಿಫಾರಸ್ಸಿನ ಮೇರೆಗೆ ಆಸ್ಪತ್ರೆಗೆ ದಾಖಲಾಗಬೇಕು ಎಂದು ಕಂದಾಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಅವರು ತಿಳಿಸಿದರು.

ನೆಲಮಂಗಲ ತಾಲ್ಲೂಕು ಕೋವಿಡ್ ಕೇರ್ ಸೆಂಟರ್, ಸಾರ್ವಜನಿಕ ಆಸ್ಪತ್ರೆ ಹಾಗೂ ಟಿಬೆಟಿಯನ್ ಹಾಸ್ಟೆಲ್‌ಗೆ ಇಂದು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ, ನಂತರ ಮಾತನಾಡಿದರು.

ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ನೀಗಿಸಲು ಅಮೇರಿಕಾದಿಂದ 40 ಆಕ್ಸಿಜನ್ ಕಾನ್ಸೆನ್ಟ್ರೇಟರ್ ಆಮದು ಮಾಡಿಕೊಳ್ಳಲಾಗುತ್ತಿದ್ದು, ಅವುಗಳು ಈಗಾಗಲೇ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿದೆ ಎಂದು ತಿಳಿಸಿದ ಅವರು ಶೀಘ್ರವೇ ಜಿಲ್ಲೆಗೆ ಅವುಗಳು ತಲುಪಲಿದ್ದು, ಇದರ ಮೇಲುಸ್ತುವಾರಿಯನ್ನು  ಜಿಲ್ಲಾಧಿಕಾರಿ ಅವರು ವಹಿಸಿದ್ದಾರೆ ಎಂದರು.

ಕೋವಿಡ್‌ಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಈಗಾಗಲೇ ಎರಡು ಸಭೆಗಳನ್ನು ನಡೆಸಲಾಗಿದ್ದು, ನಾಲ್ಕು ತಾಲ್ಲೂಕುಗಳ ಶಾಸಕರ ಸಹಕಾರದೊಂದಿಗೆ ಕೋವಿಡ್ ನಿಯಂತ್ರಣ ಹಾಗೂ ನಿರ್ಮೂಲನೆ ಮಾಡಲು ಶ್ರಮಿಸಲಾಗುತ್ತಿದೆ.  ನೆಲಮಂಗಲ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ಟಿಬೆಟಿಯನ್ ಸೆಂಟರ್ ಅನ್ನು ಮತ್ತಷ್ಟು ಮೇಲ್ದರ್ಜೆಗೆ ಏರಿಸಲು ಕ್ರಮವಹಿಸಲಾಗುವುದು ಎಂದು ಹೇಳಿದರು.

ಕೋವಿಡ್ ಸೋಂಕು ಈಗಾಗಲೇ ಎಲ್ಲೆಡೆ ವ್ಯಾಪಕವಾಗಿ ವ್ಯಾಪಿಸಿರುವ ಹಿನ್ನೆಲೆಯಲ್ಲಿ, ಕೋವಿಡ್ ಸೋಂಕು ದೃಢಪಟ್ಟ ವ್ಯಕ್ತಿಗಳು ಭಯಭೀತರಾಗದೆ ಮೊಬೈಲ್ ಸ್ವಿಚ್ ಆಫ್ ಮಾಡದೆ, ಆರಂಭದಲ್ಲಿಯೇ ಚಿಕಿತ್ಸೆ ಪಡೆಯುವುದರಿಂದ ರೋಗ ಅತಿರೇಕಕ್ಕೆ ಹೋಗದಂತೆ ಹಾಗೂ ಪ್ರಾಣಾಪಾಯವನ್ನು ತಡೆಯಬಹುದು ಎಂದು ತಿಳಿಸಿದರು.

ಗ್ರಾಮೀಣ ಪ್ರದೇಶದ ಜನರು ಕೋವಿಡ್ ಸೋಂಕು ದೃಢಪಟ್ಟ ಕೂಡಲೇ ಭಯಪಡದೇ, ಕೋವಿಡ್ ಕೇರ್ ಸೆಂಟರ್ ಗೆ ದಾಖಲಾಗಬೇಕು. ಇದರಿಂದ, ಮನೆಯ ಸದಸ್ಯರಿಗೆ ಸೋಂಕು ಹರಡುವುದನ್ನು ತಡೆಗಟ್ಟುವ ಸಾಧ್ಯತೆ ಇದೆ ಎಂದರು.

ಕೋವಿಡ್ ಸೆಂಟರ್ ಗೆ ದಾಖಲಾಗುವ ಸೋಂಕಿತರಿಗೆ  ಉತ್ತಮ ಪೌಷ್ಟಿಕಾಂಶಯುಕ್ತ ಆಹಾರ, ಔಷಧವನ್ನು ಸಮಯಕ್ಕೆ ಸರಿಯಾಗಿ ನೀಡಲಾಗುವುದರಿಂದ ಸೋಂಕಿತರು ಬಹುಬೇಗ ಗುಣಮುಖರಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದರು.ಶೀಘ್ರವೇ ಆಯುರ್ವೇದ ಹಾಗೂ ಆಯುಷ್ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚನೆ ನೀಡಲಾಗಿದ್ದು, ನೆಲಮಂಗಲ ತಾಲ್ಲೂಕಿನಲ್ಲಿ ಪ್ರತಿ ದಿನ 15-20 ಮಂದಿಗೆ ಆಕ್ಸಿಜನ್ ಅವಶ್ಯಕತೆ ಇರುವುದರಿಂದ ಮುಂದಿನ ದಿನಗಳಲ್ಲಿ ತಾಲ್ಲೂಕಿಗೆ ನೂರು ಆಕ್ಸಿಜನ್ ಕಾನ್ಸೆನ್ಟ್ರೇಟರ್ ಗಳನ್ನು ಪೂರೈಸಲಾಗುವುದು ಎಂದು ತಿಳಿಸಿದರು.

ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಕೋವಿಡ್ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ ಎಂಬ ದೂರು ಕೇಳಿ ಬಂದಿದ್ದು, ಅಲ್ಲಿನ ವೈದ್ಯರು ಗೈರಾಗುತ್ತಿರುವುದರ ಬಗ್ಗೆ ಮ್ಯಾನೇಜ್‌ಮೆಂಟ್ ತಿಳಿಸಿದ್ದು, 24 ಗಂಟೆಗಳಲ್ಲಿ ಅಂತಹ ವೈದ್ಯರ ಮಾಹಿತಿ ಪಡೆದು, ನೋಟಿಸ್ ಜಾರಿ ಮಾಡುವಂತೆ ತಿಳಿಸಲಾಗಿದ್ದು, ತಪ್ಪು ಸಾಭೀತಾದಲ್ಲಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಆರ್.ಟಿ.ಪಿ.ಸಿ.ಆರ್. ಪರೀಕ್ಷೆ ಮಾಡಿಸಿದಾಗ ಫಲಿತಾಂಶ ಬರುವುದು ವಿಳಂಬವಾಗುತ್ತಿದ್ದು, ಜ್ವರ ನೆಗಡಿಯಂತ ಲಕ್ಷಣ ಕಂಡುಬಂದಲ್ಲಿ ರ್ಯಾಟ್ ಟೆಸ್ಟ್ ಮಾಡಿಸುವಂತೆ ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೋವಿಡ್ ನಿರ್ವಹಣಾ ತಂಡಗಳನ್ನು ರಚಿಸಲಾಗಿದ್ದು, ನಗರ ಪ್ರದೇಶಗಳಿಂದ ವಲಸೆ ಬಂದವರಿಗೆ ಕೋವಿಡ್ ಪರೀಕ್ಷೆ ಮಾಡಿಸಬೇಕೇ ಅಥವಾ ಬೇಡವೇ ಎಂಬುದನ್ನು ಅವರೇ ತೀರ್ಮಾನ ಮಾಡಲಿದ್ದಾರೆ ಎಂದು ತಿಳಿಸಿದರು.

ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಶ್ರೀನಿವಾಸಮೂರ್ತಿ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಜಿಲ್ಲಾ ಉಪ ಪೋಲಿಸ್ ವರಿಷ್ಠಾಧಿಕಾರಿ ಲಕ್ಷೀ ಗಣೇಶ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಂಜುಳಾದೇವಿ, ಉಪವಿಭಾಗಾಧಿಕಾರಿ ಅರುಳ್ ಕುಮಾರ್, ತಹಶೀಲ್ದಾರ್ ಮಂಜುನಾಥ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

ರಾಜಕೀಯ

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ ಬಿ.ಮುನೇಗೌಡ ಬೆಂಬಲಿಗರ ಸಭೆ..!

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ

ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ (JDS) ಪಕ್ಷದಲ್ಲಿ ಆಕ್ರೋಶ ಸ್ಪೋಟವಾಗಿದ್ದು, ಬಿ.ಮುನೇಗೌಡ (B.Mine Gowda, ಹುಸ್ಕೂರು ಆನಂದ್ (Huskur Anand), ಬೆಂಬಲಿಗರು ಇಂದು ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಭೆ ಸೇರಿ,

[ccc_my_favorite_select_button post_id="121521"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]